kasaragodu

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 27. ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ ೭೨ ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಅರ್ಜುನ್ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಅಂತಿಮ ನಮನ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕೆ . ಇಂಪಾಶೇಖರ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ . ಶಿಲ್ಪಾ ಮೊದಲಾದವರು ಪುಷ್ಪ ಚಕ್ರ ಅರ್ಪಿಸಿದರು. ಹೊಸ ಬಸ್ಸು ನಿಲ್ದಾಣ ಪರಿಸರದಲ್ಲಿ ತಡರಾತ್ರಿಯಾದಾರೂ ನೂರಾರು ಮಂದಿ ಅಂತಿಮ ನಮನ ಸಲ್ಲಿಸಿದರು.  

ಅರ್ಜುನ್ ಪಾರ್ಥಿವ ಶರೀರಕ್ಕೆ ಜಿಲ್ಲಾಡಳಿತ ವತಿಯಿಂದ ಅಂತಿಮ ನಮನ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 25. ಅನಿಲ ಸಾಗಾಟದ ಟ್ಯಾಂಕರ್ ಲಾರಿ ರಸ್ತೆಗೆ ಮಗುಚಿ ಬಿದ್ದ ಘಟನೆ ಎಡನೀರು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮಂಗಳೂರಿನಿಂದ ಕೊಚ್ಚಿಗೆ ತೆರಳುತ್ತಿದ್ದ ಟ್ಯಾಂಕರ್ ಎಡನೀರು ಕೋರಿಕ್ಕಾರ್ ಮೂಲೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕಾಸರಗೋಡು ಅಗ್ನಿ ಶಾಮಕ ದಳದ ಸಿಬ್ಬಂದಿಗಳು, ವಿದ್ಯಾನಗರ ಠಾಣಾ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಮಂಗಳೂರಿನಿಂದ ಕಂಪೆನಿ ಅಧಿಕಾರಿಗಳು ಬಂದ ಬಳಿಕ ಟ್ಯಾಂಕರ್ ನ್ನು ತೆರವುಗೊಳಿಸುವ ಅಥವಾ ಅನಿಲವನ್ನು ಇನ್ನೊಂದು ಟ್ಯಾಂಕರ್

ಚಾಲಕನ ನಿಯಂತ್ರಣ ತಪ್ಪಿ ಅನಿಲ ಟ್ಯಾಂಕರ್ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಕಾಸರಗೋಡು, ಸೆ. 23. ಅಮೀಬಾ ಸೋಂಕಿ (ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್)ನಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ವರದಿಯಾಗಿದೆ. ಮೃತಪಟ್ಟವರನ್ನು ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಕಾರಣ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ನಡೆಸಿದ ತಪಾಸಣೆಯಿಂದ ಅಮಿಬಿಕ್ ಸೋಂಕು ದೃಢಪಟ್ಟಿತ್ತು. ಮುಂಬೈಯಿಂದ ಸೋಂಕು ತಗಲಿರಬಹುದು ಎಂದು

ಅಮೀಬಾ ಸೋಂಕಿನಿಂದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚಳ ನದಿ ತೀರವಾಸಿಗಳು ಮುಂಜಾಗ್ರತೆ ವಹಿಸುವಂತೆ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 30. ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚುತ್ತಿರುವುದರಿಂದ ನದಿ ತೀರವಾಸಿಗಳು ಮುಂಜಾಗ್ರತಾ ವಹಿಸುವಂತೆ ರಾಜ್ಯ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ ನೀಡಿದೆ ಎನ್ನಲಾಗಿದೆ. ರಾಜ್ಯ ಜಲ ಸಂಪನ್ಮೂಲ ಇಲಾಖೆಯ ಕಾಸರಗೋಡು ಜಿಲ್ಲೆಯ ಸ್ಟೇಶನ್ ನಲ್ಲಿ ಜಲಮಟ್ಟ ಮುನ್ನೆಚ್ಚರಿಕೆ ವ್ಯಾಪ್ತಿ ದಾಟಿರುವುದರಿಂದ ಮಂಜೇಶ್ವರ ನದಿ ತೀರದಲ್ಲಿ ವಾಸಿಸುವವರು ಮುನ್ನೆಚ್ಚರಿಕೆ ವಹಿಸಬೇಕು, ಯಾವುದೇ ಕಾರಣಕ್ಕೆ ನದಿಗೆ ಇಳಿಯುವುದು, ನದಿ ದಾಟುವ ಪ್ರಯತ್ನ ಮಾಡಬಾರದು. ದಿಡೀರ್ ಪ್ರಳಯ ಸಾಧ್ಯತೆ ಇರುವುದರಿಂದ ಅಗತ್ಯ ಬಿದ್ದಲ್ಲಿ ಈ ಪ್ರದೇಶದಿಂದ

ಉಪ್ಪಳ ನದಿಯಲ್ಲಿ ಜಲಮಟ್ಟ ಹೆಚ್ಚಳ ನದಿ ತೀರವಾಸಿಗಳು ಮುಂಜಾಗ್ರತೆ ವಹಿಸುವಂತೆ ವಿಪತ್ತು ನಿವಾರಣಾ ಪ್ರಾಧಿಕಾರ ಮುನ್ನೆಚ್ಚರಿಕೆ Read More »

