karnataka

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ

(ನ್ಯೂಸ್ ಕಡಬ)newskadaba.com ಕಡಬ, ಜು.28. ಕಡಬ ತಾಲೂಕಿನ ನೆಟ್ಟಣದ ಕೇಂದ್ರೀಯ ಮರಗಳ ಸಂಗ್ರಹಾಲಯದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿದ್ದ ಮೂಲತಃ ಕಾಸರಗೋಡು ಸಮೀಪದ ಹೊಸದುರ್ಗ ನಿವಾಸಿ ರಾಮನಾಥ ಅರಳೀಕಟ್ಟೆ ಅವರ ಪುತ್ರ ಸುಭಾಷ್ ಬಿ. (55) ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಜು.28ರಂದು ನಿಧನ ಹೊಂದಿದರು ಎಂದು ವರದಿಯಾಗಿದೆ. ಮೃತರು ಪತ್ನಿ, ಒರ್ವ ಪುತ್ರ, ಒರ್ವ ಪುತ್ರಿಯನ್ನು ಅಗಲಿದ್ದಾರೆ. ಸುಭಾಷ್ ಅವರು 1990ರಲ್ಲಿ ಬೆಳ್ತಂಗಡಿಯಲ್ಲಿ ಅರಣ್ಯ ವೀಕ್ಷಕರಾಗಿ ಇಲಾಖಾ ಸೇವೆಗೆ ಸೇರಿದ್ದರು. ಬೆಳ್ತಂಗಡಿಯಲ್ಲಿ ಹಲವು ವರ್ಷ ಸೇವೆ ಸಲ್ಲಿಸಿ […]

ಕಡಬ: ಉಪ ವಲಯ ಅರಣ್ಯಾಧಿಕಾರಿ ಸುಭಾಷ್ ಬಿ. ನಿಧನ Read More »

ಕರಾವಳಿ

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ರಾಜ್ಯದ ಜನರು ಬಹು ನಿರೀಕ್ಷೆಯಿಂದ ನೋಡುತ್ತಿರುವಂತ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಆಗಸ್ಟ್ 5ರಂದು ಗೃಹ ಜ್ಯೋತಿ ಹಾಗೂ ಆಗಸ್ಟ್ 17ರಂದು ಗೃಹಲಕ್ಷ್ಮಿ ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಜುಲೈ.18ರಿಂದ ಅರ್ಜಿ ಸಲ್ಲಿಕೆ ಆರಂಭಗೊಂಡ ಗೃಹ ಜ್ಯೋತಿ ಹಾಗೂ ಜುಲೈ.21ರಿಂದ ನೋಂದಣಿ ಆರಂಭಗೊಂಡು ಗೃಹ ಲಕ್ಷ್ಮಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಚಾಲನೆಯನ್ನು

ರಾಜ್ಯದ ಜನತೆಗೆ ಗುಡ್ ನ್ಯೂಸ್..! – ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಉದ್ಘಾಟನೆಗೆ ಮುಹೂರ್ತ ಫಿಕ್ಸ್ Read More »

ಕರ್ನಾಟಕ

ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನ ಮಿಸ್ ಮಾಡಿಕೊಂಡ ರಾಜ್ಯಪಾಲ ಗೆಹ್ಲೋಟೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.28. ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟೆ ಅವರನ್ನೇ ಬಿಟ್ಟು ವಿಮಾನ ಹಾರಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬೆಂಗಳೂರಿನಿಂದ ಹೈದರಾಬಾದ್ ಗೆ ತೆರಳಬೇಕಿದ್ದ ರಾಜ್ಯಪಾಲರು, ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನವನ್ನು ಮಿಸ್ ಮಾಡಿಕೊಂಡಿದ್ದಾರೆ. ಥಾವರ್ ಚಂದ್ ಗೆಹ್ಲೋಟ್ ಅವರು ಹೈದರಾಬಾದ್ ಗೆ ತೆರಳಲು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದು, ಇನ್ನೂ ಏರ್ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾಲರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್ ನಲ್ಲಿ ಕೂರಿಸಿದ್ದು, ಟೈಮ್ ಆಗಿರುವುದು

ಸಿಬ್ಬಂದಿಯ ನಿರ್ಲಕ್ಯದಿಂದ ವಿಮಾನ ಮಿಸ್ ಮಾಡಿಕೊಂಡ ರಾಜ್ಯಪಾಲ ಗೆಹ್ಲೋಟೆ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ)newskadaba.com ಉಳ್ಳಾಲ, ಜು.28. ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಅಲ್ಪ ಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದ್ದು, ಎದುರಿನ ಲಾರಿಗೆ ಸೈಡ್ ಕೊಡುತ್ತಿದ್ದಂತೆ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಪ್ರಪಾತಕ್ಕೆ ಉರುಳಿ ಬಿದ್ದಿದೆ ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ – ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.28. ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕರ ಮುನಿಸಿನ ಬೆನ್ನಲ್ಲೇ, ಪಕ್ಷದ ಹಿರಿಯ ನಾಯಕರ ಜತೆಗೆ ಆಗಸ್ಟ್‌ 2ರಂದು ನವದೆಹಲಿಯಲ್ಲಿ ಸಭೆ ನಡೆಸಲು ಹೈಕಮಾಂಡ್‌ ತೀರ್ಮಾನಿಸಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಸಚಿವ ಸಂಪುಟದ ಎಲ್ಲ ಸದಸ್ಯರು ಸಭೆಯಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್

