karnataka

ಬೆಂಗರೆ : ಪರಿಸರ ಸಾರ್ವಜನಿಕ ಸಭೆ 14ರಂದು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಬಂದರು ಮತ್ತು ಮೀನುಗಾರಿಕೆ ಇಲಾಖೆ, ಉಡುಪಿ ವಿಭಾಗ ಇವರು ಸಾಗರಮಾಲ ಯೋಜನೆಯಡಿನಗರದ ಹಳೇ ಬಂದರಿನಲ್ಲಿ ಕರಾವಳಿ ಬರ್ತ್ ನಿರ್ಮಿಸಲು ಉದ್ದೇಶಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಸಪ್ಟೆಂಬರ್ 14 ರಂದು ಬೆಳಿಗ್ಗೆ 11 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಕಸಬಾ ಬೆಂಗರೆ ವಠಾರದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಸರ ಸಾರ್ವಜನಿಕ ಆಲಿಕೆ ಸಭೆಯನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ನಡೆಸಲಾಗುತ್ತದೆ ಎಂದು ಎಂದುಮಂಡಳಿಯ ಮಂಗಳೂರು ವಿಭಾಗದ ಪರಿಸರ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಬೆಂಗರೆ : ಪರಿಸರ ಸಾರ್ವಜನಿಕ ಸಭೆ 14ರಂದು Read More »

ಕರಾವಳಿ

ಮುಜರಾಯಿ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ದ.ಕ.ಜಿಲ್ಲಾ ಪ್ರವಾಸ ಇಂತಿವೆ: ಸಪ್ಟೆಂಬರ್ 13ರಂದು ಬೆಳಿಗ್ಗೆ 11.15 ಗಂಟೆಗೆ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಸಭಾಭವನ ಮಂಗಳೂರು ಇಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಶ್ರೀ ನಾರಾಯಣ ಗುರು ಜಯಂತೋತ್ಸವಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12.50 ಗಂಟೆಗೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ಮುಜರಾಯಿ ಸಚಿವರ ಪ್ರವಾಸ Read More »

ಕರಾವಳಿ

ಅಡಿಕೆ ಫಸಲು ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. 2019-20ನೇ ಸಾಲಿನಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕು ತುಂಬೆ ತೋಟಗಾರಿಕೆ ಕ್ಷೇತ್ರದ ಅಡಿಕೆ ಫಸಲನ್ನು ಇ-ಹರಾಜು ಮತ್ತು ಟೆಂಡರ್ ಹರಾಜು ಮೂಲಕ ವಿಲೇವಾರಿ ಮಾಡಲಾಗುವುದು. ಇ-ಹರಾಜು ಅವಧಿಯು ಸೆಪ್ಟೆಂಬರ್ 9 ರಿಂದ ಆರಂಭಗೊಂಡು ಅಕ್ಟೋಬರ್ 10 ರಂದು ಕೊನೆಗೊಳ್ಳಲಿದೆ. ಆಸಕ್ತರು ತಮ್ಮ ಬಿಡ್ಡನ್ನು ಇ-ಹರಾಜು ಅಥವಾ ಟೆಂಡರ್ ಮೂಲಕ ಸಲ್ಲಿಸಬಹುದಾಗಿದೆ. ಇ-ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು e.procurement.kar.in ರಲ್ಲಿ ಪಡೆಯಬಹುದಾಗಿದೆ. ಟೆಂಡರ್ ಸಂಖ್ಯೆ:KSHDA /2019-20/Auction.2287.ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ,

ಅಡಿಕೆ ಫಸಲು ಹರಾಜು Read More »

