karnataka

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ನವದೆಹಲಿ, ಆಗಸ್ಟ್.2.ಸಂಸದ ಶ್ರೀ.ನಳಿನ್ ಕುಮಾರ್ ಕಟೀಲ್ ಇವರು ಇಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್ ಇವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆಯಡಿ ಮಂಗಳೂರಿಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವಂತೆ ಸಚಿವರಿಗೆ ಮನವಿ ಮಾಡಿದರು. ಮಂಗಳೂರಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದರಿಂದ ಕರಾವಳಿ ಕರ್ನಾಟಕದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಉತ್ತೇಜನ ಸಿಗುತ್ತದೆ ಅಲ್ಲದೇ ರಾಜ್ಯದ ಕರಾವಳಿ ಜಿಲ್ಲೆಗಳ ಜನಸಾಮಾನ್ಯರಿಗೆ ಇಂತಹ ಆಸ್ಪತ್ರೆಯಿಂದ ಕೈಗೆಟುಕುವ ಶುಲ್ಕದಲ್ಲಿ […]

ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಭೇಟಿಯಾದ ➤ಸಂಸದ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ

“ಜೀವನದಲ್ಲಿ ಗುರಿಯನ್ನು ಸಾಧಿಸುವ ಛಲದೊಂದಿಗೆ ಮುನ್ನಡೆಯಿರಿ“ ➤ ಡಾ. ಅಮಿತಾಬ್ ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ರಥಬೀದಿ ಇಲ್ಲಿ ಜುಲೈ 31 ರಂದು ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಅಭಿವಿನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಳದ (ಐಕ್ಯೂಎಸಿ) ವತಿಯಿಂದ ಏರ್ಪಡಿಸಲಾಗಿತ್ತು. ಫ್ರಾನ್ಸ್‍ನ ಸ್ಕೇಮಾ ಬಿ- ಸ್ಕೂಲ್‍ನ ಸಹಾಯಕ ಪ್ರಾಧ್ಯಾಪಕರು ಹಾಗೂ ಮಾನವ ಸಂಪನ್ಮೂಲ ತರಬೇತುದಾರರೂ ಆಗಿರುವ ಡಾ. ಅಮಿತಾಬ್ ಆನಂದ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ತನ್ನ ಜೀವನ ಚರಿತ್ರೆಯ ನಿದರ್ಶನವನ್ನು ನೀಡುತ್ತಾ

“ಜೀವನದಲ್ಲಿ ಗುರಿಯನ್ನು ಸಾಧಿಸುವ ಛಲದೊಂದಿಗೆ ಮುನ್ನಡೆಯಿರಿ“ ➤ ಡಾ. ಅಮಿತಾಬ್ ಆನಂದ್ Read More »

ಕರಾವಳಿ

ಯುವತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಮನೆ ಕೆಲಸಕ್ಕೆಂದು ಒರಿಸ್ಸಾ ರಾಜ್ಯದಿಂದ ನಗರಕ್ಕೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇಲ್ಲಿನ ಅನಿತಾ ನಝ್ರತ್ ಎಂಬವರ ಮನೆ ಕೆಲಸಕ್ಕೆ ಒರಿಸ್ಸಾ ರಾಜ್ಯದಿಂದ ಕುಮಾರಿ ಲೀಲಾಮಣಿ (18 ವರ್ಷ) ಎಂಬ ಹುಡುಗಿ ಜುಲೈ 7 ರಂದು ಬಂದಿದ್ದು, ಜುಲೈ 30 ರಂದು ಕಾಣೆಯಾಗಿರುವ ಬಗ್ಗ್ಲೆ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಯುವತಿಯ ಚಹರೆ ಇಂತಿವೆ: ಎತ್ತರ- 5.2 ಅಡಿ, ಮಾತನಾಡುವ ಭಾಷೆ- ಹಿಂದಿ ಮತ್ತು ಒಡಿಯಾ ಭಾಷೆ, ಚಹರೆ-

