karnataka

ಬುರ್ಖಾ ಏಕೆ ಧರಿಸಿಲ್ಲ ಎಂದು ವಿದ್ಯಾರ್ಥಿನಿಗೆ ಗದರಿದ ಆರೋಪ..! – ಬಸ್ ಚಾಲಕ ಅಮಾನತು

(ನ್ಯೂಸ್ ಕಡಬ)newskadaba.com ಕಲಬುರಗಿ, ಜು.29. ಮುಸ್ಲಿಂ ವಿದ್ಯಾರ್ಥಿನಿಗೆ ಏಕೆ ಬುರ್ಖಾ ಧರಿಸಲಿಲ್ಲ ಎಂದು ಗದರಿಸಿ ಬಸ್ ಪ್ರಯಾಣಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿತ ಬಸವ ಕಲ್ಯಾಣ ಡಿಪೋ ದ ಬಸ್ ಚಾಲಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಸಿ.ಎಸ್.ಫುಲೇಕರ್ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಶಾಲೆ ಬಿಟ್ಟು ಮನೆಗೆ ತೆರಳಲು ಬಸ್ ಹತ್ತಲು ಮುಂದಾಗಿದ್ದ ಮುಸ್ಲಿಂ ವಿದ್ಯಾರ್ಥಿನಿ ಹಿಜಾಬ್ ಧರಿಸಿದ್ದಳು. ಇದಕ್ಕೆ ಪ್ರಶ್ನಿಸಿದ ಮಹಿಬೂಬ್ ಪಟೇಲ್, ‘ಬುರ್ಖಾ ಏಕೆ ಹಾಕಿಕೊಂಡಿಲ್ಲ’ ಎಂದು […]

ಬುರ್ಖಾ ಏಕೆ ಧರಿಸಿಲ್ಲ ಎಂದು ವಿದ್ಯಾರ್ಥಿನಿಗೆ ಗದರಿದ ಆರೋಪ..! – ಬಸ್ ಚಾಲಕ ಅಮಾನತು Read More »

ಕರ್ನಾಟಕ

ಕುಡಿದ ಅಮಲಿನಲ್ಲಿ ಪಾದಚಾರಿಗಳಿಗೆ ಚೂರಿ ಇರಿತ..! – ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.com ಕಾಪು, ಜು.29. ಕುಡಿದ ಅಮಲಿನಲ್ಲಿದ್ದ ಸ್ಕೂಟರ್‌ ಸವಾರರು ಪಾದಚಾರಿಗಳಿಬ್ಬರ ಜೊತೆ ವಾಗ್ವಾದ ನಡೆಸಿ ಬಳಿಕ ಚೂರಿಯಿಂದ ಇರಿದ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಉದ್ಯಾವರ ಗ್ರಾಮದ ನಿವಾಸಿಗಳಾದ ಜಯರಾಮ ತಿಂಗಳಾಯ ಮತ್ತು ಸಂದೀಪ್‌ ಇರಿತಕ್ಕೊಳಗಾಗಿದ್ದು, ಕುರ್ಕಾಲು ಸುಭಾಸ್‌ ನಗರದ ನಿವಾಸಿಗಳಾದ ಪ್ರೇಮನಾಥ್‌, ಸಂಪತ್‌ ಚೂರಿಯಿಂದ ಇರಿದಿದ್ದಾರೆ ಎನ್ನಲಾಗಿದೆ‌. ಆರೋಪಿಗಳನ್ನು ಕಾಪು ಪೊಲೀಸರು ಬಂಧಿಸಿದ್ದು, ಬಂಧಿತರಿಗೆ ನ್ಯಾಯಾಲಯ ಹದಿನೈದು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಜಯರಾಮ ತಿಂಗಳಾಯ ಮತ್ತು ಸಂದೀಪ್‌ ನಡೆದುಕೊಂಡು ಹೋಗುತ್ತಿದ್ದ ವೇಳೆ ರಸ್ತೆಯ

