karnataka

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ ,ಜು.12: ಕೋವಿಡ್-19 ಸೋಂಕಿನ ಕಾರಣದಿಂದ ಉಡುಪಿಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು.ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ವೃದ್ಧರನ್ನು […]

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ Read More »

ಕರಾವಳಿ, ಕರ್ನಾಟಕ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ

(ನ್ಯೂಸ್ ಕಡಬ) newskadaba.com ಉಡುಪಿ,ಜು.12: ಕೊರೊನಾ ವೈರಸ್‌  ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ ಉಡುಪಿ ಜಿಲ್ಲೆಯಲ್ಲಿ ಕಳೆದ ವಾರದಂತೆ ಈ ವಾರವೂ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.ಭಾನುವಾರ ಎಲ್ಲಾ ಅಂಗಡಿಗಳು ಮುಚ್ಚಿದ್ದು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿಲ್ಲ. ಹಾಗೆಯೇ ಪ್ರತಿ ವಾರ ಸಂತೆಕಟ್ಟೆಯಲ್ಲಿ ನಡೆಯುವ ವಾರದ ಸಂತೆಯೂ ಕೂಡಾ ಮುಚ್ಚಲಾಗಿದೆ. ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ. ಜಿಲ್ಲೆಯಲ್ಲಿ ಜನರು ಸ್ವಯಂ

ಸಂಡೇ ಲಾಕ್‌ಡೌನ್‌ಗೆ ಉಡುಪಿ ಸ್ತಬ್ಧ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಈ ವಾರವೂ ಸಂಡೇ ಲಾಕ್ ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ

(ನ್ಯೂಸ್ ಕಡಬ) newskadaba.com ಕಡಬ ,ಜು.12: ಕೊರೊನಾ ವೈರಸ್‌ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜಾರಿ ಮಾಡಲಾಗಿರುವ ಸಂಡೇ ಲಾಕ್‌ಡೌನ್‌ಗೆ, ಎರಡನೆಯ ಆದಿತ್ಯವಾರ ಕಡಬದಲ್ಲಿ ಸಂಪೂರ್ಣ ಯಶಸ್ವಿಯಾಗಿದೆ.     ಪೆಟ್ರೋಲ್ ಪಂಪ್, ಮೆಡಿಕಲ್,ಹೊರತುಪಡಿಸಿ ಉಳಿದೆಲ್ಲ ವ್ಯಾಪಾರ ವ್ಯವಹಾರಗಳು ಬಂದ್ ಆಗಿದೆ, ವಾಹನ ಸಂಚಾರ ವಿರಳವಾಗಿದೆ.ಆರೋಗ್ಯ ಸೇವೆಗಳು ಮತ್ತು ಇತರ ಅಗತ್ಯ ಸೇವೆಗಳನ್ನು ಮಾತ್ರ ಸಾರ್ವಜನಿಕರಿಗೆ ತೆರೆಯಲಾಗಿದ್ದು ಪೊಲೀಸರು ಪ್ರತಿ ವಾಹನವನ್ನು ಪರಿಶೀಲಿಸುತ್ತಿದ್ದಾರೆ. ಅನಾವಶ್ಯಕವಾದ ಓಡಾಟಕ್ಕೆ ಅವಕಾಶವಿಲ್ಲ.    

ಕಡಬದಲ್ಲಿ ಈ ವಾರವೂ ಸಂಡೇ ಲಾಕ್ ಡೌನ್ ಗೆ ವ್ಯಾಪಕ ಬೆಂಬಲ ವ್ಯಕ್ತ Read More »

