karnataka

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29: ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಗಡಿ ರಸ್ತೆಯ ಕೆ.ಪಿ.ಅಗ್ರಹಾರ ನಿವಾಸಿ ಕಿರಣ್ ಕುಮಾರ್, ನಾಗರಬಾವಿ, ಮಾನಸನಗರದ ಪ್ರವೀಣ್ ಕುಮಾರ್ ಬಿ.ಆರ್., ಕಾಮಾಕ್ಷಿಪಾಳ್ಯದ ಪವನ್ ಕುಮಾರ್ ಬಂಧಿತ ಆರೋಪಿಗಳು.   ಜಾಲಹಳ್ಳಿಯ ಎಚ್‌ಎಂಟಿ ಸರ್ವೀಸ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ್ಟ್‌ಮೆಂಟ್ ಬಳಿ ಮೂವರು ಆರೋಪಿಗಳು […]

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ Read More »

ಕರಾವಳಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.29:  ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ‘ಆಟೋ ಪ್ಲೀಸ್’ ಎಂಬ ವಿನೂತನ ಉಚಿತ ಅಪ್ಲಿಕೇಷನ್‌ ಅನ್ನು ಪರಿಚಯಿಸಲಾಗಿದೆ. ಈ ಅಪ್ಲಿಕೇಶನ್‌ನ ಮೂಲಕ ಸಾರ್ವಜನಿಕರು ತಮ್ಮ ಸಮೀಪದ ರಿಕ್ಷಾ ನಿಲ್ದಾಣವನ್ನು ಅಯ್ಕೆ ಮಾಡಿದಲ್ಲಿ, ಅಲ್ಲಿ ಸಂಚಾರಕ್ಕೆ ಲಭ್ಯವಿರುವ ರಿಕ್ಷಾಗಳ ಪಟ್ಟಿ ದೊರೆಯಲಿದೆ. ಚಾಲಕನ ಹೆಸರು, ಭಾವಚಿತ್ರ, ಚಾಲನಾ ಪರವಾನಗಿ ಮುಂತಾದ ವಿವರಗಳನ್ನು ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಇರುವ ಚಾಲಕರ ಮಾಹಿತಿಯನ್ನು ಗಮನಿಸಿ ಆ ರಿಕ್ಷಾ ಚಾಲಕನಿಗೆ ಕರೆಮಾಡುವ ಸೌಲಭ್ಯವನ್ನೂ ಇದರಲ್ಲಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ

(ನ್ಯೂಸ್ ಕಡಬ) newskadaba.com ಅಂಬಾಲಾ , ಜು.29: ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ. ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಾಫೆಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ.       ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!!

(ನ್ಯೂಸ್ ಕಡಬ) newskadaba.com ಮಡಿಕೇರಿ: ಜು.29., ಕೊರೋನಾ ಸಂಕಷ್ಟ ಹಿನ್ನಲೆ ಖದೀಮರ ತಂಡವೊಂದು ಬ್ಯಾಂಕ್ ದರೋಡೆಗೆ ಪ್ರಯತ್ನಿಸಿದ ಘಟನೆ ಮಡಿಕೇರಿ ಸಮೀಪದ ಮಕ್ಕಂದೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ನಡೆದಿದೆ. ಬ್ಯಾಂಕ್ ಗೋಡೆಯನ್ನು ಮಾತ್ರ ಒಡೆದಿರುವ ದರೋಡೆಕೋರರು ಸ್ರ್ಟಾಂಗ್ ರೂಮ್‍ಗೆ ಪ್ರವೇಶಿಸಲು ವಿಫಲರಾಗಿದ್ದಾರೆ. ಪೂರ್ವ ಯೋಜಿತವಾಗಿ ಸಂಚು ರೂಪಿಸಿರುವ ಖದೀಮರು, ಮೊದಲು ಬ್ಯಾಂಕಿಗೆ ಕಲ್ಪಿಸುವ ವಿದ್ಯುತ್ ತಂತಿಯನ್ನು ಕತ್ತರಿಸಿ ಸಿಸಿಟಿವಿಯನ್ನು ಕಿತ್ತೆಸೆದು ಬಳಿಕ ಕಬ್ಬಿಣದ ಹಾರೆ ಮತ್ತು ಸಲಾಕೆಗಳಿಂದ ಬ್ಯಾಂಕ್‍ನ ಹಿಂಬದಿಯ ಗೋಡೆಯನ್ನು ಹೊಡೆದು ಸ್ರ್ಟಾಂಗ್ ರೂಮ್‍ಗೆ

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!! Read More »

ಕರ್ನಾಟಕ

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.29: ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಮಾಜಿ ಸಚಿವ ಖಾದರ್ ರಾಜಕೀಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಠಕರ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು Read More »

