karnataka

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ಭಾರಿ ಮಳೆ ಹಾಗೂ ಬಿರುಗಾಳಿಯಿಂದಾಗಿ ರಾಜ್ಯದ ಹಲವೆಡೆ ಸಾವಿರಾರು ವಿದ್ಯುತ್ ಕಂಬಗಳು, ಪರಿವರ್ತಕಗಳು ಮತ್ತು ವಿದ್ಯುತ್‌ ಸರಬರಾಜು ಮಾರ್ಗಗಳಿಗೆ ಹಾನಿಯಾಗಿದ್ದು, ವಿದ್ಯುತ್‌ ಸರಬರಾಜು ಕಂಪನಿಗಳಿಗೆ (ಎಸ್ಕಾಂ) ಒಟ್ಟು 96.61 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಅವರು ಹೇಳಿದರು. ಅತಿವೃಷ್ಟಿಯಿಂದ ಇಲಾಖೆಗೆ ಆಗಿರುವ ನಷ್ಟ ಮತ್ತು ವಿದ್ಯುತ್‌ ಪೂರೈಕೆಯಲ್ಲಿನ ಸಮಸ್ಯೆಗಳ ಕುರಿತು ಇಲಾಖೆ ಹಾಗೂ ಎಲ್ಲಾ ಎಸ್ಕಾಂಗಳ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು […]

ರಾಜ್ಯದಲ್ಲಿ ಭಾರೀ ಮಳೆ…! ಇಂಧನ ಇಲಾಖೆಗೆ 96.61 ಕೋಟಿ ರೂ. ನಷ್ಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ…!            ಕೊಚ್ಚಿ ಹೋದ ರಸ್ತೆ      

(ನ್ಯೂಸ್ ಕಡಬ)newskadaba.com ಹಾಸನ, ಜು.31. ಮುಂಜಾನೆ ಸುರಿದ ಮಳೆ ಮತ್ತು ಭೂಕುಸಿತದಿಂದ ಸಕಲೇಶಪುರ ತಾಲೂಕಿನ ಕುಂಬರಾಡಿ ಮತ್ತು ಹಾರ್ಲೆ ಎಸ್ಟೇಟ್ ನಡುವಿನ ರಸ್ತೆ ಕೊಚ್ಚಿ ಹೋಗಿದೆ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಯಿಂದಾಗಿ ಸಕಲೇಶಪುರ ತಾಲೂಕಿನ ಕೆಲವೆಡೆ ಭೂಕುಸಿತ ಉಂಟಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದ್ದು, ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ…!            ಕೊಚ್ಚಿ ಹೋದ ರಸ್ತೆ       Read More »

ಕರ್ನಾಟಕ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ 

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.31. ರಾಜ್ಯದಲ್ಲಿಡೆ ಭಾರಿ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ ಎದುರಿಸಲು ಎಲ್ಲ ಜಿಲ್ಲಾಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಜಲಾಶಯಗಳ ನೀರಿನ ಮಟ್ಟದ ಕುರಿತು ನಿರಂತರ ಪರಿಶೀಲನೆ ನಡೆಸಿ ಪ್ರವಾಹ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂಕುಸಿತದ ಪ್ರಕರಣಗಳು ವರದಿಯಾಗುತ್ತಿದ್ದು ಈ ಕುರಿತು ಸಹ ಜಿಲ್ಲಾಧಿಕಾರಿಗಳು ಎಚ್ಚರವಹಿಸುವಂತೆ ತಿಳಿಸಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವರು ಸಹ ಪ್ರವಾಹ ಪರಿಸ್ಥಿತಿಯ ನಿರ್ವಹಣೆಯ

ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ ಅಗತ್ಯ ಎಲ್ಲಾ ಪೂರ್ವ ಸಿದ್ದತೆಗಳಿಗೆ ಕ್ರಮ…!     ಸಿಎಂ ಖಡಕ್ ಸೂಚನೆ  Read More »

ಕರ್ನಾಟಕ

ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ…!

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ಮನೆಯ ಕುಡಿಯುವ ನೀರಿನ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪ್ರತ್ಯಕ್ಷವಾಗಿದೆ ಎಂದು ತಿಳಿದುಬಂದಿದೆ. ದಾರಿ ತಪ್ಪಿ ಬಂದ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಬಾವಿಯ ಆವರಣ ಗೋಡೆ ತಗ್ಗಿನಲ್ಲಿರುವುದರಿಂದ ಮತ್ತು ಬಾವಿಯಲ್ಲಿ ನೀರು ತುಂಬಿರುವುದರಿಂದ ಆಕಸ್ಮಿಕವಾಗಿ ಮೊಸಳೆ ಬಾವಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳೀಯರು ಬೃಹತ್ ಮೊಸಳೆಯನ್ನು ವೀಕ್ಷಿಸಲು ಧಾವಿಸಿದ್ದಾರೆ. ಅರಣ್ಯಾಧಿಕಾರಿಗಳು, ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ಥಳೀಯರ ಸಹಾಯದಿಂದ ಮೊಸಳೆಯನ್ನು ರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ. ಪಶುವೈದ್ಯರೂ ಸ್ಥಳಕ್ಕಾಗಮಿಸಿದ್ದಾರೆ

ಮನೆಯ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ…! Read More »

ಕರ್ನಾಟಕ

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಜು.31. ಎರಡು ಖಾಸಗಿ ಬಸ್‌ ಗಳ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಉಡುಪಿಯಲ್ಲಿ ವರದಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದುರ್ಗಾಂಬ ಬಸ್‌ ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಖಾಸಗಿ ಬಸ್ ಗಳ ನಡುವೆ ಅಪಘಾತ…! ಹಲವಾರು ಪ್ರಯಾಣಿಕರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…!

