karnataka

ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ…

(ನ್ಯೂಸ್ ಕಡಬ) newskadaba.com ಕಡಬ,ಅ.4.  ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಯೋಜನೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಡಬ ಗ್ರಾ.ಪಂ. ಅಧ್ಯಕ್ಷ ಬಾಬು ಮುಗೇರ ತುಂಬೆತ್ತಡ್ಕ,  ಸದಸ್ಯರಾದ ಅಶ್ರಫ್ ಶೇಡಿಗುಂಡಿ, ಜಯಂತಿ, ಕಾರ್ಯದರ್ಶಿ ಭುವನೇಂದ್ರ ಮರ್ದಾಳ ಅಂಗನವಾಡಿ ಕಾರ್ಯಕರ್ತೆ ರುಕ್ಮಿಣಿ ಉಪಸ್ಥಿತರಿದ್ದರು.

ಅಡ್ಡಗದ್ದೆ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆ… Read More »

ಕರಾವಳಿ

ಪಾಲೆತ್ತಡ್ಕ ಅಂಗನವಾಡಿ ► ಗರ್ಭಿಣಿ, ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಮಾತೃಪೂರ್ಣ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ಪಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಮಾತೃಪೂರ್ಣ ಯೋಜನೆಗೆ ಮರ್ದಾಳ ಗ್ರಾ.ಪಂ.ಸದಸ್ಯ ಬಾಲವಿಕಾಸ ಸಮಿತಿ ಅಧ್ಯಕ್ಷ ಹರೀಶ್ ಕೋಡಂದೂರು ಗರ್ಭಿಣಿಯರಿಗೆ  ಹಾಗೂ ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಚಾಲನೆ ಸೋಮವಾರ ನೀಡಿದರು. ಈ ಸಂಧರ್ಭದಲ್ಲಿ ಗ್ರಾ.ಪಂ.ಸದಸ್ಯ ಅಬೂಬಕ್ಕರ್, ಪಾಲೆತ್ತಡ್ಕ ಸ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ರೇಖಾ, ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ಸಹಾಯಕಿ ಜಯಂತಿ ರೈ ಉಪಸ್ಥಿತರಿದ್ದರು.

ಪಾಲೆತ್ತಡ್ಕ ಅಂಗನವಾಡಿ ► ಗರ್ಭಿಣಿ, ಬಾಣಂತಿಯರಿಗೆ ಊಟ ಬಡಿಸುವ ಮೂಲಕ ಮಾತೃಪೂರ್ಣ ಯೋಜನೆಗೆ ಚಾಲನೆ Read More »

ಕರಾವಳಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.4. ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಖ್ಯವಾಗಿ ಗರ್ಭಿಣಿ, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ ಮಹತ್ವದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ(1) ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸೋಮವಾರ ಆರಂಭಗೊಂಡಿತ್ತು. ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ Read More »

ಕರಾವಳಿ

ತಾಲೂಕು ಮಟ್ಟದ ಕ್ರೀಡಾಕೂಟ ► ಸಾಂತೋಮ್ ವಿದ್ಯಾನಿಕೇತನ ವಿದ್ಯಾರ್ಥಿನಿ ಶ್ರಾವ್ಯ.ಬಿ.ಜೆ ಅವರಿಗೆ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಕಡಬ,ಅ.4. ಬಿಳಿನೆಲೆಯಲ್ಲಿ ಗೋಪಾಲಕೃಷ್ಣ ಪ್ರೌಢ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಸಂಸ್ಥೆ ವಿವಿಧ ಪ್ರಶಸ್ತಿಗಳನ್ನು ಪಡೆದುಗೊಂಡಿದೆ. ಎತ್ತರ ಜಿಗಿತದಲ್ಲಿ ಶ್ರಾವ್ಯ.ಬಿ.ಜೆ (ಪ್ರಥಮ), ಚಕ್ರ ಎಸೆತದಲ್ಲಿ ಅನೀಷ್.ಎ.ಎನ್ (ದ್ವಿತೀಯ),ನಿತಿನ್ ಸೈಮನ್ (ತೃತೀಯ) ಪಡೆದು, ಪುತ್ತೂರು ಸಂತ ಫಿಲೋಮಿನಾ ಹೈಸ್ಕೂಲ್ನಲ್ಲಿ  ಜರಗಿದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಎತ್ತರಜಿಗಿತ ಸ್ಪರ್ಧೆಯಲ್ಲಿ ಶ್ರಾವ್ಯ.ಬಿ.ಜೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ದೈಹಿಕ ಶಿಕ್ಷಕಿ ಜಿಶಾಥೋಮಸ್ ತಬೇತಿಯನ್ನು ನೀಡಿರುತ್ತಾರೆ.

