karnataka

ಬೆಂಗಳೂರು ಬಂದ್ ಹಿನ್ನೆಲೆ – ವಿಮಾನ ಪ್ರಯಾಣವನ್ನು‌ ರದ್ದುಗೊಳಿಸಿದ ಏರ್ ಲೈನ್ಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ಕಾವೇರಿ ನೀರಿಗಾಗಿ ಬೆಂಗಳೂರು ಬಂದ್ ಮಾಡಿ ರೈತ ಪರ ಸಂಘಟನೆಗಳು ಹಾಗೂ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಪರಿಣಾಮ ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹೋರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರು ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಹಾಗೂ ಬೆಂಗಳೂರಿನಿಂದ ಬೇರೆ ಪ್ರದೇಶಕ್ಕೆ ತೆರಳುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ರದ್ದು ಮಾಡಿರುವ ಹಿನ್ನೆಲೆ ಕೊನೆ ಕ್ಷಣದಲ್ಲಿ ಸುಮಾರು 13 ವಿಮಾನಗಳ ಹಾರಾಟವನ್ನು ಏರ್ ಲೈನ್ಸ್ […]

ಬೆಂಗಳೂರು ಬಂದ್ ಹಿನ್ನೆಲೆ – ವಿಮಾನ ಪ್ರಯಾಣವನ್ನು‌ ರದ್ದುಗೊಳಿಸಿದ ಏರ್ ಲೈನ್ಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಲಾಗಿದ್ದು, ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ಪ್ರಬಲ ಲಿಂಗಾಯಿತ ಸಮುದಾಯದ ನಾಯಕರಾಗಿದ್ದ ವೀರೇಂದ್ರ ಪಾಟೀಲ್ ಅವರು 1989

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ Read More »

ಕರ್ನಾಟಕ

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ.

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು, ಸೆ.23. ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪುತ್ರ ಯತೀಂದ್ರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ಕರ್ನಾಟಕ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತರಿಗೆ ಬಿಜೆಪಿ ದೂರು ಸಲ್ಲಿಸಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಲು ನಿರ್ದೇಶಿಸುವಂತೆ ಆಗ್ರಹಿಸಿದೆ ಎಂದು ತಿಳಿದುಬಂದಿದೆ. ಮತದಾರರಿಗೆ ಆಸೆ, ಆಮಿಷ ಒಡ್ಡಬಾರದೆಂದು ಕಾನೂನಿದ್ದು, ಬಟ್ಟೆ ತೊಳೆಯುವ ಮತ್ತು ಇಸ್ತ್ರಿ ಹಾಕುವ ಮಡಿವಾಳ ಸಮುದಾಯಕ್ಕೆ ಇಸ್ತ್ರಿ ಪೆಟ್ಟಿಗೆ ಮತ್ತು ಮನೆ ಮನೆಗೆ ಕುಕ್ಕರ್‌, ಹಣ

ಚುನಾವಣೆ ಭ್ರಷ್ಟಾಚಾರ…!!! – ಸಿಎಂ ಸಿದ್ದರಾಮಯ್ಯ ಮತ್ತು ಪುತ್ರ ಯತಿಂದ್ರ ವಿರುದ್ಧ ದೂರು ದಾಖಲು Read More »

ಕರ್ನಾಟಕ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22. ಕರ್ನಾಟಕ ಲೋಕಸೇವಾ ಆಯೋಗ 2016, 2017, 2018, 2019, 2020ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿದ್ದ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 40 ಕ್ಕೂ ಹೆಚ್ಚು ವಿವಿಧ ಹುದ್ದೆಗಳಿಗೆ ಇದೀಗ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೆಪಿಎಸ್.ಬಿಸಿಬಿ, ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ವಿವಿಧ ವಿಷಯಗಳ ಶಿಕ್ಷಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಜಲಸಂಪನ್ಮೂಲ ಅಭಿವೃದ್ಧಿ ನಿಗಮ, ನವೋದಯ ಶಾಲೆಗಳ ಶಿಕ್ಷಕರು, ಮೌಲಾನಾ

KPSC- 40 ಕ್ಕೂ ಅಧಿಕ ಹುದ್ದೆಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ Read More »

ಉದ್ಯೋಗ, ಕರ್ನಾಟಕ

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 22. ಕಾವೇರಿ ನದಿ ನೀರು ವಿವಾದದ ಹಿನ್ನಲೆ ಕರ್ನಾಟಕ-ತಮಿಳುನಾಡು ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ಕಚೇರಿಗೆ ಮುತ್ತಿಗೆ ಹಾಕುವ ಚಳವಳಿ ಶುಕ್ರವಾರದಂದು ನಡೆಯಿತು. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಚಾಮರಾಜನಗರದಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿನಿತ್ಯ ವಿನೂತನ ಚಳವಳಿ ನಡೆಸುತ್ತಿದ್ದು, ಇಂದು ಕೇಂದ್ರ ಸರ್ಕಾರ ಸ್ವಾಮ್ಯದಲ್ಲಿರುವ ಬಿ.ಎಸ್.ಎನ್.ಎಲ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ವಿವಿಧ ಕನ್ನಡ ಪರ ಸಂಘಟನಾ ಕಾರ್ಯಕರ್ತರು ಕನ್ನಡ ಧ್ವಜವನ್ನು ಹಿಡಿದು ಸುಪ್ರಿಂ

