karnataka

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು

(ನ್ಯೂಸ್ ಕಡಬ) newskadaba.com ಜು.23: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿವಾದಗಳಿಂದ ಸದಾ ದೂರ ಉಳಿಯಲು ಬಯಸುತ್ತಾರೆ. ಆದರೆ, ಕೆಲವೊಮ್ಮೆ ವಿವಾದಗಳನ್ನು ಅವರು ಅರಿವಿಲ್ಲದೆ ಮೈಮೇಲೆ ಎಳೆದುಕೊಂಡು ಬಿಡುತ್ತಾರೆ.ಈಗಲೂ ಅದೇ ರೀತಿ ಆಗಿದ್ದು, ದರ್ಶನ್​ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು ಸಲ್ಲಿಕೆ ಆಗಿದೆ.ಕೊನೆಯ ಆಷಾಢ ಶುಕ್ರವಾರದ ದಿನ ದರ್ಶನ್, ಶೋಭಾ ಕರಂದ್ಲಾಜೆ, ಭಾಗ್ಯ ಮಹೇಶ್ ಹಾಗೂ ಅವರ ಬೆಂಬಲಿಗರು ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿದ್ದರು‌.     ಈ ವೇಳೆ ಪೂಜೆ […]

ಡಿ ಬಾಸ್ ದರ್ಶನ ವಿರುದ್ಧ ಹೈಕೋರ್ಟ್ ರಿಜಿಸ್ಟರ್​ಗೆ ದೂರು Read More »

ಕರಾವಳಿ, ಕರ್ನಾಟಕ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು.

(ನ್ಯೂಸ್ ಕಡಬ) newskadaba.com ಮಂಡ್ಯ, ಜು.23:  ಕೊರೋನಾಗೆ ಹೆದರಿ ಕೋವಿಡ್ ಸೋಂಕಿತನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿಂದು ನಡೆದಿದೆ. ಕೋವಿಡ್-19 ಸೋಂಕಿಗೆ ಒಳಗಾಗಿದ್ದ 55 ವರ್ಷದ ವ್ಯಕ್ತಿ ಬುಧವಾರ ರಾತ್ರಿ ಕೋವಿಡ್ ಆಸ್ಪತ್ರೆಯಲ್ಲಿ ನೇಣು ಹಾಕಿಕೊಂಡಿದ್ದಾರೆ.     ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಪಿ. ಮಂಚೇಗೌಡ ಈ ಕುರಿತು ಪ್ರತಿಕ್ರಿಯಿಸಿ, ಮಳವಳ್ಳಿ ತಾಲ್ಲೂಕಿನ ಕಂದೇಗಾಲ ಗ್ರಾಮದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇದರಿಂದ

ಕೋವಿಡ್ ಸೋಂಕಿಗೆ ಹೆದರಿದ ವೃದ್ದ ➤ ಕೋವಿಡ್ ಆಸ್ಪತ್ರೆಯಲ್ಲೆ ನೇಣಿಗೆ ಶರಣು. Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು

(ನ್ಯೂಸ್ ಕಡಬ) newskadaba.com ಮಂಗಳೂರು , ಜು.23:  ಕೋವಿಡ್-19 ಸೋಂಕಿತರ ಚಿಕಿತ್ಸೆಯಲ್ಲಿ ಶ್ರಮಿಸುತ್ತಿರುವ ವಾರಿಯರ್ಸ್‌ಗೆ ಸ್ಥಳೀಯರು ಕಿರುಕುಳ ನೀಡುತ್ತಿರುವ ದೂರು ಕೇಳಿ ಬಂದಿದೆ. ಮೂಡುಬಿದಿರೆ ತಾಲ್ಲೂಕಿನ ಶಿರ್ತಾಡಿಯ ನಿವಾಸಿಯೊಬ್ಬರು ಈ ಬಗ್ಗೆ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್‌ ಅವರಿಗೆ ಇ-ಮೇಲ್‌ ಮೂಲಕ ದೂರು ಸಲ್ಲಿಸಿದ್ದಾರೆ.       ‘ನಾವು ಶಿರ್ತಾಡಿಯಲ್ಲಿ ವಾಸವಾಗಿದ್ದು, ನನ್ನ ಪತ್ನಿ ವೆನ್ಲಾಕ್‌ ಕೋವಿಡ್ ಆಸ್ಪತ್ರೆಯಲ್ಲಿ ಶುಶ್ರೂಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚೆಗೆ ಅವರಿಗೆ ಕೋವಿಡ್-19 ದೃಢವಾಗಿದೆ. ನನ್ನ ಮಗನಿಗೂ ಕೋವಿಡ್‌ ತಗಲಿದೆ. ಸದ್ಯಕ್ಕೆ ನಾವು ಹೋಂ

