karnataka

ಮಾಜಿ ಸೈನಿಕ, ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿ ವಿತರಣೆ

ಮಂಗಳೂರು ಏಪ್ರಿಲ್ 24 (ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಗೊಳಪಡುವ ಮಾಜಿ ಸೈನಿಕರ ಹಾಗೂ ಯುದ್ದ ಕಾರ್ಯಾಚರಣೆಯಲ್ಲಿ ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿಯನ್ನು ವಿತರಿಸುವ ಕ್ರಮ ಜಾರಿಗೆ ಬಂದಿದೆ.ಗುರುತು ಚೀಟಿಯನ್ನು ಪಡೆಯಲು ಇಚ್ಚಿಸುವವರು ಸಂಬಂಧಿಸಿದ ದಾಖಲೆಗಳ ಮಾಹಿತಿ ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಕಾರ್ಯಾಲಯಕ್ಕೆ ಖುದ್ದಾಗಿ ಕಚೇರಿ ವೇಳೆಯಲ್ಲಿ ಬಂದು ಪಡೆಯಬಹುದಾಗಿದೆ ಎಂದು ಜಂಟಿ ನಿರ್ದೇಶಕರ ಕಾರ್ಯಾಲಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಮಾಜಿ ಸೈನಿಕ, ಮಡಿದ ಯೋಧರ ಅವಲಂಬಿತರಿಗೆ ಗುರುತು ಚೀಟಿ ವಿತರಣೆ Read More »

ಕರಾವಳಿ

ಡಾ. ರಾಜ್‍ಕುಮಾರ್ 91ನೇ ಜನ್ಮದಿನಾಚರಣೆ

ಮಂಗಳೂರು ಏಪ್ರಿಲ್ 24 (ನ್ಯೂಸ್ ಕಡಬ) newskadaba.com,):- ಕನ್ನಡದ ಮೇರುನಟ ಡಾ ರಾಜ್ ಕುಮಾರ್ ತಮ್ಮ ಬದುಕಿನುದ್ದಕ್ಕೂ ಶ್ರದ್ಧೆ, ಸರಳತೆ ಮತ್ತು ಮಾನವೀಯತೆಯಿಂದ ಕನ್ನಡಿಗರ ಮನಗೆದ್ದವರು; ನಟನೆಯ ಜೊತೆಗೆ ಸಮಾಸೇವೆಯಲ್ಲಿ ತನ್ನನ್ನು ತಾನೂ ತೊಡಗಿಸಿಕೊಂಡವರೆಂಬುದನ್ನು ಸ್ಮರಿಸಿದ ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ, ಮೈಸೂರಿನಲ್ಲಿ ಡಾ ರಾಜ್ ಅವರು ಆರಂಭಿಸಿದ ಅಬಲಾಶ್ರಮ ಇಂದಿಗೂ ಸೇವಾಮುಖಿಯಾಗಿರುವುದನ್ನು ವಿವರಿಸಿದರು. ಕಲಾ ಸೇವೆಯ ಜೊತೆಗೆ ಕನ್ನಡಕ್ಕಾಗಿ ಇವರು ನೀಡಿದ ಕೊಡುಗೆ ಸದಾ ಸ್ಮರಣೀಯ ಎಂದು ಹೇಳಿದರು.ಇವರು ಜಿಲ್ಲಾಡಳಿತ, ವಾರ್ತಾ ಮತ್ತು

ಡಾ. ರಾಜ್‍ಕುಮಾರ್ 91ನೇ ಜನ್ಮದಿನಾಚರಣೆ Read More »

