kumaradara

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ,ಸೆ.6, ಇಲ್ಲಿಗೆ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಕುಮಾರಧಾರಾ ನದಿಯಲ್ಲಿ ಮಂಗಳವಾರ ಸಂಜೆ ನೀರುಪಾಲಾದ ಯುವಕರಿಬ್ಬರ ಪೈಕಿ ಓರ್ವನ ಶವ ಬುಧವಾರ ಪತ್ತೆಯಾಗಿದೆ.  ಇನ್ನೊಂದು ಶವಕ್ಕಾಗಿ ಶೋಧ ಕಾರ್ಯ ಮುಂದುವರಿಸಿದೆ. ಕುಟ್ರುಪ್ಪಾಡಿ ಗ್ರಾಮದ ಅಲರ್ಮೆ ದಿ. ಚೆನ್ನಪ್ಪ ಪೂಜಾರಿಯವರ ಪುತ್ರರಾದ ಹರಿಪ್ರಸಾದ್(30) ಹಾಗೂ ಸತ್ಯಪ್ರಸಾದ್(25) ನೀರುಪಾಲಾದವರು. ಜೊತೆಗಿದ್ದ ಅವರ ಚಿಕ್ಕಪ್ಪನ ಮಗ ರೋಹಿತ್ ಬದುಕುಳಿದಿದ್ದಾರೆ. ಕುದ್ಮಾರು ಗ್ರಾಮದ ಶಾಂತಿಮೊಗರು ಸೇತುವೆ ಬಳಿ ಸ್ನಾನಕ್ಕೆಂದು ಮೂವರು ನದಿಗಿಳಿದಿದ್ದು ನೀರಿನ ಸೆಳತಕ್ಕೆ ಕೊಚ್ಚಿಹೋಗಿದ್ದಾರೆ. ಸ್ಥಳಿಯ ಈಜು ಪರಿಣತರು, ಅಗ್ನಿಶಾಮಕ […]

ಶಾಂತಿಮೊಗರು: ನೀರುಪಾಲಾದ ಸಹೋದರರು ► ಓರ್ವನ ಶವ ಪತ್ತೆ Read More »

ಕರಾವಳಿ

ಶಾಂತಿಮೊಗರು: ಸ್ನಾನಕ್ಕಿಳಿದ ಯುವಕರಿಬ್ಬರು ನೀರುಪಾಲು ► ಕಡಬ ಕುಟ್ರುಪ್ಪಾಡಿ ನಿವಾಸಿಗಳು

(ನ್ಯೂಸ್ ಕಡಬ) newskadaba.com ಕಡಬ, ಸೆ.05.  ಕುಮಾರಧಾರಾ ನದಿಯಲ್ಲಿ ಸ್ನಾನಕ್ಕಿಳಿದ ಯುವಕರಿಬ್ಬರು ಮುಳುಗಿ ನೀರುಪಾಲಾದ ಘಟನೆ ಮಂಗಳವಾರ ಅಪರಾಹ್ನ ಇಲ್ಲಿಗೆ ಸಮೀಪದ ಶಾಂತಿಮೊಗರು ದೇವಸ್ಥಾನ ಸಮೀಪ ನಡೆದಿದೆ. ಶಾಂತಿಮೊಗರು ದೇವಸ್ಥಾನಕ್ಕೆಂದು ಮೂವರು ಯುವಕರು ತೆರಳಿದ್ದು, ಅದರಲ್ಲಿ ಕಡಬ ಸಮೀಪದ ಕುಟ್ರುಪ್ಪಾಡಿ ಗ್ರಾಮದ ಹರಿ, ಸತ್ಯ ಸ್ನಾನ ಮಾಡಲೆಂದು ನೀರಿಗಿಳಿದಿದ್ದಾರೆನ್ನಲಾಗಿದೆ. ನೀರಿನ ಸೆಳೆತಕ್ಕೆ ಸಿಲುಕಿದ ಇವರಿಬ್ಬರು ನೀರುಪಾಲಾಗಿದ್ದು, ನದಿಯಲ್ಲಿ ಶೋಧ ಕಾರ್ಯ ಮುಂದುವರಿಸಿದೆ.

ಶಾಂತಿಮೊಗರು: ಸ್ನಾನಕ್ಕಿಳಿದ ಯುವಕರಿಬ್ಬರು ನೀರುಪಾಲು ► ಕಡಬ ಕುಟ್ರುಪ್ಪಾಡಿ ನಿವಾಸಿಗಳು Read More »

ಕರಾವಳಿ
Scroll to Top