karnataka

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ

(ನ್ಯೂಸ್‌ ಕಡಬ) newskadaba ಬಂಟ್ವಾಳ, ಮಾ.09: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಟ್ರಕ್ ಚಾಲಕ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕಾಲೇಜು ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾರಿ ಚಾಲಕನ್ನು ಸ್ಥಳೀಯರು ರಕ್ಷಿಸಿ ಕೂಡಲೇ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ ನಲ್ಲಿದ್ದ ಅನೇಕ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಿಸಿರೋಡಿನಿಂದ ಮೂಡಬಿದಿರೆಯ ಕಡೆಗೆ ಹೋಗುತ್ತಿದ್ದ ಕಂಟೇನರ್ ಹಾಗೂ ಮೂಡಬಿದಿರೆಯಿಂದ […]

ಬಂಟ್ವಾಳ: ಕಂಟೈನರ್ ಟ್ರಕ್ ಮತ್ತು ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ Read More »

ಕರಾವಳಿ

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09: ಪ್ರಸಿದ್ಧ ಹಾನರ್ ಕಂಪನಿ ಇತ್ತೀಚೆಗಷ್ಟೆ ಭಾರತದಲ್ಲಿ 108 ಮೆಗಾ ಫಿಕ್ಸೆಲ್ ಕ್ಯಾಮೆರಾ ಆಯ್ಕೆ ಹೊಂದಿರುವ ಹಾನರ್ X9b ಎಂಬ ಫೋನನ್ನು ಬಿಡುಗಡೆ ಮಾಡಿತ್ತು. ಇದೀಗ ಈ ಫೋನ್ ಶೇ. 16 ರಷ್ಟು ರಿಯಾಯಿತಿ ಪಡೆದುಕೊಂಡಿದ್ದು, 25,999 ರೂ. ಗೆ ಸೇಲ್ ಆಗುತ್ತಿದೆ. ಅಮೆಜಾನ್​ನಲ್ಲಿ ಆಫರ್ ಘೋಷಣೆ ಮಾಡಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಭಾರತದಲ್ಲಿ ಕ್ಯಾಮೆರಾ ಫೋನುಗಳ ಹಾವಳಿ ತಗ್ಗಿತ್ತು. ಹೀಗಿರುವಾಗ ಮಾರುಕಟ್ಟೆಗೆ ದಿಢೀರ್ ಎಂಟ್ರಿ ಕೊಟ್ಟಿದ್ದು ಪ್ರಸಿದ್ಧ ಹಾನರ್ ಕಂಪನಿ.

ಅತಿ ಕಡಿಮೆ ಬೆಲೆಗೆ ಸೇಲ್ ಆಗುತ್ತಿದೆ 108MP ಕ್ಯಾಮೆರಾದ ಈ ಸ್ಮಾರ್ಟ್​ಫೋನ್ Read More »

ತಂತ್ರಜ್ಞಾನ

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ

(ನ್ಯೂಸ್‌ ಕಡಬ) newskadaba ನವದೆಹಲಿ, ಮಾ.09:ಪ್ರಧಾನಿ ಮೋದಿ ಅವರು ಈಶಾನ್ಯ ಪ್ರವಾಸದ ಎರಡನೇ ದಿನವಾದ ಶನಿವಾರ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದು, ಸಾವಿರಾರು ಕೋಟಿ ರೂಪಾಯಿ ವೆಚ್ಚದ ಯೋಜನೆಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಇವುಗಳಲ್ಲಿ, ವಿಶ್ವದ ಅತಿ ಎತ್ತರದಲ್ಲಿ (13000 ಅಡಿ) ನಿರ್ಮಿಸಲಾಗಿರುವ ಆಯಕಟ್ಟಿನ, ಪ್ರಮುಖವಾದ, ಬಹು ನಿರೀಕ್ಷಿತ ಮತ್ತು ಉದ್ದವಾದ ಸೆಲಾ ಪಾಸ್ ದ್ವಿಪಥ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು. ಈ ಸುರಂಗ ಮಾರ್ಗವು ಅರುಣಾಚಲ ಪ್ರದೇಶದ ಪಶ್ಚಿಮ ಕಮಿಂಗ್ ಮತ್ತು ತವಾಂಗ್ ಜಿಲ್ಲೆಗಳನ್ನು ಸಂಪರ್ಕಿಸುತ್ತದೆ.