ಕರಾವಳಿ

ಸಪೋಟ ಫಸಲು ಹರಾಜು ಪ್ರಕಟಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರಗಳಲ್ಲಿನ ಜುಲೈ 1 ರಿಂದ ಡಿಸೆಂಬರ್ 31 ಅವಧಿಯ ಸಪೋಟ ಫಸಲನ್ನು ಟೆಂಡರು ಮೂಲಕ ವಿಲೇ ಮಾಡಲಾಗುವುದು. ಹರಾಜು ವಿವರ ಇಂತಿವೆ : ತುಂಬೆ ತೋಟಗಾರಿಕೆ ಕ್ಷೇತ್ರ, ಬಂಟ್ವಾಳ ಸೆಪ್ಟಂಬರ್ 25 ರಂದು ಮಧ್ಯಾಹ್ನ 12 ಗಂಟೆ, ವಿಟ್ಲ ತೋಟಗಾರಿಕೆ ಕ್ಷೇತ್ರ ಬಂಟ್ವಾಳ, ಸೆಪ್ಟೆಂಬರ್ 25ರಂದು ಸಂಜೆ 4 ಗಂಟೆ, ಮದ್ದಡ್ಕ ತೋಟಗಾರಿಕೆ ಕ್ಷೇತ್ರ ಬೆಳ್ತಂಗಡಿ, ಸೆಪ್ಟೆಂಬರ್ 26 ಮಧ್ಯಾಹ್ನ 12 ಗಂಟೆಗೆ ನಡೆಯಲಿವೆ. ಆಸಕ್ತರು

ಸಪೋಟ ಫಸಲು ಹರಾಜು ಪ್ರಕಟಣೆ Read More »

ಕರಾವಳಿ

ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.11ರಂದು ಉತ್ತರ ಪ್ರದೇಶ ರಾಜ್ಯದ ಮಥುರಾದಲ್ಲಿ ರಾಷ್ಟ್ರೀಯ ಪ್ರಾಣಿ ರೋಗ ನಿಯಂತ್ರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿಲಾಯಿತು. ಈ ಉದ್ಘಾಟನಾ ಸಮಾರಂಭದ ನೇರ ಪ್ರಸಾರವನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ದಕ್ಷಿಣ ಕನ್ನಡ ಮತ್ತು ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇವರ ಸಹಯೋಗದಲ್ಲಿ ಕೃಷಿ ವಿಜ್ಞಾನ ಕೇಂದ್ರ, ಮಂಗಳೂರು ಇಲ್ಲಿ ಏರ್ಪಡಿಸಲಾಯಿತು. ಜಿಲ್ಲೆಯ ಪ್ರಗತಿ ಪರ ರೈತರಾದ ಮರಿಯಾ ಡಿಸೋಜ ಇವರು ಹೂವಿನ ಗಿಡಕ್ಕೆ ನೀರೆರೆಯುವ ಮೂಲಕ

ಎನ್.ಎ.ಡಿ.ಸಿ.ಪಿ ಕಾರ್ಯಕ್ರಮ Read More »

ಕರಾವಳಿ

2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆ ಸೇರ್ಪಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋಖೋ, ಕಬಡ್ಡಿ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆಯನ್ನು ಸರ್ಕಾರದ ನಿರ್ದೇಶನದಂತೆ ಸಂಘಟಿಸಲಾಗಿದೆ. ಎಂದು ಉಪನಿರ್ದೇಶಕರು, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

2019-20 ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟದ ಕ್ರೀಡೆಗಳೊಂದಿಗೆ ತ್ರೋಬಾಲ್ ಕ್ರೀಡೆ ಸೇರ್ಪಡೆ Read More »

ಕರಾವಳಿ

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ➤ ವಿದ್ಯಾರ್ಥಿ ಸಂಘದ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13. ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇವರ 2019-20ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಇಂದು ಸಂಜೆ 6 ಗಂಟೆಗೆ ರವೀಂದ್ರ ಕಲಾ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ ಸುಬ್ರಮಣ್ಯ ಯಡಪಡಿತ್ತಾಯ ವಹಿಸಲಿದ್ದಾರೆ. ದ.ಕ ಜಿಲ್ಲಾಧಿಕಾರಿ ಸಿಂಧು ಬಿ. ರೂಪೇಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ➤ ವಿದ್ಯಾರ್ಥಿ ಸಂಘದ ಉದ್ಘಾಟನೆ Read More »

