karnataka

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ

(ನ್ಯೂಸ್ ಕಡಬ) newskadaba.com ಕಡಬ, ನ.6. ರಾಜ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದು ಜಿಲ್ಲೆಯಾದ್ಯಂತ ಜಾತ್ಯಾತೀತ ಜನತಾದಳ ಪ್ರಬಲವಾಗಿ ಬಲವರ್ಧನೆಯಾಗುತ್ತಿದೆ. ಬಿಜೆಪಿ ಕಾಂಗ್ರೆಸ್ನಲ್ಲಿ ಭ್ರಮನಿರಸನಗೊಂಡಿರುವ ಹಲವಾರು ಪದಾಧಿಕಾರಿಗಳು, ಕಾರ್ಯಕರ್ತರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಮಾಜಿ ಜಿಲ್ಲಾ ಪರಿಷತ್ ಸದಸ್ಯ ಸಯ್ಯದ್ ಮೀರಾ ಸಾಹೇಬ್ ಹೇಳಿದ್ದಾರೆ. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಆದಿತ್ಯವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಯ್ಯದ್ ಮೀರಾ ಸಾಹೇಬ್, ಬೇರೆ ಬೇರೆ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ […]

ಜಿಲ್ಲೆಯಾದ್ಯಂತ ಜೆಡಿಎಸ್ ಪ್ರಬಲವಾಗಿ ಪರಿವರ್ತನೆಗೊಳ್ಳುತ್ತಿದೆ ► ಜೆಡಿಎಸ್ ಮುಖಂಡ ಸಯ್ಯದ್ ಮೀರಾ ಸಾಹೇಬ್ ಹೇಳಿಕೆ Read More »

ಕರಾವಳಿ

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರ್ಕಳ, ನ.7. ಆವರಣ ಇಲ್ಲದ ಬಾವಿಯೊಂದಕ್ಕೆ ಕಾಡು ಕೋಣವೊಂದು ಬಿದ್ದ ಘಟನೆ ಈದು ಗ್ರಾಮದಲ್ಲಿ ಸೋಮವಾರ ಮುಂಜಾನೆ ಬೆಳಕಿಗೆ ಬಂದಿದೆ. ಈದು ಪರಿಸರದ ಮಲಂಜ ಆನಂದ ಪೂಜಾರಿ ಎಂಬವರಿಗೆ ಸೇರಿದ ಜಾಗದಲ್ಲಿ ಸುಮಾರು 20 ಅಡಿ ಆಳದ ಬಾವಿಯೊಳಗಿನಿಂದ ಪ್ರಾಣಿಯೊಂದರ ಕೂಗು ಕೇಳಿ ಬಂದ ಹಿನ್ನಲೆಯಲ್ಲಿ  ಹೋಗಿ ನೋಡಿದಾಗ ಕಾಡುಕೋಣ ಬಾವಿಯಲ್ಲಿರುವುದು ಬೆಳಕಿಗೆ ಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸ್ಥಳೀಯರು ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿ ಜೆಸಿಬಿ ಮೂಲಕ ಬಾವಿಗೆ ಕಣಿ ತೋಡಿ ಕಾಡು ಕೋಣವನ್ನು ರಕ್ಷಿಸಿದರು.

ಕಾರ್ಕಳ: ಆವರಣವಿಲ್ಲದ 20 ಅಡಿ ಆಳದ ಬಾವಿಗೆ ಬಿದ್ದ ಕಾಡುಕೋಣ ► ಸ್ಥಳೀಯರಿಂದ ರಕ್ಷಣೆ Read More »

ಕರಾವಳಿ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.7. ಫಲ್ಗುಣಿ ನದಿಯಲ್ಲಿ ಆಟವಾಡಲು ತೆರಳಿ ನೀರುಪಾಲಾಗಿದ್ದ ಐವರು ಬಾಲಕರ ಪೈಕಿ, ನಾಲ್ವರ ಮೃತದೇಹ ಮಂಗಳವಾರ ಪತ್ತೆಯಾಗಿದೆ.  ಸೋಮವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ಐವರು ಒಟ್ಟು ಸೇರಿ ಸಮೀಪದ ಫಲ್ಗುಣಿ ನದಿಗೆ ಆಟಕ್ಕೆಂದು ತೆರಳಿದ್ದ ಅಸ್ಲಾಮ್, ರಮೀಜ್, ಅಜ್ಮಲ್, ಮುಭಾಶಿರ್, ಸಮಾದ್ ಎಂಬವರು ನೀರು ಪಾಲಾದ ಬಾಲಕರು. ಇವರ ಪೈಕಿ ಅಸ್ಲಾಮ್, ರಮೀಜ್, ಅಜ್ಮಲ್, ಸಮಾದ್ ಮೃತದೇಹ ಪತ್ತೆಯಾಗಿದ್ದು, ಮುಭಾಶಿರ್ ನ ಶವದ ಶೋಧ ಮುಂದುವರೆದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ

ಬಂಟ್ವಾಳ: ನೀರು ಪಾಲಾದ ಐವರು ವಿದ್ಯಾರ್ಥಿಗಳು ► ನಾಲ್ವರ ಮೃತದೇಹ ಪತ್ತೆ Read More »

ಕರಾವಳಿ

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ

(ನ್ಯೂಸ್ ಕಡಬ) newskadaba.com ಕಡಬ, ನ.07. ಹೃದಯ ಸಂಬಂಧಿ ಖಾಯಿಲೆಯಿಂದಾಗಿ ಸೋಮವಾರದಂದು ಮೃತಪಟ್ಟ ನಿವೃತ್ತ ಮುಖ್ಯ ಶಿಕ್ಷಕ, ಕಡಬದ ಹಿರಿಯ ಸಾಹಿತಿ ಕೆ.ಗೋಪಾಲ್ ರಾವ್(78)ರವರ ಪಾರ್ಥಿವ ಶರೀರವನ್ನು ಇಂದು ಮುಂಜಾನೆ ಹುಟ್ಟೂರು ಕಡಬ ಶ್ರೀಕಂಠಸ್ವಾಮಿ, ಮಹಾಗಣಪತಿ ದೇವಸ್ಥಾನದ ಬಳಿ ವಾಸವಾಗಿದ್ದ ಅವರ ಮನೆಗೆ ಇಂದು ಬೆಳಿಗ್ಗೆ 8.30ರ ಸುಮಾರಿಗೆ ತರಲಾಯಿತು. ಕಳೆದ ಕೆಲವು ಸಮಯಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರನ್ನು ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರು ಮಕ್ಕಳ ಸಾಹಿತಿಯಾಗಿ, ನಾಟಕಕಾರರಾಗಿ, ಧಾರ್ಮಿಕ ಕ್ಷೇತ್ರದಲ್ಲಿ ಗಣನೀಯ

ಹುಟ್ಟೂರಿಗೆ ಆಗಮಿಸಿದ ಹಿರಿಯ ಸಾಹಿತಿ ಕೆ.ಗೋಪಾಲ ರಾವ್ ರ ಪಾರ್ಥಿವ ಶರೀರ ► ಅನೇಕ ಗಣ್ಯರಿಂದ ಅಂತಿಮ ದರ್ಶನ Read More »

ಕರಾವಳಿ

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ನ.7. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ ಕಾರ್ಯಕ್ರಮ ಭಾನುವಾರ ಸಾಯಂಕಾಲ ನಡೆಯಿತು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಕುಲನಗರದಿಂದ ಆರಂಭಗೊಂಡ ಪಥಸಂಚಲನ ಗೋಳಿತ್ತಡಿ ಮೂಲಕ ಸಾಗಿ ಶಾರದನಗರದಲ್ಲಿ ಸಮಾಪನಗೊಂಡಿತ್ತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯವಾಹ ಶ್ರೀನಿವಾಸ್ ಉಬರಡ್ಕ ಬೌದ್ದಿಕ್ ನೀಡಿದರು. ಪುಷ್ಪರಾಜ್ ಹಳೆನೇರಿಂಕಿ ಸಂಘದ ಪ್ರಾಥನೆ ಹಾಡಿದರು. ಮುಖ್ಯಶಿಕ್ಷಕ ಚರಣ್ ಉಪಸ್ಥಿತರಿದ್ದರು.

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ Read More »

ಕರಾವಳಿ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ

(ನ್ಯೂಸ್ ಕಡಬ) newskadaba.com ಕಡಬ, ನ.7. ಇಲ್ಲಿನ ತಾಲೂಕು ಮಟ್ಟದ ಮಾಸಿಕ ಜನಸಂಪರ್ಕ ಸಭೆಯು ಜಿ.ಪಂ.ಸದಸ್ಯರಾದ ಪಿ.ಪಿ ವರ್ಗೀಸ್ ರವರ ಅಧ್ಯಕ್ಷತೆಯಲ್ಲಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು. ಕುಟ್ರುಪ್ಪಾಡಿ ಮತ್ತು ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪೇರಡ್ಕ- ಕಡಬ ಜಿಲ್ಲಾ ಪಂಚಾಯಿತಿ ರಸ್ತೆಯ ಪೇರಡ್ಕದಿಂದ ಕಾರ್ಕಳ ವರೆಗಿನ ಸುಮಾರು  2 ಕಿ.ಮೀ ರಸ್ತೆಯು ಸಂಚಾರಕ್ಕೆ ಯೋಗ್ಯವಾಗಿಲ್ಲ. ಸುಮಾರು  25 ವರ್ಷಗಳಿಂದ ಡಾಮರೀಕರಣ ಆಗದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ವರ್ಷಗಳಿಂದ ರಸ್ತೆಗೆ ಹೊಸತಾಗಿ ಡಾಮರೀಕರಣಗೊಳಿಸುವಂತೆ ಬೇಡಿಕೆ ಇಟ್ಟಿದ್ದರೂ

