madikeri

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್

(ನ್ಯೂಸ್‌ ಕಡಬ) newskadaba.com,  ಡಿ.15:  ವಿರಾಜಪೇಟೆ ಮೌಲ್ಯತಿರುವ ಮಾಕುಟ್ಟ ಬಳಿ, ಮಗಡಿಪಾರೆ ಆಂಜನೇಯ ದೇವಾಲಯದ ಹತ್ತಿರ ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಆಗಿದ್ದು, ಮೈಸೂರಿನಿಂದ ಪ್ರವಾಸಿಗರನ್ನು ಇಳಿಸಿದ ನಂತರ ವಾಪಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಪ್ರವಾಸಿಗರು ಬಸ್‌ನಲ್ಲಿ ಇದ್ದಿದ್ದರೆ, ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. […]

ಮಡಿಕೇರಿಯಲ್ಲಿ ಹೊತ್ತಿ ಉರಿದ ಪ್ರವಾಸಿ ಬಸ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಮಡಿಕೇರಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಕಿರು ಸಾಲದವರ ಕಿರುಕುಳ ತಾಳಲಾಗದೆ ಗುಂಡು ಹಾರಿಸಿಕೊಂಡು ಮಾಜಿ ಯೋಧರೊಬ್ಬರು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಮಡಿಕೇರಿಯ ಮಹಿಳಾ ಸಮಾಜದ ಗೋದಾಮಿನಲ್ಲಿ ಮಾಜಿ ಯೋಧ ದೇವಜನ ಜಗದೀಶ್ (56) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಗದೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದು, ಆರ್ಥಿಕ ಸಮಸ್ಯೆ, ಮೈಕ್ರೋ ಫೈನಾನ್ಸ್‌ನಿಂದ ಕಿರಿಕಿರಿ ಎಂದು ಉಲ್ಲೇಖಿಸಿದ್ದಾರೆ. ಮಡಿಕೇರಿ ನಗರ ಪೊಲೀಸ್

ಮೈಕ್ರೋ ಫೈನಾನ್ಸ್‌ ಕಿರುಕುಳ, ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಲಕಾವೇರಿ: ನಾಳೆ ಪವಿತ್ರ ತೀರ್ಥೋದ್ಭವ

(ನ್ಯೂಸ್ ಕಡಬ)newskadaba.com, ಅ. 14 ಮಡಿಕೇರಿ: ಕಾವೇರಿಯ ಉಗಮಸ್ಥಾನ ತಲಕಾವೇರಿ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅ. 17ರ ಬೆಳಗ್ಗೆ 7.40ಕ್ಕೆ ತುಲಾ ಸಂಕ್ರಮಣ ಮುಹೂರ್ತದಲ್ಲಿ ಪವಿತ್ರ ತೀರ್ಥೋದ್ಭವ ಜರಗಲಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌. ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ಶಾಸಕರಾದ ಎ.ಎಸ್‌. ಪೊನ್ನಣ್ಣ, ಡಾ| ಮಂತರ್‌ ಗೌಡ ಮುಂತಾದವರು ಪಾಲ್ಗೊಳ್ಳಲಿದ್ದಾರೆ.ಪೊಲೀಸ್‌ ಇಲಾಖೆಯಿಂದ ಜಿಲ್ಲಾ ಮಟ್ಟದಲ್ಲಿ ಬಂದೋಬಸ್ತ್ ಮಾಡಲಾಗಿದ್ದು, ಅಗತ್ಯ ಪೊಲೀಸರನ್ನು

ತಲಕಾವೇರಿ: ನಾಳೆ ಪವಿತ್ರ ತೀರ್ಥೋದ್ಭವ Read More »

ಕರ್ನಾಟಕ

ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಅ. 14. ಕ್ಯಾಂಟರ್‌, ಕಾರು ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಮಡಿಕೇರಿ- ಸುಂಟಿಕೊಪ್ಪ ಹೆದ್ದಾರಿಯಲ್ಲಿ ಶುಕ್ರವಾರದಂದು ನಡೆದಿದೆ. ಮೃತ ಸವಾರನನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭೈರವ(30) ಎಂದು ಗುರುತಿಸಲಾಗಿದೆ. ಬೈರವ ಅವರು ಮಡಿಕೇರಿಯಿಂದ ಕೆ.ಆರ್.ನಗರದ ಕಡೆಗೆ ಪಲ್ಸರ್ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಪಕ್ಕಕ್ಕೆ ಬಿದ್ದಿದ್ದಾರೆ. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಕ್ಯಾಂಟರ್‌ನ ಹಿಂದಿನ ಚಕ್ರ ಇವರ

ಸರಣಿ ಅಪಘಾತ- ಬೈಕ್ ಸವಾರನ ಮೇಲೆ ಹರಿದ ಕ್ಯಾಂಟರ್ – ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜೂ. 23. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರನ ದೇಹ ಎರಡು ತುಂಡಾಗಿ ಮೃತಪಟ್ಟ ಘಟನೆ ಕುಶಾಲನಗರದ ಕುಡ್ಲೂರು ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹಾಸನ ಜಿಲ್ಲೆಯ ಅರಸೀಕೆರೆಯ ಗಂಗಾಧರ ಎಂದು ಗುರುತಿಸಲಾಗಿದೆ. ಕುಶಾಲನಗರದಲ್ಲಿ ವಿದ್ಯುತ್ ಕಂಬದ ಕೆಲಸ ಮಾಡುತ್ತಿದ್ದ ಈತ ಕೆಲಸ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಪರಿಣಾಮ ಸವಾರನ ಮೇಲೆ ಲಾರಿ ಹರಿದು, ದೇಹ ಎರಡು ತುಂಡಾಗಿದೆ. ಈ ಕುರಿತು