ಕುಡಿದ ಅಮಲಿನಲ್ಲಿ ಪಾದಚಾರಿಗಳಿಗೆ ಚೂರಿ ಇರಿತ..! – ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.29. ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಫಲಿತಾಂಶ ಪ್ರಕಟಗೊಂಡ ನಂತರ ನಗರದ ಮುಖ್ಯರಸ್ತೆಯಲ್ಲಿ ಅನುಮತಿಯಿಲ್ಲದೆ ವಿಜಯೋತ್ಸವ ನಡೆಸಿದ ಪುತ್ತಿಲ ಪರಿವಾರದ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಸಾರ್ವಜನಿಕ ಶಾಂತಿಭಂಗ ಪ್ರಕರಣ ದಾಖಲಾಗಿದೆ. ಪಂಚಾಯತ್ ಚುನಾವಣೆಯಲ್ಲಿ ಪುತ್ತಿಲ ಪರಿವಾರದಿಂದ ಸ್ಪರ್ಧಿಸಿದ್ದ ಸುಬ್ರಹ್ಮಣ್ಯ ಬಲ್ಯಾಯ ಗೆಲುವು ಸಾಧಿಸಿದ್ದರು. ಫಲಿತಾಂಶ ಪ್ರಕಟಗೊಂಡ ಬಳಿಕ ತಾಲೂಕು ಆಡಳಿತ ಸೌಧದ ಬಳಿಯಿಂದ ಪುತ್ತಿಲ ಪರಿವಾರದ ಕಚೇರಿ ತನಕ ನಗರದ ಮುಖ್ಯ ರಸ್ತೆಯಲ್ಲಿ ಡಿಜೆ ಅಳವಡಿಸಿ ಮೆರವಣಿಗೆ ನಡೆಸಲಾಗಿತ್ತು ಎನ್ನಲಾಗಿದೆ. ಮೆರವಣಿಗೆ

ಪುತ್ತಿಲ ಪರಿವಾರದ ವಿರುದ್ಧ ಕೇಸ್ ದಾಖಲು Read More »

ಕರಾವಳಿ

ಅನೈತಿಕ ಪೊಲೀಸ್ ಗಿರಿ – ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು.29. ಪೊಲೀಸ್ ಸಿಬ್ಬಂದಿಯ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿ ಅನೈತಿಕ ಪೊಲೀಸ್ ಗಿರಿ ಮಾಡಿರುವ ಬಗ್ಗೆ ವರದಿಯಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಬಂಟ್ವಾಳ ಡಿ.ವೈ.ಎಸ್.ಪಿ.ಕಚೇರಿಯ ಪೊಲೀಸ್ ಸಿಬ್ಬಂದಿ ಕುಮಾರ್ ಹನಮಂತಪ್ಪ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಈ ಬಗ್ಗೆ ದೂರು ನೀಡಿದ್ದು, ಅದರಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ

ಅನೈತಿಕ ಪೊಲೀಸ್ ಗಿರಿ – ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ.!! – ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆ ಪರ್ವ ಮುಂದುವರೆದಿದ್ದು, ನಾಲ್ವರು ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ವರದಿ ತಿಳಿಸಿದೆ. ವೆಂಕಟೇಶ್ ಎಸ್-ಅರಣ್ಯ ಸಂರಕ್ಷಣಾಧಿಕಾರಿ, ಸರೀನಾ ಎಸ್-ಅರಣ್ಯ ಉಪಸಂರಕ್ಷಣಾಧಿಕಾರಿ, ಪ್ರಶಾಂತ್ ಸಂಕಿನಮಠ ಅರಣ್ಯ ಉಪಸಂರಕ್ಷಣಾಧಿಕಾರಿ, ಚಿಕ್ಕಮಗಳೂರು, ಶ್ರೀ ಪತಿ ಬಿಎಸ್-ಅರಣ್ಯ ಉಪ ಸಂರಕ್ಷಣಾಧಿಕಾರಿ , ಧಾರವಾಡ ಇವರುಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ ಎನ್ನಲಾಗಿದೆ.

ನಾಲ್ವರು ‘IFS’ ಅಧಿಕಾರಿಗಳ ವರ್ಗಾವಣೆ.!! – ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!!

(ನ್ಯೂಸ್ ಕಡಬ)newskadaba.com ಕಡಬ, ಜು.29. ಸಂಪರ್ಕ ರಸ್ತೆ ಇಲ್ಲದ ಕಾರಣ ರೋಗಿಯೊಬ್ಬರನ್ನು ಚೇರ್ ಮೇಲೆ ಕುಳ್ಳಿರಿಸಿ ಆಸ್ಪತ್ರೆಗೆ ಹೊತ್ತುಕೊಂಡು ಹೋಗುವ ಘಟನೆ ವರದಿಯಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಇಚ್ಲಂಪ್ಪಾಡಿಯ ಕೆರ್ನಡ್ಕ ನಿವಾಸಿ ಸಾವಿತ್ರಿ ಗೋಪಾಲ್ ಅವರಿಗೆ ವಾರಕ್ಕೆ 2 ದಿನ ಪುತ್ತೂರು ಆಸ್ಪತ್ರೆಯಗೆ ಹೋಗಿ ಚಿಕಿತ್ಸೆ ಪಡೆಯಬೇಕಾಗಿದೆ. ಅವರ ಮನೆಗೆ ವಾಹನ ಸಂಚಾರಕ್ಕೆ ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಹೊತ್ತೇ ಸಾಗಬೇಕಾದ ಸ್ಥಿತಿ ಇದೆ. ಸಾವಿತ್ರಿ