ತಾಲೂಕು ಮಟ್ಟದ ಕ್ರೀಡಾಕೂಟ ► ಸಾಂತೋಮ್ ವಿದ್ಯಾನಿಕೇತನ ವಿದ್ಯಾರ್ಥಿನಿ ಶ್ರಾವ್ಯ.ಬಿ.ಜೆ ಅವರಿಗೆ ಪ್ರಶಸ್ತಿ Read More »

ಕ್ರೀಡಾ ನ್ಯೂಸ್

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ…

(ನ್ಯೂಸ್ ಕಡಬ) newskadaba.com ಕಡಬ,ಅ.4. 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಮರ್ದಾಳ ಪೇಟೆ, ಬಜಕೆರೆ ರೈಲ್ವೆ ನಿಲ್ದಾಣ ಕರ್ಮಾಯಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯೆ ಕುಸುಮ ಪಿ.ವೈ.ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ, ಎಪಿಎಂಸಿ ನಿರ್ದೇಶಕರಾದ ಪುಲಸ್ತ್ಯ ರೈ, ಮೇದಪ್ಪ ಗೌಡ ಡೆಪ್ಪುಣಿ, ಬಿಜೆಪಿ ಗ್ರಾಮ ವಿಸ್ತಾರಕ ಉಮೇಶ್ ಶೆಟ್ಟಿ ಸಾಯಿರಾಮ್, ಗ್ರಾ.ಪಂ.ಸದಸ್ಯರಾದ ದಾಮೋದರ ಗೌಡ ಡೆಪ್ಪುಣಿ, ಹರೀಶ್ ಕೋಡಂದೂರು, ಬಿಜೆಪಿ ಗ್ರಾ.ಸಮಿತಿ ಅಧ್ಯಕ್ಷ ಮಂಜುನಾಥ ಕೋಲಂತ್ತಾಡಿ, ಯುವಮೋರ್ಚಾ

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ… Read More »

ಕರಾವಳಿ

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್

(ನ್ಯೂಸ್ ಕಡಬ) newskadaba.com ಕಡಬ,ಅ.4. ಮಂಜುನಾಥನಗರ ಶ್ರೀ ಸಿದ್ಧಿವಿನಾಯಕ ಸೇವಾ ಸಂಘ , ಅರುಂಧತಿ ಮಾತೃ ಮಂಡಳಿ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ಹೊಂಡವನ್ನು ಮುಚ್ಚಿ ರಿಪೇರಿ ಮಾಡಲಾಯಿತು. ಬಳಿಕ ರಸ್ತೆ ಬದಿ ಇದ್ದ ಪೊದರು ಕಡಿದು ತೆರವುಗೊಳಿಸುವುದರ ಮೂಲಕ ಸ್ವಚ್ಚ ಪರಿಸರವನ್ನು ನಿರ್ಮಿಸುವ ಬಗ್ಗೆ ಜಾಗೃತಿ ಕಾರ್ಯಕ್ರಮ  ನಡೆಸಲಾಯಿತು. ಈ ಸಂದರ್ಭ

ಮಂಜುನಾಥನಗರ: ಸ್ವಚ್ಚ ಪರಿಸರ ಬಗ್ಗೆ ಜಾಗೃತಿ ಕಾರ್ಯಕ್ರಮ ► ರಸ್ತೆ ಹೊಂಡಕ್ಕೆ ಕಾಂಕ್ರೀಟ್ Read More »

