leopard

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ. 21. ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲೆಂದು ಸವಣಾಲು ಗ್ರಾಮದ ಗುರಿಕಂಡ ಆನಂದ ಶೆಟ್ಡಿ ಎಂಬವರ ಮನೆ ಬಳಿಯಲ್ಲಿ ಇರಿಸಿದ್ದ ಬೋನಿಗೆ ಮತ್ತೊಂದು ಚಿರತೆ ಬಿದ್ದಿದ್ದು, ಈ ಗ್ರಾಮದಲ್ಲಿ ಒಂದೇ ತಿಂಗಳಲ್ಲಿ ಬೋನಿಗೆ ಬಿದ್ದ 2ನೇ ಚಿರತೆ ಇದಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಗುರಿಕಂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷವಾದ ಬಗ್ಗೆ ಇಲ್ಲಿನ ನಿವಾಸಿಗಳು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಅದರಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿ ಪರಿಶೀಲನೆ ನಡೆಸಿ […]

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೋನಿಗೆ ಸೆರೆಸಿಕ್ಕ 2ನೇ ಚಿರತೆ Read More »

ಕರಾವಳಿ

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 13.  ಅಂಜನಾದ್ರಿ ಹಾಗೂ ಪಂಪಾಸರೋವರದ ಬಳಿ ಆಗಾಗ್ಗೆ ಚಿರತೆ ಹಾಗೂ ಕರಡಿ ಕಾಣಿಸಿಕೊಳ್ಳುತ್ತಿದ್ದು, ಪ್ರವಾಸಿಗರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಕರಡಿಗಳು ನುಗ್ಗಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಭಕ್ತರು ಹಾಗೂ ಪ್ರವಾಸಿಗರ ಆಗ್ರಹಿಸುತ್ತಿದ್ದಾರೆ. ಉತ್ತರ ಭಾರತದಿಂದ ಬರುವ ಅನೇಕ ಪ್ರವಾಸಿಗರು ಇಲ್ಲಿ ರಾತ್ರಿ ವೇಳೆ ಸಮಯ ಕಳೆಯಲು ಬಯಸುತ್ತಾರೆ.

ಅಂಜನಾದ್ರಿ- ಪಂಪಾಸರೋವರದ ಬಳಿ ಚಿರತೆ, ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ Read More »

ಕರ್ನಾಟಕ

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಫೆ. 20. ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲ ಹಾಗೂ ಸರಳೇಬೆಟ್ಟು ಪರಿಸರದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆ ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯವರು ಬೋನು ಇಟ್ಟು ಕಾರ್ಯಾಚರಣೆ ನಡೆಸಿದ್ದಾರೆ. ಪರ್ಕಳದ ಸಣ್ಣಕ್ಕೀಬೆಟ್ಟುವಿನಲ್ಲಿ ಸೋಮವಾರ ಹಗಲು ಹೊತ್ತಿನಲ್ಲಿಯೇ ಚಿರತೆಯೊಂದು ನವಿಲನ್ನು ಹಿಡಿದು ತಿನ್ನುವ ದೃಶ್ಯ ಕಂಡುಬಂದಿದೆ ಎಂದು ಸಣ್ಣಕ್ಕಿಬೆಟ್ಟುವಿನ ಆಟೋ ಚಾಲಕರೋರ್ವರು ತಿಳಿಸಿದ್ದಾರೆ. ಮಣಿಪಾಲದ ಎಂಡ್ ಪಾಯಿಂಟ್ ಸಮೀಪದ ವಿಜಯನಗರ ಪರಿಸರದಲ್ಲಿ ಚಿರತೆಯ ಆರ್ಭಟ ಕೇಳಿಸುತ್ತಿದ್ದು, ಇಲ್ಲಿ ಬೋನು ತಂದು ಇಡುವಂತೆ ಸ್ಥಳೀಯರು

ಮಣಿಪಾಲ ಪರಿಸರದಲ್ಲಿ ಚಿರತೆ ಓಡಾಟ- ಕಾರ್ಯಾಚರಣೆಯಲ್ಲಿ ತೊಡಗಿದ ಅರಣ್ಯ ಇಲಾಖೆ Read More »

ಕರ್ನಾಟಕ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ

(ನ್ಯೂಸ್ ಕಡಬ) newskadaba.com ಹಾಸನ,ಸೆ.22. ಕಾರು ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಅರಸೀಕೆರೆ ತಾಲೂಕಿನ ಬಾಣಾವರ ಕೆರೆ ಬಳಿ ನಡೆದಿದೆ. ಕೆರೆ ಏರಿ ಮೇಲೆ ಬಂದ ಚಿರತೆಗೆ ಎದುರಿನಿಂದ ವೇಗವಾಗಿ ಬಂದ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಕಾರಿನ ಚಾಲಕ ಪರಾರಿಯಾಗಿದ್ದಾನೆ. ಢಿಕ್ಕಿ ಹೊಡೆದ ಪರಿಣಾಮ ಚಿರತೆಯ ಮುಖಕ್ಕೆ ಗಂಭೀರವಾಗಿ ಗಾಯಗಳಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ರಸ್ತೆಯಲ್ಲಿ ಬಿದ್ದಿದೆ. ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಬಂದು ಚಿರತೆಯನ್ನು ತಮ್ಮ ವಶಕ್ಕೆ ಪಡೆದು ಅರಸೀಕೆರೆ ಆಸ್ಪತ್ರೆಗೆ

ಚಿರತೆಗೆ ಕಾರು ಡಿಕ್ಕಿ, ಚಾಲಕ ಪರಾರಿ ► ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿರತೆ Read More »

ಕರಾವಳಿ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ

(ನ್ಯೂಸ್ ಕಡಬ) newskadaba.com ತುಮಕೂರು, ಆ.28, ಇಲ್ಲಿಯ ಗುಬ್ಬಿ ತಾಲೂಕಿನ ನಾಗಸಂದ್ರ ಗ್ರಾಮದ ಅಶೋಕ್ ಎಂಬವರ  ಮನೆಯ ಸ್ನಾನದ ಕೋಣೆಯಲ್ಲಿ ಸೋಮವಾರ ಬೆಳ್ಳಂ ಬೆಳಗ್ಗೆ ಚಿರತೆಯೊಂದು ಕಾಣಿಸಿಕೊಂಡಿದೆ. ಅಶೋಕ್ ಎಂಬವರ ಮನೆಯ ಹಿಂಭಾಗದ ಸ್ನಾನದ ಕೋಣೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಬೆಳಗಿನ ಜಾವ ಸುಮಾರು 5 ಗಂಟೆಗೆ ಮನೆಯವರು ಸ್ನಾನದ ಕೋಣೆಗೆ ಹೋಗಿದ್ದಾಗ ಚಿರತೆ ಕಾಣಿಸಿಕೊಂಡಿದೆ. ತಕ್ಷಣ ಅಲ್ಲಿಯ ಗ್ರಾಮಸ್ಥರ ಸಹಾಯದಿಂದ ಆ ಚಿರತೆಯನ್ನು ಸ್ನಾನದ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ. ಬಳಿಕ ಸ್ಥಳಕ್ಕೆ ಗುಬ್ಬಿ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದಾರೆ. ಸದ್ಯ ಅದಕ್ಕೆ

ಬಚ್ಚಲು ಕೋಣೆಯಲ್ಲಿ ಚಿರತೆ ಪ್ರತ್ಯಕ್ಷ ► ಅರಣ್ಯ ಸಿಬ್ಬಂದಿಗಳಿಂದ ಸೆರೆ Read More »

ಕರ್ನಾಟಕ
Scroll to Top