ಅಪಘಾತದ ಗಾಯಾಳುವನ್ನು ತನ್ನ ಸ್ಕೂಟರ್ ನಲ್ಲೇ ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೇದೆ..! ಕಮಿಷನರ್ ಅನುಪಮ್ ಅಗರ್ವಾಲ್ ಶ್ಲಾಘನೆ
(ನ್ಯೂಸ್ ಕಡಬ) newskadaba.com ಅ.23. ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಕಾನ್ಸ್ ಟೇಬಲ್ ತನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ದಾಖಲಿಸಿ ಸಮಯಪ್ರಜ್ಞೆ ಮೆರೆದಿರುವ ಕುರಿತು ಮಂಗಳೂರಿನಿಂದ ವರದಿಯಾಗಿದೆ. ಬುಧವಾರದಂದು ಮುಂಜಾವ ಸುಮಾರು 3:40ರ ಸುಮಾರಿಗೆ ನಗರದ ಕೆಪಿಟಿ ಬಳಿ ಪಿಕ್ ಅಪ್ ವಾಹನ ಮತ್ತು ಕಂಟೈನರ್ ಲಾರಿ ಮಧ್ಯೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ಲೀನರ್ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಮಾಹಿತಿ ಪಡೆದ ಕದ್ರಿ ಠಾಣೆಯ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಮನ್ಶಿದಾ ಬಾನು ತಕ್ಷಣ […]