ಕಡಬ ಜನಸಂಪರ್ಕ ಸಭೆ ► 94ಸಿ ಜಾಗದ ಹಕ್ಕುಪತ್ರದಲ್ಲಿ ತಾರತಮ್ಯ ಆರೋಪ Read More »

ಕರಾವಳಿ

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ರಾಷ್ಟ್ರೀಯ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಆಯ್ದ ಪ್ರಾಥಮಿಕ ಶಾಲೆಯ ಒಂದು ಮತ್ತು ಎರಡನೇ ತರಗತಿಯ ಮಕ್ಕಳ ರಕ್ತ ಪರೀಕ್ಷೆ ನಡೆಸುವ ಕಾರ್ಯಕ್ರಮವು ನವೆಂಬರ್ 13 ರಿಂದ 17 ರವರೆಗೆ ಜಿಲ್ಲೆಯಲ್ಲಿ ನಡೆಯಲಿದೆ.  ಈ ಬಗ್ಗೆ ಪೂರ್ವಸಿದ್ಧತಾ ಸಭೆಯು ಶನಿವಾರ  ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ಆಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ  ಮಾತಾನಾಡಿದ ಅವರು ಎಲ್ಲಾ ವಿವರಗಳನ್ನು ಪರಿಶಿಲಿಸಿ ನಿಗದಿ ಪಡಿಸಿದ ದಿನಾಂಕಗಳಂದು ವಿದ್ಯಾರ್ಥಿಗಳು ಹಾಜರಿರುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ನವೆಂಬರ್ 13 ರಿಂದ ಆನೆಕಾಲು ರೋಗ ನಿಯಂತ್ರಣ ಕಾರ್ಯಕ್ರಮ Read More »

ಕರಾವಳಿ

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!!

(ನ್ಯೂಸ್ ಕಡಬ) newskadaba.com ಮ0ಗಳೂರು, ನ.6. (ಕರ್ನಾಟಕ ವಾರ್ತೆ) ಹಾವು ಕಡಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಭಾರತೀಯ ಸೇನಾ ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿ, ತುರ್ತು ಚಿಕಿತ್ಸೆ ಒದಗಿಸುವಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಯು.ಟಿ. ಖಾದರ್ ಯಶಸ್ವಿಯಾಗಿದ್ದಾರೆ. ಭಾನುವಾರ ಮಧ್ಯರಾತ್ರಿ 1.15 ಗಂಟೆಗೆ ಮುಡಿಪು ಕೋಡಕಲ್ಲು ಎಂಬಲ್ಲಿನ ನಿವಾಸಿ ಸಂತೋಷ್ ಕುಮಾರ್ ಎಂಬವರಿಗೆ ಹಾವು ಕಡಿದಿದ್ದು, ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಆತನಿಗೆ 10 ಇಂಜಕ್ಷನ್‍ಗಳ ಅಗತ್ಯವಿದೆ ಎಂದು ವೈಧ್ಯರು ತಿಳಿಸಿದ್ದರು. ಈ ಸಂದರ್ಭದಲ್ಲಿ ಸಂತೋಷ್

ಯೋಧನ ನೆರವಿಗೆ ಮಧ್ಯರಾತ್ರಿ ಧಾವಿಸಿದ ಸಚಿವ ಯು.ಟಿ. ಖಾದರ್…!!! Read More »

ಕರಾವಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ.6. ವ್ಯಕ್ತಿಯೋರ್ವ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸುತ್ತಿರುವಾಗಲೇ ಕುಸಿದು ಬಿದ್ದಿದ್ದು, ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಬಂಟ್ವಾಳ ತಾಲೂಕು ಫರಂಗಿಪೇಟೆಯ ವಿನಯರಾಜ್ (34) ಮೃತಪಟ್ಟವರು. ಭಾನುವಾರ ರಾತ್ರಿ ಅಮೆಚೂರು ಬಾಡಿ ಬಿಲ್ಡರ್ಸ್ ಅಸೋಸಿಯೇಶನ್ ಡಾನ್ ಬಾಸ್ಕೊ ಸಭಾಂಗಣದಲ್ಲಿ ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ವಿನಯರಾಜ್ ಕೂಡಾ ಸ್ಪರ್ಧಿಸಿದ್ದರು. ಪವರ್ ಲಿಫ್ಟರ್ ಆಗಿದ್ದ ವಿನಯರಾಜ್ ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ‌ ಭಾಗವಹಿಸಿದ್ದರು. ಪ್ರದರ್ಶನ ನೀಡುತ್ತಿದ್ದಂತೆ

ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ ನಡೆಯುತ್ತಿರುವಾಗಲೇ ► ಬಂಟ್ವಾಳದ ಸ್ಪರ್ಧಿ ಕುಸಿದು ಬಿದ್ದು ಮೃತ್ಯು Read More »

ಕರಾವಳಿ
Scroll to Top