karnataka

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್

(ನ್ಯೂಸ್ ಕಡಬ)newskadaba.com ಬೆಂಗಳೂರ, ಜು.31. ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಾಲ್ ಅವರ ಮದುವೆಗೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಮದುವೆಗೆ ಈಗಾಗಲೇ ಭರ್ಜರಿ ತಯಾರಿ ಆರಂಭವಾಗಿದೆ. ಇದೀಗ ತರುಣ್ ಮತ್ತು ಸೋನಾಲ್ ತಮ್ಮ ವಿವಾಹ ಪತ್ರಿಕೆಯನ್ನ ಪೂರ್ತಿಯಾಗಿ ಪರಿಸರ ಸ್ನೇಹಿಯಾಗಿ ಮಾಡಿಸಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರೆಟಿಗಳು ಪತ್ರಿಕೆಯೊಂದಿಗೆ ಒಂದು ಗಿಡ ಕೊಟ್ಟು ಮದುವೆಗೆ ಕರೆಯುತ್ತಾರೆ. ಆದರೆ ತರುಣ್ ನೀಡುತ್ತಿರುವ ಈ ಇನ್ವಿಟೇಷನ್ ನಲ್ಲಿ ಮದುವೆ ಪತ್ರಿಕೆ, ಒಂದು ಖಾಲಿ ಪುಸ್ತಕ ಅದರಲ್ಲಿ ಬರೆಯೋದಕ್ಕೆ ಎರಡು ಪೆನ್ಸಿಲ್ […]

ಮದುವೆಗೆ ಪರಿಸರ ಸ್ನೇಹಿ ಪತ್ರಿಕೆ ಮಾಡಿಸಿದ ತರುಣ್, ಸೋನಾಲ್ Read More »

ಕರ್ನಾಟಕ

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ

(ನ್ಯೂಸ್ ಕಡಬ)newskadaba.com ಕೊಡಗು, ಜು..31. ಮಳೆಯ ಅಬ್ಬರ ಮುಂದುವರಿದ್ದು, ಆಗಸ್ಟ್ 1 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧಿಸಲಾಗಿದೆ. ಅತಿಯಾದ ಮಳೆಯಿಂದ ದುಬಾರೆ, ಹಾರಂಗಿ ಸಾಕಾನೆ ಶಿಬಿರಗಳನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ ಎಂದು ಕೊಡಗು

ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಪ್ರವಾಸಿ ತಾಣಗಳಿಗೆ ಎರಡು ದಿನ ಪ್ರವೇಶ ನಿಷೇಧ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ

(ನ್ಯೂಸ್ ಕಡಬ)newskadaba.com ಕಾರ್ಕಳ, ಜು.31. ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಡಿಕ್ಕಿ ಹೊಡೆದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಕಾರ್ಕಳದಲ್ಲಿ ನಡೆದಿದೆ. ಇಳಿಜಾರು ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಬಲ ಭಾಗದಲ್ಲಿದ್ದ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಡಿಕ್ಕಿಯಾಗಿ ಹೆದ್ದಾರಿ ಬದಿಗೆ ಅಳವಡಿಸಿದ ಕಬ್ಬಿಣದ ತಡೆಬೇಲಿಯ ಮೇಲೇರಿದೆ. ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಗಳು ಹೆದ್ದಾರಿಗೆ ಬಿದ್ದು ವಾಹನ ಸಂಚಾರಕ್ಕೆ ಕೆಲ ಹೊತ್ತು

ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ  

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ, ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ. ಮೃತಪಟ್ಟ ಕನ್ನಡಿಗರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಎಕ್ಸ್‌ ನಲ್ಲಿ ಹಂಚಿಕೊಂಡ ಸಿಎಂ, ಇದೇ ವೇಳೆ ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್.ಡಿ.ಆರ್.ಎಫ್

 ‘ವಯನಾಡಿನಲ್ಲಿ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ತಲಾ 5 ಲಕ್ಷ ರೂ ಪರಿಹಾರ’      ಸಿಎಂ ಸಿದ್ದರಾಮಯ್ಯ ಘೋಷಣೆ   Read More »