ಕರಾವಳಿ

ಮಂಗಳೂರು : ರಕ್ಷಾ ಬಂಧನದಲ್ಲಿದೆ ತರಕಾರಿ ಬೀಜ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.29:  ಪಕ್ಷಿಕೆರೆಯ ಪೇಪರ್‌ ಸೀಡ್‌ ಸಂಸ್ಥೆಯ ನಿತಿನ್‌ ವಾಸ್‌ ಅವರು ರಕ್ಷಾ ಬಂಧನದ ನಿಮಿತ್ತ ಪರಿಸರ ಸ್ನೇಹಿ ಮರು ಬಳಕೆ ಆಗುವಂತಹ ಹಾಗೂ ವಿವಿಧ ಬಗೆಯ ತರಕಾರಿ ಬೀಜಗಳನ್ನು ಅಳವಡಿಸಿದ ರಾಖಿಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಉದ್ಯಮಿ ನಿತಿನ್‌ ಅವರು ಟೊಮೆಟೊ, ಸೌತೆಕಾಯಿ, ಹರಿವೆ, ತುಳಸಿ ಬೀಜಗಳಿಂದ ರಾಖಿಗಳನ್ನು ತಯಾರಿಸಿದ್ದಾರೆ. ರಕ್ಷಾ ಬಂಧನಕ್ಕೆ ಸಹೋದರಿಯರು ಕಟ್ಟುವ ರಾಖಿಗಳನ್ನು ಕೆಲ ದಿನಗಳ ಬಳಿಕ ಎಸೆಯುವ ಬದಲು, ಇವುಗಳಿಂದ ಹಸಿರು ಬೆಳೆಸಬಹುದು ಎನ್ನುವ ಉದ್ದೇಶದಿಂದ

ಮಂಗಳೂರು : ರಕ್ಷಾ ಬಂಧನದಲ್ಲಿದೆ ತರಕಾರಿ ಬೀಜ Read More »

ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ : ಸಿದ್ದಗೊಳ್ಳುತ್ತಿದೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಜು.29:  ರಾಜ್ಯದ ಪ್ರಸಿದ್ಧ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ ಸಿದ್ಧಗೊಳ್ತಿದೆ.     ಹೌದು, ಪ್ರಸಿದ್ಧ ಕುಕ್ಕೆ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತರ ಸಾಲು ಆಗಮಿಸುತ್ತದೆ. ಪುಣ್ಯ ಪವಿತ್ರ ದೇವಾಲಯಕ್ಕೆ ಆಗಮಿಸುವ ಭಕ್ತರನ್ನ ತಣಿಸಲು ಈಗಾಗಲೇ ದೇವಾಲಯದ ಸುತ್ತಮುತ್ತಲು ಉದ್ಯಾನವನಗಳಿವೆ. ಅದರ ಜೊತೆಗೆ ಮತ್ತೊಂದು ಮೈಲುಗಲ್ಲು ಎಂಬಂತೆ ಸರ್ಕಾರದ ಆದೇಶದಂತೆ, ಕುಮಾರಧಾರ ನದಿಯ ಬಳಿ ಇರುವ ವಿಶಾಲವಾದ ಸುಮಾರು 32 ಎಕರೆ ವ್ಯಾಪ್ತಿಯಲ್ಲಿ ಭಕ್ತರನ್ನ

ಕುಕ್ಕೆ ಸುಬ್ರಹ್ಮಣ್ಯ : ಸಿದ್ದಗೊಳ್ಳುತ್ತಿದೆ ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನವನ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ

(ನ್ಯೂಸ್ ಕಡಬ) newskadaba.com ಹರ್ಯಾಣ , ಜು.29: ಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. ಯುದ್ಧ ವಿಮಾನ ಬಂದಿಳಿಯುವ ಸಂದರ್ಭದಲ್ಲಿ ಮತ್ತು ಬಂದಿಳಿದ ಮೇಲೆ ವಾಯುನೆಲೆಯ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳ ಫೋಟೋ ಮತ್ತು ವಿಡಿಯೊಗಳನ್ನು ತೆಗೆಯುವುದನ್ನು ನಿಷೇಧಿಸಲಾಗಿದೆ. ಅಂಬಾಲಾ ವಾಯುನೆಲೆಯ ಸುತ್ತಮುತ್ತ 3 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಜನರು ಖಾಸಗಿ ಡ್ರೋನ್ ಗಳನ್ನು ಹಾರಿಸುವುದಕ್ಕೆ ಜಿಲ್ಲಾಡಳಿತ ನಿಷೇಧ

ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ ➤ ಅಂಬಾಲಾ ವಾಯುನೆಲೆ ಸುತ್ತಮುತ್ತ ಭದ್ರತೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:   ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top