ಕಾವೇರಿ ವಿವಾದ- ಕನ್ನಡ ಪರ ಸಂಘಟನೆಗಳಿಂದ ಬಿಎಸ್ಎನ್ಎಲ್ ಕಛೇರಿಗೆ ಮುತ್ತಿಗೆ ಯತ್ನ Read More »

ಕರ್ನಾಟಕ

ದರ್ಶನ್ ಬೆನ್ನಲ್ಲೇ ಕಾವೇರಿ ಪರ ಧ್ವನಿ ಎತ್ತಿದ ನಟ ಸುದೀಪ್

(ನ್ಯೂಸ್ ಕಡಬ) newskadaba.com. ಬೆಂಗಳೂರು, ಸೆ. 21. ಕರ್ನಾಟಕದ ಜೀವನದಿ ಕಾವೇರಿಯನ್ನು ತಮಿಳುನಾಡಿಗೆ ಹರಿಸುತ್ತಿರುವ ಸರ್ಕಾರದ ನಡೆಯ ವಿರುದ್ಧ ರೈತರು ಹಾಗೂ ಕನ್ನಡಪರ ಸಂಘಟನೆಗಳಿಂದ ತೀವ್ರ ಪ್ರತಿಭಟನೆ ನಡೆಯುತ್ತಿದ್ದರೂ, ಕನ್ನಡ ಸಿನಿಮಾ ನಟರು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಟರ ವಿರುದ್ಧ ಧಿಕ್ಕಾರ ಕೂಗಿ, ಕರ್ನಾಟಕ ಚಲನಚಿತ್ರ ಮಂಡಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದ್ದವು. ಇದರ ಬೆನ್ನಲ್ಲೇ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತೂಗುದೀಪ ಕಾವೇರಿ ಹೋರಾಟಕ್ಕೆ ಬೆಂಬಲಿಸಿದ್ದರು. ಅದರಂತೆ ಇದೀಗ ಕರುನಾಡ ಚಕ್ರವರ್ತಿ ಸುದೀಪ್‌

ದರ್ಶನ್ ಬೆನ್ನಲ್ಲೇ ಕಾವೇರಿ ಪರ ಧ್ವನಿ ಎತ್ತಿದ ನಟ ಸುದೀಪ್ Read More »

ಕರ್ನಾಟಕ

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕನ್ನಡ ಪರ ಹೋರಾಟಗಾಗರು ಖಂಡಿಸಿದ್ದು, ಇದೀಗ ಸ್ಯಾಂಡಲ್ ವುಡ್ ನಟ ಚಾಲೆಂಜಿಗ್‌ ಸ್ಟಾರ್‌ ದರ್ಶನ್‌ ಕೂಡಾ ಕಾವೇರಿ ಪರ ಧ್ವನಿ ಎತ್ತಿದ್ದಾರೆ. ಈ ಕುರಿತು ನಟ ದರ್ಶನ್‌ ಟ್ವೀಟ್‌ ಮಾಡಿದ್ದಾರೆ. ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ

ಕಾವೇರಿ ಪರ ಧ್ವನಿ ಎತ್ತಿದ ನಟ ದರ್ಶನ್ Read More »

ಕರ್ನಾಟಕ

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಉದ್ಯಮಿಗೆ ಟಿಕೆಟ್ ಕೊಡಿಸುವುದಾಗಿ ವಂಚಿಸದ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಒಡಿಶಾದಲ್ಲಿ ಸಿಕ್ಕಿಬಿದ್ದ ಹಾಲಶ್ರೀ ಸ್ವಾಮೀಜಿಯನ್ನು 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್‌ ಕೊಡಿಸುತ್ತೇವೆಂದು ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಮೊದಲ ಆರೋಪಿಯಾದರೆ, ಹಾಲಶ್ರೀ ಸ್ವಾಮೀಜಿ ಮೂರನೇ ಆರೋಪಿಯಾಗಿದ್ದ ಸ್ವಾಮೀಜಿ ಒಂದೂವರೆ ಕೋಟಿ ರೂಪಾಯಿ ಪಡೆದಿದ್ದರು ಎನ್ನಲಾಗಿದೆ. ಚೈತ್ರಾ ಕುಂದಾಪುರ ಸೇರಿ

ಉದ್ಯಮಿಗೆ ವಂಚನೆ ಪ್ರಕರಣ – ಸ್ವಾಮೀಜಿಗೆ 10 ದಿನಗಳ ಸಿಸಿಬಿ ಕಸ್ಟಡಿ Read More »

ಕರ್ನಾಟಕ

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು – ಆಸಕ್ತರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. 2023-24ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಿ.ಎಡ್ ಮತ್ತು ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆಯಡಿ ಸೆಪ್ಟೆಂಬರ್ 21 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಎಂ.ಫಿಲ್ ಹಾಗೂ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲ್ಲೋಶಿಪ್ ಯೋಜನೆಯಡಿ ಅಕ್ಟೋಬರ್ 03 ಕೊನೆಯ ದಿನವಾಗಿದ್ದು, ವೆಬ್‌ಸೈಟ್ https://dom.karnataka.gov.in ನಲ್ಲಿ ಅರ್ಜಿ ಸಲ್ಲಿಸಬೇಕು. ಅದೇ ರೀತಿ ಅರಿವು

ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ವಿವಿಧ ಯೋಜನೆಗಳು – ಆಸಕ್ತರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top