karnataka

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಟ್ರಾಫಿಕ್ ಕೋರ್ಟ್‌ ನಿಂದ ಪರಾರಿಯಾಗಿದ್ದ ರಸ್ತೆ ಅಪಘಾತದಲ್ಲಿ ಶಿಕ್ಷೆಗೊಳಗಾಗಿದ್ದ ಅಪರಾಧಿಯನ್ನು ಜೀವನ್ ಭೀಮಾ ನಗರ ಸಂಚಾರ ಪೊಲೀಸರು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. 2015ರಲ್ಲಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದ ಆರೋಪಿ ದಿನೇಶ್ (32) ಮೊಪೆಡ್‌ನಲ್ಲಿದ್ದ ಗುರುಪ್ಪ (54) ಅವರಿಗೆ ಡಿಕ್ಕಿ ಹೊಡೆದು ಕೆಳಗೆ ಬೀಳಿಸಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಪೊಲೀಸರು ಐಪಿಸಿಯ ಸೆಕ್ಷನ್ 279 (ನಿರ್ಲಕ್ಷ್ಯದ ಸವಾರಿ) ಮತ್ತು 304 (ಎ) (ಸಾವಿಗೆ ಕಾರಣ) […]

ಜೈಲಿನಿಂದ ತಪ್ಪಿಸಿಕೊಂಡ ಆರು ವರ್ಷಗಳ ನಂತರ ಸಿಕ್ಕಿಬಿದ್ದ ಅಪರಾಧಿ ಮತ್ತೆ ಸೆರೆಮನೆ ವಾಸ ಫಿಕ್ಸ್ Read More »

ಕರ್ನಾಟಕ

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್‌ ಮತ್ತೊಂದು ಸುತ್ತಿನ ವಿಸ್ತೃತ ಚರ್ಚೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ. ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ‌ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ‌ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ  ತಜ್ಞರೊಂದಿಗೆ ಸರ್ಕಾರ ಸಭೆ, ಚರ್ಚೆ….! Read More »

ಕರ್ನಾಟಕ

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಳೆಗಾಲದ ಅಧಿವೇಶನ ಮುಗಿಯಲು 2 ದಿನ ಬಾಕಿ ಇರುವಂತೆ ರಾಜ್ಯ ಸರ್ಕಾರ ಪ್ರಮುಖ ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು 26 ರಂದು ಪರಿಷತ್ತಿನ ಕಾಂಗ್ರೆಸ್ ಪಕ್ಷದ ಎಲ್ಲಾ ಸದರ್ಯರು ಕಡ್ಡಾಯವಾಗಿ ಹಾಜರಿರುವಂತೆ ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹಮದ್ ವಿಪ್ ನೀಡಿದ್ದಾರೆ. ಇನ್ನೆರಡು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಸರ್ಕಾರ ಸುಮಾರು 10 ವಿಧೇಯಕಗಳನ್ನು ಮಂಡಿಸಿ ಒಪ್ಪಿಗೆ ಪಡೆಯಬೇಕಾಗಿರುವುದರಿಂದ ಸದಸ್ಯರ ಹಾಜರಾತಿ ಕಡ್ಡಾಯಗೊಳಿಸಿ ವಿಪ್ ನೀಡಲಾಗಿದೆ ಎಂದು

ಇಂದು – ನಾಳೆ ಶಾಸಕರಿಗೆ ಕಾಂಗ್ರೆಸ್’ನಿಂದ ವಿಪ್ ಜಾರಿ Read More »

ಕರ್ನಾಟಕ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಹಾಸನ, ಜು.25. ಕೌಟುಂಬಿಕ ವಿಚಾರಕ್ಕೆ ತಂದೆಯ ನಿರಂತರ ಕಿರುಕುಳ ತಾಳಲಾರದೆ ಪುತ್ರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತನನ್ನು ಅಕಿಲ್ ಪಾಶ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ತಂದೆ ಸೈಯದ್ ಪಾಷಾ ಹಲವು ಸಂದರ್ಭಗಳಲ್ಲಿ ಕೌಟುಂಬಿಕ ವಿಚಾರವಾಗಿ ತನ್ನ ಮಗ ಮತ್ತು ಸೊಸೆ ವಿರುದ್ಧ ಅವಾಚ್ಯ ಶಬ್ಧಗಳಿಂದ ಜಗಳವಾಡುತ್ತಿದ್ದ ಎನ್ನಲಾಗಿದೆ. ಸಂಬಂಧಿಕರು ಮತ್ತು ನೆರೆಹೊರೆಯವರು ಪೊಲೀಸರ ಸಹಾಯದಿಂದ ಸೈಯದ್ ಪಾಷಾ ಮತ್ತು ಅವರ ಮಗನನ್ನು ಸಮಾಧಾನಪಡಿಸಲು ಹಲವು ಬಾರಿ ಪ್ರಯತ್ನಿಸಿದರೂ

ತಂದೆಯ ಕಿರುಕುಳ ತಾಳಲಾರದೆ ಪುತ್ರ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜು.25. ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಕೊಲೆ ಆರೋಪಿ ಶಿವಮೊಗ್ಗದ ಸಾಗರ ಮೂಲದ ಸೃಜನ್ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಸೃಜನ್ ಸೌಮ್ಯಳ ಮೃತದೇಹವನ್ನು ಹೂತಿಟ್ಟಿದ್ದನು. ಯುವತಿಯ

ಮದುವೆಯಾಗು ಅಂದಿದ್ದಕ್ಕೆ ಪ್ರಿಯತಮೆಯ ಕತ್ತುಹಿಸುಕಿ ಕೊಂದ ಪ್ರಿಯಕರ ಆರೋಪಿ ಅರೆಸ್ಟ್….! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ದಿಢೀರ್ ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.   ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಅಕ್ರಮಗಳ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಯಾಗಿ ಚರ್ಚೆ

