ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 30. ವಿಧಾನ ಪರಿಷತ್‌ನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‍ನ ನೂತನ ಸದಸ್ಯರಾಗಿ ಪ್ರಮಾಣವಚನ ಪ್ರಮಾಣವಚನ ಸ್ವೀಕರಿಸಿದರು. ಇಂದು ವಿಧಾನಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಿಶೋರ್ ಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ವಿಧಾನ ಪರಿಷತ್‍ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಸೇರಿದಂತೆ ಶಾಸಕರು, ವಿಧಾನ ಪರಿಷತ್‍ನ ಸದಸ್ಯರು ಉಪಸ್ಥಿತರಿದ್ದರು.      

ವಿಧಾನಪರಿಷತ್ತಿನ ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ Read More »

ಕರ್ನಾಟಕ