koila

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ

(ನ್ಯೂಸ್ ಕಡಬ) newskadaba.com ಕಡಬ, ಸೆ. 14. 2025ರ ಸೆಪ್ಟೆಂಬರ್ ತಿಂಗಳಿನಲ್ಲಿ ಉಪ್ಪಿನಂಗಡಿ ಸಮೀಪದ ಕೊಯಿಲದಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭವಾಗಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಈ ಕುರಿತು ಸೆ. 13ರ ಶುಕ್ರವಾರದಂದು ಬೆಂಗಳೂರಿನಲ್ಲಿ ಪಶುಸಂಗೋಪನಾ ಇಲಾಖೆಯ ಪ್ರಮುಖರನ್ನು ಭೇಟಿಯಾದ ಶಾಸಕರು, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಈಗಾಗಲೇ ಅಲ್ಲಿ ನಿರ್ಮಾಣವಾಗಿರುವ ಕಟ್ಟಡಗಳು ಖಾಲಿ ಬಿದ್ದಿದ್ದು, ಇದೇ ಕಟ್ಟಡವನ್ನು ನವೀಕರಣ ಮಾಡಿ ಮೂಲಭೂತ ಸೌಕರ್ಯಗಳಿಗಾಗಿ ಸರಕಾರ […]

ಕೊಯಿಲ ಪಶುವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಗ್ರೀನ್ ಸಿಗ್ನಲ್ – ಹಂದಿ, ಕುರಿ ಸಾಕಾಣಿಕೆಗೂ ಅವಕಾಶ Read More »

ಕರಾವಳಿ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ಡಿ. 20. ದ.ಕ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ನ ಸಹಯೋಗದೊಂದಿಗೆ ಎಂಡೋ ಸಲ್ಫಾನ್ ಸಂತ್ರಸ್ಥರ ಮತ್ತು ವಿಕಲಚೇತನರ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರದಂದು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು, ಪೆರಾಬೆ

ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !!

(ನ್ಯೂಸ್ ಕಡಬ)newskadaba.com ಸಂಪ್ಯ, ಜ.20. ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಡಬ ಮೂಲದ  ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೊಯಿಲ ಗ್ರಾಮದ ಕಲಾಯಿ ನಿವಾಸಿಯಾಗಿದ್ದು ಪ್ರಸ್ತುತ ಮಂಜೇಶ್ವರ ಉಪ್ಪಳ ಗ್ರಾಮದ ಕೈಕಂಬ ಜಂಕ್ಷನ್ ಇಂಡಿಯನ್ ಗ್ಯಾರೇಜ್ ಬಳಿ ವಾಸವಿರುವ ಇಬ್ರಾಹಿಂ ಖಲಂದರ್ ಯಾನೆ ಇಬ್ರಾಹಿಂ ಬಂಧಿತ ಆರೋಪಿ. ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಸಂಪ್ಯ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಉದಯರವಿ ಅವರ ಸಲಹೆಯಂತೆ ಗ್ರಾಮಾಂತರ ಠಾಣಾ ಹೆಡ್‌ಕಾನ್‌ ಸ್ಟೇಬಲ್‌ಗಳಾದ ಹರೀಶ್, ಪ್ರವೀಣ್ ಮತ್ತು ಕಾನ್‌ಸ್ಟೇಬಲ್ ಸಚಿನ್‌ರವರು ಜ.19ರಂದು ಕಾಸರಗೋಡು ವಿದ್ಯಾನಗರದಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !! Read More »

ಕರಾವಳಿ, ಕ್ರೈಮ್ ನ್ಯೂಸ್

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ,ಜ. 04. ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಹಳ್ಳಿ ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಸ್‌.ಡಿಪಿಐ ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಮಾತನಾಡಿ ಲೋ ವೋಲ್ಟೇಜ್ ಸಮಸ್ಯೆ ಇವತ್ತು ನಿನ್ನೆಯದಲ್ಲ, ಹಲವಾರು ವರ್ಷಗಳಿಂದ ಮೆಸ್ಕಾಂ ಗೆ ಎಸ್‌.ಡಿಪಿಐ ಸೇರಿದಂತೆ ಹಲವಾರು ನಾಗರಿಕರು

