karnataka

ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಎಸ್ಎಲ್ ವರದಿ ಬಂದಿದೆ. ಈ ವಿಡಿಯೋಗಳು ಅಸಲಿ ಎಂದು ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗವಾಗಿದೆ ಎನ್ನಲಾಗಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಇದೀಗ ಬಂದಿರುವ ಎಫ್ಎಸ್ಎಲ್ ವರದಿ ಪ್ರಕಾರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. […]

ಪ್ರಜ್ವಲ್ ರೇವಣ್ಣ ಕೇಸ್; ‘ಅಶ್ಲೀಲ ವಿಡಿಯೋಗಳು ಅಸಲಿ’ ಎಫ್ಎಸ್ಎಲ್ ವರದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್  

(ನ್ಯೂಸ್ ಕಡಬ) newskadaba.com ಪುತ್ತೂರು, ಆ.02. ಗುಡ್ಡ ಕುಸಿದ ಪರಿಣಾಮ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿರುವ ಘಟನೆ ಮುಂಜಾನೆ ನಡೆದಿದೆ. ತೆಂಕಿಲ ಎಂಬಲ್ಲಿ ಹೆದ್ದಾರಿ ಮೇಲೆ ಗುಡ್ಡ ಕುಸಿದು ಬಿದ್ದಿದ್ದು, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸದ್ಯ ಮಣ್ಣು ತೆರವು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ತಿಳಿದುಬಂದಿದೆ. ಗುಡ್ಡ ಕುಸಿತ ಸಂಭವಿಸುವ ಸಮಯ ಯಾವುದೇ ವಾಹನ ಸಂಚಾರ ಇಲ್ಲದಿರುವುದರಿಂದ ಸಂಭವನೀಯ ಭಾರೀ ಅನಾಹುತ ತಪ್ಪಿದಂತಾಗಿದೆ. ಸದ್ಯ ಮಡಿಕೇರಿ ಹಾಗೂ ಮೈಸೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ರಸ್ತೆಯಾಗಿ

ಪುತ್ತೂರು: ಗುಡ್ಡ ಕುಸಿತ     ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ ಬಂದ್   Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಸುಮಾರು 10 ಕೋಟಿ ರೂ. ಮೌಲ್ಯದ ಕೊಕೈನ್‌ ಡ್ರಗ್ಸ್‌ ಅನ್ನು ಗುಳಿಗೆಗಳ ರೂಪದಲ್ಲಿ ಹೊಟ್ಟೆಯಲ್ಲಿಟ್ಟುಕೊಂಡು ಅಂತಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನೈಜಿರಿಯಾ ಮಹಿಳೆಯೊಬ್ಬರನ್ನು ಬಂಧನಕ್ಕೊಳಪಡಿಸಲಾಗಿದೆ. ವಿಮಾನ ನಿಲ್ದಾಣದ ಕಂದಾಯ ನಿರ್ದೇಶನಾಲಯದ ವಿಚಕ್ಷಣಾ ದಳಕ್ಕೆ ಈ ಮಹಿಳೆ ಮಾದಕ ವಸ್ತುವನ್ನು ಸಾಗಿಸುತ್ತಿರುವ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿಯನ್ವಯ ಈಕೆಯನ್ನು ಬಂಧಿಸಲಾಗಿದೆ. .  