(ನ್ಯೂಸ್ ಕಡಬ)newskadaba.com ಕೊಡಗು, ಜು.30. ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯುತ್ ಹರಿದು 6 ಜಾನುವಾರು (ಹಸು, ಕರುಗಳು ) ಬಲಿ ಯಾಗಿರುವ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಜಾನುವಾರುಗಳು ಕೊಟ್ಟಿಗೆಗೆ ಬರುತ್ತಿದ್ದ ವೇಳೆ 11 ಕೆವಿ ವಿದ್ಯುತ್ ತಂತಿ ತುಂಡಾಗಿ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಮೇಯಲು ಬಿಟ್ಟಿದ್ದ ಜಾನುವಾರುಗಳು ಸಂಜೆ 7 ಗಂಟೆಯಾದರೂ ಮನೆಗೆ ಹಿಂತಿರುಗದಿದ್ದಾಗ ಮಾಲೀಕರು ಜಾನುವಾರುಗಳು ಹುಡುಕಿಕೊಂಡು ಹೋಗಿದ್ದಾರೆ. ಈ ವೇಳೆ ಘಟನೆ ಬೆಳಕಿಗೆ ಬಂದಿದೆ. ಬಳಿಕ ಚಾಮುಂಡೇಶ್ವರಿ ವಿದ್ಯುಚ್ಛಕ್ತಿ ಸರಬರಾಜು ನಿಗಮದ

ವಿದ್ಯುತ್ ಸ್ಪರ್ಶಿಸಿ 6 ಜಾನುವಾರುಗಳು ಬಲಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.30. ‘ಆಪರೇಷನ್ ಟೈಗರ್’ ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿ ಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು

ಮಂಗಳೂರು: ‘ಆಪರೇಷನ್ ಟೈಗರ್’ ಕಾರ್ಯಾಚರಣೆ…!    ಬೀದಿಬದಿ ವ್ಯಾಪಾರಿಗಳ ಪ್ರತಿಭಟನೆ Read More »

ಕರಾವಳಿ

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.30. ಪೊಲೀಸರು ಮನೆಗೆ ನುಗ್ಗಿ ವಿನಾಕಾರಣ ಯುವಕನೋರ್ವನ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದ್ದು, ಗಾಯಾಳು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಈಶ್ವರಮಂಗಲ ಪಂಚೋಡಿಯಲ್ಲಿ ನಡೆದಿದೆ. ಎಸಿ ಟೆಕ್ನಿಷಿಯನ್ ಆಗಿರುವ ಭ್ರಮೀಷ್ ಅವರ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ ಎನ್ನಲಾಗಿದೆ. ರಾತ್ರಿ 11 ಗಂಟೆ ಸುಮಾರಿಗೆ ತಾನು ಮನೆಯಲ್ಲಿ ಮಲಗಿದ್ದಾಗ ಬಾಗಿಲು ತಟ್ಟುವ ಶಬ್ದ ಕೇಳಿಸಿತು. ಬಾಗಿಲು ತೆರೆದಾಗ ನಾಲ್ವರು ಪೊಲೀಸರು ಮನೆಯಲ್ಲಿ ಬೇರೆ ಯಾರಾದರೂ ಇದ್ದಾರೆಯೇ ಎಂದು ಕೇಳಿದರು.

ಪುತ್ತೂರು: ಯುವಕನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ…! ಗಾಯಾಳು ಆಸ್ಪತ್ರೆಗೆ ದಾಖಲು Read More »

ಕರಾವಳಿ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್  

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.30. ಗುಡ್ಡ ಕುಸಿದ ಪರಿಣಾಮ ಸರಳಿಕಟ್ಟೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಹೀಗಾಗಿ ಅಜಿಲಮೊಗರು – ಸರಳಿಕಟ್ಟೆ – ಉಪ್ಪಿನಂಗಡಿ ಸಂಪರ್ಕ ಕಡಿತಗೊಂಡಿದೆ ಎನ್ನಲಾಗಿದೆ. ಮಣಿಹಳ್ಳ – ಉಪ್ಪಿನಂಗಡಿ ಸಂಪರ್ಕ ಕಲ್ಪಿಸುವ ರಸ್ತೆಗೆ ಗುಡ್ಡ ಕುಸಿದು ಬಿದ್ದ ಕಾರಣ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಬದಲಿ ರಸ್ತೆಯನ್ನು ಪ್ರಯಾಣಿಕರು ಬಳಸುತ್ತಿದ್ದಾರೆ. ಪ್ರಯಾಣಿಕರ ತಂಗುದಾಣದ ಬಳಿಯೇ ಈ ಘಟನೆ ನಡೆದಿದ್ದು, ಬಸ್ ನಿಲ್ದಾಣಕ್ಕೆ ಯಾವುದೇ ಹಾನಿಯಾಗಿಲ್ಲ. ಗುಡ್ಡ

ಉಪ್ಪಿನಂಗಡಿ: ಗುಡ್ಡ ಕುಸಿತ…!       ಸಂಚಾರ ಸಂಪೂರ್ಣ ಬಂದ್   Read More »

ಕರಾವಳಿ

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.30. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಎಲ್ಲಾ ವಲಯ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೂಚನೆ ನೀಡಿದರು ಎಂದು ವರದಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ Read More »

ಕರ್ನಾಟಕ
Scroll to Top