karnataka

‘ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ’ – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ನಾನು ಯಾರಿಗೂ ಪ್ರಮಾಣ ಮಾಡಬೇಕಾದ ಅವಶ್ಯಕತೆ ಇಲ್ಲ. ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ. ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ ಎನ್ನಲಾಗಿದೆ. ಕಂಟ್ರ್ಯಾಕ್ಟರ್‌ಗಳು ಆಣೆ ಪ್ರಮಾಣಕ್ಕೆ ಬರಲಿ ಎಂದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಯಾವ ಗುತ್ತಿಗೆದಾರನಿಗೂ ಉತ್ತರ ಕೊಡಲ್ಲ. ಯಾವ ಬಿಲ್ ವಿಚಾರವೂ ಗೊತ್ತಿಲ್ಲ. ನನಗೂ ಪ್ರಜ್ಞೆ ಇದೆ, ರಾಜಕಾರಣ ಗೊತ್ತಿದೆ. ಯಾವ ಕಂಟ್ರ್ಯಾಕ್ಟರ್‌ […]

‘ಯಾವ ಬ್ಲಾಕ್‌ ಮೇಲ್‌ ನನ್ನ ಮುಂದೆ ನಡೆಯಲ್ಲ’ – ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ Read More »

ಕರ್ನಾಟಕ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು

(ನ್ಯೂಸ್ ಕಡಬ)newskadaba.com  ಮಂಗಳೂರು, ಆ.09. ಫ್ಲ್ಯಾಟ್‌ನ ಕಪಾಟಿನಲ್ಲಿರಿಸಿದ ಚಿನ್ನಾಭರಣವನ್ನು ಪತಿಯೇ ಕಳ್ಳತನ ಮಾಡಿದ ಕುರಿತು ಕದ್ರಿ ಪೊಲೀಸ್‌ ಠಾಣೆಗೆ ಪತ್ನಿ ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಪತಿ ಮತ್ತು ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದ್ದು, ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದುಬಂದಿದೆ. ತಾಯಿ ಮನೆ, ಪತಿ ಮನೆಯವರು ಮದುವೆ ಸಂದರ್ಭ ನೀಡಿದ ಚಿನ್ನ ಸೇರಿದಂತೆ ಒಟ್ಟು 75 ಪವನ್‌ ಚಿನ್ನವಿದ್ದು, ಅದನ್ನು ತಾವು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ

ಫ್ಲ್ಯಾಟ್ ನಲ್ಲಿದ್ದ ಚಿನ್ನಾಭರಣವನ್ನು ದೋಚಿದ ಪತಿರಾಯ – ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಮುಂದೆ ಕನ್ನಡದಲ್ಲೂ ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಡಿಜಿಟಲ್​ ಪೇಮೆಂಟ್​ ಪ್ಲಾಟ್​​ ಫಾರ್ಮ್​​ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್​ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದ್ದು, ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್​ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್​ ಸ್ಪೀಕರ್​ ನೋಟಿಫಿಕೇಶನ್​ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್​ನಲ್ಲಿ ಈ ನೋಟಿಫಿಕೇಶನ್​ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್​ ಸ್ಪೀಕರ್​ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ,

ಇನ್ಮುಂದೆ ಕನ್ನಡದಲ್ಲೂ ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​ Read More »

ಕರ್ನಾಟಕ

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಡಬ, ಆ.09. ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ಮಾಡುತ್ತಿದ್ದ  ಕುಂತೂರಿನ ಇಬ್ಬರು ಯುವಕರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಯುವಕರನ್ನು ಜುನೈದ್(23ವ.) ಹಾಗೂ ನಿತಿನ್(24ವ.) ಎಂದು ಗುರುತಿಸಲಾಗಿದೆ. ಯುವಕರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಕುಂತೂರು ಮಸೀದಿಯ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಒಬ್ಬರಿಗೊಬ್ಬರು ಕೈ ಮಿಲಾಯಿಸಿಕೊಂಡು ಸಾರ್ವಜನಿಕರಿಗೆ ಭಯ ಉಂಟು ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ರೌಂಡ್ಸ್ ಕರ್ತವ್ಯದಲ್ಲಿದ್ದ ಕಡಬ ಠಾಣೆ ಎಸ್.ಐ.ಅವರು ಗಮನಿಸಿದ್ದು, ಜೀಪು ನಿಲ್ಲಿಸಿ

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!!