ಬೈಕ್- ಲಾರಿ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು

(ನ್ಯೂಸ್ ಕಡಬ)newskadab.com  ಮಡಿಕೇರಿ, ಜ.18. ವಿವಾಹಿತ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ವೀರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐಮಂಗಲ ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿಗಳಾದ ಯೇಸುದಾಸ್‌ ಹಾಗೂ ತಾರಾ ದಂಪತಿಯ ಪುತ್ರ ರಕ್ಷಿತ್‌ ಅವರ ಪತ್ನಿ ಕಾವ್ಯಾ (23) ಮೃತಪಟ್ಟವರು ಎನ್ನಲಾಗಿದೆ. ರಕ್ಷಿತ್‌ ಕೆಲಸ ಮುಗಿಸಿ ಮನೆಗೆ ಬಂದಾಗ ಕಾವ್ಯಾ ಯಾವುದೇ ಪ್ರತಿಕ್ರಿಯೆ ಇಲ್ಲದೆ ಬಿದ್ದಿದ್ದರೆನ್ನಲಾಗಿದೆ. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 4 ವರ್ಷಗಳ ಹಿಂದೆ ರಕ್ಷಿತ್‌ ಹಾಗೂ ಕಾವ್ಯಾ

ಮಡಿಕೇರಿ: ವಿವಾಹಿತ ಮಹಿಳೆಯ ಅನುಮಾನಾಸ್ಪದವಾಗಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಕೊಡಗು, ಜ. 16. ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ತಮ್ಮಯ್ಯ ಎನ್ನಲಾಗಿದ್ದು, ಈತನೂ ಆತ್ಮಹತ್ಯೆ ಮಾಡಿರುವ ಶಂಕೆ‌ ಇದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ.14. ತಾಯಿಯ ಪ್ರಾಣ ಉಳಿಸಿದ ಮೂರನೇ ತರಗತಿಯ ಬಾಲಕ ದೀಕ್ಷಿತ್‌ ಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಗರಿಮೆ ಸಿಕ್ಕಿದ್ದು, ಜ.26ರಂದು ಗಣರಾಜ್ಯೋತ್ಸವ ಅಂಗವಾಗಿ ನಡೆಯಲಿರುವ 2022-23ನೇ ಸಾಲಿನ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ವಿತರಣ ಸಮಾರಂಭದಲ್ಲಿ ದೀಕ್ಷಿತ್‌ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಸ್ವೀಕರಿಸಲಿದ್ದಾನೆ ಎಂದು ತಿಳಿದುಬಂದಿದೆ‌. ದೀಕ್ಷಿತ್‌ ತಾಯಿ ಅರ್ಪಿತಾ ಕೂಡೂರು ಗ್ರಾಮದ ಹಿಟ್ಟಿನ ಗಿರಣಿಯಲ್ಲಿ ಅಕ್ಕಿ ಪುಡಿ ಮಾಡಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಗಿರಣಿಯ ಬೆಲ್ಟ್ ಗೆ ಅವರ ತಲೆ ಸಿಲುಕಿಕೊಂಡು ಜೋರಾಗಿ

ಮಡಿಕೇರಿ: ತಾಯಿಯ ಪ್ರಾಣ ಉಳಿಸಿದ ಬಾಲಕನಿಗೆ ರಾಷ್ಟ್ರೀಯ ಶೌರ್ಯ ಪ್ರಶಸ್ತಿ..! Read More »

ಕರಾವಳಿ, ಕರ್ನಾಟಕ
crime, arrest, suspected

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08. ಹಿಂದೂ ಧರ್ಮದ ಅವಹೇಳನ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಿದ ಘಟನೆ ಕೊಡಗಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿ ನಿಶಾಂತ್ ಹಿಂದೂ ಧರ್ಮ ಅವಹೇಳನ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಕ್ರೈಸ್ತ ಧರ್ಮದ ಪುಸ್ತಕ ಮಾರಾಟ ಮಾಡುವ ವೇಳೆ ಅವಹೇಳನ ಆರೋಪವಿದ್ದು, ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ನಿಶಾಂತ್ ಪುಸ್ತಕ ಮಾರುತ್ತಿದ್ದ. ಈ ವೇಳೆ ಹಿಂದೂ ದೇವತೆಗಳಿಂದ ಮನುಷ್ಯನ ಆರೋಗ್ಯ ಸುಧಾರಿಸಲು ಸಾಧ್ಯವಿಲ್ಲ ಎಂದು ಜನರಿಗೆ ಹೇಳಿ ಕ್ರೈಸ್ತಧರ್ಮದ ಬೆಳಕು ಪುಸ್ತಕ ಮಾರಾಟಕ್ಕೆ ಯತ್ನಿಸಿದ್ದಾನೆ. ಈ

ಮಡಿಕೇರಿ: ಹಿಂದೂ ಧರ್ಮ ಅವಹೇಳನ ಆರೋಪ ➤  ಆರೋಪಿ ಅರೆಸ್ಟ್..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ   ➤ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 31. ಮನೆಯ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿರುವ ಘಟನೆ ಮಡಿಕೇರಿಯ ರಾಣಿಪೇಟೆ ಎಂಬಲ್ಲಿ ಸಂಭವಿಸಿದೆ. ಚಾಲಕ ಅಬೂತಾಹೀರ್ ಎಂಬವರು ಆಟೋರಿಕ್ಷಾವನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು. ಕಿಡಿಗೇಡಿ ಬೆಂಕಿ ಹಚ್ಚುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.  

ಮನೆ ಮುಂದೆ ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ   ➤ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top