ವಿಶ್ವದ ಅತಿ ಉದ್ದದ ಸೆಲಾ ಪಾಸ್ ಸುರಂಗ ಮಾರ್ಗ ಲೋಕಾರ್ಪಣೆ Read More »

ರಾಷ್ಟ್ರೀಯ ನ್ಯೂಸ್

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 27. ಪೊಲೀಸ್​ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ ಎಂದು ವರದಿಯಾಗಿದೆ. ಪತಿ-ಪತ್ನಿ ಪ್ರಕರಣಕ್ಕೆ ಸಂಬಂಧಿಸಿ ಅಂತರ್ ಜಿಲ್ಲಾ ವರ್ಗಾವಣೆಗೆ ಗೃಹಸಚಿವ ಪರಮೇಶ್ವರ್​ ಡಿಜಿ ಮತ್ತು ಐಜಿಪಿ ಅಲೋಕ್‌ ಮೋಹನ್‌ ಗೆ ಸೂಚಿಸಿದ್ದರು. ಇನ್ನು ಅರ್ಹ ಪತಿ-ಪತ್ನಿ ಪೊಲೀಸ್ ಸಿಬ್ಬಂದಿ ಅಂತರ್ ಜಿಲ್ಲಾ ವರ್ಗಾವಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಹಲವು ತಿಂಗಳಿಂದ ಪತಿ-ಪತ್ನಿ ಪೊಲೀಸರ ವರ್ಗಾವಣೆಗೆ ಆಗ್ರಹ ಕೇಳಿ ಬಂದಿದ್ದು, ಈ ಕುರಿತಾಗಿ

ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ರಾಜ್ಯ ಸರ್ಕಾರ ಅನುಮತಿ Read More »

ಕರ್ನಾಟಕ

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ

(ನ್ಯೂಸ್ ಕಡಬ) neskadaba.com ಬೆಂಗಳೂರು, ಫೆ. 25. ಹೃದಯಾಘಾತಕ್ಕೆ ಒಳಗಾಗಿದ್ದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಮೃತಪಟ್ಟ ಕುರಿತು ವರದಿಯಾಗಿದೆ. ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿರುವುದಾಗಿ ಎಂದು ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು.

ಹೃದಯಾಘಾತ- ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

(ನ್ಯೂಸ್ ಕಡಬ) newskadaba.com ಹೈದರಾಬಾದ್‌ ಫೆ. 23: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ

ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ Read More »

ರಾಷ್ಟ್ರೀಯ ನ್ಯೂಸ್

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ

(ನ್ಯೂಸ್ ಕಡಬ) newskadaba.com ಬಂಟ್ವಾಳ ಫೆ. 23: ಬಂಟ್ವಾಳ ತಾಲೂಕಿನ ಬೋರಿಮಾ‌ರ್ ಮೂಲದ ಅನಿಲ್‌ ಜಾನ್ ಸಿಕ್ವೇರಾ ರವರು 2023 ರ ಕರ್ನಾಟಕ ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯಶಸ್ಸನ್ನು ಗಳಿಸಿದ್ದಾರೆ, ಪ್ರಿಲಿಮ್ಸ್, ಮೇನ್ಸ್ ಮತ್ತು ಸಂದರ್ಶನದಲ್ಲಿ 25 ನೇ ವಯಸ್ಸಿನಲ್ಲಿ ಉತ್ತೀರ್ಣರಾಗಿದ್ದಾರೆ. ಇದು ಅವರನ್ನು ಕಿರಿಯ ಸಿವಿಲ್ ನ್ಯಾಯಾಧೀಶರನ್ನಾಗಿ ಮಾಡಿದೆ.ಇವರ ತಂದೆ ಎವರೆಸ್ಟ್ ಸಿಕ್ವೇರಾ ಮತ್ತು ತಾಯಿ ಐವಿ ಸಿಕ್ಕ್ವೇರಾ ಬಂಟ್ವಾಳ ತಾಲೂಕಿನ ಬರಿಮಾರು ಎಂಬಲ್ಲಿ ವಾಸಿಸುತ್ತಿದ್ದು ಕೃಷಿಯನ್ನು ತಮ್ಮ ಜೀವನಕ್ಕೆ ಆಧಾರವಾಗಿ ಇದ್ದ ಇವರು ಇವರ

