KSRTC bus

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 26. ಮಹಿಳೆಯೊಬ್ಬರು ಬಸ್ ನಿಲ್ಲಿಸದ ಕಾರಣ ಸಿಟ್ಟಿಗೆದ್ದು ಸರ್ಕಾರಿ ಬಸ್ ಗೆ ಕಲ್ಲು ಎಸೆದ ಘಟನೆ ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿ ನಡೆದಿದೆ. ಇಳಕಲ್ ಬಳಿಯ ಪಾಪನಳ್ಳಿ ನಿವಾಸಿ ಲಕ್ಷ್ಮಿ ಎಂಬವರು ಹುಲಿಗಿಯ ಹುಲಿಗೆಮ್ಮ ದೇವಿ ದರ್ಶನ ಪಡೆಯಲು ಹೊಗಿದ್ದ ವೇಳೆ ಹುಲಿಗೆ ಕ್ರಾಸ್ ಬಳಿ ತುಂಬಾ ಹೊತ್ತಿನಿಂದ ಕಾದರೂ ಯಾವುದೇ ಬಸ್ ನಿಲ್ಲಿಸಿರಲಿಲ್ಲ. ಇದರಿಂದ ಕೋಪಗೊಂಡ ಅವರು ಕಲ್ಯಾಣ ಕರ್ನಾಟಕ ಸಾರಿಗೆ ವಿಭಾಗದ ಕೊಪ್ಪಳದಿಂದ-ಹೊಸಪೇಟೆಗೆ ಹೋಗುವ  ಬಸ್ ಗೆ […]

ಬಸ್ ನಿಲ್ಲಿಸದ ಕಾರಣ ಕೋಪದಿಂದ ಕಲ್ಲು ಎಸೆದ ಮಹಿಳೆ ➤ 5000 ರೂ. ದಂಡ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 21. ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಸಂಭವಿಸಿದೆ. ಮೃತ ಯುವಕನನ್ನು ಓಡೀಲು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಂದು ದೀಕ್ಷಿತ್ ಹುಟ್ಟುಹಬ್ಬವಾಗಿದ್ದರಿಂದ ಈತ ದು ಬೆಳಗ್ಗೆ ವೇಣೂರಿನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅವಘಢ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಗೆ ಬೈಕ್ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 24. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ಇದೇ ಡಿ. 21 ರಿಂದ 27ರವರೆಗೆ ನಡೆಯುತ್ತಿರುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಸುಮಾರು 50,000ಕ್ಕಿಂತಲೂ ಹೆಚ್ಚಿನ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಆಗಮಿಸಿದ್ದಾರೆ. ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ಇತರೆ ವಿಭಾಗಗಳಿಂದ ಹಾಗೂ ವಾ.ಕ.ರ.ಸಾ.ನಿಗಮ, ಕ.ಕ.ರ.ಸಾ. ನಿಗಮಗಳಿಂದ ವಿದ್ಯಾರ್ಥಿಗಳನ್ನು ಕರೆದುಕೊಂಡು ಬಂದಿದ್ದು, ಆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರು ಡಿ. 27

ಮಂಗಳೂರು: ಡಿ. 26ರಿಂದ KSRTC ಬಸ್ ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.19. ಓವರ್ ಟೇಕ್ ಮಾಡುವ ಭರದಲ್ಲಿ ಮಹೀಂದ್ರ ಬೊಲೇರೋ ವಾಹನವೊಂದು ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.19ರಂದು ಬೆಳಿಗ್ಗೆ ಮಾಣಿ-ಮೈಸೂರು ಹೆದ್ದಾರಿಯ ಕಾವು ಎಂಬಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಮಹೀಂದ್ರ ಬೊಲೇರೋ(ಕೆಎ19ಡಿ2737) ವಾಹನ ಕಾವು ಬುಶ್ರಾ ಶಾಲೆಯ ಸಮೀಪ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್(ಕೆಎ21ಎಫ್0132)ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೊಲೇರೋ ನಜ್ಜುಗುಜ್ಜಾಗಿ ಬೊಲೇರೋದಲ್ಲಿದ್ದ ಬುಶ್ರಾ ಶಾಲಾ ವಿದ್ಯಾರ್ಥಿ ರಾಝಿಕ್(13.ವ) ಎಂಬವರಿಗೆ ಗಾಯವಾಗಿದೆ.

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ Read More »

ಕರಾವಳಿ, ಕರ್ನಾಟಕ

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಆ.25, ಓಮಿನಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕನಕಪುರ ತಾಲೂಕಿನ ಸಾಸಲಪುರದ ರಾಯರದೊಡ್ಡಿ ಬಳಿ ಶುಕ್ರವಾರ ನಡೆದಿದೆ.   ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರೂ ಮೈಸೂರಿನವರು ಎಂದು ಹೇಳಲಾಗಿದೆ. ಸಾತನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಭೀಕರ ರಸ್ತೆ ಅಪಘಾತ  ► ಮೂವರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ
Scroll to Top