kundapura

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಕಂಟೈನರ್ ಲಾರಿ ಪಲ್ಟಿ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.23. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಸಿಮೆಂಟ್ ತುಂಬಿದ ಕಂಟೈನರ್ ಪಲ್ಟಿಯಾಗಿ ಹೆದ್ದಾರಿಗೆ ಅಡ್ಡವಾಗಿ ಬಿದ್ದ ಪರಿಣಾಮ ಕಾರೊಂದು ಜಖಂಗೊಂಡು ಮೂರು ಗಂಟೆಗಿಂತಲೂ ಹೆಚ್ಚು ಸಂಚಾರ ವ್ಯತ್ಯಯಗೊಂಡ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್ ತುಂಬಿದ್ದ ಕಂಟೈನರ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಂಗಳೂರು ಯಾರ್ಡ್ ಗೆ ಪ್ರಯಾಣಿಸುತ್ತಿತ್ತು. ಚಾಲಕ ರಾಹುಲ್ ಕುಡಿದು ಟೈಟಾಗಿ ವಾಹನ ಚಾಲನೆ ಮಾಡುತ್ತಿದ್ದ ಪರಿಣಾಮ ಸಂಗಂ ಜಂಕ್ಷನ್ […]

ಕುಂದಾಪುರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಮೆಂಟ್ ಕಂಟೈನರ್ ಲಾರಿ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು

(ನ್ಯೂಸ್ ಕಡಬ)newskadab.com  ಕುಂದಾಪುರ, ಜ.18. ಗೋವಾದ ಪಣಜಿಯಿಂದ ಸಾಸ್ತಾನದ ಐರೋಡಿಗೆ ಬಸ್ಸಿನಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳೆದುಕೊಂಡಿದ್ದು, ವಸ್ತುಗಳನ್ನು ಹಿಂದಿ ಮಾತನಾಡುವ ತಂಡ ಕದ್ದೊಯ್ದಿರುವ ಶಂಕೆ ವ್ಯಕ್ತವಾಗಿದೆ. ಐರೋಡಿ ನಿವಾಸಿ ಸಂಗೀತಾ ಭಟ್ ಚಿನ್ನಾಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಆಕೆಯು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪಣಜಿಯಿಂದ ಪುತ್ತೂರಿಗೆ ತೆರಳುತ್ತಿದ್ದರು. ಸಂಗೀತಾ ತನ್ನ ಬಟ್ಟೆ ಮತ್ತು ಚಿನ್ನಾಭರಣಗಳಿರುವ ಚಿಕ್ಕ ಕಾಟನ್ ಬ್ಯಾಗ್ ಅನ್ನು ಟ್ರಾಲಿ ಬ್ಯಾಗ್‌ನಲ್ಲಿ ಇಟ್ಟುಕೊಂಡು ಅದನ್ನು ಲಾಕ್ ಮಾಡಿ ತಾನು ಕುಳಿತಿದ್ದ ಸೀಟಿನ

ಕುಂದಾಪುರ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ 20 ಲಕ್ಷ ರೂ. ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಅಕ್ರಮ ಗೋವಧೆ ಸ್ಥಳಕ್ಕೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಎಸ್‌ಐ ಪವನ್‌ ನಾಯಕ್‌ ಹಾಗೂ ಸಿಬ್ಬಂದಿಗಳು ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗುಲ್ವಾಡಿ ಗ್ರಾಮದ ಕುದ್ರು ಎಂಬಲ್ಲಿ ಅಬ್ದುಲ್‌ ಸಮದ್‌ ಮನೆಯ ಪಕ್ಕದಲ್ಲಿ ಅಕ್ರಮ ಕಸಾಯಿಖಾನೆ ಕಾರ್ಯಾಚರಿಸುತ್ತಿದೆ ಎಂದು ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ವರದಿಯಾಗಿದೆ. ಗೋವುಗಳನ್ನು ಅಕ್ರಮವಾಗಿ ವಧೆ ಮಾಡಿ ಮಾಂಸ ತಯಾರಿಸುತ್ತಿರುವ ಮಾಹಿತಿಯಂತೆ ದಾಳಿ ಮಾಡಿದಾಗ 3 ಜನರು ಓಡಿ ಹೋಗಿದ್ದು, ಆರೋಪಿ ಮೊಹಮ್ಮದ್‌ ಯೂಸುಬ್‌ನನ್ನು ಸೆರೆಹಿಡಿಯಲಾಗಿದೆ.