ಕರಾವಳಿ

ವಯೋಶ್ರೇಷ್ಠ ಸಮ್ಮಾನ್ 2019 ಪ್ರಶಸ್ತಿ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ, ನವದೆಹಲಿಯವರು 2019ನೇ ಸಾಲಿನ “ವಯೋಶ್ರೇಷ್ಠ ಸಮ್ಮಾನ್ 2019” ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ನಾಗರೀಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸಂಘ ಸಂಸ್ಥೆಗಳು ಹಾಗೂ ನಾಗರೀಕರು ಅರ್ಜಿ ಸಲ್ಲಿಸಬಹ್ಮದು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 17 ಆಗಿದ್ದು, ಅರ್ಜಿಯನ್ನು ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್, ಮಂಗಳೂರು-575006. ದೂರವಾಣಿ ಸಂಖ್ಯೆ: 0824-2458173,2455999 ಈ ಕಚೇರಿಗೆ ನೀಡಬೇಕು.

ವಯೋಶ್ರೇಷ್ಠ ಸಮ್ಮಾನ್ 2019 ಪ್ರಶಸ್ತಿ ➤ ಅರ್ಜಿ ಆಹ್ವಾನ Read More »

ಕರಾವಳಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ➤ ರೋಟಾವೈರಸ್ ಲಸಿಕೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ರೋಟಾವೈರಸ್ ಲಸಿಕೆ ನೀಡಿಕೆಗೆ ಗುರುವಾರ ಚಾಲನೆ ನೀಡಲಾಯಿತು. ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ ಮಕ್ಕಳ ಆಸ್ಪತ್ರೆ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ರಾಮಕೃಷ್ಣ ರಾವ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೆನ್ಲಾಕ್ ಅಧೀಕ್ಷಕಿ ಡಾ|| ರಾಜೇಶ್ವರಿ ದೇವಿ ರೋಟಾ ವೈರಾಸ್ ಲಸಿಕೆಯನ್ನು ಮಗುವಿಗೆ ನೀಡುವ ಮೂಲಕ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರಾದ ಡಾ|| ಶೈಲಜ, ಜಿಲ್ಲಾ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ➤ ರೋಟಾವೈರಸ್ ಲಸಿಕೆ ಚಾಲನೆ Read More »

ಕರಾವಳಿ

ಸ್ಮಾರ್ಟ್ ಸಿಟಿ ಬಸ್ಸ್ ನಿರ್ಮಾಣ ಯೋಜನಾ ವೆಚ್ಚ ಅಧಿಕ ➤ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ಸೂಚನೆ.

(ನ್ಯೂಸ್ ಕಡಬ) newskadaba.com ಮಂಗಳೂರು,ಸಪ್ಟೆಂಬರ್.13.ಮಂಗಳೂರು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ವಿವಿಧ ಕಡೆಗಳಲ್ಲಿ ನಿರ್ಮಿಸಲಾಗಿರುವ ಬಸ್ ಶೆಲ್ಟರ್‍ಗಳ ಯೋಜನಾ ವೆಚ್ಚ ಅಧಿಕವಾಗಿರುವ ಬಗ್ಗೆ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ನಳೀನ್ ಕುಮಾರ್ ಕಟೀಲ್ ಸೂಚಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡುತ್ತಿದ್ದರು. ಸ್ಮಾರ್ಟ್ ಸಿಟಿಯಡಿ ಪ್ರತಿ ಬಸ್ ಶೆಲ್ಟರ್‍ಗೆ ರೂ. 12 ಲಕ್ಷ ಖರ್ಚು ಮಾಡಲಾಗಿದೆ. ಆದರೆ ಈ ಬಸ್ಸ್ ಶೆಲ್ಟರ್‍ನಲ್ಲಿ

ಸ್ಮಾರ್ಟ್ ಸಿಟಿ ಬಸ್ಸ್ ನಿರ್ಮಾಣ ಯೋಜನಾ ವೆಚ್ಚ ಅಧಿಕ ➤ ವಿಚಾರಣೆ ನಡೆಸುವಂತೆ ಲೋಕಸಭಾ ಸಂಸದ ಸೂಚನೆ. Read More »

ಕರಾವಳಿ
Scroll to Top