karnataka

ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಬಂಟ್ವಾಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಪಾಣೆಮಂಗಳೂರು ಮತ್ತು ವಾಮದಪದವು ಹಾಗೂ ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯಗಳಾದ ಕಲ್ಲಡ್ಕ ಮತ್ತು ವಿಟ್ಲ ಇಲ್ಲಿಗೆ 5ನೇ ತರಗತಿಯಿಂದ 10ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ 2019-20ನೇ ಸಾಲಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರ್ಪಡೆಗೊಳಿಸಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯೊಂದಿಗೆ ಹಿಂದಿನ ತರಗತಿಯಲ್ಲಿ ತೇರ್ಗಡೆಯಾದ ಅಂಕ […]

ಡಿ ದೇವರಾಜ ಅರಸುರವರ ಮೆಟ್ರಿಕ್ ಪೂರ್ವ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮವು ಎಂದಿನಂತೆ ತೆರೆದಿರುತ್ತವೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಜೂನ್.1.ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಎಲ್ಲಾ ವಿಭಾಗಗಳು,ಸಾರ್ವಜನಿಕರ ವೀಕ್ಷಣೆಗೆಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ.   ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್ ಮತ್ತು ಸಂಸ್ಕೃತಿ ಗ್ರಾಮ ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇವರ ಪ್ರಕಟಣೆ ತಿಳಿಸಿದೆ.

ಜೂನ್ 3 ರಂದು ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮವು ಎಂದಿನಂತೆ ತೆರೆದಿರುತ್ತವೆ. Read More »

ಕರಾವಳಿ

32ನೇ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. 32ನೇ ರಾಜ್ಯ ಮಟ್ಟದ ವಿಜ್ಞಾನ ಲೇಖಕರ ಶಿಬಿರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಹಾಗೂ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ 32ನೇ ರಾಜ್ಯ ಮಟ್ಟದ ಉದಯೋನ್ಮುಖ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರವನ್ನು ಜೂನ್ 21 ರಿಂದ 24 ರವರೆಗೆ ಬೆಂಗಳೂರಿನ ಎಚ್.ಕೆ.ಇ.ಎಸ್ ಶ್ರೀ ವೀರೇಂದ್ರ ಪಾಟೀಲ್ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗುತ್ತಿದೆ ಎಂದು ರಾಜ್ಯ ವಿಜ್ಞಾನ ಪರಿಷತ್ತು ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

32ನೇ ರಾಜ್ಯ ಮಟ್ಟದ ಕನ್ನಡ ವಿಜ್ಞಾನ ಬರಹಗಾರರ ತರಬೇತಿ ಶಿಬಿರ Read More »

ಕರಾವಳಿ

ಉಜಿರೆ ರುಡ್‍ಸೆಟ್‍ನಲ್ಲಿ ಎಸ್.ಡಿ.ಎಮ್ ಶಾಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಮಾಹಿತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಶಾಲೆಗಳು ಪ್ರಾರಂಭವಾಗುವ ಮೊದಲು ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲಾ ಎಲ್ಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಕಾರ್ಯಗಾರವನ್ನು ಉಜಿರೆ ರುಡ್‍ಸೆಟ್‍ನಲ್ಲಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಗಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರದ್ಧಾ ಅಮಿತ್ ರವರು ಉದ್ಘಾಟಿಸಿ ಮಾತನಾಡುತ್ತಾ ಮಕ್ಕಳಲ್ಲಿ ಸ್ಫೂರ್ತಿಯನ್ನು ತುಂಬುವವನೇ ನಿಜವಾದ ಶಿಕ್ಷಕ ಎಂದು ಅಭಿಪ್ರಾಯಪಟ್ಟರು. ಈ ಕಾರ್ಯಗಾರದಲ್ಲಿ ಶಿಕ್ಷಕರಿಗೆ ಮಂಜುಗಡ್ಡೆ ಕರಗಿಸುವ ಆಟ, ಮಾನವೀಯ ಸಂಬಂಧಗಳ ಕುರಿತು ತರಬೇತಿ ಹಾಗೂ ಶಿಕ್ಷಕ ಮತ್ತು ಮಕ್ಕಳ ಸಂಬಂಧದ ಕುರಿತು ವಿಶೇಷ ಉಪನ್ಯಾಸವನ್ನು

