karnataka

ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ಸೇವೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ಇವರ ಕಚೇರಿಯ ಸರಕಾರಿ ಕೆಲಸ ಕಾರ್ಯಗಳಿಗಾಗಿ 2019-20 ನೇ ಸಾಲಿಗೆ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಆಗಸ್ಟ್ 2019 ರಿಂದ ಮಾರ್ಚ್ 2020 ರ ವರೆಗೆ ಮಾನವ ಸಂಪನ್ಮೂಲವನ್ನು ಹೊರ ಸಂಪನ್ಮೂಲ ಏಜನ್ಸಿ ಮೂಲಕ ಪಡೆಯಲು ಟೆಂಡರ್‍ಗಳನ್ನು ಆಹ್ವಾನಿಸಲಾಗಿದೆ. ಭಾಗವಹಿಸಲು ಆಸಕ್ತಿಯುಳ್ಳವರು ಕಚೇರಿಯಿಂದ ಟೆಂಡರ್ ನಮೂನೆಗಳನ್ನು ಪಡೆದು ಭರ್ತಿ ಮಾಡಿ ಖುದ್ದಾಗಿ/ ಅಂಚೆ ಮೂಲಕ ಸಹಾಯಕ ಕೃಷಿ ನಿರ್ದೇಶಕರು, ಮಂಗಳೂರು ತಾಲೂಕು ಕಚೇರಿಗೆ ಆಗಸ್ಟ್ […]

ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ, ಮಂಗಳೂರು ➤ ಗುತ್ತಿಗೆ ಆಧಾರದಲ್ಲಿ ಸೇವೆ – ಅರ್ಜಿ ಆಹ್ವಾನ Read More »

ಕರಾವಳಿ

ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ತಾಲೂಕು ಶಿವಶಕ್ತಿ ನಗರ ನಿವಾಸಿ ನಿತೀಶ್ ಕುಮಾರ್ (ಪ್ರಾಯ 19 ) ಜೂನ್ 29 ರಂದು ಕಾಣೆಯಾಗಿದ್ದಾರೆ ಎಂದು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.5 ಇಂಚು, ಎಣ್ಣೆ ಕಪ್ಪು ಮೈ ಬಣ್ಣ, ಎಡ ಕಾಲಿನ ಹೆಬ್ಬೆರಳಿನ ಮೇಲೆ ಯು ಆಕಾರದ ಕಪ್ಪು ಮಚ್ಚೆ ಇದೆ, ಎಡ ಕೈಯಲ್ಲಿ ಆಂಜನೇಯ ದೇವರ ಹಚ್ಚೆ ಇದೆ, ಮತ್ತು ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳನ್ನು

ಯುವಕ ನಾಪತ್ತೆ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ತಾಲೂಕು, ಕುತ್ತೆತ್ತೂರು ಗ್ರಾಮ, ಕೊಡಂಗೆ ನಿವಾಸಿ ಮೋಹನ್‍ದಾಸ್ ಶೆಟ್ಟಿ (ಪ್ರಾಯ 30 ವರ್ಷ) ಜುಲೈ 20 ರಂದು ಕಾಣೆಯಾಗಿದ್ದಾರೆ ಎಂದು ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ವ್ಯಕ್ತಿಯ ಚಹರೆ ಇಂತಿವೆ: ಎತ್ತರ 5.4, ಬಿಳಿ ಮೈಬಣ್ಣ, ಸಾಧಾರಣ ಶರೀರ, ಕಪ್ಪು ಗುಂಗುರು ಕೂದಲು, ಕಪ್ಪು ಮೀಸೆ, ಕುತ್ತಿಗೆಯ ಬಲ ಬದಿಯಲ್ಲಿ ಕಪ್ಪು ಮಚ್ಚೆ, ಬಲಕೋಲು ಕಾಲಿನಲ್ಲಿ ಹಳೇ ಗಾಯದ ಗುರುತು, ಧರಿಸಿದ ಬಟ್ಟೆ ಜೀನ್ಸ್ ಪ್ಯಾಂಟ್ ಮತ್ತು