ರಾಜ್ಯಪಾಲರನ್ನು ದಿಢೀರ್ ಭೇಟಿಯಾದ ಸಿದ್ದರಾಮಯ್ಯ   ಕುತೂಹಲ ಮೂಡಿಸಿದ ಸಿಎಂ ನಡೆ.! Read More »

ಕರ್ನಾಟಕ

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌ ಶೀಘ್ರದಲ್ಲೇ ಗೌರವಧನ ಹೆಚ್ಚಳ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಸರ್ಕಾರದ ಮುಂದಾಗಿದ್ದು, ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಹೇಳಿದರು. ಪ್ರಶ್ನೋತ್ತರ ಕಲಾಪದಲ್ಲಿ ಬಸವನಗುಡಿಯ ಬಿಜೆಪಿ ಸದಸ್ಯ ಎಲ್. ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು. ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌ ಶೀಘ್ರದಲ್ಲೇ ಗೌರವಧನ ಹೆಚ್ಚಳ Read More »

ಕರ್ನಾಟಕ

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಈ ಹಿಂದಿನ ಯಾವುದೇ ವರ್ಷ ಅಥವಾ ಯಾವುದೇ ಸರ್ಕಾರಕ್ಕೆ ಹೋಲಿಸಿದರೆ 2023-24ರ ಸಾಲಿನಲ್ಲಿ ರಾಜ್ಯಾದ್ಯಂತ ದಾಖಲೆಯ 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ ಎನ್ನಲಾಗಿದೆ. ವಿಧಾನ ಪರಿಷತ್‌ ನಲ್ಲಿ ಪ್ರಶ್ನೋತ್ತರ ವೇಳೆ ಬಿಜೆಪಿ ಸದಸ್ಯ ಕೇಶವ ಪ್ರಸಾದ್‌ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, ಈ ವರ್ಷ ಸುಮಾರು 38,78,525 ರೈತರಿಗೆ ಬರ ಪರಿಹಾರ ನೀಡಲಾಗಿದೆ. ಈ ಹಿಂದೆ 23,42,667 ರೈತರಿಗೆ ಪರಿಹಾರ

38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ನೀಡಲಾಗಿದೆ    ರಾಜ್ಯ ಸರ್ಕಾರ ಹೇಳಿಕೆ Read More »

ಕರ್ನಾಟಕ

ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬ           ನಿರ್ಮಾಣ ವೆಚ್ಚ ಬರೋಬ್ಬರೀ 40 ಸಾವಿರ ಕೋಟಿ ರೂ. ಏರಿಕೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ನಮ್ಮ ಮೆಟ್ರೊ 75.06 ಕಿ.ಮೀ ವ್ಯಾಪ್ತಿಯ 2ನೇ ಹಂತದ ಕಾಮಗಾರಿ ವೆಚ್ಚವು ಸುಮಾರು 40,000 ಕೋಟಿ ರೂ.ಗೆ ಏರಿದ್ದು, ಇದು ದಶಕದ ಹಿಂದೆ ಶೇ.52 ರಷ್ಟು ಮೂಲ ವೆಚ್ಚ ಪ್ರಸ್ತಾಪಿಸಲಾಗಿತ್ತು. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಇತ್ತೀಚೆಗೆ ನಗರಾಭಿವೃದ್ಧಿ ಇಲಾಖೆ (UDD) ಮೂಲಕ ಅನುಮೋದನೆಗಾಗಿ ರಾಜ್ಯ ಹಣಕಾಸು ಇಲಾಖೆಗೆ ಪರಿಷ್ಕೃತ ವೆಚ್ಚದೊಂದಿಗೆ ಪ್ರಸ್ತಾವನೆಯನ್ನು ಕಳುಹಿಸಿದೆ. ಯೋಜನೆಯು 2014 ರಲ್ಲಿ 72 ಕಿಮೀಗೆ ಅನುಮೋದನೆ ನೀಡಲಾಯಿತು. ನಂತರ 3 ಕಿಮೀ

ಮೆಟ್ರೋ 2ನೇ ಹಂತದ ಕಾಮಗಾರಿ ವಿಳಂಬ           ನಿರ್ಮಾಣ ವೆಚ್ಚ ಬರೋಬ್ಬರೀ 40 ಸಾವಿರ ಕೋಟಿ ರೂ. ಏರಿಕೆ ! Read More »

ಕರ್ನಾಟಕ
crime, arrest, suspected

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 25. ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಡುತ್ತಾ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿದ್ದ ಮೂವರು ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳದಲ್ಲಿ ವರದಿಯಾಗಿದೆ. ಮೂವರು ಯುವಕರು ಡ್ರಗ್ ನಶೆಯಲ್ಲಿ ತೇಲಾಡುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದರು. ಕೆಲ ದಿನಗಳ ಹಿಂದಷ್ಟೇ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ನಾರ್ಶ KPಬೈಲಿನ ಮನೆಯೊಂದರಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದಾಗ ಸಾರ್ವಜನಿಕರು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದರು. ವಿಟ್ಲ ಪೊಲೀಸರು ಬರುವಷ್ಟರಲ್ಲಿ ಸ್ಥಳದಿಂದ ಪರಾರಿಯಾಗಿದ್ದರೂ ಒಬ್ಬಾತ

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಡ್ರಗ್ಸ್ ನಶೆಯಲ್ಲಿ ತೂರಾಟ ಆರೋಪಿಗಳು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top