karnataka

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ – ತಾಯಿ ಚಿರತೆ ಸೆರೆ ಹಿಡಿಯುವಂತೆ ಮನವಿ

(ನ್ಯೂಸ್ ಕಡಬ)newskadaba.com ಮೈಸೂರು, ಆ.11. ಕಬ್ಬಿನ ಗದ್ದೆಯೊಂದರಲ್ಲಿ ಕಬ್ಬು ಬೆಳೆ ಕಟಾವಿನ ವೇಳೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದ್ದು, ಕಬ್ಬು ಕಟಾವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಮರಿಗಳನ್ನು ರಕ್ಷಣೆ ಮಾಡಿದ್ದಾರೆ. ಟಿ.ನರಸೀಪುರ ತಾಲೂಕಿನ ಗುಡ್ಡದ ಕೊಪ್ಪಲು ಗ್ರಾಮದಲ್ಲಿ, ದೊರೆಸ್ವಾಮಿ ಎಂಬುವವರ ಜಮೀನಿನಲ್ಲಿ ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ ಎನ್ನಲಾಗಿದೆ. ಅವರ ಜಮೀನಿನಲ್ಲಿ ಕಬ್ಬು ಬೆಳೆಯನ್ನು ಕಟಾವು ಮಾಡುವ ಸಮಯದಲ್ಲಿ, ಕಬ್ಬಿನ ಗದ್ದೆಯಲ್ಲಿ 2 ಚಿರತೆ ಮರಿಗಳು ಕಾಣಿಸಿಕೊಂಡಿವೆ. ಈ ಚಿರತೆ ಮರಿಗಳನ್ನು ಕಬ್ಬು ಕಟಾವು ಮಾಡಲು […]

ಕಬ್ಬಿನ ಗದ್ದೆಯಲ್ಲಿ ಚಿರತೆ ಮರಿಗಳು ಪ್ರತ್ಯಕ್ಷ – ತಾಯಿ ಚಿರತೆ ಸೆರೆ ಹಿಡಿಯುವಂತೆ ಮನವಿ Read More »

ಕರ್ನಾಟಕ

ಶಕ್ತಿ ಯೋಜನೆ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ನೀಡಿದೆ ಎನ್ನಲಾಗಿದೆ. ಅದೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವಾಹನದ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸೋದಕ್ಕೆ ಒಪ್ಪಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ KSRTC ಬಸ್ಸುಗಳ ಸಂಚಾರ ನಿಗಾ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆಯೊಂದಿಗೆ

ಶಕ್ತಿ ಯೋಜನೆ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ Read More »

ಕರ್ನಾಟಕ

ಹೊಸ ಪಡಿತರ’ ಚೀಟಿ ಮಂಜೂರು ಮಾಡದಂತೆ ಆದೇಶ – ‘ರಾಜ್ಯ ಸರ್ಕಾರ’

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಹೊಸ ರೇಷನ್​ ಕಾರ್ಡ್‌ಗೆ ಅರ್ಜಿ ಕರೆಯಲಾಗುವುದು ಎಂದು ಕೆಲ ದಿನಗಳ ಹಿಂದೆ ತಿಳಿಸಿದ್ದ ಆರೋಗ್ಯ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಈಗ ಯುಟರ್ನ್‌ ಹೊಡೆದಿದ್ದು, ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶ ನೀಡಿದ್ದು, ಈ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದ ರಾಜ್ಯದ ಜನತೆಗೆ ಬಿಗ್‌ ಶಾಕ್‌ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು

ಹೊಸ ಪಡಿತರ’ ಚೀಟಿ ಮಂಜೂರು ಮಾಡದಂತೆ ಆದೇಶ – ‘ರಾಜ್ಯ ಸರ್ಕಾರ’ Read More »

ಕರ್ನಾಟಕ

ರಾಜ್ಯದಲ್ಲಿ ‘ಸೈಬರ್ ಅಪರಾಧ ತಡೆ’ಗೆ ಮಹತ್ವದ ನಿರ್ಧಾರ..! – ‘ಪ್ರತ್ಯೇಕ ಸೈಬರ್ ನೀತಿ’ ರೂಪಿಸಲು ಸಚಿವ ಸಂಪುಟ ಅಸ್ತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ. 11. ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಪ್ರತ್ಯೇಕ ಸೈಬರ್ ನೀತಿ ರೂಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ಹದಿನಾರು 16 ವಿಷಯಗಳ ಮೇಲೆ ಚರ್ಚೆ ನಡೆದಿದೆ. ಅದರಂತೆ, ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