ರಾಜ್ಯ ನಾಯಕರೊಂದಿಗೆ (ಆ.02)ರಂದು ಕಾಂಗ್ರೆಸ್‌ ಹೈಕಮಾಂಡ್‌ ಸಭೆ Read More »

ರಾಷ್ಟ್ರೀಯ ನ್ಯೂಸ್

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ವಿಶ್ವದ ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿ ದೊಡ್ಡ ಬೆಳವಣಿಗೆಯಾಗಿದೆ. ಪ್ರಪಂಚದ ಅತಿ ದೊಡ್ಡ ಖಾಸಗಿ ಸಂವಹನ ಉಪಗ್ರಹ ಜುಪಿಟರ್ 3 ಇಂದು ಹಾರಾಟ ನಡೆಸಲಿದೆ. ಬಿಲಿಯನೇರ್ ಎಲಾನ್ ಮಸ್ಕ್ ಅವರ ಬಾಹ್ಯಾಕಾಶ ವಿಭಾಗದ ಕಂಪನಿ SpaceX ಮಾಡಲಿದೆ. Space.com ಪ್ರಕಾರ , ಫಾಲ್ಕನ್ ಹೆವಿ ರಾಕೆಟ್ ಮ್ಯಾಕ್ಸರ್ ಟೆಕ್ನಾಲಜೀಸ್‌ನ ಅತಿದೊಡ್ಡ ಉಪಗ್ರಹವಾದ ಜುಪಿಟರ್ 3 ಅನ್ನು ಉಡಾವಣೆ ಮಾಡಲಾಗುತ್ತದೆ. ಜುಪಿಟರ್ 3 ಉಪಗ್ರಹವನ್ನು ಉತ್ತರ ಮತ್ತು ದಕ್ಷಿಣ ಅಮೆರಿಕಾದಲ್ಲಿನ ಗ್ರಾಹಕರಿಗೆ ಇಂಟರ್ನೆಟ್ ಸೇವೆಗಳನ್ನು

ಉಡಾವಣೆಗೆ ಸಿದ್ಧವಾದ ವಿಶ್ವದ ಅತಿ ದೊಡ್ಡ ಖಾಸಗಿ ಉಪಗ್ರಹ ಜುಪಿಟರ್-3 Read More »

ಕರ್ನಾಟಕ

ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ – ವಿಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 27. ದ.ಕ ಜಿಲ್ಲೆಯಲ್ಲಿ ಎಡೆ ಬಿಡದೆ ಬೀಳುತ್ತಿರುವ ಭಾರೀ ಗಾಳಿ ಮಳೆಗೆ ದ.ಕ ಜಿಲ್ಲಾಧಿಕಾರಿ ಮುಗಿಲನ್ ಮುಲ್ಲೈ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರಂತರವಾಗಿ ಶಾಲೆ ರಜೆ ನೀಡುತ್ತಿದ್ದು, ಇದೀಗ ಜಿಲ್ಲಾಧಿಕಾರಿಗೆ ಅಭಿನಂದನೆ ಸಲ್ಲಿಸಿ ವಿದ್ಯಾರ್ಥಿಗಳು ಮಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ವೀಡಿಯೋದಲ್ಲಿ ವಿದ್ಯಾರ್ಥಿಯೋರ್ವ ತನ್ನ ಕಚೇರಿಯೊಂದರಲ್ಲಿ ದ.ಕ ಜಿಲ್ಲಾಧಿಕಾರಿಯ ಫೋಟೋಗಳನ್ನು ಅಂಟಿಸಿ ಕೂತಿದ್ದು, ಆತನ ಬಳಿ ಇನ್ನೋರ್ವ ಬಂದು ಇದು ಯಾರ ಫೋಟೋ ಇಷ್ಟೋಂದು ಅಂಟಿಸಿದ್ದೀಯಾ ಎಂದು

ರಜೆ ನೀಡಿದ ಜಿಲ್ಲಾಧಿಕಾರಿಗೆ ಮಕ್ಕಳಿಂದ ಅಭಿನಂದನೆ – ವಿಡಿಯೋ ವೈರಲ್ Read More »