ಕೋವಿಡ್ ವಾರಿಯರ್ಸ್‌ಗೆ ಕಿರುಕುಳ ➤ ಜಿಲ್ಲಾಧಿಕಾರಿಗೆ ದೂರು Read More »

ಕರಾವಳಿ, ಕರ್ನಾಟಕ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ

(ನ್ಯೂಸ್ ಕಡಬ) newskadaba.com  ಕಡಬ,ಜುಲೈ 23: ಕೊರೋನ  ಪ್ರಕರಣ ಹೆಚ್ಚಳದಿಂದ ದ.ಕ ಜಿಲ್ಲೆಯಲ್ಲಿ ಹೇರಲಾಗಿದ್ದ ಲಾಕ್ ಡೌನ್ ಇಂದು ಬೆಳಗ್ಗೆ ಮುಕ್ತಾಯವಾಗಿದ್ದು, ವಾಣಿಜ್ಯ ಚಟುವಟಿಕೆಗಳನ್ನು ಅವಕಾಶ ನೀಡಲಾಗಿರುವ ಹಿನ್ನಲೆಯಲ್ಲಿ ಜಿಲ್ಲೆ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಕಡಬ ಪೇಟೆಯಲ್ಲಿ ಜನಸಂದಣಿಯು ಬೆಳಿಗ್ಗೆಯಿಂದಲೇ ಹೆಚ್ಚಾಗಿದೆ. ಮೊದಲಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದೆ. ಇಂದು ಬೆಳಗ್ಗೆ 5 ಗಂಟೆಯ ಅನಂತರ ಲಾಕ್ ಡೌನ್ ತೆರವುಗೊಂಡಿದ್ದು ಈ ಹಿಂದೆ ಅನುಮತಿ

ದ.ಕನ್ನಡದಲ್ಲಿ ಲಾಕ್ ಡೌನ್ ರಿಲೀಫ್ – ಕಡಬ ಪೇಟೆಯಲ್ಲಿ ಹೆಚ್ಚಿದ ಜನಸಂದಣಿ Read More »

ಕರಾವಳಿ, ಕರ್ನಾಟಕ

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಮಣ್ಯ, ಜು.23:   ಕೊರೊನಾ ಸೋಂಕು ದಕ್ಷಿಣಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಇದರ ಆರ್ಭಟಕ್ಕೆ ಬ್ರೇಕ್ ಹಾಕೋದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಹೀಗಾಗಿ ಈ ಬಾರಿ ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲಎಂದು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.    ಕುಕ್ಕೆ ಸುಬ್ರಮಣ್ಯದಲ್ಲಿ ಈ ಬಗ್ಗೆ ಮಾತನಾಡಿದ ಸಚಿವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ಕೂಡ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ಎಲ್ಲಾ

ಸಾರ್ವಜನಿಕವಾಗಿ ನಾಗರಪಂಚಮಿ ಆಚರಣೆಗೆ ಅವಕಾಶವಿಲ್ಲ ➤ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು

(ನ್ಯೂಸ್ ಕಡಬ) newskadaba.com ಕುಂದಾಪುರ, ಜು.23:  ಹಟ್ಟಿಯಲ್ಲಿದ್ದ ಎರಡು ದನಗಳನ್ನು ಹಿಂಸಾತ್ಮಾಕವಾಗಿ ಇನ್ನೋವಾ ಕಾರಲ್ಲಿ ಕದ್ದೋಯ್ದ ಘಟನೆ ಕುಂದಾಪುರ ತಾಲೂಕು ಚಿತ್ತೂರು ಗ್ರಾಮದ ಸುರಕುಂದ ಎಂಬಲ್ಲಿ ಬುಧವಾರ ಮುಂಜಾನೆ 4 ಗಂಟೆ ಸುಮಾರಿಗೆ ನಡೆದಿದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಮಂಗಳವಾರ ಮುಂಜಾನೆ ಆರೋಪಿಗಳಾದ ಉನ್ನಿ ಮೊಹಿನ್‌ ಮತ್ತು ಅವರ ಇಬ್ಬರು ಮಕ್ಕಳು ಇನೋವಾ ಕಾರಿನಲ್ಲಿ ಹಾಗೂ ಮೋಟಾರು ಸೈಕಲಿನಲ್ಲಿ ಬಂದಿದ್ದು ದೂರುದಾರರ ಕೊಟ್ಟಿಗೆಯಲ್ಲಿದ್ದ ಎರಡು ದನಗಳನ್ನು ತಮ್ಮ ಕಾರಿನಲ್ಲಿ ಹಿಂಸಾಸ್ಮಾಕವಾಗಿ ತುಂಬಿಸಿ ಕದ್ದೊಯುತ್ತಿದ್ದಾಗ ಎಚ್ಚರಗೊಂಡ ಮನೆಯವರು ಇದನ್ನು ನೋಡಿ

ಕುಂದಾಪುರ : ಹಟ್ಟಿಯಲ್ಲಿದ್ದ ದನ ಕದ್ದೋಯ್ದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!!

(ನ್ಯೂಸ್ ಕಡಬ) newskadaba.com ಕಡಬ,ಜು.22 : ಪುತ್ತೂರು ಹಾಗೂ ಕಡಬ ಅವಳಿ ತಾಲೂಕುಗಳಲ್ಲಿ ಬುಧವಾರ ಒಟ್ಟು 9 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಈ ಮೂಲಕ ಎರಡು ತಾಲೂಕಿನಲ್ಲಿ ಒಟ್ಟು120 ಕೊರೋನ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ.   ಬುಧವಾರ ಬೆಳಿಗ್ಗಿನ ಅರೋಗ್ಯ ಇಲಾಖೆಯ ವರದಿಯಲ್ಲಿ ಪುತ್ತೂರು ತಾಲೂಕಿನಲ್ಲಿ ಒಟ್ಟು 8 ಜನರಿಗೆ ಸೋಂಕು ತಗಲಿರುವುದು ಖಚಿತವಾಗಿದೆ.ಅದರಲ್ಲಿ ಕೋರ್ಟು ರಸ್ತೆಯ ಉದ್ಯಮಿ ದಂಪತಿಗಳಿಗೂ ಸೋಂಕು ಪತ್ತೆಯಾಗಿದೆ. ಕೆಲ ದಿನಗಳ ಹಿಂದೆ ಕೇರಳದಿಂದ ಆಗಮಿಸಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಪುತ್ತೂರು ಹಾಗೂ ಕಡಬ 9 ಮಂದಿಗೆ ಕೊರೊನಾ ದೃಢ ➤ ಅವಳಿ ತಾಲೂಕುಗಳಲ್ಲಿ ಒಟ್ಟು120 ಕೊರೋನಾ ಪ್ರಕರಣ… !!! Read More »