ರಾಜ್ಯದಲ್ಲಿ ‘ಸೈಬರ್ ಅಪರಾಧ ತಡೆ’ಗೆ ಮಹತ್ವದ ನಿರ್ಧಾರ..! – ‘ಪ್ರತ್ಯೇಕ ಸೈಬರ್ ನೀತಿ’ ರೂಪಿಸಲು ಸಚಿವ ಸಂಪುಟ ಅಸ್ತು Read More »

ಕರ್ನಾಟಕ

ತಲಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಇಸ್ಮಾಯಿಲ್‌ ಆಯ್ಕೆ..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.11. ತಲಪಾಡಿ ಗ್ರಾ.ಪಂಗೆ ನೂತ‌ನ ಅಧ್ಯಕ್ಷರಾಗಿ ಎಸ್‌ ಡಿಪಿಐ ಬೆಂಬಲಿತ ಅಧ್ಯಕ್ಷ ಟಿ.ಇಸ್ಮಾಯಿಲ್‌ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ಪುಷ್ಪಾವತಿ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿ ಬೆಂಬಲಿತರು ಎಸ್‌ ಡಿಪಿಐ ಬೆಂಬಲಿತರಿಗೆ ಬೆಂಬಲಿಸಿದ ಹಿನ್ನೆಲೆಯಲ್ಲಿ ಅಧ್ಯಕ್ಷ ಸ್ಥಾನ ನಿರೀಕ್ಷೆಯಲ್ಲಿದ್ದ ಸತ್ಯರಾಜ್‌ ಗೆ ಸೋಲು ಉಂಟಾಗಿದೆ. ಒಟ್ಟು 24 ವಾರ್ಡುಗಳ ಸದಸ್ಯರ ಪೈಕಿ 13 ಬಿಜೆಪಿ ಬೆಂಬಲಿತ ಸದಸ್ಯರಿದ್ದರೆ, 1 ಕಾಂಗ್ರೆಸ್‌ ಹಾಗೂ 10 ಎಸ್‌ ಡಿಪಿಐ ಬೆಂಬಲಿತರು ಸದಸ್ಯರಾಗಿದ್ದರು. ನಡೆದ ಚುನಾವಣೆಗೆ

ತಲಪಾಡಿ ಗ್ರಾ.ಪಂ ಅಧ್ಯಕ್ಷರಾಗಿ ಟಿ.ಇಸ್ಮಾಯಿಲ್‌ ಆಯ್ಕೆ..! Read More »

ಕರಾವಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ದುಬೈ ಮಾರ್ಕೆಟ್‌ ನಲ್ಲಿ ಮೊಬೈಲ್ ರಿಪೇರಿ ವಿಚಾರದಲ್ಲಿ ಮೊಬೈಲ್ ಅಂಗಡಿ ಮಾಲಕನಿಗೆ ಗುಂಪೊಂದು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ. ಗ್ರಾಹಕನೋರ್ವ ಪವರ್ ಬ್ಯಾಂಕ್‌ ರಿಪೇರಿಗೆಂದು ಬಂದಿದ್ದು, ಅಂಗಡಿ ಮಾಲಕ ನಾವು ಮೊಬೈಲ್ ಹೊರತು ಬೇರೆ ಯಾವುದನ್ನೂ ರಿಪೇರಿ ಮಾಡುವುದಿಲ್ಲ ಎಂದು ಹೇಳಿದ್ದಾನೆ.ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಬಳಿಕ ಗ್ರಾಹಕ ಅಂಗಡಿ ಮಾಲಕನಿಗೆ ಹಲ್ಲೆ ಮಾಡಿದ ಆರೋಪ ಕೇಳಿ

ದುಬೈ ಮಾರ್ಕೆಟ್ ನಲ್ಲಿ ಅಂಗಡಿ ಮಾಲಕನಿಗೆ ಹಲ್ಲೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ..!