ಯುವತಿ ಕಾಣೆಯಾಗಿದ್ದಾರೆ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ➤ ಗುತ್ತಿಗೆ ಆಧಾರದಲ್ಲಿ ಸೇವೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆಯವ ಹಾಗೂ ಗುತ್ತಿಗೆ ಆಧಾರದಲ್ಲಿ ವಾಹನ ಒದಗಿಸುವ ಪ್ರತ್ಯೇಕ ಟೆಂಡರ್‍ಗಳನ್ನು ಕರೆಯಲಾಗಿದೆ. ಆಗಸ್ಟ್ 27 ರಂದು ಟೆಂಡರ್ ಸಲ್ಲಿಸಲು ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 08255-234102 ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿಲ್ಲಾ ಪಂಚಾಯತ್ ಬಂಟ್ವಾಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತೋಟಗಾರಿಕೆ ಇಲಾಖೆ ➤ ಗುತ್ತಿಗೆ ಆಧಾರದಲ್ಲಿ ಸೇವೆ Read More »

ಕರಾವಳಿ

ಡೆಂಗ್ಯು ಲಾರ್ವಾ ನಿಯಂತ್ರಣ : ವಾರ್ಡ್ ಮಟ್ಟದಲ್ಲಿ ತಂಡಗಳ ರಚನೆಯಾಗಲಿ ➤ ವೇದವ್ಯಾಸ್ ಕಾಮತ್

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ನಗರದ ವಾರ್ಡ್‍ಗಳಲ್ಲಿ ವಿಶೇಷ ಗುಂಪುಗಳನ್ನು ರಚಿಸಿ, ಅವರಿಗೆ ಡೆಂಗೆ ಕುರಿತು ಸೂಕ್ತ ಮಾಹಿತಿಗಳನ್ನು ನೀಡಿ ನಂತರ ಆ ಗುಂಪಿನ ಸದಸ್ಯರು ಮನೆ ಮನೆಗಳಿಗೆ ತೆರಳಿ ಡೆಂಗೆ ಕುರಿತು ಜಾಗೃತಿಯನ್ನು ಮೂಡಿಸುವ ಕಾರ್ಯ ಆರಂಭವಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಹೇಳಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿ, ಕೋರ್ಟ್ ಹಾಲ್‍ನಲ್ಲಿ ನಡೆದ ಡೆಂಗ್ಯೂ ಪ್ರಕರಣಗಳ ವಿಚಾರದ ಕುರಿತ ಸಭೆಯಲ್ಲಿ ಮಾತಾನಾಡಿದ ಅವರು ಮಂಗಳೂರು ನಗರದಲ್ಲಿ ಹಲವಾರು ರೋಗಗಳು ಬಂದು ಹೋಗಿವೆ, ಇವೆಲ್ಲವನ್ನೂ

ಡೆಂಗ್ಯು ಲಾರ್ವಾ ನಿಯಂತ್ರಣ : ವಾರ್ಡ್ ಮಟ್ಟದಲ್ಲಿ ತಂಡಗಳ ರಚನೆಯಾಗಲಿ ➤ ವೇದವ್ಯಾಸ್ ಕಾಮತ್ Read More »

ಕರಾವಳಿ

ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.2.ಕರ್ನಾಟಕ ಸರ್ಕಾರದ 2019-20ನೇ ಸಾಲಿನ ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮ ಅನುಷ್ಠಾನಗೊಳಿಸಲು ದ.ಕ ಜಿಲ್ಲೆಗೆ ಗುರಿ ನಿಗದಿಪಡಿಸಲಾಗಿದೆ. ಈ ಯೋಜನೆಯನ್ನು ಬೇಡಿಕೆ ಆಧಾರಿತ ಯೋಜನೆಯಾಗಿ ಮೊದಲು ಬಂದವರಿಗೆ ಆದ್ಯತೆ ಮೇರೆಗೆ ಇಲಾಖೆಯಲ್ಲಿ ಲಭ್ಯವಿರುವ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತದೆ. ಮಹಿಳೆಯರಿಗೆ ಹೈನುಗಾರಿಕೆ-30, 3ಕುರಿ /ಮೇಕೆ-94 ಹಾಗೂ ಮತ್ತು ಅನುಸೂಚಿ ಜಾತಿಗಳ ಉಪಯೋಜನೆ, ಬುಡಕಟ್ಟು ಉಪಯೋಜನೆಯಡಿ ಹೈನುಗಾರಿಕೆ-9, 3ಕುರಿ/ಮೇಕೆ-10, ಮತ್ತು ಹಂದಿ ಘಟಕ-4 ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುವುದು.   ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಹೈನುಗಾರಿಕೆ

ಮಹಿಳೆಯರಿಗಾಗಿ ಪಶುಸಂಗೋಪನಾ ಕಾರ್ಯಕ್ರಮಗಳ ಅನುಷ್ಠಾನ Read More »

ಕರಾವಳಿ

ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ➤ ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಕೊಡಿಯಾಲ್ ಬೈಲು ಪ್ರದೇಶದ ಜೈಲು ರಸ್ತೆಯ ಸಮೀಪ ನಡೆದಿದೆ. ಕಿಡಿ ಮತ್ತು ಹೊಗೆ ಕಾಣಿಸಿಕೊಂಡ ತಕ್ಷಣ ಕಾರನ್ನು ಚಲಾಯಿಸುತ್ತಿದ್ದ ಅದರ ಮಾಲಕ ವಿಕ್ರಂ ಅವರು ತಕ್ಷಣವೇ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಿಂದ ಕೆಳಗೆ ಇಳಿದಿದ್ದಾರೆ. ಇದರಿಂದಾಗಿ ಸಂಭವಿಸಬಹುದಾಗಿದ್ದ ಅಪಾಯವೊಂದು ತಪ್ಪಿದೆ. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಕಾರಿಗೆ ವ್ಯಾಪಿಸುತ್ತಿದ್ದ ಬೆಂಕಿಯನ್ನು ನಂದಿಸಿದರು.ಕಾರಿನ ಎ.ಸಿ.ಯನ್ನು ದುರಸ್ತಿಪಡಿಸಿ ತರುತ್ತಿದ್ದ ಸಂದರ್ಭದಲ್ಲಿ ಈ ಘಟನೆ

ಚಲಿಸುತ್ತಿದ್ದ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ➤ ಅದೃಷ್ಟವಶಾತ್ ಅಪಾಯದಿಂದ ಪಾರಾದ ಚಾಲಕ Read More »

ಕರಾವಳಿ

ಬೆಥನಿ ಡೇ ದಿನಾಚರಣೆ ಸಂಸ್ಕೃತಿ ಬೆಳೆಸುವ ಮೌಲ್ಯಯುತ ಶಿಕ್ಷಣ ಕೇಂದ್ರಗಳಾಗಿರುವುದು ದೇವರ ಕೃಪೆ ➤ ಬಿಷಪ್ ಮಕ್ಕಾರಿಯೋಸ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆಗಸ್ಟ್.1.ಬೆಥನಿ ಆಶ್ರಮಕ್ಕೆ ಇಂದು ನೂರರ ಸಂಭ್ರಮ, ಶಾಲೆ, ಕಾಲೇಜು, ಐಟಿಐ ಸೇರಿದಂತೆ ಬೆಥನಿಯ ಸಂಸ್ಥೆಗಳು ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರಿಗೂ ಸಮಾನತೆಯ, ಮಾನವೀತೆಯ, ಸಂದೇಶ ಸಾರುವ ಭಾರತೀಯ ಸಂಸ್ಕೃತಿ ಬೆಳೆಸುವ ಮೌಲ್ಯಯುತ ಶಿಕ್ಷಣ ಕೇಂದ್ರಗಳಾಗಿರುವುದು ದೇವರ ಕೃಪೆ , ದೇವದಾಸ ಮಹಾಧರ್ಮಾಧ್ಯಕ್ಷ ಮಾರ್ ಈವಾನಿಯೋಸರ ಕನಸು. ಇಂದು ಕಡಬ ತಾಲೂಕಿನ ,ಕರ್ನಾಟಕ ಸರಕಾರದ ,ಭಾರತ ದೇಶದ ಶ್ರೇಯೋಭಿವೃದ್ಧಿಯಲ್ಲಿ ಸಮಸ್ತ ನಾಡಿನ ಜನತೆಯೊಂದಿಗೆ ಬೆಥನಿ ಸಂಸ್ಥೆ ಕೈಜೋಡಿಸುತ್ತಿದೆ ಎಂದರೆ ತಪ್ಪಾಗಲಾರದು. ಇಂತಹ

