karnataka

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು

(ನ್ಯೂಸ್ ಕಡಬ) newskadaba.com ಸುರತ್ಕಲ್, ಜೂ 13: ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದ ಯುವಕ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಕೃಷ್ಣಾಪುರ ಎಂಬಲ್ಲಿನ ಶನಿವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ತಾರನಾಥ್ ಎಂಬವರ ಪುತ್ರ ಸಂತೋಷ್(20) ಎಂದು ಗುರುತಿಸಲಾಗಿದೆ. ಸಂತೋಷ್ ಸ್ನೇಹಿತರ ಜೊತೆ ಇಂದು ಮಧ್ಯಾಹ್ನ ಕೃಷ್ಣಾಪುರ ಬಳಿಯ ಕೆರೆಯಲ್ಲಿ ಸ್ನಾನಕ್ಕೆಂದು ತೆರಳಿದ್ದರು. ಈ ವೇಳೆ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಸುರತ್ಕಲ್: ಕೆರೆಯಲ್ಲಿ ಮುಳುಗಿ ಯುವಕ ಸಾವು Read More »

ಕರಾವಳಿ, ಕರ್ನಾಟಕ

ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಿಹಾರ,ಜೂ.12:  ನೇಪಾಳಿ ಸೇನೆ ಬಿಹಾರದ ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತದ ಓರ್ವ ಪ್ರಜೆ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸೋನೆವಾರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಿಪ್ರಾ ಪರ್ಸೈನ್ ಪಂಚಾಯತ್ನ ಲಾಲ್ಬಂದಿ-ಜಾಂಕಿ ನಗರ್ ಬಾರ್ಡರ್ನಲ್ಲಿ ಗುಂಡಿನ ಹಾರಾಟ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಗಾಯಾಳು ವ್ಯಕ್ತಿಯೊಬ್ಬನನ್ನು ನೇಪಾಳ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಜಿತೇಂದ್ರ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ

ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ Read More »

ಕರಾವಳಿ

ಕೊರೊನಾ ಜೊತೆಗೆ ಡೆಂಗ್ಯೂ ಆರ್ಭಟ ➤ 50ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.12: ಕೊರೋನಾ ಆತಂಕದ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹರಡುತ್ತಿದ್ದು , ಈಗಾಗಲೇ 50 ಕ್ಕೂ ಅಧಿಕ ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೈವಳಿಕೆ , ಪುತ್ತಿಗೆ , ಕುಂಬಳೆ , ಬದಿಯಡ್ಕ , ಮುಳ್ಳೇರಿಯಾ , ಆದೂರು , ಪುಲ್ಲೂರು ಪೆರಿಯ ವ್ಯಾಪ್ತಿಯಲ್ಲಿ ಡೆಂಗ್ಯೂ ಹೆಚ್ಚುತ್ತಿದ್ದು , ಒಂದೆಡೆ ಕೊರೋನಾ ಭೇಟಿಯ ನಡುವೆ ಸಾಂಕ್ರಾಮಿಕ ರೋಗಗ ಗಳು ಜನತೆ ಹಾಗೂ ಆರೋಗ್ಯ ಇಲಾಖೆಯನ್ನು ಆತಂಕಕ್ಕೆ ಸಿಲುಕಿಸಿದೆ.ಕಾಸರಗೋಡು ಜನರಲ್ ಆಸ್ಪತ್ರೆ

ಕೊರೊನಾ ಜೊತೆಗೆ ಡೆಂಗ್ಯೂ ಆರ್ಭಟ ➤ 50ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ,ಜೂ.12:  ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಕೋವಿಡ್ -19 ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹ ಬಸ್ಗಳ