(ನ್ಯೂಸ್ ಕಡಬ)newskadaba.com ರಾಯಚೂರು, ಆ.11. ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಯಲ್ಲಿ ಚೌಡಮ್ಮ(34), ರಾಮಣ್ಣ(4), ಮುತ್ತಣ್ಣ(3) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಮುದಗಲ್ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ಮೊದಲು ಬಾವಿಗೆ ಎಸೆದು ಬಳಿಕ ತಾಯಿ ಬಾವಿಗೆ ಹಾರಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ..! Read More »

ಕರಾವಳಿ

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು

(ನ್ಯೂಸ್ ಕಡಬ)newskadaba.com ಮೈಸೂರು, ಆ.11. ದೂರವಾಣಿ ಕರೆ ಮಾಡಿ ಬಾಕಿ ವಿದ್ಯುತ್ ಬಿಲ್ ಕಟ್ಟುವಂತೆ ಹೇಳಿ ವ್ಯಕ್ತಿಯೊಬ್ಬರ ಖಾತೆಯಿಂದ​ ಬರೋಬ್ಬರಿ 5.48 ಲಕ್ಷ ರೂ. ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಕಣ್ಣನ್ ಎಂಬುವರಿಗೆ ವಂಚಕರು ದೂರವಾಣಿ ಕರೆ ವಿದ್ಯುತ್ ಬಿಲ್ ಬಾಕಿ ಇದ್ದು, ಲಿಂಕ್​ ಮೂಲಕ ಪಾವತಿಸುವಂತೆ ಸೂಚಿಸಿದ್ದಾರೆ. ಇನ್ನು ಕರೆ ಕಡಿತಗೊಳಿಸಿದ ಬಳಿಕ ಕಣ್ಣನ್ ಅವರ ಫೋನ್ ​ಗೆ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಹೇಳಿದ್ದು, ಅದರಂತೆ ಕಣ್ಣನ್ ಅವರು ಸಹ ವಂಚಕರು ಕಳುಹಿಸಿದ್ದ ಲಿಂಕ್​

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ವಿಟ್ಲ, ಆ.11. ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆರೋಪಿಯನ್ನು ಬಂಟ್ವಾಳ ನೆಟ್ಲಮುಡ್ನೂರು ಗ್ರಾಮದ ಶಶಿಧರ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಯ ವಶದಲ್ಲಿದ್ದ ಅಂದಾಜು ರೂ 1,516.21 ಮೌಲ್ಯದ ವಿವಿಧ ಕಂಪೆನಿಯ ಒಟ್ಟು ಪ್ರಮಾಣ 2.880 ಲೀಟರ್ ಅಕ್ರಮ ಮದ್ಯದ ಸ್ಯಾಚೆಟ್ ಗಳು ಹಾಗೂ ಮದ್ಯ ಮಾರಾಟದಿಂದ ಬಂದ ರೂಪಾಯಿ 550 ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿಟ್ಲ: ಅಕ್ರಮ ಮದ್ಯ ಮಾರಾಟ – ಆರೋಪಿ ಪೊಲೀಸರ ವಶಕ್ಕೆ Read More »

ಕರಾವಳಿ

ಸ್ವ-ಉದ್ಯೋಗ ನಡೆಸುವ ಯುವಕ ಯುವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.11. ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ (Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈೆನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎನ್ನಲಾಗಿದೆ. PMEGP ವೆಬ್ಸೈ್ಟ್ ನಲ್ಲಿ ಆನ್ಲೈಧನ್ ಮೂಲಕ ಅರ್ಜಿ ಸಲ್ಲಿಸಲು ಶುಲ್ಕವಿರುವುದಿಲ್ಲ. ಅಭ್ಯರ್ಥಿಗಳ ದಾಖಲಾತಿಗಳನ್ನು ಪರಿಶೀಲಿಸಿ, ಸಂಬಂಧಿತ ಬ್ಯಾಂಕುಗಳಿಗೆ ಕಳುಹಿಸಲಾಗುವುದು. ಅರ್ಜಿ ಸಲ್ಲಿಕೆಯ ನಂತರದಲ್ಲಿನ ವಿವಿಧ ಹಂತಗಳ ಪ್ರಗತಿಯನ್ನು ಆನ್ಲೈಲನ್ ಸ್ಟೇಟಸ್ ನೋಡಬಹುದು. ಏಜೆನ್ಸಿ ಹೆಸರು ಡಿಐಸಿ

ಸ್ವ-ಉದ್ಯೋಗ ನಡೆಸುವ ಯುವಕ ಯುವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ
Scroll to Top