karnataka

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.03. ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಕದ್ರಿ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಕುಲಶೇಖರದ ಕಿರಣ್ ಎಂಟರ್‌ಪ್ರೈಸಸ್ ಕಟ್ಟಡದ ಬಳಿ ಸಂಶಯಾಸ್ಪದ ರೀತಿಯಲ್ಲಿದ್ದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಬಂಧಿತನನ್ನು ಶಿವನಗರದ ದೀಪಕ್ (27) ಎಂಬುದಾಗಿ ತಿಳಿದು ಬಂದಿದೆ. ಈತ ಪೊಲೀಸರು ಪ್ರಶ್ನಿಸಿದಾಗ ಸಮರ್ಪಕ ಉತ್ತರ ನೀಡದ ಕಾರಣ ಕೃತ್ಯ ನಡೆಸಲು ಹೊಂಚು ಹಾಕುತ್ತಿರುವ ಬಗ್ಗೆ ಬಲವಾದ ಸಂಶಯ ಉಂಟಾದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಂಶಯಾಸ್ಪದ ರೀತಿಯಲ್ಲಿದ್ದ ಯುವಕ ಅರೆಸ್ಟ್.! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ಕಾರವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ನೈತಿಕ ಪೊಲೀಸ್ ಗಿರಿ ನಡೆಸಿದ ಐವರನ್ನು ಪೊಲೀಸರು ಬಂಧಿಸಿದ ಘಟನೆ ಸಂಭವಿಸಿದೆ. ಮಂಗಳೂರಿನ‌ ಹೆಸರಾಂತ ಕಾಲೇಜುವೊಂದರ ನಾಲ್ವರು ವೈದ್ಯರು ಹಾಗೂ ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರು ಒಂದೇ ಕಾರಿನಲ್ಲಿ ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಸಂಜೆ 4.30ರ ವೇಳೆಗೆ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದರು. ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಒಂದೇ ಕಾರಿನಲ್ಲಿ ವಿಭಿನ್ನ ಕೋಮಿಗೆ ಸೇರಿದವರು ಎಲ್ಲಿಗೆ

ಮಂಗಳೂರಿನ ವೈದ್ಯರ ಕಾರು ತಡೆದು ಅನೈತಿಕ ಪೊಲೀಸ್ ಗಿರಿ – ಐವರು ಅರೆಸ್ಟ್..! Read More »

ಕರಾವಳಿ

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು

(ನ್ಯೂಸ್ ಕಡಬ)newskadaba.com ಕಾರವಾರ, ಆ.02. ಮೊಬೈಲ್ ಚಾರ್ಜರ್‌ ನ್ನು ಬಾಯಿಗೆ ಹಾಕಿದಾಗ ಶಾಕ್ ಹೊಡೆದು 8 ತಿಂಗಳ ಮಗು ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ದಂಪತಿಗಳ 8 ತಿಂಗಳ ಮಗು ಸಾನಿಧ್ಯ ಬಲಿಯಾದ ಕಂದಮ್ಮ ಎಂದು ತಿಳಿದುಬಂದಿದೆ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ ಅನ್ನು ಆಫ್ ಮಾಡದೇ ನಿರ್ಲಕ್ಷ್ಯ ವಹಿಸಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್

ಚಾರ್ಜರ್ ಪಿನ್‌ ನಿಂದ ಶಾಕ್‌ ಹೊಡೆದು ಕಂದಮ್ಮ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಉಡುಪಿ ಕಾಲೇಜಿನ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೇರಳ ಫೈಲ್ಸ್‌ ಸಿನಿಮಾ ಮಾದರಿಯ ಕೃತ್ಯ ಎಂದು ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ ಎನ್ನಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಬಿಜೆಪಿಯ ಔಟ್ ಗೋಯಿಂಗ್ ಅಧ್ಯಕ್ಷ/ವಿದೂಷಕ ಕಟೀಲ್ ಉಡುಪಿ ಪ್ರಕರಣವನ್ನು ಕೇರಳ ಫೈಲ್ಸ್ ಗೆ ಹೋಲಿಸಿದ್ದು, ಹಾಗಾದರೆ ಇವರದ್ದೇ ಕ್ಷೇತ್ರದ ವಿಟ್ಲದಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಸಂಘ ಪರಿವಾರಕ್ಕೆ ಸೇರಿದ 3 ಯುವಕರಿಂದ