ಆತೂರು: ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಎಸ್‌.ಡಿಪಿಐ ಆತೂರು ವಲಯದ ವತಿಯಿಂದ ಮೆಸ್ಕಾಂ ಗೆ ಮನವಿ Read More »

ಕರಾವಳಿ, ಕರ್ನಾಟಕ

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಕೊಯಿಲ: ಸಬಳೂರು ಶ್ರೀರಾಮ ಭಜನಾ ಮಂಡಳಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ಜೂ.21. ಕಡಬ ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋದ್ಯನಗರ ಶ್ರೀ ರಾಮ ಭಜನಾ ಮಂಡಳಿ ವತಿಯಿಂದ ಲಡಕ್ ಗಡಿ ಭಾಗದಲ್ಲಿ ಚೀನಾ ಯೋಧರೊಂದಿಗೆ ಹೋರಾಡಿ ದೇಶಕ್ಕಾಗಿ ಬಲಿದಾನಗೈದಿರುವ ನಮ್ಮ ದೇಶದ ಇಪ್ಪತ್ತು ವೀರ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಶನಿವಾರ ಭಜನಾ ಮಂದಿರದಲ್ಲಿ ನಡೆಯಿತು. ವೀರ ಮರಣವನ್ನಪ್ಪಿದ ಯೋಧರಿಗೆ ನುಡಿನಮನ ಸಲ್ಲಿಸಿ, ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಲಾಯಿತು. ಆಲಂಕಾರು ಸಿ . ಎ ಬ್ಯಾಂಕ್ ನಿರ್ದೇಶಕ ರಾಮಚಂದ್ರ ನಾಯ್ಕ ಏಣಿತ್ತಡ್ಕ, ಶ್ರೀ

ಕೊಯಿಲ: ಸಬಳೂರು ಶ್ರೀರಾಮ ಭಜನಾ ಮಂಡಳಿ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ Read More »

ಕರಾವಳಿ

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.7., ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊೈಲ-ಹಿರೇಬಂಡಾಡಿ-ಉಪ್ಪಿನಂಗಡಿ ರಸ್ತೆಯಲ್ಲಿ ಕೊೈಲದಿಂದ ನೆಹರುತೋಟ ತನಕದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಿತು. ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಈ ರಸ್ತೆಯ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1.25 ಕೋಟಿ ರೂಪಾಯಿ ಅನುದಾನ ಮಂಜೂರು ಆಗಿದ್ದು, ಈ ಭಾಗದ ಜನರ ಬಹುಕಾಲದ ಸಮಸ್ಯೆಯೊಂದು ಪರಿಹಾರ ಆಗುವಂತಾಗಿದೆ ಎಂದರು. ಈ ರಸ್ತೆಯಲ್ಲಿ ಬಹಳಷ್ಟು ಕಡೆ ಏರು ತಗ್ಗು ಇದ್ದು, ಇದನ್ನು

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ Read More »

ಕರಾವಳಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷದ 50 ಸಾವಿರ ರೂಪಾಯಿ ಮಂಜೂರು ಆಗಿದೆ ಎಂದು ನೆಲ್ಯಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ಶಾಲೆಯ ಕಟ್ಟಡದ ಮಾಡು ಸಂಪೂರ್ಣವಾಗಿ ಹಳೆಯದಾಗಿ, ನಾದುರಸ್ಥಿಯಲ್ಲಿತ್ತು.ಮಳೆಗಾಲದಲ್ಲಿ ತೀರಾ ಅಪಾಯ ಕಾಡುವಂತಿತ್ತು, ಅದರ ಸಲುವಾಗಿ ದ.ಕ. ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿ ಮಳೆಹಾನಿ ನಿಧಿಯಿಂದ ಕಟ್ಟಡದ ಮಾಡು ರಿಪೇರಿಗೆ 2 ಲಕ್ಷ ರೂಪಾಯಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು Read More »