ಕರಾವಳಿ

ಕಲ್ಲುಗುಡ್ಡೆ ಅಂಗನವಾಡಿ ► ಮಹತ್ವಾಕಾಂಕ್ಷಿ ಮಾತೃಪೂರ್ಣಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ,ಅ.4. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದಲ್ಲಿ ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಾತೃಪೂರ್ಣ ಯೋಜನೆಗೆ ಚಾಲನೆ ನೀಡಲಾಯಿತು. ಕಡಬ ಜಿ.ಪಂ.ಸದಸ್ಯ ಪಿ.ಪಿ ವರ್ಗೀಸ್ ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ, ಹಾಲು, ಮೊಟ್ಟೆ ನೀಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ರಾಜ್ಯಾದ್ಯಂತ ನೂರಾರು ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿದೆ. ನಿರ್ಜೀವ ಜನನ, ರಕ್ತ ಹೀನತೆ ಕಡಿಮೆಗೊಳಿಸುವ ನಿಟ್ಟಿನಲ್ಲಿ ಗರ್ಭಿಣಿ ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ

ಕಲ್ಲುಗುಡ್ಡೆ ಅಂಗನವಾಡಿ ► ಮಹತ್ವಾಕಾಂಕ್ಷಿ ಮಾತೃಪೂರ್ಣಯೋಜನೆಗೆ ಚಾಲನೆ Read More »

ಕರಾವಳಿ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಅ.4. ಕೇರಳದ ಕಣ್ಣೂರಿನಲ್ಲಿ ನಡೆಯುವ ಬಿಜೆಪಿ ಜನರಕ್ಷಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಮಂಗಳೂರಿಗೆ ಆಗಮಿಸಿದ್ದು, ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಸ್ವಾಗತಿಸಲಾಯಿತು. ಸಿಎಂ ಆದ ನಂತರ ಇದೇ ಮೊದಲ ಬಾರಿಗೆ ಕರಾವಳಿಗೆ ಆಗಮಿಸಿದ ಇವರು ಕೇರಳದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್. ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿ ಬಿಜೆಪಿ ಆಯೋಜಿಸಿರುವ ಬೃಹತ್ ಜನರಕ್ಷಾ ಯಾತ್ರೆಯ ನೇತೃತ್ವವನ್ನು ವಹಿಸಲಿದ್ದಾರೆ. ಜನರಕ್ಷಾ ಯಾತ್ರೆಗೆ ಈಗಾಗಲೆ

ಮಂಗಳೂರಿನಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್..!!! Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ Read More »

ಕರಾವಳಿ

ಆರೇಲ್ತಡಿ ಶಾಲೆಯಲ್ಲಿ ► ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

(ನ್ಯೂಸ್ ಕಡಬ) newskadaba.com ಪುತ್ತೂರು,ಅ.4. ಇಲ್ಲಿನ ಸವಣೂರು ಗ್ರಾಮದ ಆರೆಲ್ತಡಿ ಸ.ಕಿ.ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಯಂತಿಯನ್ನು ಶಾಲಾ ಮಕ್ಕಳೊಂದಿಗೆ ಆಚರಿಸಲಾಯಿತು. ಶಿಕ್ಷಣತಜ್ಞ, ಸವಣೂರು ಗ್ರಾ.ಪಂ.ಮಾಜಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಅವರು ದೀಪಬೆಳಗಿಸಿ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಈ ದಿನ ದೇಶದಾದ್ಯಂತ ಇಂತಹ ಮಹಾತ್ಮರ ಜನ್ಮದಿನಾಚರಣೆಯನ್ನು ಆಚರಿಸುತ್ತಿದ್ದು ಸ್ವಚ್ಚಭಾರತ ದಿನವನ್ನಾಗಿಯೂ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದಾರೆ ಗಾಂಧೀಜಿಯ ಕನಸುಗಳನ್ನು ನನಸು ಮಾಡುವ ಪಣತೊಡೋಣ. ಮಹಾತ್ಮರ ಆದರ್ಶ, ಮೌಲ್ಯಗಳ ದಾರಿಯಲ್ಲಿ

ಆರೇಲ್ತಡಿ ಶಾಲೆಯಲ್ಲಿ ► ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ Read More »

ಕರಾವಳಿ
Scroll to Top