(ನ್ಯೂಸ್ ಕಡಬ)newskadaba.com ರಾಯಚೂರು, ಆ.09. ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಸಂಭವಿಸಿದೆ. ಹೊಲದಲ್ಲಿ ಈ ಮಹಿಳೆಯ ಮೃತದೇಹ ಕಂಡುಬಂದಿದ್ದು, ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು,

ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

10 ಮಂದಿ IAS ಅಧಿಕಾರಿಗಳ ವರ್ಗಾವಣೆ..!! – ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಾಜ್ಯ ಸರ್ಕಾರ ಹತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿವೆ. ಮಹಮ್ಮದ್ ಮೊಹ್ಸಿನ್- ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಟಿ.ಎಚ್.ಎಂ.ಕುಮಾರ್ – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ. ಆರ್.ಸ್ನೇಹಲ್ – ನಿರ್ದೇಶಕಿ(ಐಟಿ), ಬಿಎಂಟಿಸಿ. ಪ್ರಭುಲಿಂಗ ಕವಲಿಕಟ್ಟಿ- ಆಯುಕ್ತರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವೆ. ಜಿ.ಲಕ್ಷ್ಮೀಕಾಂತ್ ರೆಡ್ಡಿ- ಜಂಟಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು

10 ಮಂದಿ IAS ಅಧಿಕಾರಿಗಳ ವರ್ಗಾವಣೆ..!! – ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ತ್ವರಿತ ವಿಶೇಷ ನ್ಯಾಯಾಲಯವು ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ. ಬ್ರಹ್ಮಾವರ ತಾಲೂಕು ಬಾಳಕುದ್ರು ನಿವಾಸಿ ಅಶೋಕ್ ಎ. (32) ಶಿಕ್ಷೆಗೆ ಗುರಿಯಾಗಿರುವ ಆರೋಪಿ ಎಂದು ತಿಳಿದುಬಂದಿದೆ. 15ರ ಹರೆಯದ ಬಾಲಕಿಯನ್ನು ಪರಿಚಯ ಮಾಡಿಕೊಂಡ ಅಶೋಕ್,

 ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ..!! – 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.09. ಅಕ್ರಮ ಗೋ-ಸಾಗಾಟ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗುರುತಿಸಲಾಗಿದೆ. ಸ್ಕಾರ್ಫಿಯೋ ವಾಹನದಲ್ಲಿ ಆರೋಪಿಗಳು ಗೋವುಗಳನ್ನು ಸಾಗಾಟ ನಡೆಸುತ್ತಿದ್ದರು. ಬಜರಂಗದಳದ ಕಾರ್ಯಕರ್ತರ ಖಚಿತ ಮಾಹಿತಿಯನ್ವಯ ಪೊಲೀಸರು ವಾಹನವನ್ನು ಬೆನ್ನಟ್ಟಿದ್ದು, ಬಜಗೋಳಿ ಬಳಿಯಲ್ಲಿ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದರು. ಬಳಿಕ ಕಾರ್ಯಾಚರಣೆ ನಡೆಸಿ ಬಂಟ್ವಾಳ ಫರಂಗಿಪೇಟೆ ನಿವಾಸಿಗಳಾದ ಜಬ್ಬರ್(24), ಹೈದರಾಲಿ(26), ಕಾರ್ಕಳ ಶಿರ್ಲಾಲು ಗ್ರಾಮದ ಪ್ರಸಾದ್ ಪೂಜಾರಿ(23) ಮತ್ತು ಜಗನ್ನಾಥ ಶೆಟ್ಟಿ (58) ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಅಕ್ರಮ ಗೋ-ಸಾಗಾಟ – ನಾಲ್ವರ ಬಂಧನ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top