karnataka

ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು.30: ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಸಂಜೀವಿನಿ ಕಟ್ಟಡದಲ್ಲಿ ಅಣಬೆ ಕೃಷಿ ಬಗ್ಗೆ ತರಬೇತಿ ಹಾಗೂ ಅಣಬೆ ಕೃಷಿಗೆ ಬೇಕಾದ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.     ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾ ಮೇದಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಲಾತಿ ಬಂಟೋಡಿ ವಹಿಸಿದ್ದರು. ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಸುಹಾನ ತಾಲೂಕು ಪಂಚಾಯತ್ ಹರಿಪ್ರಸಾದ್ , ಸಂಪನ್ಮೂಲ ವ್ಯಕ್ತಿ ತೀರ್ಥಾನಂದ ಕೋಡಂಕೇರಿ, ಸೋಸೈಟಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ , ಪಂಚಾಯತ್ ಮಾಜಿ […]

ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.31:  ದಿನದಿಂದ ದಿನಕ್ಕೆ ದಕ್ಷಿಣ ಕನ್ನಡದಲ್ಲಿ ಗೋ ಕಳ್ಳರ ಹಾವಳಿ ಹೆಚ್ಚಾಗುತ್ತಲೇಯಿದೆ. ಗುರುವಾರವೂ ಬೆಳ್ತಂಗಡಿ ಪೋಲಿಸರು ಗೋ ಕಳ್ಳನೊಬ್ಬನನ್ನು ಬಂಧಿಸಿ ಗೋವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಾರದಲ್ಲಾದ ನಾಲ್ಕನೇ ಪ್ರಕರಣವಾಗಿದೆ .ನಾವುರು ಗ್ರಾಮದ ಕೈಕಂಬ ಮನೆಯ ರಫೀಕ್(36) ಎಂಬಾತನೇ ಆರೋಪಿಯಾಗಿದ್ದಾನೆ.    ಗುರುವಾರ ಬೆಳಿಗ್ಗೆ ಬೆದ್ರಬೆಟ್ಟು ಎಂಬಲ್ಲಿ ಯಾವುದೇ ಪರವಾನಿಗೆ  ಪತ್ರಗಳನ್ನು ಹೊಂದದೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಪಿಕಪ್‌ ವಾಹನದಲ್ಲಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ Read More »

ಕರಾವಳಿ

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜು.31:  ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.     ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ,

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31 :  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ.ರಾಜೇಂದ್ರ ಕೆ.ವಿ. ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ಅಧಿಕಾರ ಹಸ್ತಾಂತರಿಸಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಾ.ರಾಜೇಂದ್ರ, ಜಿಲ್ಲೆಯಲ್ಲಿ ಕರೊನಾ ಕಾಟ ಹೆಚ್ಚಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣಕ್ಕೆ ವಿಶೇಷ ಒತ್ತು ನೀಡಬೇಕಿದೆ. ಹೀಗಾಗಿ ಜಿಲ್ಲೆಯ ಅಧಿಕಾರಿ ತಂಡದ ಜತೆಗೆ ಚರ್ಚಿಸಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದರು.   ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳ ಬಗ್ಗೆ ಈಗಾಗಲೇ

ಕರೊನಾ ನಿಯಂತ್ರಣಕ್ಕೆ ಆದ್ಯತೆ ➤ ನೂತನ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ

(ನ್ಯೂಸ್ ಕಡಬ) newskadaba.com.ಮಂಗಳೂರು ,ಜು.31: ದ.ಕ ಜಿಲ್ಲೆಗೆ ಭೇಟಿ ನೀಡಲು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರಿಗೆ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಭವ್ಯ ಸ್ವಾಗತ ಸಿಕ್ಕಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್ ,ವಿನಯ ಕುಮಾರ್ ಸೊರಕೆ,ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಐವನ್ ಡಿ ಸೋಜ,ಯು.ಆರ್. ಸಭಾಪತಿ ಹಾಗೂ ಇತರ ಕಾಂಗ್ರೆಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ Read More »