ಕರಾವಳಿ

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಹೆಲ್ಪ್‍ಲೈನ್ ಗ್ರೂಪ್ ಗಂಡಿಬಾಗಿಲು ವತಿಯಿಂದ ಕೊರೊನ ಜಾಗೃತಿ ಹಿನ್ನೆಲೆಯ ಲಾಕ್‍ಡೌನ್ ಸಲುವಾಗಿ ತೀರಾ ಸಂಕಷ್ಠ ಎದುರಿಸುತ್ತಿರುವ ಜಮಾಅತ್ ವ್ಯಾಪ್ತಿಯ 92 ಮಂದಿಗೆ ವಿದೇಶ ಮತ್ತು ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಈದ್ ಕಿಟ್ ವಿತರಣೆ ಮಾಡಲಾಯಿತು.  ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ದುವಾಃ ನೆರವೇರಿಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಮಹಮ್ಮದ್ ರಫೀಕ್, ಯಂಗ್‍ಮೆನ್ಸ್ ಅಧ್ಯಕ್ಷ ಅಬ್ದುಲ್ ಲತೀಫ್,

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ Read More »

ಕರಾವಳಿ

ಕೊಯಿಲ ತ್ರಿವೇಣಿ ಸರ್ಕಲ್ ಬಳಿ ಪಂಚಾಯಿತಿಯಿಂದ ಕುಡಿಯುವ ನೀರಿನ ತೊಟ್ಟಿ ➤ ದಾಹ ನೀಗಿಸಿಕೊಳ್ಳುತ್ತಿರುವ ಪ್ರಾಣಿ – ಪಕ್ಷಿಗಳು

(ನ್ಯೂಸ್ ಕಡಬ) newskadaba­­.com ಕಡಬ, ಮೇ.12. ಈ ಬಾರಿ ಬೇಸಿಗೆಯ ಕಾವು  ಏರುತ್ತಿದ್ದಂತೆ  ನೀರಿನ ಹಾಹಾಕಾರ  ಹೆಚ್ಚಾಗುತ್ತಿದ್ದು ಮನುಷ್ಯನು ವಿವಿಧ ರೀತಿಯಲ್ಲಿ ತನ್ನ ದಾಹ ನೀಗಿಸಿಕೊಳ್ಳುತ್ತಿದ್ದರೆ ಪ್ರಾಣಿ ಪಕ್ಷಿಗಳ ಪಾಡು ಯಾರಿಗೂ ಕೇಳದಂತಿದೆ. ಇಂತಹ ಪರಿಸ್ಥಿತಿಯಲ್ಲಿ  ಕೊಯಿಲ ಗ್ರಾಮ ಪಂಚಾಯಿತಿ ತನ್ನ ವ್ಯಾಪ್ತಿಯ ತ್ರಿವೇಣಿ ಸರ್ಕಲ್ ಬಳಿ  ರಸ್ತೆ ಪಕ್ಕದಲ್ಲಿ ಕುಡಿಯುವ ನೀರಿನ ತೊಟ್ಟಿಯೊಂದನ್ನು ನಿರ್ಮಿಸಿದ ಪರಿಣಾಮ ಪ್ರಾಣಿ ಪಕ್ಷಿಗಳ ದಾಹ ನೀಗುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ. ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಿಂದ ಟಿಸಿಲೊಡೆದ

ಕೊಯಿಲ ತ್ರಿವೇಣಿ ಸರ್ಕಲ್ ಬಳಿ ಪಂಚಾಯಿತಿಯಿಂದ ಕುಡಿಯುವ ನೀರಿನ ತೊಟ್ಟಿ ➤ ದಾಹ ನೀಗಿಸಿಕೊಳ್ಳುತ್ತಿರುವ ಪ್ರಾಣಿ – ಪಕ್ಷಿಗಳು Read More »

ವಿಶೇಷ ಲೇಖನಗಳು
Scroll to Top