25ನೇ ವಯಸ್ಸಿನಲ್ಲಿ ನ್ಯಾಯಾಧೀಶರಾದ ಬಂಟ್ವಾಳದ ಅನಿಲ್ ಜಾನ್ ಸಿಕ್ವೇರಾ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ದ್ವಿತೀಯ ಪಿಯು ಪರೀಕ್ಷೆ – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮಾರ್ಚ್ 01ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಶೈಕ್ಷಣಿಕ ವರ್ಷದಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ಇಲಾಖೆ ಗುಡ್​ ನ್ಯೂಸ್​ ನೀಡಿದೆ. 2023-24ನೆ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1 ರಿಂದ ಮಾರ್ಚ್‌ 22ರವರೆಗೆ ನಡೆಯಲಿದ್ದು, ಈ ಹಿನ್ನೆಲೆ ವಿದ್ಯಾಥಿಗಳ ಅನುಕೂಲಕ್ಕಾಗಿ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ವೋಲ್ವೋ ಎಸಿ ಬಸ್ ಹೊರತುಪಡಿಸಿ KSRTC ಹಾಗೂ BMTC ಬಸ್‍ ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಮನೆಯಿಂದ ಪರೀಕ್ಷಾ

ದ್ವಿತೀಯ ಪಿಯು ಪರೀಕ್ಷೆ – ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ Read More »

ಕರ್ನಾಟಕ

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅನಾರೊಗ್ಯದ ಹಿನ್ನೆಲೆ ಇಂದು (ಶುಕ್ರವಾರ) ಮುಕ್ತಾಯವಾಗಬೇಕಿದ್ದ ವಿಧಾನಸಭೆ ಬಜೆಟ್ ಅಧಿವೇಶನವನ್ನು ಸೋಮವಾರಕ್ಕೆ ವಿಸ್ತರಿಸಲಾಗಿದೆ. ಬಜೆಟ್ ಮೇಲಿನ ಕೆಲವು ಪ್ರಮುಖ ಮಸೂದೆಗಳ ಮೇಲಿನ ಚರ್ಚೆ ಹಾಗೂ ಅಂಗೀಕಾರ ಬಾಕಿಯಿದ್ದು ಸಿಎಂ ಸಿದ್ದರಾಮಯ್ಯರವರಿಗೆ ಅನಾರೋಗ್ಯವಿರುವುದರಿಂದ ಕಲಾಪದಲ್ಲಿ ಸರಿಯಾಗಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರು ಎರಡು ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡು ಸೋಮವಾರ ಸದನದಲ್ಲಿ ಕಲಾಪಕ್ಕೆ ಹಾಜರಾಗಲಿದ್ದಾರೆ. ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ನಡೆದ ತೀರ್ಮಾನದ ಬಳಿಕ ಅಧಿವೇಶನ

ವಿಧಾನಸಭೆಯ ಬಜೆಟ್ ಅಧಿವೇಶನ ಸೋಮವಾರಕ್ಕೆ ವಿಸ್ತರಣೆ Read More »

ಕರ್ನಾಟಕ

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 23. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಫೆಬ್ರವರಿ 26 ಮತ್ತು 27 ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ 500ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿ, ಉದ್ದಿಮೆ, ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿವೆ. ಈ ಮೇಳದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನ ಉದ್ಯೋಗಾಕಾಂಕ್ಷಿಗಳು ಭಾಗವಹಿಸಲು ವೆಬ್ ಸೈಟ್ https://udyoga.skillconnet.kaushalkar.com ಮೂಲಕ ನೋಂದಾವಣಿ ಮಾಡಬಹುದು ಎಂದು ಜಿಲ್ಲಾ ವಿಕಲಚೇತನರ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 26, 27 ಬೃಹತ್ ಉದ್ಯೋಗ ಮೇಳ; ವಿಕಲಚೇತನರ ನೋಂದಣಿಗೆ ವಿಶೇಷ ವೆಬ್ ಸೈಟ್ Read More »

ಕರಾವಳಿ, ಕರ್ನಾಟಕ
Scroll to Top