ಕರಾವಳಿ

ಭಾರತೀಯರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ನಿರ್ಬಂಧ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.31: ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿ ಕೆಲಸ ನಿರ್ವಹಿಸುತ್ತಿದ್ದ ಭಾರತೀಯರು ಕೊರೊನಾದಿಂದಾಗಿ ತಮ್ಮ ತಾಯ್ನಾಡಿಗೆ ಕಷ್ಟುಪಟ್ಟು ಮರಳಿದ್ದಾರೆ. ಆದರೆ ಕುವೈತ್‌ನಿಂದ ಸ್ವದೇಶಕ್ಕೆ ಮರಳಿದ್ದ ಅನೇಕ ಭಾರತೀಯರಿಗೆ ಈಗ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಭಾರತ ಸಹಿತ ಏಳು ದೇಶಗಳ ಜನರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ತಡೆ ನೀಡಿದೆ. ಬಾಂಗ್ಲಾದೇಶ, ಇರಾನ್, ನೇಪಾಳ, ಪಾಕಿಸ್ತಾನ, ಫಿಲಿಫೈನ್ಸ್ ಮತ್ತು ಶ್ರೀಲಂಕಾ ನಿರ್ಬಂಧಕ್ಕೆ ಒಳಗಾಗಿರುವ ಇತರ ರಾಷ್ಟ್ರಗಳು. ಕುವೈತ್ ಸರ್ಕಾರದ ಸಂವಹನ ಕೇಂದ್ರವು ಟ್ವಿಟ್ಟರ್‌ನಲ್ಲಿ ಇದನ್ನು ಪ್ರಕಟಿಸಿದ್ದು, ಎಷ್ಟು ಸಮಯದವರೆಗೆ

ಭಾರತೀಯರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ನಿರ್ಬಂಧ Read More »

ಕರಾವಳಿ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ

(ನ್ಯೂಸ್ ಕಡಬ) newskadaba.com ದಾವಣಗೆರೆ,ಜು.31: ಮಾರಕ ಕೊರೋನಾದಿಂದಾಗಿ ಮನುಷ್ಯರಿಗಷ್ಟೇ ಅಲ್ಲದೇ, ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟಗಳು ಎದುರಾಗಿವೆ. ಎಷ್ಟೋ ಕಡೆ ಬೀದಿನಾಯಿಗಳು ಆಹಾರವಿಲ್ಲದೇ ನರಳುತ್ತಿವೆ. ಇಂತಹ ಸಂದರ್ಭದಲ್ಲಿ ದಾವಣೆಗೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲದಲ್ಲಿ ಜೋಳ ಬೆಳೆದು ಪಕ್ಷಿಗಳಿಗೋಸ್ಕರ ಮೀಸಲಿಟ್ಟಿದ್ದಾರೆ.ಸುಮಾರು 3 ಎಕರೆ ಹೊಲದಲ್ಲಿ ಜೋಳ ಬೆಳೆದಿರುವ ಚಂದ್ರಶೇಖರ್ ಸಂಕೋಳ, ಗುಬ್ಬಿ ಸಂತತಿ ಉಳಿಸುವ ಧ್ಯೇಯ ಹೊಂದಿದ್ದಾರೆ. ಆ ಮೂಲಕ ಮಾನವೀಯತೆ ಮೆರೆಯುವ ಕೆಲಸ ಮಾಡುತ್ತಿದ್ದಾರೆ.     ಅಲ್ಲದೇ ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರತಿದಿನ ಪಕ್ಷಿಗಳ ಚಿಲಿಪಿಲಿ ಶಬ್ದವನ್ನು ಕೇಳುತ್ತಾ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.30., ಕರ್ನಾಟಕ ಸರಕಾರ ಮದ್ಯವನ್ನು ಆನ್‌ಲೈನ್‌ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಉದ್ಯಮಕ್ಕೆ ಸಂಬಂಧಿಸಿದವರ ಜೊತೆ ಸೋಮವಾರ ಸಮಾಲೋಚನೆ ಹಮ್ಮಿಕೊಂಡಿದೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಮೊಬೈಲ್‌ ಆಪ್‌ ಮೂಲಕ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಚಿಲ್ಲರೆ ಮಾರಾಟ ಮಳಿಗೆ ಮತ್ತು ಎಂಎಸ್‌ಐಎಲ್‌ ಮಳಿಗೆಗಳ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಅಲೋಚಿಸಿದೆ. ಉದ್ಯಮಕ್ಕೆ ಸಂಬಂಧಿಸಿದ ಎಲ್ಲರಿಗೂ ತಮ್ಮ ತಮ್ಮ

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ Read More »

ಕರ್ನಾಟಕ

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.30: ಕೊರೊನಾ ಸಂಕಷ್ಟದ ನಡುವೆ ವರಮಹಾಲಕ್ಷ್ಮಿ ಆಚರಣೆಗೆ ವಿವಿಧ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.ದೇಶದ ದೊಡ್ಡ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬ ಆಚರಿಸಲು ಸಿಲಿಕಾನ್ ಸಿಟಿ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಲವು ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆಯಾದರೂ ನಗರದ ವಿವಿಧೆಡೆ ಇರುವ ಗಾಂಧಿಬಜಾರ್ ಮಾರುಕಟ್ಟೆ, ಲಾಲ್‍ಬಾಗ್, ಗಣೇಶ ದೇವಾಲಯ, ಹೂವಿನ ಮಾರುಕಟ್ಟೆ, ಮೈಸೂರು ರಸ್ತೆ, ಫ್ಲೈ ಓವರ್ ಕೆಳಭಾಗದ ಮಾರುಕಟ್ಟೆ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ,

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು Read More »

ಕರಾವಳಿ

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.     ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ
Scroll to Top