ಕುಂದಾಪುರ:  ಅಕ್ರಮ ಕಸಾಯಿಖಾನೆಗೆ ಪೊಲೀಸ್ ದಾಳಿ…!! ➤  ಓರ್ವ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.16. ಬೈಕ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಕೋಣಿ ಗ್ರಾಮದ ಕಟ್ಕೇರಿಯಲ್ಲಿ ವರದಿಯಾಗಿದೆ. ಚಂದ್ರಕುಮಾರ್ (68) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪ್ರದೀಪ್ ಎಂಬವರು ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಉಳ್ಳೂರಿನ ಕಾರೆಬೈಲು ನಿವಾಸಿ ಚಂದ್ರಕುಮಾರ್ ಅವರಿಗೆ ಢಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಚಂದ್ರಕುಮಾರ್ ಅವರನ್ನು ಕೂಡಲೇ ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆ ವೇಳೆ

ಕುಂದಾಪುರ:  ಬೈಕ್ ಢಿಕ್ಕಿ…!! ➤  ಓರ್ವ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!!

(ನ್ಯೂಸ್ ಕಡಬ) newskadaba.com ಉಡುಪಿ, ಜೂ.18., ಕುಂದಾಪುರದಿಂದ ಉಡುಪಿಗೆ ತರಕಾರಿ ಹೊತ್ತು ತರುತ್ತಿದ್ದ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಅಂಬಾಗಿಲು ಬಳಿ ಗುರುವಾರ ನಡೆದಿದೆ. ಅಪಘಾತದ ರಭಸಕ್ಕೆ ಚಾಲಕ ಮತ್ತು ಸಹಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉದ್ಯಾವರದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ದಿನೇಶ್ (35) ಮತ್ತು ಮಂಜು (30) ಮೃತಪಟ್ಟ ದುರ್ಧೈವಿಗಳು. ಕುಂದಾಪುರದಿಂದ ಉದ್ಯಾವರಕ್ಕೆ ಟೆಂಪೋ ಟ್ರಾಕ್ಸ್ ನಲ್ಲಿ ತರಕಾರಿ ಸಾಗಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ

ಸೂಚನಾ ಫಲಕಕ್ಕೆ ಡಿಕ್ಕಿ ಹೊಡೆದ ತರಕಾರಿ ಟೆಂಪೋ ➤ ಸ್ಥಳದಲ್ಲೇ ಇಬ್ಬರ ದುರ್ಮರಣ..!! Read More »

ಕರಾವಳಿ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ.02: ಬಾಡಿಗೆ ಮನೆಯೊಂದರಲ್ಲಿ ಒಂಟಿಯಾಗಿದ್ದ ಅಪ್ರಾಪ್ತೆ ಬಾಲಕಿಯೊಬ್ಬಳಿಗೆ ಬಂಗಾಳಿ ಮೂಲದ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಬಿದ್ದು ಸಾರ್ವಜನಿಕರಿಂದ ಗೂಸಾ ತಿಂದು ಪೊಲೀಸರ ಅತಿಥಿಯಾದ ವ್ಯಕ್ತಿಯನ್ನು ಬಿಸ್ವಾಸ್(35) ಎಂದು ಗುರುತಿಸಲಾಗಿದೆ.ಕುಂದಾಫುರದ ಚಿಕನ್‌ಸಾಲ್ ರಸ್ತೆಯಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತ ಬಾಲಕಿಯ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯ ತಂದೆ ಹಾಗೂ ಆರೋಪಿ ಬಿಸ್ವಾಸ್ ಹನ್ನೊಂದು ವರ್ಷಗಳಿಂದ ಸ್ನೇಹಿತರಾಗಿದ್ದರು ಎನ್ನಲಾಗಿದೆ.   ಸೋಮವಾರ ಬೆಳಿಗ್ಗೆ

ಹೆಂಚು ತೆಗೆದು ಒಳನುಗ್ಗಿದ ಕಾಮುಕ ➤ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ನ.6. ಬೋಟ್ ಚಾಲಕನೊಬ್ಬನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಮ್ಯಾಂಗನೀಸ್ ರಸ್ತೆಯ ಸಮೀಪ ನಡೆದಿದೆ. ಮೃತ ಯುವಕನನ್ನು ಕುಂದಾಪುರ ನಿವಾಸಿ ಉಮೇಶ ಮೋಗವೀರ (32) ಎಂದು ಗುರುತಿಸಲಾಗಿದೆ. ಕಳೆದ ಒಂದು ವರ್ಷದಿಂದ ಬೋಟ್ ಚಾಲಕನಾಗಿದ್ದು, ಮ್ಯಾಂಗನೀಸ್ ಬೋಟ್ ಕಟ್ಟುವ ಸ್ಥಳದಲ್ಲಿ ಯುವಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ನೇಣು ಹಾಕಿ ಯಾರೋ ಕೊಲೆ ಮಾಡಿದ್ದಾರೆಂದು  ಕುಟುಂಬಸ್ಥರು ಆರೋಪಿಸಿದ್ದು ಇದರ ಬಗ್ಗೆ ಸೂಕ್ತ ತನಿಖೆಗಾಗಿ ಆಗ್ರಹಿಸಿದ್ದಾರೆ. ಗಂಗೊಳ್ಳಿ