ಉಜಿರೆ ರುಡ್‍ಸೆಟ್‍ನಲ್ಲಿ ಎಸ್.ಡಿ.ಎಮ್ ಶಾಲಾ ಶಿಕ್ಷಕರಿಗೆ ಒಂದು ದಿನದ ಸಬಲೀಕರಣ ಮಾಹಿತಿ ಕಾರ್ಯಗಾರ Read More »

ಕರಾವಳಿ

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳಿಗೆ ವಿಶೇಷ ಸೂಚನೆ ➤ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಟಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2018ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳು http://serviceonline.gov.in/karnataka ಮೂಲಕ ಅರ್ಜಿಗಳನ್ನು ಜೂನ್ 30ರ ಒಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಪ್ರದೀಪ್ ಡಿ’ಸೋಜ, ಉಪನಿರ್ದೇಶಕರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು (ದೂ.0824-2451264) ಇವರನ್ನು ಸಂಪರ್ಕಿಸಬಹುದಾಗಿದೆ.

ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟಗಳಿಗೆ ವಿಶೇಷ ಸೂಚನೆ ➤ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ Read More »

ಕರಾವಳಿ

2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ಈ ಸಂಸ್ಥೆಗೆ ಸಂಬಂಧಿಸಿದಂತೆ 2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಅರ್ಜಿಗಳನ್ನು ಕೊಡುವ ಹಾಗೂ ಸ್ವೀಕರಿಸುವ ದಿನಾಂಕವನ್ನು 30-05-2019ರ ಸಂಜೆ 5.30ರ ವರೆಗೆ ವಿಸ್ತರಿಸಲಾಗಿದೆ. ಹಾಗೂ ಪ್ರವೇಶಾವಧಿಯನ್ನು ಪುನಃ ವಿಸ್ತರಿಸಲಾಗುವುದಿಲ್ಲ ಎಂಬ ಮಾಹಿತಿಯನ್ನು ವಿದ್ಯಾರ್ಥಿಗಳು ಹಾಗೂ ಪೋಷಕರ ಗಮನಕ್ಕೆ ತರಲಾಗಿದೆ ಹೆಚ್ಚಿನ ಮಾಹಿತಿಗಾಗಿ www.dte.kar.nic.inಅಥವಾ www.kea.kar.nic.in ವೆಬ್ ಸೈಟ್‍ಗಳನ್ನು ನೋಡಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ 0824-2211636ನ್ನು ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

2019-20ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಪದವಿಗೆ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಣೆ Read More »

ಕರಾವಳಿ

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಕರ್ನಾಟಕ ರಾಜ್ಯ ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ ಒಳಚರಂಡಿ ಹಾಗೂ ನಿರಂತರ ನೀರಿ ಸರಬರಾಜು ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಸಭೆಯನ್ನು ಅಯೋಜಿಸಲಾಗಿದೆ. ಆ ಪ್ರಯುಕ್ತ  ಮೇ 31 ರಂದು ಸಂಜೆ 6.30 ಗಂಟೆಗೆ ವಾರ್ಡ್ ನಂ. 51 ರಲ್ಲಿ ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಪಡೀಲ್ ನ ನಿಡ್ಡಲ್ ಗೋಕರ್ಣ ಆಗ್ನೇಸ್ ರೇಗೋ ಮನೆ ಹತ್ತಿರ ಹಾಗೂ ಜೂನ್ 1

ವಾರ್ಡ್ ಮಟ್ಟದ ಸಾರ್ವಜನಿಕ ಸಮಾಲೋಚನಾ ಸಭೆ Read More »

ಕರಾವಳಿ

ನೀವು ಬಾಲ ಕಾರ್ಮಿಕರನ್ನು ದುಡಿಸುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ಈಗಲೇ ಓದಿರಿ…