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿ ನೇಮಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಸಾರ್ವಜನಿಕರ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟದ ಆರೋಗ್ಯ ಪಾಲನೆಗೆ ಉತ್ತೇಜನ ನೀಡುವುದು ಮತ್ತು ವೈದ್ಯ ಧರ್ಮದ ತತ್ವಗಳನುಸಾರವಾಗಿ ಮೇಲ್ವಿಚಾರಣೆ ಮಾಡಲು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಒದಗಿಸಬೇಕಾದ ಸೇವೆಯ ಗುಣಮಟ್ಟಗಳನ್ನು ನಿಗದಿಪಡಿಸುವ ಮೂಲಕ ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಸಂಸ್ಥೆಗಳ ವ್ಯವಹಾರವನ್ನು ಕಾನೂನಿನ ಮೂಲಕ ನಿಯಂತ್ರಿಸಿ ಮೇಲ್ವಿಚಾರಣೆ ಮಾಡಲು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಿಯಮ 2007 ಹಾಗೂ ನಿಯಮಗಳು 2009 ಕೆ.ಪಿ.ಎಂ.ಇ (ತಿದ್ದುಪಡಿ) ಅಧಿನಿಯಮ ಹಾಗೂ ನಿಯಮಗಳು 2018ನ್ನು

ಖಾಸಗಿ ಆಸ್ಪತ್ರೆಗಳ ಮೇಲ್ವಿಚಾರಣೆಗೆ ನೋಡಲ್ ಅಧಿಕಾರಿ ನೇಮಕ Read More »

ಕರಾವಳಿ

ಜಿಲ್ಲಾ ಸಂಚಾರಿ ನೇತ್ರ ಘಟಕ ➤ ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು, ಇವರ ಆಗಸ್ಟ್ ಮಾಹೆಯಲ್ಲಿ ನಡೆಯಲಿರುವ ನೇತ್ರ ಪರೀಕ್ಷಾ ಶಿಬಿರವನ್ನು ಏರರ್ಪಡಿಸಲಾಗಿದೆ. ಆದ್ದರಿಂದ ಆಗಸ್ಟ್ 27 ರಂದು ಡಾ. ಗೌರಿ ಪೈ ಕಲ್ಲಡ್ಕ ಇಲ್ಲಿ ನೇತ್ರ ಪರೀಕ್ಷಾ ಶಿಬಿರ ನಡೆಯಲಿದ್ದು ಸಾರ್ವಜನಿಕರು ಈ ಶಿಬಿರದ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಜಿಲ್ಲಾ ಸಂಚಾರಿ ನೇತ್ರ ಘಟಕ ➤ ನೇತ್ರ ಪರೀಕ್ಷಾ ಶಿಬಿರ Read More »

ಕರಾವಳಿ

ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ➤ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ನೈಸರ್ಗಿಕದತ್ತವಾದ ಪ್ರಾಕೃತಿಕ, ಪಾರಂಪರಿಕ ಸಾಂಸ್ಕøತಿಕ ಚೆಲುವನ್ನು ಹೊಂದಿದೆ ಆದ್ದರಿಂದ ಪ್ರವಾಸೋದ್ಯಮಕ್ಕೆ ಇನ್ನೂ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ ಹೇಳಿದರು. ಅವರು ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಏರ್ಪಡಿಸಲಾಗ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಬೆಳವಣಿಗೆ ಕುರಿತು “ಕನೆಕ್ಟ್-2019”ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮಕ್ಕೆ ಬೇಕಾಗುವ ಮೂಲಭೂತವಾದ ಸಂಪನ್ಮೂಲಗಳು ಸಾಕಷ್ಟು ಪ್ರಮಾಣದಲ್ಲಿದ್ದರೂ ಕೂಡ ಪ್ರವಾಸೋದ್ಯಮವನ್ನು

ಕರಾವಳಿ ಪ್ರವಾಸೋದ್ಯಮಕ್ಕೆ ಇನ್ನಷ್ಟು ಉತ್ತೇಜನ ➤ ಜಿಲ್ಲಾಧಿಕಾರಿ ಎಸ್.ಸಸಿಕಾಂತ್ ಸೆಂಥಿಲ್ Read More »

ಕರಾವಳಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ 2 ದಿನ ವಾಹನ ಸಂಚಾರ ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಗೆ ಒಳಪಟ್ಟ ರಾಷ್ಟ್ರೀಯ ಹೆದ್ದಾರಿ-73 (ಹಳೆ ರಾ.ಹೆ.234) ಮಂಗಳೂರು –ವಿಲ್ಲುಪುರಂ ರಸ್ತೆಯ ಕಿ.ಮೀ. 76.00 ರಿಂದ ಕಿ.ಮೀ 86.20 ರವರೆಗಿನ ಚಾರ್ಮಾಡಿ ಘಾಟ್ ಭಾಗದಲ್ಲಿ ಆಗಸ್ಟ್ 5 ರಿಂದ ಅಧಿಕ ಪ್ರಮಾಣದ ಮಳೆಯಾಗುತ್ತಿದೆ. ಆದ್ದರಿಂದ ಆ. 6 ರಂದು ಬಿರುಗಾಳಿ ಸಹಿತ ಸುರಿದ ಭಾರೀ ಪ್ರಮಾಣದ ಮಳೆಗೆ ರಸ್ತೆಗೆ ಬಾಗಿರುವ ದೊಡ್ಡ ಗಾತ್ರದ ಮರಗಳೊಂದಿಗೆ ಗುಡ್ಡಕುಸಿತ ಉಂಟಾಗಿರುತ್ತದೆ.ಚಾರ್ಮಾಡಿ ಘಾಟ್ ಭಾಗದಲ್ಲಿ ಇನ್ನೂ ಮಳೆ ಹೆಚ್ಚಾಗಿ ಬೀಳುತ್ತಿರುವ್ಯದರಿಂದ ಹಾಗೂ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ 2 ದಿನ ವಾಹನ ಸಂಚಾರ ನಿಷೇಧ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಜರುಗುವ ಹಬ್ಬ ಹರಿದಿನಗಳಲ್ಲಿ ➤ ಪ್ರಾಣಿ ಬಲಿ – ನಿಷೇಧ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ದ.ಕ ಜಿಲ್ಲೆಯಲ್ಲಿ ಜರುಗುವ ಬಕ್ರೀದ್ ಹಾಗೂ ಇತರೆ ಹಬ್ಬ ಹರಿದಿನಗಳಲ್ಲಿ ಪೂಜಾ ಸ್ಥಳಗಳಲ್ಲಿ/ಮಂದಿರಗಳಲ್ಲಿ ಸಾಮೂಹಿಕ ಪ್ರಾಣಿ ಹತ್ಯೆಯನ್ನು ಕರ್ನಾಟಕ ಪ್ರಾಣಿ ಬಲಿ ಪ್ರತಿಬಂಧಕ ಅಧಿನಿಯಮ ನಿಯಮದಂತೆ ಪ್ರಾಣಿ/ಕೋಳಿ ಬಲಿ ಕೊಡುವುದು ನಿಷೇಧಿಸಲ್ಪಟ್ಟಿದೆ ಹಾಗೂ ಪ್ರಾಣಿಗಳನ್ನು ಬಲಿ ಕೊಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಕರ್ನಾಟಕ ಗೋವಧೆ ಪ್ರತಿಬಂದಕ ಕಾಯ್ದೆ ಹಾಗೂ ಜಾನುವಾರು ಪರಿರಕ್ಷಣಾ ಅಧಿನಿಯಮ 64ರ ಸೆಕ್ಷನ್-4 ರ ಪ್ರಕಾರ ಗೋವು ಅಥವಾ ಎಮ್ಮೆಯ ಕರುವಿನ ವಧೆಯನ್ನು ನಿಷೇಧಿಸಿದೆ.ಈ ಎಲ್ಲಾ ಆದೇಶಗಳು

