ಕೊರಗಜ್ಜನ ಕಟ್ಟೆಗೆ ಬೆಂಕಿಯಿಟ್ಟು ಧಾರ್ಮಿಕ ಭಾವನೆಗೆ ಧಕ್ಕೆ- ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಸಂಘಟನೆಗಳ ಆಗ್ರಹ
(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 12. ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಬಾಡಾರು ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ದೇಗುಲಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಗಕಲ್ಲು ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಇದರ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಹೆಗ್ಡೆ ಅವರು ನೀಡಿದ ದೂರಿನಂತೆ ವೇಣೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಪ್ರಕಾರ, ಮೊದಲು ಕೊರಗಜ್ಜ ಕಟ್ಟೆಯು ಬಜಿರೆ ಗ್ರಾಮದ ಬಾಡಾರು ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಇದ್ದು, ಅದನ್ನು ಊರಿನ ಹಿರಿಯರು ಸೇರಿಕೊಂಡು […]