  (ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30. ನಗರದಲ್ಲಿ ಅಪಾರ್ಟ್‍ಮೆಂಟ್‍ಗಳು ಅಧಿಕ ಸಂಖ್ಯೆಯಲ್ಲಿದ್ದು ವಲಸೆ ಕಾರ್ಮಿಕರು ಅಧಿಕ ಸಂಖ್ಯೆಯಲ್ಲಿರುತ್ತಾರೆ. ಇವರ ಮಕ್ಕಳನ್ನು ಕೆಲಸಕ್ಕೆ ಬಳಸದಂತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕೆಂದು ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಸೂಚಿಸಿದರು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾರ್ಮಿಕ ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಅಪಾರ್ಟ್‍ಮೆಂಟ್‍ಗಳಲ್ಲಿ ಮನೆ ಕೆಲಸ ಮಾಡುವ ಕಾರ್ಮಿಕರು ಮತ್ತು ಮಾಲಿಕರ ಮೇಲೆ ಹೆಚ್ಚಿನ ಗಮನ ಹರಿಸಿ ಏಕೆಂದರೆ ಹೆಚ್ಚಾಗಿ ಮನೆಕೆಲಸಕ್ಕೆ ಹಾಗೂ ಅಪಾರ್ಟ್‍ಮೆಂಟ್‍ಗಳಲ್ಲಿ

ನೀವು ಬಾಲ ಕಾರ್ಮಿಕರನ್ನು ದುಡಿಸುತ್ತಿದ್ದೀರಾ..? ➤ ಹಾಗಾದರೆ ಈ ಸುದ್ದಿಯನ್ನು ಈಗಲೇ ಓದಿರಿ… Read More »

ಕರಾವಳಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ತಂಬಾಕು ರಹಿತ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಮಹಾನಗರ ಪಾಲಿಕೆ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ. ದಕ್ಷಿಣ ಕನ್ನಡ ಮಂಗಳೂರು, ದಂತ ಆರೋಗ್ಯ ವಿಭಾಗ(ಎಮ್.ಸಿ.ಒ.ಡಿ.ಎಸ್), ಮಂಗಳೂರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ದಿನಾಚರಣೆ -2019 ಮಂಗಳೂರು ನಗರ ಕೋಟ್ಪಾ-2003 ಕಾಯಿದೆಯ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾವತಿಯಿಂದ ತಂಬಾಕು ರಹಿತ ದಿನಾಚರಣೆ Read More »

ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.30.ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಈ ಹಿಂದೆ ಜಾರಿಯಲ್ಲಿದ್ದ ರೇಷನಿಂಗ್ ಪದ್ಧತಿಯನ್ನು ಪರಿಷ್ಕರಿಸಿ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯಲ್ಲಿ ವ್ಯತ್ಯಾಸ ಉಂಟಾಗಬಾರದೆಂದುಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಮೇ 29 ರಿಂದ 72 ಗಂಟೆಗಳ ಅವಧಿಯಲ್ಲಿ ತುಂಬೆಯಲ್ಲಿ ಪಪಿಂಗ್ ವ್ಯವಸ್ಥೆಯನ್ನು ಸಂಪೂರ್ಣ ಸ್ಥಗಿತಗೊಳಿಸಿ, ತದನಂತರ ಮೇ 31 ರಂದು ಬೆಳಿಗ್ಗೆ 6 ಗಂಟೆಯಿಂದ 4 ದಿನಗಳ ಅವಧಿಯಲ್ಲಿ ಒಟ್ಟು 96 ಗಂಟೆಗಳವರೆಗೆ

ಮಂಗಳೂರು ಮಹಾನಗರ ಪಾಲಿಕೆ, ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರಿಗೆ ರೇಷನಿಂಗ್ ಪದ್ಧತಿ ಜಾರಿ➤ನೀರು ಮಿತವಾಗಿ ಬಳಸಿ Read More »

ಕರಾವಳಿ
Scroll to Top