ದ.ಕ ಜಿಲ್ಲೆಯಲ್ಲಿ ಜರುಗುವ ಹಬ್ಬ ಹರಿದಿನಗಳಲ್ಲಿ ➤ ಪ್ರಾಣಿ ಬಲಿ – ನಿಷೇಧ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ➤ ಮಳೆ ನೀರು ಡ್ರೈನೇಜ್ಗೆ ಸಂಪರ್ಕ ಕಲ್ಪಿಸದಂತೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.8.ಮಂಗಳೂರು ಮಹಾನಗರ ಪಾಲಿಕೆಯ ನಗರದ ಭೂಗತ ಒಳಚರಂಡಿ ಯೋಜನೆಯ ದೈನಂದಿನ ನಿರ್ವಹಣೆಯನ್ನು ನಿರ್ವಹಿಸುತ್ತಿದೆ. ನಗರದಾದ್ಯಂತ ಹಮ್ಮಿಕೊಂಡಿರುವ ಒಳಚರಂಡಿ ವ್ಯವಸ್ಥೆಗೆ ವಸತಿ ಸಂಪರ್ಕವನ್ನು ಪಾಲಿಕೆಯಿಂದ ಇತ್ತೀಚಿನ ದಿನಗಳಲ್ಲಿ ಒಳಚರಂಡಿ ಬಳಕೆದಾರರುಗಳು ಒಳಚರಂಡಿ ಜೋಡಣೆಗೆ ತಮ್ಮ ಹಿತ್ತಲಿನ ಮತ್ತು ಮನೆಯ ಸುತ್ತಮುತ್ತ ಬೀಳುವ ಮಳೆಯ ನೀರನ್ನು ಒಳಚರಂಡಿ ಆಳುಗುಂಡಿಗೆ ನೀಡಿರುವುದು ಪಾಲಿಕೆಯ ಗಮನಕ್ಕೆ ಬಂದಿರುತ್ತದೆ. ಈ ಕಾರಣದಿಂದಾಗಿ ನಗರದ ರಸ್ತೆಗಳಲ್ಲಿ ಹಾಕಲಾಗಿರುವ ಆಳುಗುಂಡಿಗಳಿಂದ ತ್ಯಾಜ್ಯ ನೀರು ಮಳೆಯ ಸಂದರ್ಭದಲ್ಲಿ ಉಕ್ಕಿ ಹರಿದು ರಸ್ತೆಯಲ್ಲಿ ಮತ್ತು

ಮಂಗಳೂರು ಮಹಾನಗರ ಪಾಲಿಕೆ ➤ ಮಳೆ ನೀರು ಡ್ರೈನೇಜ್ಗೆ ಸಂಪರ್ಕ ಕಲ್ಪಿಸದಂತೆ ಸೂಚನೆ Read More »

ಕರಾವಳಿ

ಮಾರಕಾಸ್ತ್ರಗಳಿಂದ ಯುವಕನ ಕೊಲೆ ಮಾಡಿದ ನಾಲ್ವರು ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಡ್ಯ, ಆಗಸ್ಟ್.7.ಮಳವಳ್ಳಿ ತಾಲೂಕಿನ ಸಾತನೂರು ಬಳಿಯ ಕಾಳೇಗೌಡನದೊಡ್ಡಿಯ ಚಿಕ್ಕದೇವಯ್ಯ ಎಂಬುವರ ಪುತ್ರ ರಾಮು ಎಂಬಾತನನ್ನು ಹಾಡಹಗಲಲ್ಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ರಾಮು(30) ಕೊಲೆಯಾದವ.ರಾಮು ಹಲಗೂರಿನಲ್ಲಿ ಬಿ.ಕೆ. ಪ್ರಾವಿಷನ್ ಸ್ಟೋರ್ ಇಟ್ಟುಕೊಂಡಿದ್ದ. ಇಂದು ರಾಮು ಅಂಗಡಿಯಲ್ಲಿದ್ದಿದ್ದನ್ನು ನೋಡಿ ಬೆಳಗ್ಗೆ 10.10ಕ್ಕೆ ಮಾರಕಾಸ್ತ್ರಗಳನ್ನು ಹಿಡಿದು ಆಗಮಿಸಿದ ನಾಲ್ವರು ದುಷ್ಕರ್ಮಿಗಳು ಹಲ್ಲೆ ಮಾಡಿ ಧೈರ್ಯದಿಂದಲೇ ಹೊರಗೆ ಮಚ್ಚು ಬೀಸುತ್ತ ಬಂದಿದ್ದಾರೆ. ಮಾರಣಾಂತಿಕವಾಗಿ ಹಲ್ಲೆಗೊಳಗಾದ ಯುವಕನನ್ನು ತಕ್ಷಣ ಮಳವಳ್ಳಿ ಸರ್ಕಾರಿ ಆಸ್ಪತ್ರೆಗೆ

ಮಾರಕಾಸ್ತ್ರಗಳಿಂದ ಯುವಕನ ಕೊಲೆ ಮಾಡಿದ ನಾಲ್ವರು ದುಷ್ಕರ್ಮಿಗಳು Read More »

ಕರ್ನಾಟಕ
Scroll to Top