ಏರ್‌ಪೋರ್ಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಆನೇಕಲ್ ಪುರಸಭಾ ಸದಸ್ಯ ಸ್ಕ್ರ್ಯಾಪ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸರು 30 ವರ್ಷದ ರೌಡಿ ಶೀಟರ್ ಒಬ್ಬನ ಕಾಲಿಗೆ ಗುಂಡಿನ ಹಾರಿಸಿ ಬಂಧನಕ್ಕೊಳಪಡಿಸಿದ್ದಾರೆ. ಪುರಸಭಾ ಸದಸ್ಯ ಸ್ಕ್ರಾಪ್‌ ರವಿಯನ್ನು ಮಾರಕಾಸಗಳಿಂದ ಚುಚ್ಚಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಹರೀಶ್‌ ಅಲಿಯಾಸ್‌‍ ಹಂದಿ ಹರೀಶ್‌, ವಿನಯ್‌ ಅಲಿಯಾಸ್‌‍ ವಿನಿ ಎಂಬುವರು ಸ್ವಯಂ ಆಗಿ ನ್ಯಾಯಾಲಯಕ್ಕೆ ಶರಣಾಗಿದ್ದರು. ಆದರೆ ಪ್ರಮುಖ ಆರೋಪಿ ಕಾರ್ತಿಕ್‌ ತಲೆ ಮರೆಸಿಕೊಂಡಿದ್ದನು ಎನ್ನಲಾಗಿದೆ.

ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಎದುರಿಸಲು ಮತ್ತು ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸಲು ಜಾಗೃತಿ, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮತ್ತು ತಂತ್ರಜ್ಞಾನ ಏಕೀಕರಣವನ್ನು ಉತ್ತೇಜಿಸಲು ಸರ್ಕಾರವು ಸಮಗ್ರ ಸೈಬರ್ ಭದ್ರತಾ ನೀತಿ 2024 ನ್ನು ಆರಂಭಿಸಿದೆ. ಈ ನೀತಿಯು ಅರಿವು ಮತ್ತು ಶಿಕ್ಷಣ, ಕೌಶಲ್ಯ ನಿರ್ಮಾಣ, ಉದ್ಯಮ ಮತ್ತು ಸ್ಟಾರ್ಟ್‌ ಅಪ್‌ಗಳ ಉತ್ತೇಜನ, ಸಾಮರ್ಥ್ಯ ವೃದ್ಧಿಗಾಗಿ ಪಾಲುದಾರಿಕೆ ಮತ್ತು ಸಹಯೋಗದಂತಹ ಹಲವಾರು ಪ್ರಮುಖ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುತ್ತದೆ

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.01. ರಾಜ್ಯದಲ್ಲಿ ಈ ವರ್ಷ ಜುಲೈ ಅಂತ್ಯದವರೆಗೆ 46 ಭೂಕುಸಿತಗಳು ಸಂಭವಿಸಿವೆ ಮತ್ತು ಇದಕ್ಕೆ ಸಂಬಂಧಿತ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೆ ತಜ್ಞರು ಮತ್ತು ಭೂವಿಜ್ಞಾನಿಗಳು ಮುಂಬರುವ ದಿನಗಳಲ್ಲಿ ಇನ್ನಷ್ಟು ಭೂಕುಸಿತ ಸಂಭವಿಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ(KNDMC) ಮತ್ತು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ(KSDMA)ವು ಕರ್ನಾಟಕದಲ್ಲಿ ಭೂಕುಸಿತಕ್ಕೆ ಒಳಗಾಗುವ ತಾಲ್ಲೂಕುಗಳ ಪಟ್ಟಿ ಮಾಡಿದೆ. ಇದರಲ್ಲಿ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು,

ರಾಜ್ಯದಲ್ಲಿ ಈ ವರ್ಷ 46 ಭೂಕುಸಿತ ಸಂಭವಿಸಿವೆ, 12 ಮಂದಿ ಸಾವು ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಅಪಾಯ ಎಂದ ತಜ್ಞರು Read More »