ನೇಣು ಬಿಗಿದ ಸ್ಥಿತಿಯಲ್ಲಿ ಬೋಟ್ ಚಾಲಕನ ಶವ ಪತ್ತೆ Read More »

ಕರಾವಳಿ

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.20, ಶ್ರೀಕ್ಷೇತ್ರ ಧರ್ಮಸ್ಥಳದ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ ಸೇವಾನಿರತೆಯ ಮೇಲೆ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 2.50 ಲಕ್ಷ ರೂ. ಹಣವನ್ನು ದರೋಡೆ ಮಾಡಿ ಪರಾರಿಯಾದ ಘಟನೆ ಕುಂದಾಪುರ ತಾಲೂಕಿನ ರಟ್ಟಾಡಿ ಗ್ರಾಮದಲ್ಲಿ ನಡೆದಿದೆ. ಪ್ರೀತಿ(24) ಹಲ್ಲೆಗೆ ಒಳಗಾದ ಯುವತಿ. ಹೆಲ್ಮೆಟ್ ಹಾಕಿಕೊಂಡು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಶ್ರೀಕ್ಷೇತ್ರ ಧರ್ಮಸ್ಥಳದ ಸಾಲ ಯೋಜನೆಯ ಹಣ ಸೇವಾನಿರತರ ಕಚೇರಿಯ ಒಳಗೆ ನುಗ್ಗಿ, ಸುಮಾರು 2.50 ಲಕ್ಷ ರೂಪಾಯಿಯನ್ನು ದರೋಡೆ ಮಾಡಿದ್ದಾರೆ.  

ಶ್ರೀಕ್ಷೇತ್ರ ಧರ್ಮಸ್ಥಳ ಯೋಜನೆಯ ಸೇವಾನಿರತೆಗೆ ದೊಣ್ಣೆಯಿಂದ ಹಲ್ಲೆ ► 2.50 ಲಕ್ಷ ರೂ. ದರೋಡೆ Read More »

ಕರಾವಳಿ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್!

(ನ್ಯೂಸ್ ಕಡಬ) newskadaba.com ಉಡುಪಿ,ಸೆ.02, ಹೆಬ್ಬಾವಿನಿಂದ ಕಚ್ಚಿಸಿಕೊಂಡ ವ್ಯಕ್ತಿಯೋರ್ವರು ಹೆಬ್ಬಾವಿನ ಜೊತೆಗೇ ಆಸ್ಪತ್ರೆಗೆ ಬಂದ ಘಟನೆ ಕುಂದಾಪುರ ತಾಲೂಕಿನಲ್ಲಿ ತಲ್ಲೂರಿನ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರಿನ ಕೋಟೆಬಾಗಿಲು ಪಾರ್ತಿಕಟ್ಟೆಯ ಬಳಿಯ ಮನೆಯೊಂದರಲ್ಲಿ ಬೃಹತ್ ಗಾತ್ರದ ಹಾವನ್ನು ಹೆಮ್ಮಾಡಿಯ ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್ ಹಿಡಿಯಲು ಯತ್ನಿಸಿದ್ದರು. ಈ ಸಂದರ್ಭ ಹೆಬ್ಬಾವು ಅವರ ಬಲಗೈಗೆ ಕಚ್ಚಿದ್ದು, ಅದೇ ಹಾವಿನ ಸಮೇತ ಜೋಸೆಫ್ ಆಸ್ಪತ್ರೆಗೆ ತೆರಳಿ ವೈದ್ಯರ ಮುಂದೆ ಬಂದಿದ್ದಾರೆ. ಪಾರ್ತಿಕಟ್ಟೆಯ ನಿವಾಸಿಯೋರ್ವರ ಮನೆಯ ಹಿತ್ತಲ

ಕಚ್ಚಿದ ಹೆಬ್ಬಾವು ಜೊತೆ ಉಡುಪಿಯ ಆಸ್ಪತ್ರೆಗೆ ಬಂದು ದಾಖಲಾದ ► ಸ್ನೇಕ್ ಮಾಸ್ಟರ್ ಜೋಸೆಫ್ ಲೂವಿಸ್! Read More »

ಕರಾವಳಿ
Scroll to Top