karnataka

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ

(ನ್ಯೂಸ್ ಕಡಬ) newskadaba.com ಪುತ್ತೂರು,ಜು.22:  ಮೊಣಕಾಲಿನ ಮಂಡಿ ಜಾರಿದಂತಿದ್ದು, ಎದ್ದು ನಿಲ್ಲಲಾಗುತ್ತಿಲ್ಲ, ಹೊಟ್ಟೆಯಲ್ಲಿ ಹೊಕ್ಕುಳ ಪಕ್ಕದಲ್ಲಿ ಮಾಂಸ ಸೀಳಿ ಹೊರಬಂದಂದಂತೆ ಕಾಣುತ್ತಿದ್ದು, ಅದಕ್ಕೆ ಪಂಚೆಯನ್ನು ಮುಚ್ಚಿಕೊಂಡು ನೋವನ್ನು ಸಹಿಸಿಕೊಂಡು ರಸ್ತೆ ಬದಿಯಲ್ಲಿ ಬಿದ್ದು ನರಳುತ್ತಿದ್ದ ವ್ಯಕ್ತಿಯೊಬ್ಬನ್ನು ಪುತ್ತೂರಿನ ಬಜರಂಗದಳದ ಕಾರ್ಯಕರ್ತರು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.     ಮೂಲತ: ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ನಿವಾಸಿ ಶಂಕರ ಯಾನೆ ಮುನ್ನ ಎಂದು ಗರುತಿಸಲಾಗಿದೆ. ಕೆಲ ದಿನಗಳ ಹಿಂದೆ ಮಂಗಳೂರು ಪರಿಸರದಲ್ಲಿ ನಡೆದಿದ್ದ ಹೊಡೆದಾಟ […]

ಗಾಯಗಳಿಂದ ರಸ್ತೆಯಲ್ಲಿ ಬಿದ್ದು ವ್ಯಕ್ತಿಯ ನರಳಾಟ ➤ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಬಜರಂಗದಳ Read More »

ಕರಾವಳಿ, ಕರ್ನಾಟಕ

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ

(ನ್ಯೂಸ್ ಕಡಬ) newskadaba.com ಏನೆಕಲ್ಲು, ಜು.22: ಏನೆಕಲ್ಲು ದೇವರ ಗುಂಡಿಯಿಂದ ಮೀನು ಹಿಡಿಯುತ್ತಿದ್ದ ಸವಣೂರಿನ ನಾಲ್ವರು ಅನ್ಯಮತಿಯರನ್ನು ಸುಬ್ರಹ್ಮಣ್ಯ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.   ಸವಣೂರಿನ ಬಶೀರ್, ಅಬ್ದುಲ್ ರಜಾಕ್, ಬಶೀರ್,ಅಬ್ದುಲ್ ಸಮಾದ್ ಬಂಧಿತರು.ಇವರ ವಿರುದ್ದ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಏನೆಕಲ್ ದೇವರಗುಂಡಿಯಲ್ಲಿ ಮೀನು ಹಿಡಿಯುತ್ತಿದ್ದ ಯುವಕರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:   ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಕೊರೊನಾ ಸೋಂಕಿಗೆ ಮತ್ತೆ ಐವರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಹೆಚ್ಚಳವಾಗಿದೆ.   ಆ ಮೂಲಕ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 88 ಕ್ಕೆ ಏರಿಕೆಯಾಗಿದೆ.        

ದ.ಕ. ಜಿಲ್ಲೆಯಲ್ಲಿ ಮಂಗಳವಾರ ಐವರು ಸೋಂಕಿಗೆ ಬಲಿ Read More »