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ,ಜೂ.12: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ.ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ.   ರಷ್ಯಾದಲ್ಲಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಜೂ.12: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಮಾಸಿಕ ಮಹಾಸಭೆ ಗುರುವಾರ ಸುಬ್ರಹ್ಮಣ್ಯ – ಐನೆಕಿದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಂಗಣದಲ್ಲಿ ಜರಗಿತು. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕಲ್ಮಕ್ಕಾರು ಗ್ರಾಮ ಗುಳಿಕ್ಕಾನದ 9 ಕುಟುಂಬಗಳಿಗೆ ಸರಕಾರ ಬಿಡುಗಡೆಗೊಳಿಸಿದ ಪರಿಹಾರ ಮೊತ್ತ ವಿನಿಯೋಗ ಮತ್ತು ನಿವೇಶನ ಮಂಜೂರಾತಿ ಸಮಸ್ಯೆ ಪರಿಹಾರಕ್ಕಾಗಿ ವೇದಿಕೆ ನಿಯೋಗ ಶೀಘ್ರ ಸ್ಥಳ ಪರಿಶೀಲನೆಗೆ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು.   ವೇದಿಕೆಯ

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ Read More »

ಕರಾವಳಿ, ಕರ್ನಾಟಕ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ

(ನ್ಯೂಸ್ ಕಡಬ) newskadaba.com ತಿರುವನಂತಪುರ,ಜೂ.12: ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಭಕ್ತರು ಇನ್ನೂ ಸ್ವಲ್ಪದಿನ ಕಾಯಬೇಕಾದ ಪರಿಸ್ಥಿತಿ ಬಂದಿದ್ದು, ಕೇರಳ ಸರಕಾರ ಶಬರಿಮಲೆಗೆ ಭಕ್ತರಿಗೆ ಪ್ರವೇಶಕ್ಕೆ ಸದ್ಯಕ್ಕೆ ಅನುಮತಿ ನಿರಾಕರಿಸಿದೆ.   ಕೇಂದ್ರ ಸರಕಾರದ ಅನ್ ಲಾಕ್ 1.0ದಲ್ಲಿ ಧಾರ್ಮಿಕ ಕೇಂದ್ರಗಳನ್ನು ಮಾರ್ಗಸೂಚಿ ಗಳೊಂದಿಗೆ ತೆರೆಯಲು ಅನುಮತಿ ನೀಡಿದ ಬೆನ್ನಲ್ಲೆ ದೇಶದಾದ್ಯಂತ ಹಲವು ದೇವಸ್ಥಾನಗಳು ಭಕ್ತರಿಗೆ ದೇವರ ದರ್ಶನಕ್ಕ ಅವಕಾಶ ನೀಡಿವೆ. ಈ ಹಿನ್ನಲೆ ಕೇರಳ ಸರಕಾರವೂ ಕೂಡ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಿತ್ತು. ಆದರೆ ದೇಶದಾದ್ಯಂತ

ಕೊರೊನಾ ಏರಿಕೆ ಹಿನ್ನಲೆ ➤ ಸದ್ಯಕಿಲ್ಲ ಶಬರಿಮಲೆ ಅಯ್ಯಪ್ಪನ ದರ್ಶನ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ

ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜೂ.12:ಕುಕ್ಕೆ ಸುಬ್ರಹ್ಮಣ್ಯ ಪೇಟೆಯ ರಸ್ತೆಯಲ್ಲಿ ರಾತ್ರಿ ಜಿಂಕೆಗಳ ಓಡಾಟ ಕಂಡುಬಂದಿದೆ.ಇದನ್ನು ನೋಡಿದ ಸ್ಥಳೀಯರು ಛಾಯಚಿತ್ರ ಸೆರೆಹಿಡಿದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದ ಎಸ್‍ಎಸ್‍ಪಿಯು ಕಾಲೇಜಿನ ಬಳಿಯ ವಲ್ಲೀಶಾ ಸಭಾಭವನದ ರಸ್ತೆಯಲ್ಲಿ ರಾತ್ರಿ 2 ಜಿಂಕೆಗಳು ರಸ್ತೆ ದಾಟುತ್ತಿದ್ದವು ಅದೇ ವೇಳೆ ವಾಹನಗಳು ಹೋದುದರಿಂದ ಅಲ್ಲೇ ಸ್ವಪ್ಪ ಹೊತ್ತು ನಿಂತು ಅಲ್ಲಿಂದ ಓಡಿವೆ. ಈ ಹಿಂದೆ ರಾತ್ರಿ ಹೊತ್ತಲ್ಲೆ ಆನೆಗಳು ಕಂಡುಬಂದಿದ್ದವೂ ಹೀಗೆ ಕಾಡು ಪ್ರಾಣಿಗಳು ಪದೇ ಪದೇ ಸುಬ್ರಹ್ಮಣ್ಯ ಪ್ರದೇಶದಲ್ಲಿ ಓಡಾಟ ನಡೆಸುವುದು ಸರ್ವೆಸಾಮಾನ್ಯ ವಾಗಿದೆ.  

