kodagu

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ

(ನ್ಯೂಸ್‌ ಕಡಬ) newskadaba.com,  ಅ.16:  ಕಾವೇರಿಯ ಪವಿತ್ರ ತೀರ್ಥೋದ್ಭವ ನಾಳೆ (ಅಕ್ಟೋಬರ್ 17) ಕೊಡಗು ಜಿಲ್ಲೆಯ ಭಾಗಮಂಡಲದ ತಲಕಾವೇರಿಯ ಶ್ರೀ ಭಗಂಡೇಶ್ವರ- ತಲಕಾವೇರಿ ದೇವಾಲಯದ ಪುಷ್ಕರಿಣಿಯಲ್ಲಿ ಜರುಗಲಿದೆ. ಹೊರ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಭಾಗಮಂಡಲದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯಗಳಲ್ಲಿ ಸಂಪ್ರದಾಯದಂತೆ, ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಯು ಅ.17ರಂದು ನಡೆಯಲಿದೆ. ಮಧ್ಯಾಹ್ನ 1 ಗಂಟೆ 44 […]

ನಾಳೆ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು

(ನ್ಯೂಸ್‌ ಕಡಬ) newskadaba.com, ಆ.07:‌ ಕಾಡಾನೆ ದಾಳಿ ವೃದ್ದರೊಬ್ಬರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಚೆಂಬು ಗ್ರಾಮದ ದಬ್ಬಡ್ಕದ ಬಳಿ ಕಾಡಾನೆ ದಾಳಿ ನಡೆಸಿದ್ದು, ಕೊಪ್ಪದ ಮನೆ ನಿವಾಸಿ ಶಿವಪ್ಪ(72) ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್‌ ಪೂವಯ್ಯ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ತಕ್ಷಣ ಆನೆಯನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಕಾಡಾನೆ ದಾಳಿಗೆ ವೃದ್ದ ಮೃತ್ಯು Read More »

ಕರ್ನಾಟಕ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ

(ನ್ಯೂಸ್ ಕಡಬ) newskadaba.com, ಜು. 10. ರಾಜ್ಯದಲ್ಲಿ ಹೃದಯಾಘಾತದಿಂದ ಸರಣಿ ಸಾವು ಮುಂದುವರಿದಿದೆ. ಹಿರಿಯ ಜೀವಗಳು, ಎಳೇ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಮೈಸೂರಿನಲ್ಲಿ 28 ವರ್ಷದ ಯುವಕ ಹೃದಯಾಘಾತಕ್ಕೆ ಬಲಿಯಾಗಿದ್ರೆ, ಕೊಡಗಿನಲ್ಲಿ 58 ವರ್ಷದ ಮಹಿಳೆ ಜೀವ ತೆತ್ತಿದ್ದಾರೆ. ಇಲ್ಲಿನ ಚಾಮರಾಜ ಮೊಹಲ್ಲಾದ ನಿವಾಸಿ ದರ್ಶನ್‌ ಚೌದ್ರಿ (28) ಮೃತ ದುರ್ದೈವಿ. ದೇವರಾಜ ಮೊಹಲ್ಲಾದಲ್ಲಿ ಬಣ್ಣದ ಅಂಗಡಿ ಮಾಲೀಕನಾಗಿದ್ದ ದರ್ಶನ್‌ಗೆ ನಿನ್ನೆ ರಾತ್ರಿ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಪೋಷಕರು ತಕ್ಷಣ ಆಸ್ಪತ್ರೆಗೆ

ಮೈಸೂರು, ಕೊಡಗಿನಲ್ಲಿ ಹೃದಯಾಘಾತಕ್ಕೆ ಮತ್ತೆರಡು ಬಲಿ Read More »

ಆರೋಗ್ಯ ಮಾಹಿತಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಡಿ ದಾಳಿ- ವ್ಯಕ್ತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 18. ಜಗತ್ತಿನಲ್ಲಿ ಮಾನವ ಹಾಗೂ ಪ್ರಾಣಿ ಸಂಘರ್ಷ ಇಂದು ನಿನ್ನೆಯದಲ್ಲ. ಆದರೆ, ಇತ್ತೀಚೆಗೆ ಮನುಷ್ಯ ತನ್ನ ಸ್ವಾರ್ಥಕ್ಕೋಸ್ಕರ ಅರಣ್ಯ ಸಂಪತ್ತಿಗೆ ಹೆಚ್ಚು ಹಾನಿ ಉಂಟು ಮಾಡುತ್ತಿದ್ದಂತೆ ಕಾಡು ಪ್ರಾಣಿಗಳು ಊರಿನ ಕಡೆ ಲಗ್ಗೆಯಿಡಲು ಪ್ರಾರಂಭಿಸಿದ್ದು, ಇತ್ತೀಚಿನ ದಿನಗಳಲ್ಲಿ ರಾಜ್ಯದಾದ್ಯಂತ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾಗುತ್ತಿದೆ. ಇದರಿಂದ ಸಾರ್ವಜನಿಕರು ಹೈರಾಣಾಗಿ ಹೋಗಿದ್ದಾರೆ. ಅದೇ ರೀತಿ ಇದೀಗ ಕರಡಿಯೊಂದು ವ್ಯಕ್ತಿಯೋರ್ವನ ಮೇಲೆ ದಾಳಿ ನಡೆಸಿ ಭೀಕರ ಗಾಯಗೊಳಿಸಿದ ಘಟನೆ ಮಡಿಕೇರಿಯ ಪೊನ್ನಂಪೇಟೆ ತಾಲೂಕು, ಬಾಳಲೆ