ಕರಾವಳಿ, ಕರ್ನಾಟಕ

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಜು.21:  ಘಜಿಯಾಬಾದ್​ನಲ್ಲಿ ಸೋಮವಾರ ರಾತ್ರಿ 10.30ಕ್ಕೆ ಪತ್ರಕರ್ತನ ತಲೆಗೆ ದುಷ್ಕರ್ಮಿಗಳ ತಂಡವೊಂದು ಗುಂಡಿಕ್ಕಿ ಕೊಲ್ಲಲು ಪ್ರಯತ್ನಿಸಿದೆ. ಘಜಿಯಾಬಾದ್‌ನಲ್ಲಿ ಸಹೋದರಿ ಮನೆಯಿಂದ ತನ್ನ ಇಬ್ಬರು ಮಕ್ಕಳ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದಾಳಿ ನಡೆಸಿರುವ ದುಷ್ಕರ್ಮಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.   ಸಿಸಿಟಿವಿ ದೃಶ್ಯಗಳ ಆಧಾರದಲ್ಲಿ ಒಟ್ಟು 9 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಘಜಿಯಾಬಾದ್​ನ ಪತ್ರಕರ್ತ ವಿಕ್ರಂ ಜೋಶಿ ತಂಗಿಯ ಮನೆಯಿಂದ ತನ್ನ ಬೈಕಿನಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವೇಗವಾಗಿ ಚಲಿಸುತ್ತಿರುವಾಗ ದುಷ್ಕರ್ಮಿಗಳ ಗುಂಪು

ಮಕ್ಕಳೆದುರೇ ಪತ್ರಕರ್ತನ ಹತ್ಯೆಗೆ ಯತ್ನ ➤ ನಡುರಸ್ತೆಯಲ್ಲಿ ಗುಂಡು ಹಾರಿಸಿದ ಐವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಉಡುಪಿ,ಜು.21:  ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ ಚಿತ್ರಕ್ಕೆ ಈ ಪ್ರತಿಷ್ಠಿತ ಗೌರವ ಸಿಕ್ಕಿದೆ.  ಹಲವಾರು ದೇಶಗಳ ಛಾಯಾಗ್ರಾಹಕರು ಭಾಗವಹಿಸಿದ್ದ ಈ ಸ್ಪರ್ಧೆಯಲ್ಲಿ ಉಡುಪಿಯ ರಘು ಪ್ರಶಸ್ತಿ ಗಳಿಸಿ ಕನ್ನಡಿಗರಿಗೆ ಹೆಮ್ಮೆ ತಂದಿದ್ದಾರೆ. ಇನ್ನು ರಘು ಪಾಲಿಗೆ ಇದು 24 ನೇ ಅಂತರರಾಷ್ಟ್ರೀಯ ಪ್ರಶಸ್ತಿ ಆಗಿದೆ.  

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ Read More »

ಕರಾವಳಿ, ಕರ್ನಾಟಕ, ಲೈಫ್‍ಸ್ಟೈಲ್

ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.21:  ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.       ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3834ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರದಂದು 127 ಮಂದಿ ಸೋಂಕಿನಿಂದ ಮುಕ್ತರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯ 1675 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾದಂತಾಗಿದೆ.  

ದ.ಕ. ಜಿಲ್ಲೆಯಲ್ಲಿ ಇಂದು 149 ಮಂದಿಯಲ್ಲಿ ಕೊವೀಡ್ -19 ದೃಢ Read More »

ಕರಾವಳಿ, ಕರ್ನಾಟಕ

ದಕ್ಷಿಣಕನ್ನಡದಲ್ಲಿ ನಾಳೆ ಲಾಕ್ ಡೌನ್ ➤ಗುರುವಾರದಿಂದ ಎಂದಿನಂತೆ ವ್ಯಾಪಾರ ಆರಂಭ…!!!

(ನ್ಯೂಸ್ ಕಡಬ) newskadaba.com ಮಂಗಳೂರು: ಜು.21., ರಾಜ್ಯಾದ್ಯಂತ ಲಾಕ್ ಡೌನ್ ತೆರವುಗೊಳಿಸಿದರೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಾಳೆ (ಜು.22) ಲಾಕ್ ಡೌನ್ ಮುಂದುವರಿಯಲಿದೆ.   ಕೊರೊನಾ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್ ಡೌನ್ ಘೋಷಿಸಿದ್ದು ಇದೀಗ ಮುಖ್ಯಮಂತ್ರಿಗಳ ನಿರ್ದೇಶನದಂತೆ ಜು.23ರಿಂದ ಲಾಕ್ ಡೌನ್ ಅನ್ನು ತೆರವುಗೊಳಿಸಲಾಗುತ್ತದೆ. ಗುರುವಾರದಿಂದ ಎಂದಿನಂತೆ ಅಂಗಡಿ ಮುಂಗಟ್ಟುಗಳು ವಾಣಿಜ್ಯ ವ್ಯವಹಾರಗಳು,ಕಚೇರಿಗಳು ತೆರೆಯಲಿದೆ ಎಂದು ದಕ್ಷಿಣಕನ್ನಡ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.    