ಕರಾವಳಿ

ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆ

ಮಂಗಳೂರು ಏಪ್ರಿಲ್ 23( ನ್ಯೂಸ್ ಕಡಬ) newskadaba.com,):- 2018-19 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆಗಳನ್ನು 1:2ರ ಅನುಪಾತದಲ್ಲಿ ಏಪ್ರಿಲ್ 25 ರಿಂದ ನಡೆಸಲಾಗುವುದು. ಈ ಸಂಬಂಧ ಈಗಾಗಲೇ ಅರ್ಹ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನಕ್ಕೆ ಕರೆ ಪತ್ರಗಳನ್ನು ಕಳುಹಿಸಲಾಗಿದೆ. ಕರ್ನಾಟಕ ರಾಜ್ಯದ ಪೊಲೀಸ್ ನೇಮಕಾತಿಯು ಪಾರದರ್ಶಕ, ಗಣಕೀಕೃತ, ಸಂಪೂರ್ಣ ವಸ್ತು ನಿಷ್ಠ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತಿದೆ ಯಾವುದೇ ಅಭ್ಯರ್ಥಿಯು ಇಲಾಖೆಯ ಹೊರಗಾಗಲಿ ಅಥವಾ ಯಾವುದೇ ವ್ಯಕ್ತಿಗೆ

ಪೊಲೀಸ್ ಸಬ್‍ಇನ್ಸ್‍ಫೆಕ್ಟರ್ (ಸಿವಿಲ್) ಹುದ್ದೆಗಳ ಮೌಖಿಕ ಪರೀಕ್ಷೆ Read More »

ಕರಾವಳಿ

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ

ಮಂಗಳೂರು ಏಪ್ರಿಲ್ 23 (ನ್ಯೂಸ್ ಕಡಬ) newskadaba.com,):- ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಂಗಳೂರು ತಾಲೂಕಿನ ಕಮ್ಮಾಜೆ (ಕಿನ್ನಿಗೋಳಿ) ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪದವಿ ಪೂರ್ವ ವಿಜ್ಞಾನ ಕಾಲೇಜಿ (ಪಿಸಿಎಂಬಿ ಮತ್ತು ಪಿಸಿಎಂಸಿ)ಗೆ 10ನೇ ತರಗತಿಯಲ್ಲಿ ತೇರ್ಗಡೆಯಾದ ವಿದ್ಯಾಥಿರ್üಗಳಿಗೆ ಮೆರಿಟ್ ಹಾಗೂ ಸರ್ಕಾರದ ಮೀಸಲಾತಿಯನ್ವಯ ಪ್ರವೇಶ ನೀಡಲಾಗುವುದು. ಆಯ್ಕೆಯಾದ ವಿದ್ಯಾಥಿರ್üಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ವಿದ್ಯಾಭ್ಯಾಸ ನೀಡಲಾಗುವುದು.

ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಡಾ. ರಾಜ್ ಕುಮಾರ್ 91ನೇ ಜಯಂತಿ

ಮಂಗಳೂರು ಏಪ್ರಿಲ್ 23(ನ್ಯೂಸ್ ಕಡಬ) newskadaba.com, :- ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಇವರ ವತಿಯಿಂದ ವರನಟ ಡಾ. ರಾಜ್ ಕುಮಾರ್ ಅವರ 91ನೇ ಜಯಂತಿ ಕಾರ್ಯಕ್ರಮ ಏಪ್ರಿಲ್ 24 ರಂದು ಅಪರಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀನಿವಾಸ ವಿಶ್ವವಿದ್ಯಾನಿಲಯ ಕಾಲೇಜು ಆವರಣ, ಪಾಂಡೇಶ್ವರದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ವೆಂಕಟಾಚಲಪತಿ ಉದ್ಘಾಟಿಸಲಿದ್ದಾರೆ.

ಡಾ. ರಾಜ್ ಕುಮಾರ್ 91ನೇ ಜಯಂತಿ Read More »