ಬೆಥನಿ ಡೇ ದಿನಾಚರಣೆ ಸಂಸ್ಕೃತಿ ಬೆಳೆಸುವ ಮೌಲ್ಯಯುತ ಶಿಕ್ಷಣ ಕೇಂದ್ರಗಳಾಗಿರುವುದು ದೇವರ ಕೃಪೆ ➤ ಬಿಷಪ್ ಮಕ್ಕಾರಿಯೋಸ್ Read More »

ಕರಾವಳಿ

ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ ಅಮಾವಾಸ್ಯೆ ಒಂದು

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ (ಆಷಾಢ) ತಿಂಗಳಿಗೆ ವಿಶಿಷ್ಟ ರೀತಿಯ ಮಾನ್ಯತೆ ಇದೆ. ಆಟಿ ಕಷಾಯಕ್ಕೂ ಅಗ್ರ ಸ್ಥಾನ ದೊರೆತಿದೆ. ಕೃಷಿ ಅವಲಂಬಿತ ಪ್ರಾಚೀನ ತುಳುನಾಡಿನಲ್ಲಿ ಆಟಿ ತಿಂಗಳಲ್ಲಿ ಯಾವುದೇ ಬೆಳೆಯ ಫಸಲು ಕೊಯ್ಲಿಗೆ ಬರುವುದಿಲ್ಲ. ಈ ತಿಂಗಳಿನಲ್ಲಿ ಬದಲಾಗುವ ಭೂ ವಾತಾವಾರಣ, ನಿರಂತರ ಸುರಿಯುವ ಮಳೆಯನ್ನು ಕಾಣಬಹುದು. ಈ ಕಾರಣದಿಂದಾಗಿ ಈ ಮಾಸದಲ್ಲಿ ಶರೀರದಲ್ಲಿ ಕಂಡು ಬರುವ ರೋಗಗಳು ಮನುಷ್ಯನನ್ನು ನಿತ್ರಾಣ ಮಾಡುತ್ತದೆ. ಮಳೆಗಾಲದಲ್ಲಿ ದೊರಕುವ ಕಚ್ಚಾ ಆಹಾರ

ತುಳುನಾಡಿನ ಜಾನಪದ ಸಾಂಸ್ಕೃತಿಕ ಆಚರಣೆಗಳಲ್ಲಿ ಆಟಿ ಅಮಾವಾಸ್ಯೆ ಒಂದು Read More »

ಕರಾವಳಿ

ಮೇರಮಜಲು ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆಗಸ್ಟ್.1.2019 – 20ನೇಸಾಲಿನ ಪ್ರಥಮ ಹಂತದ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆ ಗ್ರಾಮ ಸಭೆಯನ್ನು ಆಯೋಜಿಸಲಾಗಿದೆ. ಆಗಸ್ಟ್ 2 ರಂದು ಬೆಳಿಗ್ಗೆ 11 ಗಂಟೆಗೆ ಪಂಚಾಯತ್ ಸಭಾಂಗಣ, ಮೇರಮಜಲು ಗ್ರಾಮಪಂಚಾಯತ್ ಇಲ್ಲಿ ನಡೆಸಲಾಗುವುದು.

ಮೇರಮಜಲು ಗ್ರಾಮ ಸಭೆ Read More »

ಕರಾವಳಿ
Scroll to Top