ದಕ್ಷಿಣಕನ್ನಡದಲ್ಲಿ ನಾಳೆ ಲಾಕ್ ಡೌನ್ ➤ಗುರುವಾರದಿಂದ ಎಂದಿನಂತೆ ವ್ಯಾಪಾರ ಆರಂಭ…!!! Read More »

ಕರಾವಳಿ, ಕರ್ನಾಟಕ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!!

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಮಾರಕ ಕೊರೊನಾ ರೋಗಕ್ಕೆ ಚಿಕ್ಕಮುಡ್ನೂರು ಗ್ರಾಮದ ವೃದ್ಧೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಬಂದಾಗ ಇವರಿಗೆ ಸೋಂಕು ತಗಲಿರುವುದು ಖಚಿತವಾಗಿತ್ತು. ಇವರ ನಿಧನದಿಂದ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರ ಅಂತಿಮ ಸಂಸ್ಕಾರ ಪುತ್ತೂರಿನಲ್ಲಿ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!! Read More »

ಕರಾವಳಿ

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.21: ಕರೊನಾ ಸೋಂಕು ತಡೆಗಟ್ಟಲು ಶಾಸಕ ಸಂಜೀವ ಮಠಂದೂರು, ಉಪವಿಭಾಗೀಯ ಅಧಿಕಾರಿ ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ವಿನೂತನ ಯೋಜನೆ ಸಿದ್ಧಗೊಂಡಿದೆ. ಭಾರತ ಸರ್ಕಾರದಿಂದ ಪ್ರಮಾಣಿಕೃತಗೊಂಡು ಪುತ್ತೂರಿನಲ್ಲಿ ಸಿದ್ಧಗೊಂಡಿರುವ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು 1 ಸಾವಿರ ಮನೆಗಳಿಗೆ ಉಚಿತವಾಗಿ ವಿತರಿಸಲು ಯೋಜನೆ ರೂಪಿಸಲಾಗಿದೆ. ಪುತ್ತೂರಿನ ಆಯುರ್ವೇದ ತಜ್ಞ ಡಾ.ಹರಿಕೃಷ್ಣ ಪಾಣಾಜೆ ಸಿದ್ಧಪಡಿಸಿದ ಆಯುಷ್ ಕ್ವಾತ ಮತ್ತು ಆರೋಗ್ಯ ರಕ್ಷಕ್ ಮಾತ್ರೆಗಳನ್ನು ಪುತ್ತೂರು ನಗರಸಭೆಯ 31 ವಾರ್ಡ್‌ನ 1 ಸಾವಿರ ಮನೆಗಳಿಗೆ

ಪುತ್ತೂರು :1 ಲಕ್ಷ ಆಯುರ್ವೇದ ಮಾತ್ರೆ ವಿತರಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.21:  ಕೊರೋನಾ ಸೋಂಕನ್ನು ತಡೆಗಟ್ಟಲು ಕೊರೋನಾ ವಾರಿಯರ್​ಗಳಾಗಿ ಹೋರಾಡುತ್ತಿರುವ ವೈದ್ಯರು, ನರ್ಸ್​ಗಳು ಹಗಲು-ರಾತ್ರಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸ್​ಗಳಿಗೆ ರಾಜ್ಯ ಸರ್ಕಾರ ಬಂಪರ್ ಉಡುಗೊರೆಯೊಂದನ್ನು ನೀಡಿದೆ. ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 48,000ಕ್ಕೆ ಏರಿಕೆ ಮಾಡಲಾಗಿದೆ. ಹಾಗೇ, ತಿಂಗಳಿಗೆ 15 ಸಾವಿರ ರೂ. ಸಂಬಳ ಪಡೆಯುತ್ತಿದ್ದ ನರ್ಸ್​ಗಳ ವೇತನವನ್ನು 30 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ.   ಈ ಬಗ್ಗೆ ಇಂದು ವೈದ್ಯಕೀಯ ಶಿಕ್ಷಣ

ಸರ್ಕಾರಿ ಆಸ್ಪತ್ರೆಗಳ ಡಾಕ್ಟರ್, ನರ್ಸ್​ಗಳಿಗೆ ಬಂಪರ್ ಗಿಫ್ಟ್​ ➤ ಕರ್ನಾಟಕ ಸರ್ಕಾರದಿಂದ ವೇತನ ಹೆಚ್ಚಳ Read More »

ಕರಾವಳಿ, ಕರ್ನಾಟಕ
Scroll to Top