‘ವಿಟ್ಲದಲ್ಲಿ ನಡೆದ ಅತ್ಯಾಚಾರವನ್ನು ಮಂಗಳೂರು ಫೈಲ್ಸ್ ಎಂದು ಕರೆಯಬಹುದೇ’ ? – ಸಚಿವ ದಿನೇಶ್ ಗುಂಡೂರಾವ್ ತಿರುಗೇಟು Read More »

ಕರ್ನಾಟಕ

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಆ.02. ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನಡೆದಿದೆ. ಮೃತ ಬಾಲಕಿಯನ್ನು ಕೃತಿಕಾ(3)ಎಂದು ಗುರುತಿಸಲಾಗಿದೆ. ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಪ್ರಸ್ತುತ ಕಿರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದು, ಅನೇಕ ಬಳಕೆದಾರರು ಕಿರು ವಿಡಿಯೋ ಕ್ರಿಯೇಟ್ ಮಾಡಲು ಮುಂದಾಗುತ್ತಾರೆ. ಈ ನಿಟ್ಟಿನಲ್ಲಿ ಜನಪ್ರಿಯ ಇನ್ ಸ್ಟಾಗ್ರಾಂ ತಾಣವು ಇತ್ತೀಚೆಗೆ ತನ್ನ ಬಿಲ್ಟ್ ಇನ್ ರೀಲ್ ಎಡಿಟಿಂಗ್ ಸೌಲಭ್ಯ ನೀಡಿದೆ ಎನ್ನಲಾಗಿದೆ. ಅದೇ ಹಾದಿಯಲ್ಲಿ ಇದೀಗ ಯೂಟ್ಯೂಬ್ ಸಹ ಹೆಜ್ಜೆ ಹಾಕಿದ್ದು, ತನ್ನ ಬಳಕೆದಾರರಿಗೆ ಖುಷಿ ಸುದ್ದಿ ನೀಡಿದೆ ಎನ್ನಲಾಗಿದೆ. ಅತೀ ದೊಡ್ಡ ವಿಡಿಯೋ ಪ್ಲಾಟ್ ಫಾರ್ಮ್ ಎನಿಸಿರುವ ಯೂಟ್ಯೂಬ್ ಇದೀಗ

ಯೂಟ್ಯೂಬ್ ಬಳಕೆದಾರರಿಗೆ ಗುಡ್ ನ್ಯೂಸ್ – ಹೊಸ ಯೂಟ್ಯೂಬ್ ಕ್ರಿಯೇಟ್ ಎಡಿಟಿಂಗ್ ಪರಿಚಯಿಸಲು ಸಜ್ಜು Read More »

ಕರ್ನಾಟಕ

ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ಮನೆ ಸಂಪೂರ್ಣ ಹಾನಿಯಾದವರಿಗೆ ಕೂಡಲೇ 5 ಲಕ್ಷ ರೂಪಾಯಿ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸೂಚಿಸಿದರು. ಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯ, ಈ ಬಾರಿ ವಾಡಿಕೆಯಷ್ಟು ಮುಂಗಾರು ಸುರಿದಿಲ್ಲ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿದೆ. ಆದರೆ ಜುಲೈನಲ್ಲಿ

ಮನೆ ಸಂಪೂರ್ಣ ಹಾನಿಯಾದವರಿಗೆ ತಕ್ಷಣ 5 ಲಕ್ಷ ರೂ. ನೀಡಿ – ದ.ಕ. ಜಿಲ್ಲಾಧಿಕಾರಿಗೆ ಸಿಎಂ ಸಿದ್ದು ಸೂಚನೆ Read More »