ಕರಾವಳಿ

ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ನೇಮಕ

(ನ್ಯೂಸ್ ಕಡಬ) newskadaba.c0m ಕಾಸರಗೋಡು, ಆ. 24. ಕಾಸರಗೋಡು ಜಿಲ್ಲಾ ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ಅಧಿಕಾರ ವಹಿಸಿಕೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಪಿ . ಬಿಜೋಯ್ ರವರನ್ನು ತಿರುವನಂತಪುರಕ್ಕೆ ವರ್ಗಾಹಿಸಲಾಗಿದ್ದು , ಇವರ ಬದಲಿಗೆ ಶಿಲ್ಪಾ ರವರನ್ನು ನೇಮಿಸಲಾಗಿದೆ. ಶಿಲ್ಪಾ ಎರಡನೇ ಬಾರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಶಿಲ್ಪಾ 2020 ರಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ದಕ್ಷ ಸೇವೆ ನೀಡಿದ್ದು, ಬಳಿಕ 2021 ರಲ್ಲಿ ವರ್ಗಾವಣೆಗೊಳಿಸಲಾಗಿತ್ತು ಎನ್ನಲಾಗಿದೆ.  

ನೂತನ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ಮೂಲದ ಡಿ .ಶಿಲ್ಪಾ ನೇಮಕ Read More »

ಕರಾವಳಿ

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಜು.23. ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ. ಮೃತರನ್ನು ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( 52) ಗುರುತಿಸಲಾಗಿದೆ. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ

(ನ್ಯೂಸ್ ಕಡಬ)newskadaba@gmail.comಕಾಸರಗೋಡು,  ( ಜೂ 06) ಅಕ್ರಮ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಓರ್ವನನ್ನು ಡಿವೈಎಸ್ಪಿಪಿ ಬಾಲಕೃಷ್ಣನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ ಬೇಕಲ ಸಮೀಪದ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಚಿತ್ತಾರಿಯ ನಿಜಾರ್ (36) ಎಂಬಾತನನ್ನು ಬಂಧಿಸಲಾಗಿದೆ. ಕಾರಿನಲ್ಲಿದ್ದ 858 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಕಾರಿನಲ್ಲಿ ಬರುತ್ತಿದ್ದಾಗ ತಪಾಸಣೆ ನಡೆಸಿದಾಗ, ಬ್ಯಾಗ್ ನಲ್ಲಿ ಕಂಡುಬಂದಿದೆ ಎಂದು ವರದಿ

ಲೈಟ್‌ನೊಳಗೆ ಬಚ್ಚಿಟ್ಟು ಚಿನ್ನ ಸಾಗಾಟ Read More »

ಕರಾವಳಿ

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು

(ನ್ಯೂಸ್ ಕಡಬ)newskadaba.com ಮಂಜೇಶ್ವರ, ಫೆ.07. ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು ನಗದು ಮತ್ತು 11 ಸಾವಿರ ರೂ. ಮೌಲ್ಯದ ಬೆಲೆ ಬಾಳುವ ವಾಚ್ ಕಳವುಗೈದ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಬ್ದುಲ್ ಹಮೀದ್ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ ಎಂದು ತಿಳಿದುಬಂದಿದೆ. ಹಮೀದ್ ಮತ್ತು ಕುಟುಂಬಸ್ಥರು ಮನೆಗೆ ಬೀಗ ಹಾಕಿ ನಾಲ್ಕು ದಿನಗಳ ಹಿಂದೆ ಬೆಂಗಳೂರಿಗೆ ತೆರಳಿದ್ದರು. ಈ ನಡುವೆ ಕಳವು ನಡೆದಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಕಾಸರಗೋಡು: ಮನೆಯ ಬೀಗ ಮುರಿದು ನಗ ನಗದು ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಾಕ್ಟರ್ ಮಗುಚಿ ಚಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com  ಕಾಸರಗೋಡು, ಜ.13. ಟ್ರಾಕ್ಟರೊಂದು ಮಗುಚಿ ಬಿದ್ದ ಪರಿಣಾಮ ಚಾಲಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಚಾಲಕನನ್ನು ನೇಪಾಳದ ರುನ್ಕಾವ್ ನಿವಾಸಿ ಸುರೇಶ್ ಪೊನ್ ಎಂದು ಗುರುತಿಸಲಾಗಿದೆ.   ಕಾಸರಗೋಡಿನ ಪೈವಳಿಕೆ- ಚೇವಾರ್ ರಸ್ತೆಯಲ್ಲಿರುವ ಕಟ್ಟದಮನೆ ಸೇತುವೆ ಬಳಿ ಕಂಪ್ರೆಸರ್ ಟ್ರಾಕ್ಟರ್ ಮಗುಚಿ ಬಿದ್ದಿದ್ದು, ಟ್ರ್ಯಾಕ್ಚರ್ ಮಗುಚಿ ಬಿದ್ದಾಗ ಸುರೇಶ್ ಅವರು ಅದರಡೆಯಲ್ಲಿ ಸಿಲುಕಿದ್ದು. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಈತ

ಟ್ರಾಕ್ಟರ್ ಮಗುಚಿ ಚಾಲಕ ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 02. ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಎಂದು ಗುರುತಿಸಲಾಗಿದೆ. ಚೆರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ಸಂಭವಿಸಿದೆನ್ನಲಾಗಿದೆ. ಬಸ್ ಡಿಕ್ಕಿಯಾದ ವೇಳೆ ಮಗುವಿನ ಜೊತೆಗಿದ್ದ ತಾಯಿಯು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top