koila

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು

(ನ್ಯೂಸ್ ಕಡಬ) newskadaba.com ಕಡಬ, ಅ.31. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಉನ್ನತ ಹಿರಿಯ ಪ್ರಾಥಮಿಕ ಶಾಲಾ ಹಳೆ ವಿದ್ಯಾರ್ಥಿ ಸಂಘದ ರಚನೆ ಇತ್ತೀಚೆಗೆ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ನೂತನ  ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು ಆಯ್ಕೆಯಾಗಿದ್ದಾರೆ. ಗೌರವ ಸಲಹೆಗಾರರಾಗಿ ಶಾಲಾ ಮುಖ್ಯಗುರು ವಾರಿಜ ಬಿ, ಕುಶಾಲಪ್ಪ ಗೌಡ ಕಡೆಂಬ್ಯಾಲು, ಮೋಹನ ಗೌಡ ಬುಡಲೂರು , ಮನೋಹರ ಗೌಡ ಸಬಳೂರು, ಜೊತೆಕಾರ್ಯದರ್ಶಿಯಾಗಿ ಉಮೇಶ್ ಬುಡಲೂರು, ಖಜಾಂಜಿಯಾಗಿ ಚಿದಾನಂದ ಪಾನ್ಯಾಲು, ಉಪಾಧ್ಯಕ್ಷರಾಗಿ ಇಸ್ಮಾಯಿಲ್ […]

ಸಬಳೂರು: ಶಾಲಾ ಹಳೆ ವಿದ್ಯಾರ್ಥಿ ಸಂಘ ► ಅಧ್ಯಕ್ಷರಾಗಿ ಗಣೇಶ್ ಎರ್ಮಡ್ಕ, ಕಾರ್ಯದರ್ಶಿಯಾಗಿ ನಾಗೇಶ್ ಕಡೆಂಬ್ಯಾಲು Read More »

ಕರಾವಳಿ

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಅ.18. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಕಳೆದ 10 ವರ್ಷಗಳಿಂದ ದೀಪಾವಳಿ ಆಚರಣೆಯನ್ನು ಅದ್ದೂರಿಯಾಗಿ ಆಚರಿಸಿಕೊಂಡು ಬಂದಿದ್ದು, ಈ ವರ್ಷವೂ 11ನೇ ವರ್ಷದ ದೀಪಾವಳಿ ಆಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಸಬಳೂರು ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಯೋಧ್ಯಾ ನಗರ ಶ್ರೀ ರಾಮ ಭಜನಾ ಮಂದಿರದಲ್ಲಿ ಅಯೋಜಿಸಲಾದ 11ನೇ ವರ್ಷದ ದೀಪಾವಳಿ ಕ್ರೀಡಾಕೂಟಕ್ಕೆ ಜೇಸಿಐ ಮುಖಂಡ ಪ್ರಶಾಂತ್ ರೈ ಸಬಳೂರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಪ್ರಶಾಂತ್ ರೈ ಅವರು

ಸಬಳೂರು: ಶ್ರೀ ರಾಮ ಭಜನಾ ಮಂದಿರ ► ದೀಪಾವಳಿ ಸಂಭ್ರಮ, ಸಾಮೂಹಿಕ ಗೋಪೂಜೆ Read More »

ಕರಾವಳಿ

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಅ.17. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಮೇರೆಗೆ ಕೊೖಲ ಗ್ರಾಮದ ಏಣಿತ್ತಡ್ಕ ಜಿ.ಪಂ.ರಸ್ತೆಯಲ್ಲಿ ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ತನಕ ಮರು ಡಾಮರೀಕರಣಕ್ಕೆ ರಾಮಕುಂಜ ಗ್ರಾ.ಪಂ.ಸದಸ್ಯರಾದ ಯತೀಶ್ ಬಾನಡ್ಕರವರ ಮುತುವರ್ಜಿಯಿಂದಾಗಿ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ರಾಜೀವಗಾಂಧಿ ವಿವಿ ನಿರ್ದೇಶಕ ಡಾ.ರಘು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್‌ರವರ ಸೂಚನೆ ಮೇರೆಗೆ ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆಗೊಂಡಿದೆ. ಈ ಅನುದಾನ ಬಿಡುಗಡೆಗೊಳಿಸುವಲ್ಲಿ ರಾಮಕುಂಜ

ಗೋಳಿತ್ತಡಿಯಿಂದ ತ್ರಿವೇಣಿ ಸರ್ಕಲ್ ಮರು ಡಾಮರೀಕರಣ ► ನಬಾರ್ಡ್‌ನಿಂದ 49 ಲಕ್ಷ ರೂ.ಬಿಡುಗಡೆ Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ

(ನ್ಯೂಸ್ ಕಡಬ) newskadaba.com ಕಡಬ, ಅ.11. ರಾಮಕುಂಜ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಪರ್ಯಾಯದಲ್ಲಿರುವ ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಫಲ,ಪುಷ್ಪ ಕಾಣಿಕೆಗಳನ್ನು ಸಮರ್ಪಿಸಿ ಆಶೀರ್ವಾದ ಪಡೆದುಕೊಳ್ಳಲಾಯಿತು. ಒಕ್ಕಲಿಗ ಗೌಡ ಸೇವಾ ಸಂಘದ ರಾಮಕುಂಜ ಗ್ರಾಮ ಸಮಿತಿ ಅಧ್ಯಕ್ಷ ಪದ್ಮಪ್ಪ ಗೌಡ ಕೆದಂಬಾಡಿ, ಮಹಿಳಾ ಸಂಘದ ಅಧ್ಯಕ್ಷೆ ಸುಶೀಲಾ ವಳೆಂಜ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ನ ಒಕ್ಕೂಟದ ಅಧ್ಯಕ್ಷ ಜನಾರ್ದನ ಗೌಡ ಬಾಂತೊಟ್ಟು, ಕುಂಡಾಜೆ ಶಾಲಾ ಎಸ್ಡಿಎಂಸಿ ಅಧ್ಯಕ್ಷ ಮುತ್ತಪ್ಪ ಗೌಡ,

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ ► ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಭೇಟಿ, ಕಾಣಿಕೆ ಸಮರ್ಪಣೆ Read More »

ಕರಾವಳಿ

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ

(ನ್ಯೂಸ್ ಕಡಬ) newskadaba.com ಕಡಬ,ಅ.9. ಪುತ್ತೂರು ತಾಲೂಕು ಕೊೖಲ ಗ್ರಾಮದ ಸಬಳೂರು ಅಯೋಧ್ಯಾನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಅಕ್ಟೋಬರ್.18 ರಂದು ಶ್ರೀ ರಾಮ ಭಜನಾ ಮಂದಿರದಲ್ಲಿ ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ, ಹಾಗೂ ಧಾರ್ಮಿಕ  ಸಭೆಯು ನಡೆಯಲಿದೆ. ಬೆಳಿಗ್ಗೆ ಸಾಮೂಹಿಕ ಗೋಪೂಜೆ ಬಳಿಕ ನಡೆಯುವ ಕ್ರೀಡಾಕೂಟಕ್ಕೆ ಪುತ್ತೂರು ಆದರ್ಶ ವಿವಿದ್ದೋದ್ದೇಶ ಸಹಕಾರಿ ಸಂಘದ ಮಹಾ ಪ್ರಬಂಧಕ ಪ್ರಶಾಂತ್ ಕುಮಾರ್ ರೈ ಬುಡಲೂರು ಚಾಲನೆ ನೀಡಲಿದ್ದಾರೆ. ಸಬಳೂರು ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ

ಅ.18 ರಂದು: ಸಬಳೂರು ಶ್ರೀ ರಾಮ ಭಜನಾ ಮಂದಿರದಲ್ಲಿ ► ಸಾಮೂಹಿಕ ಗೋಪೂಜೆ, ದೀಪಾವಳಿ ಕ್ರೀಡೋತ್ಸವ Read More »

ಕರಾವಳಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ

(ನ್ಯೂಸ್ ಕಡಬ) newskadaba.com ಕಡಬ,ಅ.4. ರಾಜ್ಯ ಸರಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಮುಖ್ಯವಾಗಿ ಗರ್ಭಿಣಿ, ಬಾಣಂತಿಯರು ಪೌಷ್ಟಿಕಾಂಶವುಳ್ಳ ಆಹಾರವನ್ನು ಸೇವಿಸುವುದರೊಂದಿಗೆ ಆರೋಗ್ಯಪೂರ್ಣ ತಾಯಂದಿರಾಗಿ ಜೀವನ ಸಾಗಿಸಬೇಕೆಂಬ ನಿಲುವಿನೊಂದಿಗೆ ಮಹತ್ವದ ಮಾತೃಪೂರ್ಣ ಯೋಜನೆಯನ್ನು ಜಾರಿಗೆ ತಂದಿದೆ. ಪುತ್ತೂರು ತಾಲೂಕು ಕೊೖಲ ಗ್ರಾಮದ ಏಣಿತಡ್ಕ(1) ಅಂಗನವಾಡಿಯಲ್ಲಿ ಮಾತೃಪೂರ್ಣ ಯೋಜನೆ ಸೋಮವಾರ ಆರಂಭಗೊಂಡಿತ್ತು. ಕೊೖಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ವೇದಾವತಿ

ಕೊೖಲ: ಏಣಿತಡ್ಕ(1) ಅಂಗನವಾಡಿಯಲ್ಲಿ ► ಮಾತೃಪೂರ್ಣ ಯೋಜನೆ ಆರಂಭ Read More »

ಕರಾವಳಿ

ಸಬಳೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರಮದಾನ ► ಶ್ರೀರಾಮ ಭಜನಾ ಮಂದಿರದ ವಠಾರ ಸ್ವಚ್ಚತೆ