ಕರ್ನಾಟಕ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಬಾಲಮಂದಿರದಿಂದ ತಪ್ಪಿಸಿಕೊಂಡು ಬಂದು ಮತ್ತೆ ಕಳ್ಳತನ ಮಾಡಿದ್ದ ನಾಲ್ವರು ಅಪ್ರಾಪ್ತರನ್ನು ಪೀಣ್ಯ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಸಂಬಂಧ ಅವರ ಪೋಷಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಿದ್ದಾರೆ. ಬಾಲಕರಿಂದ 4 ಲಕ್ಷ ರೂ. ಮೌಲ್ಯದ 30 ಗ್ರಾಂ ಚಿನ್ನದ ಸರ, 2 ದ್ವಿಚಕ್ರ ವಾಹನ ಹಾಗೂ 1 ಆಟೋರಿಕ್ಷಾ ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಕೆಂಪಯ್ಯ ಗಾರ್ಡನ್‌ ಬಳಿ ಮಹಿಳೆಯೊಬ್ಬರು ಬೆಳಗ್ಗೆ ಕೆಲಸಕ್ಕೆ ನಡೆದು ಹೋಗುತ್ತಿದ್ದಾಗ ದ್ವಿ-ಚಕ್ರ

ಬಾಲಮಂದಿರದಿಂದ ಪರಾರಿಯಾಗಿ ಕಳ್ಳತನ 4 ಅಪ್ರಾಪ್ತರ ಬಂಧನ Read More »

ಕರ್ನಾಟಕ

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಮಂಗಳೂರಿನ ಅರಣ್ಯ ಸಂಚಾರಿ ದಳದ ವತಿಯಿಂದ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನ ಸಮೇತ ರೂ. 5.50 ಲಕ್ಷ ಮೌಲ್ಯದ ಅಕೇಶಿಯ, ಮ್ಯಾಂಜಿಯಮ್ ದಿಮ್ಮಿಗಳನ್ನು ವಾಹನ ಸಮೇತ ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಥೋನಿ ಮರಿಯಪ್ಪ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಅರಣ್ಯ ಸಂಚಾರಿದಳ ವಲಯ ಅರಣ್ಯಾಧಿಕಾರಿ ಪ್ರಶಾಂತ್ ಕುಮಾರ್ ಪೈ ಅವರ ನೇತೃತ್ವದಲ್ಲಿ ಕಾರ್ಯಾಚರಣೆಯನ್ನು ನಡೆಸಲಾಯಿತು. ಈ ಕಾರ್ಯಾಚರಣೆಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್, ಶಿವಾನಂದ ಮಾದರ, ನವೀನ ರಿಚರ್ಡ್

ಮಂಗಳೂರು: ಮರದ ದಿಮ್ಮಿ ಆಕ್ರಮ ಸಾಗಾಟ ಪತ್ತೆ Read More »

ಕರಾವಳಿ

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ

(ನ್ಯೂಸ್ ಕಡಬ)newskadaba.com ಸುಳ್ಯ, ಜು.31. ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸುಳ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಸುಳ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕೊಯನಾಡಿಗೆ ಹೋಗಬೇಕಿದ್ದ ಬಸ್ ನಲ್ಲಿ ಮೊದಲಿಗೆ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ.

ಸುಳ್ಯ: ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ ತಪ್ಪಿದ ಭಾರಿ ಅನಾಹುತ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…!

(ನ್ಯೂಸ್ ಕಡಬ)newskadaba.com ಮಂಗಳೂರು, ಜು.31. ಸುರಿದ ಭಾರಿ ಮಳೆಗೆ ತಡರಾತ್ರಿ ಇತಿಹಾಸ ಪ್ರಸಿದ್ಧ ಗುಜ್ಜರಕೆರೆ ಬಳಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಅಗತ್ಯ ಕಾರ್ಯಾಚರಣೆಗೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದರು. ಮರ ಬಿದ್ದ ಪರಿಣಾಮ ಗುಜ್ಜರ ಕೆರೆಯ ಸುತ್ತಲೂ ಮಕ್ಕಳು ಹಾಗೂ ಹಿರಿಯರ ಸುರಕ್ಷತೆಯ ದೃಷ್ಟಿಯಿಂದ ಹಾಕಲಾಗಿದ್ದ ಸ್ಟಿಲ್ ರೇಲಿಂಗ್ ಮುರಿದಿದೆ. ಹೀಗಾಗಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಭಾರಿ ಮಳೆಗೆ ಉರುಳಿ ಬಿದ್ದ ಬೃಹತ್ ಮರ…! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…!