ಕರಾವಳಿ

ಹೆಚ್1 ಎನ್1 ಸೋಂಕಿನ ಲಕ್ಷಣ

ಮಂಗಳೂರು ಏಪ್ರಿಲ್ 22(ನ್ಯೂಸ್ ಕಡಬ) newskadaba.com, :- ಹೆಚ್1 ಎನ್1 ಸಾಮಾನ್ಯ ವೈರಸ್ ಜ್ವರವಾಗಿದ್ದು ನಿರ್ದಿಷ್ಟ ಮತ್ತು ಸೂಕ್ತ ಚಿಕಿತ್ಸೆಯಿಂದ  ರೋಗಿಗಳು  ಸಂಪೂರ್ಣವಾಗಿ ಗುಣಮುಖರಾಗುವರು. ತೀವೃ ಸ್ವರೂಪದ ಜ್ವರ, ಕೆಮ್ಮು, ಕಫ, ಶೀತ ಮತ್ತು ಗಂಟಲು ಕೆರೆತ ಮೈಕೈ ನೋವು ವಾಂತಿ ಭೇದಿ, ಉಸಿರಾಟದ ತೊಂದರೆ ಎಚ್1 ಎನ್1 ಸೋಂಕಿನ ಲಕ್ಷಣಗಳಾಗಿದ್ದು, ಭಾದಿತರು ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯಿರಿ. ಸೋಂಕಿತರು ಕೆಮ್ಮಿದಾಗ, ಸೀನಿದಾಗ ವೈರಸ್‍ಗಳು ಹರಡುತ್ತವೆ. ಕೆಮ್ಮುವಾಗ, ಸೀನುವಾಗ ಕರವಸ್ತ್ರ ಬಳಸಿ,

ಹೆಚ್1 ಎನ್1 ಸೋಂಕಿನ ಲಕ್ಷಣ Read More »

ಕರಾವಳಿ

ಜಿಲ್ಲೆಯಲ್ಲಿ ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com:ಮಂಗಳೂರು ಏಪ್ರಿಲ್ 18, ಜಿಲ್ಲೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ನಡೆದ ಮತದಾನದಲ್ಲಿ ಶೇಕಡಾ 77.25 ರಷ್ಟು ಮತದಾನವಾಗಿದೆ.ಬೆಳಿಗ್ಗೆ 9 ಗಂಟೆಗೆ ಶೇ. 15.49 ಮತದಾನವಾಗಿದ್ದು ಬೆಳಗ್ಗೆ 7 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತ ಮತದಾರರು ಚುರುಕಿನ ಮತದಾನ ನಡೆಸಿದರು. ಪೂರ್ವಾಹ್ನ 11 ಗಂಟೆಗೆ ಶೇ.32.34, ಅಪರಾಹ್ನ 1 ಗಂಟೆಗೆ ಶೇ. 48.85, 3 ಗಂಟೆಗೆ ಶೇಕಡಾ 60.02, ಸಂಜೆ 5 ಗಂಟೆಗೆ ಶೇ. 72.3 ಅಂತಿಮ

ಜಿಲ್ಲೆಯಲ್ಲಿ ಶಾಂತಿಯುತ ಮತದಾನ Read More »

ಕರಾವಳಿ

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ.

(ನ್ಯೂಸ್ ಕಡಬ) newskadaba.com ಕಡಬ, ಎ.17. ಕರ್ನಾಟಕ ದಲಿತ ಸಂಘರ್ಷ ಸಮಿತಿ( ಬಿ ಕೃಷ್ಣಪ್ಪ ಸ್ಥಾಪಿತ 47-74/75). ತಾಲ್ಲೂಕು ಶಾಖೆ ಕಡಬ ಹಾಗೂ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಕಡಬದ ಅಂಬೇಡ್ಕರ್ ಭವನದಲ್ಲಿ “ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ||ಬಾಬಾಸಾಹೇಬ್ ಅಂಬೇಡ್ಕರ್ ರವರ 128ನೇ ಜನ್ಮ ದಿನಾಚರಣೆಯನ್ನುಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಡಬ ತಾಲ್ಲೂಕು ಸಂಚಾಲಕರಾದ ಉಮೇಶ್ ಕೋಡಿಂಬಾಳ ಇವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರಬುದ್ಧ ಭಾರತ ಸಂಘದ ಅಣ್ಣು ಸಾಧನ್ ಅವರು

ಕಡಬ: ದಲಿತ ಸಂಘರ್ಷ ಸಮಿತಿಯಿಂದ ಅಂಬೇಡ್ಕರ್ ರವರ 178 ನೇ ಜನ್ಮ ದಿನಾಚರಣೆ. Read More »