ಕರಾವಳಿ, ಕರ್ನಾಟಕ

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.12: ಕೊರೊನಾ ಸೋಂಕಿತರ ಸಂಖ್ಯೆ ದಿನ ಕಳೆದಂತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಡೇ ಕರ್ಫ್ಯೂಗೆ ಈ ರವಿವಾರವೂ ಜಿಲ್ಲೆ ಸಂಪೂರ್ಣ ಸ್ತಬ್ಧವಾಗಿದೆ. ಹೆದ್ದಾರಿ, ರಸ್ತೆಗಳಲ್ಲಿ ಬೆರಳೆಣಿಕೆಯಷ್ಟು ವಾಹನಗಳು ಮಾತ್ರ ಸಂಚರಿಸುತ್ತಿವೆ. ನಗರದ ಪ್ರಮುಖ ಭಾಗಗಳಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ನಗರದ ಒಳಭಾಗದಲ್ಲಿ ಮಾಂಸ, ತರಕಾರಿ, ಕೆಲ ದಿನಸಿ ಅಂಗಡಿಗಳು ತೆರೆದಿವೆ. ಬೆರಳೆಣಿಕೆಯ ಮಂದಿ ರಸ್ತೆ ಗಳಲ್ಲಿ ನಡೆದಾಟ ಹಾಗೂ ಖರೀದಿ ನಡೆಸುತ್ತಿದ್ದಾರೆ. ನಗರದ ಆಯಾಕಟ್ಟಿನ ಸ್ಥಳಗಳಲ್ಲಿ ಪೊಲೀಸರು ಬ್ಯಾರಿಕೇಡ್ ಗಳನ್ನು ಆಳವಡಿಸಿ ಪಹರೆ ನೀಡುತ್ತಿದ್ದಾರೆ.

ಸಂಡೆ ಸ್ಪೇಶಲ್ ಲಾಕ್ ಡೌನ್ ಈ ಸಂಡೆಯೂ ಸ್ತಬ್ದವಾದ ದ.ಕ Read More »

ಕರಾವಳಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ,ಜು.11:  ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ  ಪ್ರಸಿದ್ಧ ದೇವಾಲಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯ  ಕ್ಷೇತ್ರಕ್ಕೆ   ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹಾಗೂ ಅವರ ಪತ್ನಿ ಸಮೇತರಾಗಿ  ಭೇಟಿ ನೀಡಿ, ದೇವರ ದರ್ಶನ ಪಡೆದರು. ಕೊರೋನಾ ಆರ್ಭಟದ ನಡುವೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಯಶಸ್ವಿಯಾಗಿ ಪರೀಕ್ಷೆ ಬರೆದಿದ್ದಾರೆ.  ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಶಿಕ್ಷಣ ಸಚಿವರ ಭೇಟಿ Read More »

ಕರಾವಳಿ, ಕರ್ನಾಟಕ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.11: ಪುತ್ತೂರು ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್, ಅದೇ ಠಾಣೆಯಲ್ಲಿರುವ ಮಹಿಳಾ ಕಾನ್‌ಸ್ಟೇಬಲ್ ಒಬ್ಬರ ತಾಯಿ ಸೇರಿದಂತೆ 5 ಮಂದಿಗೆ ಪುತ್ತೂರು ತಾಲೂಕಿನಲ್ಲಿ ಕೋವಿಡ್ ದೃಢಗೊಂಡ ಬಗ್ಗೆ ವರದಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯ 30 ವರ್ಷ ಪ್ರಾಯದ ಕಾನ್‌ಸ್ಟೇಬಲ್ ಮತ್ತು ಮಹಿಳಾ ಕಾನ್‌ಸ್ಟೇಬಲ್ ಒಬ್ಬರ 40 ವರ್ಷ ಪ್ರಾಯದ ತಾಯಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಕಾನ್‌ಸ್ಟೇಬಲ್ ಅವರ ಸಂಪ್ಯ ವಸತಿ ಗೃಹದ ಕೊಠಡಿಯನ್ನು ಸೀಲ್‌ಡೌನ್ ಮಾಡಲಾಗಿದ್ದು, ಮಹಿಳಾ ಕಾನ್‌ಸ್ಟೇಬಲ್ ಅವರ

ಪುತ್ತೂರು : ನಗರ ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ಸೇರಿ 5 ಮಂದಿಗೆ ಕೋವಿಡ್ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!!

