Kashmir

ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

(ನ್ಯೂಸ್ ಕಡಬ) newskadaba.com, ಜೂ.06. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿ ನಡೆದ ಬಳಿಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದ್ದು, ನಿರಂತರವಾಗಿ ಭಯೋತ್ಪಾದರ ಅಡ್ಡೆಗಳ ಮೇಲೆ ನಿರಂತರ ದಾಳಿ ನಡೆಸಲಾಗುತ್ತಿದೆ. ಇದೀಗ ಎನ್‌ಐಎ ಕಾಶ್ಮೀರದ 32 ಕಡೆಗಳಲ್ಲಿ ದಾಳಿ ನಡೆಸಿದ್ದು, ಮದ್ದುಗುಂಡುಗಳು ಹಾಗೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ಶಾಖೆಗಳಿಂದ ನಡೆಯುತ್ತಿರುವ ಭಯೋತ್ಪಾದಕ ಪಿತೂರಿಯ ವಿರುದ್ಧ ನಡೆಯುತ್ತಿರುವ ತನಿಖೆಯ ಭಾಗವಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಕಾಶ್ಮೀರ ಕಣಿವೆಯ […]

ಕಾಶ್ಮೀರ: 32 ಕಡೆಗಳಲ್ಲಿ ಎನ್ಐಎ ದಾಳಿ-ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ Read More »

ಕರಾವಳಿ

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್

(ನ್ಯೂಸ್ ಕಡಬ) newskadaba.com , ಮೇ.13. ಶ್ರೀನಗರ: ಏ. 22 ರಂದು ಪಹಲ್ಗಾಮ್‌ನಲ್ಲಿ ನಡೆದ ದಾಳಿ ಬಳಿಕ ಉಗ್ರರ ವಿರುದ್ಧ ಕಾರ್ಯಾಚರಣೆ ಜೋರಾಗಿದೆ. ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿದ್ದ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಗಾಗಿ ಶೋಧ ಮತ್ತಷ್ಟು ಹೆಚ್ಚಾಗಿದೆ. ಮಂಗಳವಾರ ಶೋಪಿಯಾನ್‌ನ ಜಿನ್‌ಪಥರ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಒಬ್ಬ ಲಷ್ಕರ್-ಎ-ತೈಬಾ ಭಯೋತ್ಪಾದಕ ಹತನಾಗಿದ್ದಾನೆ ಎಂದು ತಿಳಿದು ಬಂದಿದೆ. ಇತರ

ಕಾಶ್ಮೀರದಲ್ಲಿ ಸೇನಾ ಕಾರ್ಯಚರಣೆ; ಓರ್ವ ಉಗ್ರನ ಎನ್ ಕೌಂಟರ್ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com , ಸಾಂಗ್ಲಿ, ನ. 09.: ಜಗತ್ತಿನ ಯಾವ ಶಕ್ತಿಯೂ ಸಹ  ಜಮ್ಮು ಮತ್ತು ಕಾಶ್ಮೀರಕ್ಕೆ ಪುನಃ ಸಂವಿಧಾನದ 370ನೇ ವಿಧಿಯಡಿ ವಿಶೇಷ ಸ್ಥಾನಮಾನವನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಮತ್ತೊಂದೆಡೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಇರಲಿ, ಅವರ ಮುಂದಿನ 4 ತಲೆಮಾರಿಗೂ 370ನೇ ವಿಧಿ ಮರು ಜಾರಿ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೂಡ ಅಬ್ಬರಿಸಿದ್ದಾರೆ. ವಿಶೇಷ ಸ್ಥಾನಮಾನದ ಕುರಿತು ಅಧಿವೇಶನದಲ್ಲಿ ತೀವ್ರ

ವಿಶ್ವದ ಯಾವ ಶಕ್ತಿಯೂ ಜಮ್ಮು ಕಾಶ್ಮೀರದ 370ನೇ ವಿಧಿ ವಾಪಾಸ್ ತರಲಾಗದು: ಪ್ರಧಾನಿ ಮೋದಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು

(ನ್ಯೂಸ್ ಕಡಬ) newskadaba.com ಅ.24, ಕಾಶ್ಮೀರ: ಸ್ಥಳೀಯರಲ್ಲದವರ ಮೇಲಿನ ಮತ್ತೊಂದು ದಾಳಿಯಲ್ಲಿ, ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದ ಬಟಗುಂಡ್‌ನಲ್ಲಿ ಅಕ್ಟೋಬರ್ 24 ರ ಗುರುವಾರ ಬೆಳಿಗ್ಗೆ ವಲಸೆ ಕಾರ್ಮಿಕರ ಮೇಲೆ ಗುಂಡು ಹಾರಿಸಲಾಗಿದೆ. ಕಾರ್ಮಿಕ ಶುಭಂ ಕುಮಾರ್ ಉತ್ತರ ಪ್ರದೇಶದ ಬಿಜ್ನೋರ್ ಪ್ರದೇಶದವರಾಗಿದ್ದು, ಶಂಕಿತ ಉಗ್ರರ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಬಟಗುಂಡ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿದಾಗ ಶುಭಂ ಕುಮಾರ್ ತೋಳಿಗೆ ಗುಂಡೇಟಿನಿಂದ ಗಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಮಾರ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು

ಉತ್ತರಪ್ರದೇಶದ ಕಾರ್ಮಿಕರ ಮೇಲೆ ಗುಂಡು ಹಾರಿಸಿದ ಉಗ್ರರು Read More »

ಬ್ರೇಕಿಂಗ್ ನ್ಯೂಸ್

ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ

(ನ್ಯೂಸ್ ಕಡಬ)newskadaba.com ಶ್ರೀನಗರ, ಆ.04. ಜಮ್ಮು ಮತ್ತು ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಸೇನಾ ಯೋಧನನ್ನು ಪೊಲೀಸರು ಇದೀಗ ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸರು ಮಾಹಿತಿ ನೀಡಿದ್ದು, ನಾಪತ್ತೆಯಾಗಿದ್ದ ಜಾವೆದ್ ಅಹ್ಮದ್ ವಾನಿ (25) ಎಂಬ ಸೇನಾ ಯೋಧನನ್ನು ಕುಲ್ಗಾಮ್ ವಶಪಡಿಸಿಕೊಳ್ಳಲಾಗಿದ್ದು, ವೈದ್ಯಕೀಯ ತಪಾಸಣೆಯ ನಂತರ ಜಂಟಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. ಯೋಧನ ನಾಪತ್ತೆ ಪ್ರಕರಣದ ಬಗ್ಗೆ ಪೊಲೀಸರು ಈ ಹಿಂದೆ ಯಾವುದೇ ವಿವರಗಳನ್ನು ಬಹಿರಂಗಪಡಿಸಿರಲಿಲ್ಲ. ಆದರೂ ಅವರನ್ನು ಭಯೋತ್ಪಾದಕರು ಅಪಹರಿಸಿರಬಹುದು ಎಂಬ

ಕಾಶ್ಮೀರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಭಾರತೀಯ ಯೋಧ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ,ಜೂ.3. ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಭಾರತೀಯ ಸೇನೆಯ ವಾಹನಗಳ ಸಾಲಿನ ಮೇಲೆ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕಾಜಿಗುಂದ್ ಪ್ರದೇಶದ ಲೋವರ್ ಮುಂಡಾ ಎಂಬಲ್ಲಿ ಶನಿವಾರ ಬೆಳಿಗ್ಗೆ 11:15ರ ಸುಮಾರಿಗೆ ಈ ದಾಳಿ ನಡೆದಿದೆ. ಸೇನೆಯ ವಾಹನಗಳ ಸಾಲಿನಲ್ಲಿ ಸಾಗುತ್ತಿದ್ದ ವಾಹನವೊಂದರ ಮೇಲೆ ಭಯೋತ್ಪಾ ದಕರು ಎಕೆ

ಸೇನಾ ವಾಹನಗಳ ಮೇಲೆ ಭಯೋತ್ಪಾದಕರ ದಾಳಿ: ಇಬ್ಬರು ಯೋಧರು ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್
Scroll to Top