ಕುಕ್ಕೆಯಲ್ಲಿ ಜಿಂಕೆಗಳ ಸವಾರಿ Read More »

ಕರಾವಳಿ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಪುತ್ತೂರು,ಜೂ.12:  ಮಕ್ಕಳ ಮೇಲೆ ದೂರು ನೀಡಿದ ತಂದೆ ಕೊನೆಗೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ 11ರ ಗುರುವಾರ ಶಾಂತಿಗೋಡು ಗ್ರಾಮದ ನೆಕ್ಕರೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಾಂತಿಗೋಡು ಗ್ರಾಮದ ನೆಕ್ಕರೆ ಸೇಸಪ್ಪ ಕುಲಾಲ್ (74) ಎನ್ನಲಾಗಿದೆ. 20 ದಿನಗಳ ಹಿಂದೆ ಸೇಸಪ್ಪ ಕುಲಾಲ್ ಅವರು ತನ್ನ ಇಬ್ಬರು ಮಕ್ಕಳ ವಿರುದ್ದ ಪೊಲೀಸರಿಗೆ ದೂರು ನೀಡಿದ್ದರು. ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ ಬಳಿಕ ಮನೆಯಲ್ಲಿ ಯಾರೊಂದಿಗೆ ಮಾತನಾಡುತ್ತಿರಲಿಲ್ಲ ಎನ್ನಲಾಗಿದೆ. ಕೆಲಸಕ್ಕೂ

ಮಕ್ಕಳ ವಿರುದ್ದ ದೂರು ➤ ಕೆರೆಗೆ ಹಾರಿ ವೃದ್ದ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್

(ನ್ಯೂಸ್ ಕಡಬ) newskadaba.com.ಶ್ರೀನಗರ, ಜೂ.11– ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಸದೆಬಡೆಯುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾ ಪಡೆಗಳು ಮತ್ತಷ್ಟು ತೀವ್ರಗೊಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಂ ಜಿಲ್ಲೆಯ ಪಠಾಣ್ಪುರ್ನಲ್ಲಿ ಇಂದು ಬೆಳಗ್ಗೆ ಭದ್ರತಾಪಡೆಗಳೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರಗಾಮಿಗಳು ಹತರಾಗಿದ್ದು, ವಿಧ್ವಂಸಕ ಕೃತ್ಯ ಯತ್ನ ವಿಫಲಗೊಂಡಂತಾಗಿದೆ. ಹತರಾದ ಉಗ್ರರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಶೋಪಿಯಾನ್ ಜಿಲ್ಲೆಯಲ್ಲಿ ನಿನ್ನೆ ನಸುಕಿನಲ್ಲಿ ಭದ್ರತಾಪಡೆಗಳೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಕಮಾಂಡರ್ ಸೇರಿದಂತೆ ಐವರು ಉಗ್ರಗಾಮಿಗಳು ಹತರಾಗಿದ್ದರು.

ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಬೇಟೆ, ಇಂದು ಇಬ್ಬರು ಭಯೋತ್ಪಾದಕರು ಫಿನಿಶ್ Read More »

ರಾಷ್ಟ್ರೀಯ ನ್ಯೂಸ್
Scroll to Top