(ನ್ಯೂಸ್ ಕಡಬ) newskadaba.com ಕಡಬ, ಅ.03. ಪುತ್ತೂರು ತಾಲೂಕು ಕೊಯಿಲ ಗ್ರಾಮದ ಸಬಳೂರು ಅಯೋಧ್ಯಾ ನಗರ ಶ್ರೀ ರಾಮ ಗೆಳೆಯರ ಬಳಗದ ವತಿಯಿಂದ ಶ್ರೀ ರಾಮ ಭಜನಾ ಮಂದಿರದ ವಠಾರವನ್ನು ಸ್ವಚ್ಛಗೊಳಿಸುವ ಕಾರ್ಯ ಸೋಮವಾರದಂದು ನಡೆಯಿತು. ಆಲಂಕಾರು ಸಿ.ಎ. ಬ್ಯಾಂಕ್ ಉದ್ಯೋಗಿ ರಾಧಾಕೃಷ್ಣ ತುಂಬೆತಡ್ಕ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸ್ವಚ್ಛ ಕಾರ್ಯ ದಿನವೊಂದಕ್ಕೆ ಮೀಸಲಾಗದೆ ಪ್ರತಿ ದಿನ ಮನೆ ಮನದಿಂದ ಆರಂಭವಾಗಬೇಕು. ಆ ಮೂಲಕ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡಬೇಕು

ಸಬಳೂರು: ಶ್ರೀರಾಮ ಗೆಳೆಯರ ಬಳಗದಿಂದ ಶ್ರಮದಾನ ► ಶ್ರೀರಾಮ ಭಜನಾ ಮಂದಿರದ ವಠಾರ ಸ್ವಚ್ಚತೆ Read More »

ಕರಾವಳಿ

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ಕಡಬ ಠಾಣಾ ವ್ಯಾಪ್ತಿಯ ಕುಂಡಾಜೆ ಎಂಬಲ್ಲಿ ಭಾನುವಾರ ಸಂಜೆ ನಡೆದ ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಸೆಕ್ಷನ್ 307ರ ಪ್ರಕಾರ ಕೊಲೆ ಯತ್ನ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಘಟನೆ ಸಂಬಂದಿಸಿದಂತೆ ಕುಂಡಾಜೆ ನಿವಾಸಿ ಝಕರಿಯಾ ಮತ್ತು ಅವರ ತಂಗಿ ಜಮೀಳಾ ಎಂಬವರಿಗೆ ಹಲ್ಲೆ ನಡೆಸಿದ ಆರೋಪದಡಿಯಲ್ಲಿ ರಾಮಕುಂಜ ನಿವಾಸಿಗಳಾದ ಅಶ್ವತ್, ರಿತೇಶ್ ಹಾಗೂ ಕೃಷ್ಣ ಎಂಬವರನ್ನು ಬಂಧಿಸಲಾಗಿದ್ದು, ಝಕರಿಯಾ ಅವರು ಭಾನುವಾರ ಸಂಜೆ ಉಪ್ಪಿನಂಗಡಿಯಿಂದ ಜೀಪಿನಲ್ಲಿ ಬಂದು ಕುಂಡಾಜೆಯಲ್ಲಿ

ಕುಂಡಾಜೆ: ಕೋಮು ಘರ್ಷಣೆ ಪ್ರಕರಣ ► ಮೂವರ ಆರೋಪಿಗಳ ಬಂಧನ Read More »

ಕರಾವಳಿ

ಕೊೖಲ ಗ್ರಾ.ಪಂ.ಮಹಿಳಾ ಗ್ರಾಮಸಭೆ ► ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ,ಸೆ.23. ಕೊೖಲ ಗ್ರಾ.ಪಂ.ನ 2016-17ನೇ ಸಾಲಿನ ಮಹಿಳಾ ಗ್ರಾಮಸಭೆ ಹಾಗೂ ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆ ವೇದಾವತಿಯವರಿಗೆ ಸನ್ಮಾನ ಕಾರ್ಯಕ್ರಮ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ.ಅಧ್ಯಕ್ಷೆ ಮೀನಾಕ್ಷಿ ಬುಡಲೂರು ಮಾತನಾಡಿ, ಮಹಿಳೆಯರೂ ಎಲ್ಲಾ ಕ್ಷೇತ್ರಗಳಲ್ಲೂ ಗುರುತಿಸಿಕೊಳ್ಳುವಂತಾಗಬೇಕು. ಮಹಿಳೆಯರಿಗೆ ಸಿಗುವ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ತಾ.ಪಂ.ಸದಸ್ಯೆ ಜಯಂತಿ ಆರ್.ಗೌಡ ಮಾತನಾಡಿ, ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಮೀಸಲಾತಿ ಇದ್ದರೂ ಸಮಾಜದಲ್ಲಿ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ತಡೆಯುವ ನಿಟ್ಟಿನಲ್ಲಿ ಮಹಿಳೆಯರಿಗೆ ಕಾನೂನು ವಿಷಯಗಳ

ಕೊೖಲ ಗ್ರಾ.ಪಂ.ಮಹಿಳಾ ಗ್ರಾಮಸಭೆ ► ರಾಜ್ಯ ಪ್ರಶಸ್ತಿ ಪುರಸ್ಕೃತ ಅಂಗನವಾಡಿ ಕಾರ್ಯಕರ್ತೆಗೆ ಸನ್ಮಾನ Read More »

ಕರಾವಳಿ
Scroll to Top