ಕರಾವಳಿ, ಕರ್ನಾಟಕ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜು.22:  ಇತ್ತೀಚೆಗೆ ಹಲವು ಕಡೆಗಳಲ್ಲಿ ಕೊರೊನಾ ವಾರಿಯರ್ಸ್ ಕಿಲೋಮೀಟರ್ ಗಟ್ಟಲೆ ನಡೆದು ಬಂದ ಘಟನೆಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ ಕೊರೊನಾ ವಾರಿಯರ್ಸ್‌ಗೆ ನೆರವು ನೀಡುವ ನಿಟ್ಟಿನಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ತನ್ನ ಎರಡು ಕಾರುಗಳನ್ನು ಕೂಡಾ ಕೊರೊನಾ ವಾರಿಯರ್ಸ್‌ಗಳ ಸಹಾಯಕ್ಕಾಗಿ ನೀಡಿದ್ದಾರೆ.     ಜೈನ್ ಕಳೆದ 15 ದಿನಗಳಿಂದ ಮತ್ತು ಮಾರ್ಚ್‌ನಲ್ಲಿ ಲಾಕ್ ಡೌನ್ ಸಮಯದಲ್ಲಿ ತನ್ನ ಕಾರುಗಳನ್ನು ಕೊರೊನಾ ವಾರಿಯರ್ಸ್‌ಗೆ ನೀಡಿದ್ದರು. ಸಾರ್ವಜನಿಕ

ಕೊರೊನಾ ವಾರಿಯರ್ಸ್‌ಗಾಗಿ ತಮ್ಮ 2 ಕಾರುಗಳನ್ನು ನೀಡಿದ ಅಭಯಚಂದ್ರ ಜೈನ್‌ Read More »

ಕರಾವಳಿ, ಕರ್ನಾಟಕ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!!

(ನ್ಯೂಸ್ ಕಡಬ) newskadaba.com ಕುಂದಾಪುರ: ಜು.22., ಬಿಗ್ ಬಾಸ್‌ ಸೀಸನ್‌ನಲ್ಲಿ 7ನಲ್ಲಿ ಫೈನಲ್ ಸ್ಪರ್ಧಿಯಾಗಿ ಗುರುತಿಸಿಕೊಂಡ ಕರಾವಳಿ ಕುವರಿ ಭೂಮಿ ಶೆಟ್ಟಿ ಸದ್ಯ ಬೆಂಗಳೂರು  ಸಿಟಿಯಿಂದ ದೂರವಿದ್ದು, ಇದೀಗ ತನ್ನ ಹುಟ್ಟೂರಿನಲ್ಲಿ ಕೃಷಿ ಕಾಯಕದಲ್ಲಿ ಖುಷಿ ಕಾಣುತ್ತಿದ್ದಾರೆ. ಮೂಲತಃ ಉಡುಪಿ ಜಿಲ್ಲೆ ಬೈದೂಂರು ತಾಲೂಕಿನ ಬೀಜೂರು ಗ್ರಾಮದ ಗಂಟಿಹೊಳೆಯ ಭೂಮಿ ಶೆಟ್ಟಿ, ವಿದ್ಯಾಭ್ಯಾಸ ನಟನೆ ಅಂತ ಬೆಂಗಳೂರಿನಲ್ಲೇ ಇದ್ದರು. ಸದ್ಯ ಕೊರೋನಾ ಹಿನ್ನಲೆ ಲಾಕ್ ಡೌನ್ ಅದ ಕಾರಣ ಊರಲ್ಲೇ ಇದ್ದು, ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ. ಭೂಮಿ

ಗೊಬ್ಬರ ಹೊತ್ತು ಕೃಷಿ ಬೇಸಾಯ ಮಾಡುತ್ತಿರುವ ಬಿಗ್ ಬಾಸ್‌ ಫೈನಲ್ ಸ್ಪರ್ಧಿ ಭೂಮಿ ಶೆಟ್ಟಿ… !!! Read More »

ಕರಾವಳಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ಮುಖಾಂತರ ಪ್ರೀ ರೆಕಾರ್ಡೆಡ್‌ ವಿಡಿಯೋ ತರಗಳು ಪ್ರಾರಂಭವಾಗಲಿವೆ.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌, ಲ್ಯಾಪ್‌ಟಾಪ್‌ ಅಥವಾ ಇಂಟರ್‌ನೆಟ್‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ ಸಾಧ್ಯತೆ ಇಲ್ಲ.

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top