(ನ್ಯೂಸ್ ಕಡಬ)newskadaba.com ಹೊಸಪೇಟೆ, ಜು.31. ತುಂಗಭದ್ರಾ ಅಣೆಕಟ್ಟೆಯಿಂದ 1.6 ಲಕ್ಷ ಕ್ಯೂಸೆಕ್‌ ಗೂ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿಯ ಹಲವು ಸ್ಮಾರಕಗಳು ಮುಳುಗಡೆಯಾಗಿವೆ. ಭಾರೀ ಮಳೆಯಿಂದ ಒಳ ಹರಿವು ಹೆಚ್ಚಿರುವ ಕಾರಣ ತುಂಗಭದ್ರಾ ಅಣೆಕಟ್ಟೆಯಿಂದ ಹೆಚ್ಚು ನೀರು ಬಿಡಲಾಗುತ್ತಿದ್ದು, ಹಂಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡುವಾಗ ನದಿಯ ಸಮೀಪ ಎಲ್ಲೆಂದರಲ್ಲಿ ಪ್ರಯಾಣಿಸದಂತೆ ವಿಜಯನಗರ ಆಡಳಿತ ಪ್ರವಾಸಿಗರಿಗೆ ಎಚ್ಚರಿಕೆ ನೀಡಿದೆ. ತುಂಗಭದ್ರಾ ನದಿಯ ಜಲಾನಯನ ಪ್ರದೇಶಗಳಲ್ಲಿ ಕಳೆದ 20 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಂಪಿಯ ಪುರಂದರ ಮಂಟಪ,

ಭಾರೀ ಮಳೆಯಿಂದ ಹಂಪಿಯಲ್ಲಿ ಕನಿಷ್ಠ 12 ಸ್ಮಾರಕಗಳು ಮುಳುಗಡೆ…! Read More »

ಕರ್ನಾಟಕ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಚಿನ್ನಾಭರಣ, ವಜ್ರಾಭರಣ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬಂಧಿಸಿರುವ ಮಾರತ್ತಹಳ್ಳಿ ಪೊಲೀಸರು, 30 ಲಕ್ಷ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳನ್ನು ನೀಲಸಂದ್ರ ನಿವಾಸಿಗಳಾದ ದಿವ್ಯಾ(22) ಮತ್ತು ಆಕೆಯ ಚಿಕ್ಕಮ್ಮ ಮಂಜು(39) ಹಾಗೂ ಮಂಜು ಅವರ ಪರಿಚಯಸ್ಥ ಈಜಿಪುರದ ರೋಮನ್ ಎಂದು ಗುರುತಿಸಲಾಗಿದೆ. ದಿವ್ಯಾ ಎಂಬ ಮಹಿಳೆ ಉದ್ಯಮಿ ವಿಕ್ರಮ ವೈದ್ಯನಾಥನ್ ಅವರ ನಿವಾಸದಲ್ಲಿ ಮನೆಗೆಲಸ ಮಾಡುತ್ತಿದ್ದರು. ವೈದ್ಯನಾಥನ್ ಅವರು ತಮ್ಮ ಮನೆಯಿಂದ 60 ಲಕ್ಷ ರೂಪಾಯಿ

ಉದ್ಯಮಿ ಮನೆಯಲ್ಲಿ ಚಿನ್ನಾಭರಣ, ವಜ್ರ ಕಳ್ಳತನ…! ಮನೆಗೆಲಸದ ಮಹಿಳೆ ಸೇರಿ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top