ಕರ್ನಾಟಕ

ನಮ್ಮ ಮೆಟ್ರೋದ 3ನೇ ಹಂತಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೇಂದ್ರ ಹಣಕಾಸು ಸಚಿವಾಲಯವು ಇತ್ತೀಚೆಗಷ್ಟೇ ಬೆಂಗಳೂರು ನಮ್ಮ ಮೆಟ್ರೋದ 15,611 ಕೋಟಿ ರೂ.ವೆಚ್ಚದ 3ನೇ ಹಂತದ ಯೋಜನೆಗೆ ಅನುಮತಿ ನೀಡಿದ್ದು, ಇದೀಗ ಸಂಪುಟದ ಅಂತಿಮ ಅನುಮೋದನೆಗಾಗಿ ಕಾಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಏಕಕಾಲದಲ್ಲಿ 44.65 ಕಿ.ಮೀ ಉದ್ದದ ಯೋಜನೆಗೆ ಟೆಂಡರ್ ಪ್ರಕ್ರಿಯೆಗೆ ಆರಂಭಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್‌ಗೆ (ಬಿಎಂಆರ್‌ಸಿಎಲ್) ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ. ಆದರೆ ಮುಂಬರುವ ಎಲ್ಲಾ ಮೆಟ್ರೋ ಯೋಜನೆಗಳಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಗಳನ್ನು ನಿರ್ಮಿಸಲು

ನಮ್ಮ ಮೆಟ್ರೋದ 3ನೇ ಹಂತಕ್ಕೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ Read More »

ಕರ್ನಾಟಕ

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು ಎಂದು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು ಜುಲೈ 31 ರಂದು ಬುಧವಾರ ಒತ್ತಾಯಿಸಿದರು. ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಖಾದರ್, ತುಳುವಿನ ಸಾಂಸ್ಕೃತಿಕ ಮತ್ತು ಭಾಷಿಕ ಮಹತ್ವವನ್ನು ಒತ್ತಿ ಹೇಳಿದರು, “ಕಲಾವಿದರು, ನಾಟಕಕಾರರು ಮತ್ತು ಚಲನಚಿತ್ರ ನಿರ್ಮಾಪಕರು ಭಾಷೆಯನ್ನು ಜಾಗತಿಕವಾಗಿ ಗಮನಾರ್ಹವಾಗಿ ಪ್ರಚಾರ ಮಾಡಿದ್ದಾರೆ. ತುಳು ಲೇಖಕರು ಅದರ ಖ್ಯಾತಿಯನ್ನು ಬಹಳವಾಗಿ ಹೆಚ್ಚಿಸಿದ್ದಾರೆ. ತುಳುವಿನ ಪ್ರೀತಿ, ಸಂಪ್ರದಾಯ, ಪರಂಪರೆಯನ್ನು

‘ತುಳು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಗುರುತಿಸಬೇಕು’ ಸ್ಪೀಕರ್ ಯು ಟಿ ಖಾದರ್ Read More »

ಕರಾವಳಿ

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.01. ಮಳೆಯ ಆರ್ಭಟ ಮುಂದುವರಿದಿದ್ದು, ನೆರೆಯಿಂದ ಆವೃತವಾದ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು ಎನ್ನಲಾಗಿದೆ. ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದ ಅವರು, ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌            

(ನ್ಯೂಸ್ ಕಡಬ)newskadaba.com ಮಂಗಳೂರು, ಆ.01. ಜಿಲ್ಲಾ ಕಾರಾಗೃಹದ 40 ಮಂದಿ ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವನೆ ಮಾಡಿರುವುದು ಪರೀಕ್ಷೆ ವೇಳೆ ಗೊತ್ತಾಗಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌ ತಿಳಿಸಿದ್ದಾರೆ ಎಂದು ವರದಿ ತಿಳಿಸಿದೆ. ಇತ್ತೀಚೆಗೆ ಜೈಲಿಗೆ ದಾಳಿ ನಡೆಸಿದಾಗ 25 ಮೊಬೈಲ್‌, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್‌ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್‌ ಬಂದಿದೆ ಎಂದು ತಿಳಿಸಿದ್ದಾರೆ.

 ಮಂಗಳೂರು: ವಿಚಾರಣಾಧೀನ ಕೈದಿಗಳು ಡ್ರಗ್ಸ್ ಸೇವಿಸಿರುವುದು ದೃಢ     ಮಂಗಳೂರು ಪೊಲೀಸ್‌ ಆಯುಕ್ತ ಅನುಪಮ್‌ ಅಗರ್‌ ವಾಲ್‌             Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top