ಕರಾವಳಿ, ಕರ್ನಾಟಕ

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಶಕ್ತಿ ಯೋಜನೆ ಅಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದೆ. ನಾಲ್ಕೂ ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್‌ ದರ 6,87,49,57,753 ಈ ಮೊತ್ತದ ಒಂದು ಪಾಲನ್ನು ಅಥವಾ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) 47.15 ಕೋಟಿ ರೂ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) 21.85

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ಸರ್ಕಾರ – ಮೊದಲ ಕಂತಿನಲ್ಲಿ 125.48 ಕೋಟಿ ರೂ ಬಿಡುಗಡೆ Read More »

ಕರ್ನಾಟಕ

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.02. ರಾಜ್ಯದಲ್ಲಿ ಆನ್ ಲೈನ್ ಗೇಮ್, ಆನ್ ಲೈನ್ ಬೆಟ್ಟಿಂಗ್ ನಿಷೇಧಿಸುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೇರೆ ರಾಜ್ಯಗಳಲ್ಲಿ ಆನ್ಲೈನ್ ಗೇಮ್ ಬ್ಯಾನ್ ಮಾಡಲಾಗಿದೆ. ಆನ್ಲೈನ್ ಗೇಮ್, ಲೋನ್ ಆಪ್ ಗಳಿಂದ ಸಾಕಷ್ಟು ತೊಂದರೆ ಆಗುತ್ತಿದೆ ಎಂದು ಹೇಳಿದ್ದಾರೆ. ಆನ್ಲೈನ್

ರಾಜ್ಯದಲ್ಲಿ ಆನ್ ಲೈನ್ ಗೇಮ್, ಬೆಟ್ಟಿಂಗ್ ನಿಷೇಧಕ್ಕೆ ಚಿಂತನೆ – ಸಿಎಂ ಸಿದ್ದರಾಮಯ್ಯ Read More »

ಕರಾವಳಿ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.02. ಗೃಹಜ್ಯೋತಿ ಯೋಜನೆ ಅನುಷ್ಠಾನದಲ್ಲಿ ಎಸ್ಕಾಂಗಳಿಗೆ ಆರ್ಥಿಕ ಹೊರೆಯಾಗದಂತೆ ನೋಡಿಕೊಳ್ಳಲು ಸರ್ಕಾರವು ಪ್ರತಿ ತಿಂಗಳು ಯೋಜನೆಯ ಅನುಷ್ಠಾನಕ್ಕೆ ಅಗತ್ಯವಾದ ಹಣವನ್ನು ಎಸ್ಕಾಂಗಳಿಗೆ ವರ್ಗಾಯಿಸುತ್ತದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ‘ಇಂಧನ ಇಲಾಖೆ ಈ ಯೋಜನೆಯನ್ನು ಮಾತ್ರ ಜಾರಿಗೆ ತರುತ್ತದೆ ಮತ್ತು ನಾವು ಆರ್ಥಿಕ ಹೊರೆಯನ್ನು ಹೊರಬೇಕಾಗಿಲ್ಲ. ವಿವಿಧ ವರ್ಗದ ಗ್ರಾಹಕರಿಗೆ ಸಬ್ಸಿಡಿ ನೀಡುವ ಇತರ ಅನೇಕ ಯೋಜನೆಗಳಂತೆಯೇ, ಗೃಹ ಜ್ಯೋತಿ ಅನುಷ್ಠಾನಕ್ಕೂ ಸರ್ಕಾರವು ಎಸ್ಕಾಂಗಳಿಗೆ ಮರುಪಾವತಿ ಮಾಡುತ್ತದೆ ಎಂದು ಇಂಧನ ಸಚಿವ

ಗೃಹಜ್ಯೋತಿಗೆ ಎಸ್ಕಾಂಗಳಿಂದ ಮಾಸಿಕ ಹಣ ಪಾವತಿಸಲು ಸರ್ಕಾರ ನಿರ್ಧಾರ Read More »

ಕರ್ನಾಟಕ
Scroll to Top