(ನ್ಯೂಸ್ ಕಡಬ) newskadaba.com ಸೂರತ್‍. ಜು.11. ಕೊರೊನಾ ನಂತರ ದೇಶಾದ್ಯಂತ ಫೇಸ್ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಆದ್ದರಿಂದ ಅನೇಕರು ವಿವಿಧ ರೀತಿಯ ಮಾಸ್ಕ್ ತಯಾರಿಸಿಕೊಂಡು ಧರಿಸುತ್ತಿದ್ದಾರೆ. ಇದೀಗ ಗುಜರಾತ್‍ನ ಸೂರತ್‍ನಲ್ಲಿ ಆಭರಣ ಅಂಗಡಿಯೊಂದು 1.5 ಲಕ್ಷದಿಂದ 4 ಲಕ್ಷದವರೆಗಿನ ವಜ್ರದ ಮಾಸ್ಕ್ ತಯಾರಿಸಿ ಮಾರಾಟ ಮಾಡಲಾಗುತ್ತಿದೆ. ಈ ಬಗ್ಗೆ ಮಾತನಾಡಿದ ಆಭರಣ ಅಂಗಡಿಯ ಮಾಲೀಕ ದೀಪಕ್ ಚೋಕ್ಸಿ, “ಲಾಕ್‍ಡೌನ್ ಸಡಿಲಗೊಳಿಸಿದ ನಂತರ ಗ್ರಾಹಕರೊಬ್ಬರು ನಮ್ಮ ಅಂಗಡಿಗೆ ಬಂದು, ನಮ್ಮ ಮನೆಯಲ್ಲಿ ವಿವಾಹ ನಡೆಯುತ್ತಿದೆ. ವಧು-ವರರಿಗೆ ವಿಶಿಷ್ಟವಾದ ಮಾಸ್ಕ್‌ಗಳನ್ನು ಮಾಡಿಕೊಂಡಿ

ನೂತನ ವಧು – ವರರಿಗೆ ತಯಾರಾದ ವಿಶಿಷ್ಟವಾದ ವಜ್ರದ ಮಾಸ್ಕ್..!!! Read More »

ರಾಷ್ಟ್ರೀಯ ನ್ಯೂಸ್

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು.11.ಮಾರ್ಗ ಬದಿಯಲ್ಲಿ ನಿಲ್ಲಿಸಿದ್ದ ಕಾರು ಚಾಲಕನಿಲ್ಲದೇ ತಾನಾಗೆ ಚಲಿಸಿದ ಘಟನೆ ಜಿಲ್ಲೆಯ ಮೂಡಿಗೆರೆ ನಗರದಲ್ಲಿ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ವ್ಯಕ್ತಿ, ರಸ್ತೆ ಪಕ್ಕ ಕಾರು ನಿಲ್ಲಿಸಿ ಅಂಗಡಿಗೆ ತೆರಳಿದ್ದಾನೆ. ಅದೇ ಕಾರಿನ ಮುಂಭಾಗದ ಸೀಟಿನಲ್ಲಿ ಯುವತಿ ಕೂತಿದ್ದಳು. ಆದರೆ ಯುವತಿ ಕೂಡ ಕಾರಿನಿಂದ ಕೆಳಗಿಳಿದಿದ್ದಾಳೆ. ಯುವತಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ನಿಂತಿದ್ದ ಕಾರು ಚಾಲಕನಿಲ್ಲದೇ ತಾನಾಗೇ ಚಲಿಸಲು ಆರಂಭಿಸಿದೆ. ಎಲ್ಲರೂ ಕಾರು ತಾನಾಗೇ ಹೋಗುತ್ತಿದೆ ಎಂದು ಗಾಬರಿಗೊಳಗಾಗಿ ಅಕ್ಕಪಕ್ಕ

ಮೂಡಿಗೆರೆ: ಚಾಲಕನಿಲ್ಲದೇ ತಾನಾಗೆ ಚಲಿಸಿದ ಕಾರು ➤ ತಪ್ಪಿದ ಭಾರೀ ಅನಾಹುತ Read More »

ಕರ್ನಾಟಕ

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್,

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!! Read More »

ಕರಾವಳಿ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top