koila

ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ

(ನ್ಯೂಸ್ ಕಡಬ) newskadaba.com.ಕಡಬ,ಜ.13.ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಶ್ರೀ ಗ್ರಾಮದೈವ ಶಿರಾಡಿ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠೆ ಕಲಶಾಭಿಷೇಕ ಮಹೋತ್ಸವ ಹಾಗೂ ನೇಮೋತ್ಸವ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಿತು.ವೇದಮೂರ್ತಿ ವೆಂಕಟ್ರಮಣ ಕುದುರೆತ್ತಾಯ ಅವರು ದೈವಗಳ ಪ್ರತಿಷ್ಠೆ ಹಾಗೂ ನಾಗ ಪ್ರತಿಷ್ಠಾ ಕಾರ್ಯ ನೆರವೇರಿಸಿದರು. ಮಂಗಳವಾರ ಸಂಜೆ ನಾಗನಕಟ್ಟೆಯಲ್ಲಿ ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಬಿಂಬ ಶುದ್ಧಿ, ದಿಕ್ಪಾಲಕ ಬಲಿ ನಡೆಯಿತು. ಬುಧವಾರ ಬೆಳಿಗ್ಗೆ ಗಣಹೋಮ, ಪ್ರಧಾನ […]

ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ Read More »

ಕರಾವಳಿ

ಕೊೈಲ :ಸೌಹಾರ್ದ ವೇದಿಕೆ ಪೂರ್ವ ಅಧ್ಯಕ್ಷ ಹೈದರ್ ಕೊೈಲ ನಿಧನ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,  ಜ.09. ಉಪ್ಪಿನಂಗಡಿ: ಕೊೈಲ ನಿವಾಸಿ, ದಿವಂಗತ ಇಬ್ರಾಹಿಂ ಎಂಬವರ ಪುತ್ರ, ಹೈದರ್ ಕೊೈಲ (37 ವ.) ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದರು. ಜ. 8ರಂದು ತನ್ನ ಮನೆಯಲ್ಲಿ ನಿಧನ ಹೊಂದಿದರು. ಕೊೈಲದಲ್ಲಿ ಅಟೋ ಚಾಲಕರಾಗಿದ್ದ ಹೈದರ್ ಕೊೈಲ ಸೌಹಾರ್ದ ವೇದಿಕೆ ಕೊೈಲ ಇದರ ಅಧ್ಯಕ್ಷರಾಗಿ, ನೂರುಲ್ ಹುದಾ ಮದ್ರಸ ನೀರಾಜೆ ಹಾಗೂ ಯಂಗ್‍ಮೆನ್ಸ್ ಸಂಸ್ಥೆಯಲ್ಲಿ ಸಕ್ರೀಯರಾಗಿ ತನ್ನ ಸಾಮಾಜಿಕ ಕಳಕಳಿಯ ಸೇವೆಯಿಂದ ಸಕ್ರೀಯರಾಗಿ ಚಿರಪರಿಚಿತರಾಗಿದ್ದರು.ಮೃತರು ಪತ್ನಿ ಬುಶ್ರಾ, ಪುತ್ರಿಯರಾದ ಅಫೀಝ, ಅಫ್ರೀನ್‍ರನ್ನು

ಕೊೈಲ :ಸೌಹಾರ್ದ ವೇದಿಕೆ ಪೂರ್ವ ಅಧ್ಯಕ್ಷ ಹೈದರ್ ಕೊೈಲ ನಿಧನ Read More »

ಕರಾವಳಿ

ಶಾಸಕರ ಅನುದಾನದ ಆನೆಗುಂಡಿ ಕುಡಿಯುವ ನೀರಿನ ಯೋಜನೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಕೊೖಲ, ಮಾ.26.  ಕಡಬ ತಾಲೂಕಿನ ಕೊೖಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆನೆಗುಂಡಿ ದಲಿತ ಕಾಲೋನಿಗೆ ಕುಡಿಯುವ ನೀರಿನ ಯೋಜನೆ ಅನುಷ್ಟಾನಕ್ಕಾಗಿ ಸುಳ್ಯ ಶಾಸಕ ಎಸ್.ಅಂಗಾರ 3.5 ಲಕ್ಷ ರೂ ಅನುದಾನ ಮಂಜೂರುಗೊಳಿಸಿದ್ದು, ಭಾನುವಾರ ಕೊಳವೆ ಬಾವಿ ಕೊರೆಯಲು ಪ್ರಾರಂಭಿಸುವ ಮೂಲಕ ಯೋಜನೆಗೆ ಚಾಲನೆ ದೊರೆಯಿತು. ಶಾಸಕರ ಅನುದಾನದಲ್ಲಿ ನಡೆಯುವ ಕಾಮಗಾರಿಗೆ ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹೇಮಮೋಹನ್ದಾಸ್ ಶೆಟ್ಟಿ ಬೆಳಿಗ್ಗೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೊೖಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ

ಶಾಸಕರ ಅನುದಾನದ ಆನೆಗುಂಡಿ ಕುಡಿಯುವ ನೀರಿನ ಯೋಜನೆಗೆ ಚಾಲನೆ Read More »

ಕರಾವಳಿ

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ

(ನ್ಯೂಸ್ ಕಡಬ) newskadaba.com ಕಡಬ, ಡಿ.17. ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಒಳಪಟ್ಟ ಕೊಯಿಲ ಗ್ರಾಮ ಪಂಚಾಯತ್ ನ ವಾರ್ಡ್ ನಂ4 ರ ಹಿಂದುಳಿದ ವರ್ಗ ‘ಎ’ಯ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆಯು ವಳಕಡಮೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಂತಿಯುತವಾಗಿ ನಡೆಯಿತು. ಒಟ್ಟು 1184 ಮತದಾರರ ಪೈಕಿ 770 ಮತದಾರರು ಮತವನ್ನು ಚಲಾಯಿಸುವ ಮೂಲಕ 65.03% ಶಾಂತಿಯುತ ಮತದಾನ ನಡೆಯಿತು.

ಕೊಯಿಲ ಗ್ರಾ.ಪಂ. ಉಪಚುನಾವಣೆ ► 65.03% ಶಾಂತಿಯುತ ಮತದಾನ Read More »

ಕರಾವಳಿ

ಕೊಯಿಲ: ಮಕ್ಕಳ ಗ್ರಾಮಸಭೆ ► ವಿದ್ಯಾರ್ಥಿಗಳಿಂದ ವಿವಿಧ ಬೇಡಿಕೆಗಳ ಮಂಡನೆ

(ನ್ಯೂಸ್ ಕಡಬ) newskadaba.com ಕಡಬ, ನ.22.   ಕೊಯಿಲ ಗ್ರಾ.ಪಂ. ಮಕ್ಕಳ ಗ್ರಾಮಸಭೆಯು ಗ್ರಾ.ಪಂ. ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು. ಆತೂರು ಬದ್ರಿಯಾ ಶಾಲಾ ನಾಯಕ ಮೊಹಮ್ಮದ್ ಮುಹಸೀನ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೊಯಿಲ ಗ್ರಾ.ಪಂ.ವ್ಯಾಪ್ತಿಯ ವಳಕಡಮ ಕಿ.ಪ್ರಾ.ಶಾಲೆ, ಗಂಡಿಬಾಗಿಲು ಹಿ.ಪ್ರಾ.ಶಾಲೆ, ಕೊಯಿಲ ಹಿ.ಪ್ರಾ.ಶಾಲೆ ಹಾಗೂ ಸಬಳೂರು ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ಭಾಗವಿಸಿದ್ದು ವಿವಿಧ ಬೇಡಿಕೆಗಳನ್ನು ಮಂಡಿಸಿದ್ದಾರೆ. ಆತೂರು ಬದ್ರಿಯಾ ಶಾಲೆಯ ವಿದ್ಯಾರ್ಥಿ ಮಾತನಾಡಿ, ಶಾಲೆಗೆ ಕಸದಬುಟ್ಟಿ ಕೊಟ್ಟಿದ್ದು ಇದರಲ್ಲಿ ಕಸ ತುಂಬಿದೆ. 1 ವರ್ಷವಾದರೂ ವಿಲೇವಾರಿ ಆಗಿಲ್ಲ ಎಂದರು.

ಕೊಯಿಲ: ಮಕ್ಕಳ ಗ್ರಾಮಸಭೆ ► ವಿದ್ಯಾರ್ಥಿಗಳಿಂದ ವಿವಿಧ ಬೇಡಿಕೆಗಳ ಮಂಡನೆ Read More »

ಕರಾವಳಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಪುತ್ತೂರು, ನ.14. ಇಲ್ಲಿನ ಕೊೖಲ ಗ್ರಾಮದ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಶಾಸಕರಾದ ಎಸ್. ಅಂಗಾರ ಅವರು ಚಾಲನೆ ನೀಡಿ ಬಳಿಕ ಊರಿನ ಹಿರಿಯ ನಾಗರೀಕರಾದ ಐತ್ತಪ್ಪ ನಾಯ್ಕ ಅವರನ್ನು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ತಾಲೂಕು ಪಂಚಾಯಿತಿ ಸದಸ್ಯರಾದ ಜಯಂತಿ ಆರ್ ಗೌಡ, ತೇಜಸ್ವಿನಿ ಶೇಖರ ಗೌಡ, ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ

ಕೊೖಲ: ಊರಿನ ಹಿರಿಯ ನಾಗರೀಕ ಐತ್ತಪ್ಪ ನಾಯ್ಕ ಅವರಿಗೆ ಸನ್ಮಾನ Read More »

ಕರಾವಳಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಪುತ್ತೂರು, ನ.11. ಇಲ್ಲಿನ ಕೊಯಿಲ ಗ್ರಾಮದ ಏಣಿತಡ್ಕದಲ್ಲಿ ಶಾಸಕರ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶನಿವಾರ ಸುಳ್ಯ ಶಾಸಕ ಎಸ್.ಅಂಗಾರ ವೀಕ್ಷಣೆ ಮಾಡಿ ಕಾಮಗಾರಿಯ ಗುಣಮಟ್ಟವನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದರು. ಏಣಿತಡ್ಕದ ನೂತನ ಸೇತುವೆ ಬಳಿಯಿಂದ ಸಬಳೂರು ಅಯೋಧ್ಯಾನಗರದ ಶ್ರೀರಾಮ ಭಜನಾ ಮಂದಿರದ ತನಕ ಸುಮಾರು 97 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಯಾಗುತ್ತಿದ್ದು, ಡಾಮಾರೀಕರಣ ನಡೆಯುತ್ತಿದೆ. ಇತ್ತೀಚೆಗೆ ಇದರ ಗುದ್ದಲಿ ಪೂಜೆ ನೇರವೇರಿ ತ್ವರಿತಗತಿಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಯಲ್ಲಿ ಶಾಸಕರು ಕಾಮಗಾರಿ

ಏಣಿತಡ್ಕ: ಶಾಸಕರಿಂದ ರಸ್ತೆ ಕಾಮಗಾರಿ ವೀಕ್ಷಣೆ ► ಕಿಂಡಿ ಅಣೆಕಟ್ಟು ನಿರ್ಮಾಣ ಶೀಘ್ರದಲ್ಲಿ ಪ್ರಾರಂಭ-ಎಸ್.ಅಂಗಾರ Read More »

ಕರಾವಳಿ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ನ.11. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು. ಗ್ರಾಮ ಪಂಚಾಯಿತಿ ಕೊಯಿಲ ಇವುಗಳ ಸಂಯುಕ್ತ ಆಶ್ರಯದಲ್ಲಿ ಏಣಿತಡ್ಕ-2 ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಶನಿವಾರ ನಡೆಯಿತು. ಸುಳ್ಯ ಶಾಸಕ ಎಸ್.ಅಂಗಾರ ಅವರು ಉದ್ಘಾಟನೆ ನೆರವೇರಿಸಿದ ಮಾತನಾಡಿ ದೇಶದ ಆಸ್ತಿಗಳಾದ ಮುದ್ದುಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ತರ ಕಾರ್ಯವನ್ನು ಶಿಕ್ಷಕರು ಹಾಗೂ ಪೋಷಕರು ಮಾಡಬೇಕಾಗಿದೆ ಎಂದರು. ವಿದ್ಯೆ ಎನ್ನುವುದು ಕೇವಲ

ಏಣಿತಡ್ಕ-2 ಅಂಗನವಾಡಿ ಕಟ್ಟಡ ಉದ್ಘಾಟನೆ ►ಮಕ್ಕಳನ್ನು ದೇಶದ ಆಸ್ತಿಯನ್ನಾಗಿಸಬೇಕು- ಎಸ್.ಅಂಗಾರ Read More »

ಕರಾವಳಿ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು. ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ Read More »

ಕರಾವಳಿ

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಭಜನಾ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಶೀನಪ್ಪ ಪೂಜಾರಿ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆಯಿತು. ಅಧ್ಯಕ್ಷರಾಗಿ ರಾಮಚಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಯಾಗಿ ಚಿದಾನಂದ ಪಾನ್ಯಾಲು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಬೆಳಿಯಪ್ಪ ಗೌಡ ತಿಮರೆಗುಡ್ಡೆ, ಗೌರವ ಸಲಹೆಗರರಾಗಿ ಲಕ್ಷ್ಮಣ ಗೌಡ ಬುಡಲೂರು, ರಾಜೀವ ಗೌಡ ಪಟ್ಟೆದಮೂಲೆ, ಶೀನಪ್ಪ ಪೂಜಾರಿ ಸೀಗೆತ್ತಡಿ, ಜೊತೆ ಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು,

ಕೊೖಲ: ಅಯೋಧ್ಯಾನಗರ ಶ್ರೀ ರಾಮ ಭಜನಾ ಮಂದಿರ ► ಪದಾಧಿಕಾರಿಗಳ ಆಯ್ಕೆ Read More »

ಕರಾವಳಿ
Scroll to Top