ಕರಾವಳಿ

ರೈಲು ಹಳಿಯ ಮೇಲೆ ಕುಸಿದು ಬಿದ್ದ ಮಣ್ಣು – 2 ದಿನಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ)newskadaba.com ಬೆಳಗಾವಿ, ಜು.27. ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ದೂಧ್ ಸಾಗರ್ ಫಾಲ್ಸ್ ಬಳಿ ದೊಡ್ಡ ಪ್ರಮಾಣದಲ್ಲಿ ಭೂಕುಸಿತಗೊಂಡು ರೈಲು ಹಳಿಯ ಮೇಲೆ ಬಿದ್ದಿರುವ ಪರಿಣಾಮ ರೈಲು ಸಂಚಾರದಲ್ಲಿ ಎರಡು ದಿನಗಳ ಕಾಲ ವ್ಯತ್ಯಯವಾಗಲಿದೆ. ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಗೋವಾ-ಕರ್ನಾಟಕ ಮಾರ್ಗ ಮಧ್ಯೆ ರೈಲ್ವೆ ಸಂಚಾರ ಸ್ಥಗಿತವಾಗಿತ್ತು. ಕಾರ್ಯಾಚರಣೆ ನಡೆಸಿ ರೈಲ್ವೆ ಹಳಿ ಮೇಲೆ ಬಿದ್ದಿರುವ ಕಲ್ಲು ಹಾಗೂ ಮರಗಳನ್ನು ಕಾರ್ಯಾಚರಣೆ ನಡೆಯುತ್ತಿರುವುದರಿಂದ ದೂಧ್ ಸಾಗರ್ ಬಳಿ ರೈಲ್ವೆ ಸಿಬ್ಬಂದಿ ಹೊರತುಪಡಿಸಿ ಅನ್ಯ

ರೈಲು ಹಳಿಯ ಮೇಲೆ ಕುಸಿದು ಬಿದ್ದ ಮಣ್ಣು – 2 ದಿನಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ Read More »

ಕರ್ನಾಟಕ

ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. 2023-24 ನೇ ಸಾಲಿನ ಮುಖ್ಯಮಂತ್ರಿ ವಿಶೇಷ ಅನುದಾನ ಯೋಜನೆಯಡಿ ಮಠ, ದೇವಸ್ಥಾನಗಳಿಗೆ 20 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೇ ಮೊದಲ ಬಾರಿಗೆ ದೇವಸ್ಥಾನಗಳ ಜೊತೆಗೆ ಮಠಗಳಿಗೂ ಅನುದಾನ ನೀಡಲು ಮುಂದಾಗಿದ್ದಾರೆ. ತಮ್ಮ ಹಿಂದಿನ ಅವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಮಠಗಳಿಗೆ ಅನುದಾನ ನೀಡುತ್ತಿರಲಿಲ್ಲ. ಈ ಬಾರಿ ಮಠಗಳಿಗೂ ಅನುದಾನ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ರಾಜ್ಯದ ಪ್ರಮುಖ ಮಠಗಳಾದ ಆದಿಚುಂಚನಗಿರಿ, ಸಿದ್ದಗಂಗಾ ಹಾಗೂ ಕಾಗಿನೆಲೆ ಕನಕ

ಮಠ, ದೇವಸ್ಥಾನಗಳಿಗೆ ಸಿಎಂ ಸಿದ್ದರಾಮಯ್ಯ 20 ಕೋಟಿ ರೂ. ಅನುದಾನ ಘೋಷಣೆ Read More »

ಕರ್ನಾಟಕ

ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.27. ಬನಶಂಕರಿ ಡಿಪೋಗೆ ಸೇರಿದ ಬಿಎಂಟಿಸಿ ಬಸ್ ನಲ್ಲಿ ಟಿಕೇಟ್ ತೆಗೆದುಕೊಳ್ಳಿ ಎಂದಿದ್ದಕ್ಕೆ ಯುವತಿ ಕಂಡಕ್ಟರ್ ಜೊತೆ ಜಗಳಕ್ಕಿಳಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಯುವತಿ ತಾನು ಸರ್ಕಾರಿ ಉದ್ಯೋಗಿ ಎಂದು ಹೇಳಿಕೊಂಡಿದ್ದು, ಟಿಕೆಟ್ ತೆಗೆದುಕೊಳ್ಳಲು ನಿರಾಕರಿಸಿ ಕಂಡಕ್ಷರ್ ಬಳಿ ಜಗಳವಾಡಿದ್ದಾಳೆ ಎಂದು ತಿಳಿದುಬಂದಿದೆ. ತನ್ ಬಳಿ ಸರ್ಕಾರದ ಐಡಿ ಕಾರ್ಡ್ ಇದ್ದು, ಏನ್ ಮಾಡ್ತಿಯಾ ಮಾಡ್ಕೋ ಎಂದು ದಬಾಯಿಸಿದ್ದಾಳೆ ಎನ್ನಲಾಗಿದೆ. ಗುರುತಿನ ಚೀಟಿ ತೋರಿಸಿ ಎಂದಿದ್ದಕ್ಕೆ ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾಳೆ.  

ಐಡಿ ಕೇಳಿದ್ದಕ್ಕೆ ಕಂಡಕ್ಟರ್ ಗೆ ಅವಾಚ್ಯ ಶಬ್ದಗಳಿಂದ ದಬಾಯಿಸಿದ ಯುವತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top