ಕರಡಿ ದಾಳಿ- ವ್ಯಕ್ತಿ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com, ಮೇ.27. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು ಮರ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅಮತ್ತಿ ಹೋಬಳಿ ಬಾಡಗ ಬಾಣಂಗಾಲ ಗ್ರಾಮದ ಜನತಾ ಕಾಲನಿಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಸ್ಥಳೀಯ ನಿವಾಸಿ ಪಿಸಿವಿಷ್ಟು ಬೆಳ್ಳಿಯಪ್ಪ (65) ಮೃತಪಟ್ಟವರು. ಇಂದು ಬೆಳಗ್ಗೆ 730ರ ಸುಮಾರಿಗೆ ವಿಷ್ಣು ಬೆಳ್ಳಿಯಪ್ಪರ ಮೇಲೆ ಮಾವಿನಮರ ಉರುಳಿಬಿದ್ದಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಗ್ರೇಡ್ 2 ತಹಶೀಲ್ದಾರರು ಕಂದಾಯ

ಕೊಡಗಿನಲ್ಲಿ ಗಾಳಿ-ಮಳೆ: ಮರ ಬಿದ್ದು ಓರ್ವ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com , ಮಾ.28: ಕೊಡಗು: ಜಿಲ್ಲೆಯಲ್ಲಿ ಭೀಕರ ಹತ್ಯಾಕಾಂಡ ನಡೆದಿದೆ. ಪತ್ನಿಗೆ ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಳುತೋಡು ಗ್ರಾಮದಲ್ಲಿ ನಡೆದಿದೆ. ಕರಿಯ (75), ಗೌರಿ (70), ನಾಗಿ (35) ಹಾಗೂ 8 ವರ್ಷದ ಕಾವೇರಿಯನ್ನು ಕತ್ತಿಯಿಂದ ಹಲ್ಲೆಗೈದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ (35) ಆರೋಪಿಯಾಗಿದ್ದು, ಈತ ಸದ್ಯ ನಾಪತ್ತೆಯಾದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..!

(ನ್ಯೂಸ್ ಕಡಬ) newskadaba.com ನ. 13. ಬರೋಬ್ಬರಿ 18 ವರ್ಷಗಳ ಹಿಂದೆ ಕೆಲಸ ಮಾಡುತ್ತಿದ್ದ ಮನೆ ಮಾಲೀಕನಿಂದ ಹತ್ಯೆಯಾಗಿದ್ದ ಬಾಲಕಿಯ ತಲೆಬುರುಡೆಯನ್ನು ಧಾರ್ಮಿಕ ವಿಧಿ ವಿಧಾನದಂತೆ ಅಂತ್ಯಸಂಸ್ಕಾರ ಮಾಡಲು ಪೋಷಕರು ಸ್ವೀಕರಿಸಿದ ಘಟನೆ ಕಾಸರಗೋಡು ನ್ಯಾಯಾಲಯದಲ್ಲಿ ನಡೆದಿದೆ.   ಗೋವಾದಲ್ಲಿ ಗುತ್ತಿಗೆದಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾಸರಗೋಡಿನ ಮುಳಿಯಾರ್ ನಿವಾಸಿ ಕೆ.ಸಿ.‌ ಹಂಝ ಎಂಬವರ ಮನೆಯಲ್ಲಿ ಹದಿನೆಂಟು ವರ್ಷಗಳ ಹಿಂದೆ ಕರ್ನಾಟಕದ ಕೊಡಗು ಜಿಲ್ಲೆಯ ಅಯ್ಯಂಗೇರಿ ನಿವಾಸಿ 13ನೇ ವಯಸ್ಸಿನ ಸಫಿಯಾ ಕೆಲಸಕ್ಕಿದ್ದಳು. ಮನೆಗೆಲಸ ಮಾಡುತ್ತಿದ್ದ ಸಫಿಯಾಳಿಗೆ ಕೆಲಸದ

ಕೊಲೆಯಾದ 18 ವರ್ಷಗಳ ನಂತರ ಪೋಷಕರಿಂದ ಬಾಲಕಿಯ ಅಸ್ಥಿಪಂಜರ ಅಂತ್ಯಕ್ರಿಯೆ..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಆ. 07. ಮರದಿಂದ ಬಿದ್ದು ಪೊಲೀಸ್​ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಸಿಬ್ಬಂದಿಯನ್ನು ಲೋಕೇಶ್ (40)  ಎಂದು ಗುರುತಿಸಲಾಗಿದೆ. ಲೋಕೇಶ್​ ಅವರು ಮಾವಿನ ಮರ ಕಸಿ ಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ​ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು. 14. ಆಸ್ತಿಗಾಗಿ ಸಹೋದರರ ನಡುವೆ ಗಲಾಟೆ ಉಂಟಾಗಿ ತಮ್ಮನೋರ್ವ ಅಣ್ಣನನ್ನೇ ಕೊಲೆಗೈದ ಭೀಕರ ಘಟನೆ ಕೊಡಗು ಜಿಲ್ಲೆಯ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಉಸ್ಮಾನ್ ಎಂದು ಗುರುತಿಸಲಾಗಿದೆ. ಇವರು ಶುಕ್ರವಾರದಂದು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದು, ಸಿಟ್ಟಿಗೆದ್ದ ತಮ್ಮ ಅಣ್ಣ ಉಸ್ಮಾನ್ ಅವರಿಗೆ ಚೂರಿಯಿಂದ ಚುಚ್ಚಿದ್ದು, ಈ ವೇಳೆ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ

ಜಾಗದ ವಿವಾದ- ಅಣ್ಣನನ್ನೇ ಕೊಲೆಗೈದ ತಮ್ಮ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top