ಕಡಬ: ಸಂಪರ್ಕ ರಸ್ತೆ ಇಲ್ಲದೆ ರೋಗಿಯನ್ನು ಹೊತ್ತುಕೊಂಡು ಸಾಗಿದ ಗ್ರಾಮಸ್ಥರು.!! Read More »

ಕರಾವಳಿ

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.29. ಶ್ರೀರಂಗಪಟ್ಟಣ ತಾಲೂಕಿನ‌ಲ್ಲಿರುವ ಕೆ ಆರ್ ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷವಾಗಿವೆ. ತುಂಬುತ್ತಿರುವ ಡ್ಯಾಂನ ಹಿನ್ನೀರಿನಲ್ಲಿ ನೀರು ನಾಯಿಗಳು ಕಂಡು ಬಂದಿದ್ದು, ಕ್ಯಾಮರಾ ಕಂಡೊಡನೆ ನೀರಿನಲ್ಲಿ ಮರೆಯಾಗಿವೆ. ಈ ಪೈಕಿ ಒಂದು ನೀರು ನಾಯಿ, ನೀರಿನಲ್ಲಿ ಮುಳಗಿ ಮತ್ತೆ ಮೇಲೆ ಬಂದು ಕ್ಯಾಮರಾ ನೋಡುತ್ತಿರುವ ದೃಶ್ಯ ಕೂಡ ಕಂಡುಬಂದಿದೆ.

ಕೆ.ಆರ್.ಎಸ್ ಜಲಾಶಯದಲ್ಲಿ ನೀರು ನಾಯಿಗಳು ಪ್ರತ್ಯಕ್ಷ Read More »

ಕರ್ನಾಟಕ

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಪತ್ನಿಗೆ ಕಿರುಕುಳ ನೀಡಿ ಮಾನಭಂಗಕ್ಕೆ ಯತ್ನಿಸಿದ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಬಂಧಿತ ಆರೋಪಿಗಳನ್ನು ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಎಂದು ಗುರುತಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಳಿಕ ಕುಮಾರ್ ಅವರು ಎನ್.ಐ.ಎ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಪ್ರತಿದಿನ ಬಿಸಿರೋಡಿನ ಪೊಲೀಸ್ ವಸತಿ ಗೃಹಕ್ಕೆ ಬರಲು

ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.29. ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಆರೋಪಿಯು ಪರಾರಿಯಾಗಿದ್ದು, ಆರೋಪಿಯನ್ನು ಇಕ್ಬಾಲ್ ಎಂದು ಗುರುತಿಸಲಾಗಿದೆ. ಬಸ್ಸಿಗಾಗಿ ಕಾಯುವ ವೇಳೆ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತು ವಿದ್ಯಾರ್ಥಿನಿ ಹೆತ್ತವರಲ್ಲಿ ತಿಳಿಸಿದ್ದಳು ಎನ್ನಲಾಗಿದೆ.    

ರಿಕ್ಷಾ ಚಾಲಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಕಿರುಕುಳ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಚಿನ್ನಾ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ- ಬೆಳ್ಳಿಯ ದರಗಳಲ್ಲಿ ಇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಬಂಗಾರ, ಬೆಳ್ಳಿಯ ಬೆಲೆಗಳಲ್ಲಿ ಪ್ರತಿದಿನ ವ್ಯತ್ಯಾಸ ಆಗುವುದು ಕಾಮನ್ ಆಗಿದೆ. ಹೀಗಾಗಿ ಚಿನ್ನ, ಬೆಳ್ಳಿಯ ಬೆಲೆಯಲ್ಲಿ ಏನೇನು ಆಗಿದೆ ಎಂದು ತಿಳಿದುಕೊಳ್ಳಲು ಭಾರೀ ಉತ್ಸುಕ ಇರುತ್ತದೆ. ಅದೇ ರೀತಿ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆಗಳಲ್ಲಿ ಏನೇನಾಗಿದೆ ಎನ್ನುವ ಮಾಹಿತಿ ಇಲ್ಲಿದೆ. ಕಳೆದ ವಾರ ಏರಿಕೆ ಕಂಡಿದ್ದ ಚಿನ್ನದ ದರ ಇಂದು ಇಳಿಕೆಯಾಗಿದೆ. 1 ಗ್ರಾಂ 22 ಕ್ಯಾರೆಟ್‌ ಚಿನ್ನದ ದರ 5,510 ಆಗಿದ್ದು, ನಿನ್ನೆಯ 5,545ಕ್ಕೆ ಹೋಲಿಸಿದರೆ 35 ರೂ.,

ಚಿನ್ನಾ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ- ಬೆಳ್ಳಿಯ ದರಗಳಲ್ಲಿ ಇಳಿಕೆ Read More »

ಕರ್ನಾಟಕ
Scroll to Top