ಕರಾವಳಿ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಎ.17 ;- ಜಿಲ್ಲೆಯಲ್ಲಿ ಬೆಳ್ತಂಗಡಿ, ಸುಳ್ಯ, ಪುತ್ತೂರು, ಬಂಟ್ವಾಳ ತಾಲೂಕಿಗೊಂದರಂತೆ ಪಾರಂಪರಿಕ ಮತಗಟ್ಟೆಗಳನ್ನು ರಚಿಸಲಾಗಿದ್ದು, ಮತಗಟ್ಟೆಗಳನ್ನು ಸ್ಥಳೀಯ ಸಂಸ್ಕೃತಿ ಮತ್ತು ಕಲೆ ಹಾಗೂ ಸಂಪನ್ಮೂಲಗಳನ್ನು ಬಳಸಿ ರಚಿಸಲಾಗಿದ್ದು, ಮತದಾರರನ್ನು ಮತದಾನದ ದಿನದಂದು ಆಕರ್ಷಿಸಲಿದೆ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಅಧಿಕಾರಿ ಹೇಮಲತಾ ಅವರ ನಿರ್ದೇಶನದಲ್ಲಿ ಈ ರಚನೆಗಳು ಸಿದ್ಧಗೊಂಡಿದ್ದು, ಪಾರಂಪರಿಕ ಬುಡಕಟ್ಟು ವರ್ಗದವರ ಕಲೆ, ಸಂಸ್ಕೃತಿ ಇಲ್ಲಿ ಅನಾವರಣಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿಯ ಕನ್ಯಾನ ಜಿಲ್ಲಾ ಪಂಚಾಯತ್ ಸರ್ಕಾರಿ ಮಾದರಿ ಉನ್ನತ

ಜಿಲ್ಲೆಯಲ್ಲಿ ಮತದಾರರನ್ನು ಆಕರ್ಷಿಸುತ್ತಿದೆ ಪಾರಂಪರಿಕ ಮತಗಟ್ಟೆಗಳು Read More »

ಕರಾವಳಿ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಎಂಡೋಪಾಲನಾ ಕೇಂದ್ರ, ಕೊಯಿಲದ ವಿದ್ಯಾರ್ಥಿ ಅಭಿಷೇಕ್ ದ್ವಿತೀಯ ಪಿ.ಯು.ಸಿ. ಕಲಾವಿಭಾಗದಲ್ಲಿ 63 ಶೇಕಡಾ ಅಂಕ ಪಡೆದು ಪ್ರಥಮ ಸ್ಥಾನದಲ್ಲಿ ತೇರ್ಗಡೆಯಾಗಿರುತ್ತಾನೆ. ಶ್ರೀ ವಸಂತ ಮತ್ತು ಶ್ರೀಮತಿ ಗಂಗರತ್ನ ಇವರ ಪುತ್ರನಾದ ಅಭಿಷೇಕ್ ಕಳೆದ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 76% ಅಂಕ ಪಡೆದು ತೇರ್ಗಡೆಯಾಗಿರುವನು.  ಸೇವಾ ಭಾರತಿ (ರಿ) ಮಂಗಳೂರು ಅಭಿಷೇಕ್‍ನ ಸಾಧನೆಗೆ ಅಭಿನಂದಿಸಿದೆ.  ಹಾಗೂ ಈ ಸಾಧನೆಗೈಯಲು ಸಹಕರಿಸಿದ ದ.ಕ. ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿಕ್ಷಣ

ಕೊಯಿಲ: ಎಂಡೋಪೀಡಿತ ಅಭಿಷೇಕ್ ದ್ವಿತೀಯ ಪಿ.ಯು.ಸಿ.ಯಲ್ಲಿ ಪ್ರಥಮ ಸ್ಥಾನದಲ್ಲಿ ತೇರ್ಗಡೆ Read More »

ಕರಾವಳಿ
Scroll to Top