madikeri

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ    

(ನ್ಯೂಸ್ ಕಡಬ) newskadaba.com  ಮಡಿಕೇರಿ, ಡಿ.20   ಕಟ್ಟಡ ತ್ಯಾಜ್ಯವನ್ನು ನಗರದಲ್ಲಿ ಎಲ್ಲೆಂದರಲ್ಲಿ ಸುರಿಯುವವರಿಗೆ ರೂ.1 ಸಾವಿರದವರೆಗೆ ದಂಡ ವಿಧಿಸಲು ನಗರಸಭೆ ನಿರ್ಧರಿಸಿದೆ. ನಗರಸಭೆಯು ತಾತ್ಕಾಲಿಕವಾಗಿ ಘನತಾಜ್ಯ ನಿವೇಶನ ಘಟಕದಲ್ಲಿ ಜಾಗವನ್ನು ನಿಗದಿಪಡಿಸಿದೆ. ಇಲ್ಲಿ ನಿಗದಿತ ಶುಲ್ಕ ಪಾವತಿಸಿ ವಾಹನವನ್ನು ಅಗತ್ಯವಿದ್ದಲ್ಲಿ ಪಡೆಯಬಹುದು ಅಥವಾ ಖಾಸಗಿ ವಾಹನ ಉಪಯೋಗಿಸಿಕೊಂಡು ನಿಗದಿತ ಸ್ಥಳದಲ್ಲಿ ವಿಲೇವಾರಿ ಮಾಡಬೇಕು ಎಂದು ನಗರಸಭೆಯ ಪೌರಾಯುಕ್ತ ಡಾ. ವಿಜಯ್ ಎಚ್ಚರಿಕೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.  

ಮಡಿಕೇರಿ : ತ್ಯಾಜ್ಯ ಎಲ್ಲೆಂದರಲ್ಲಿ ಎಸೆದರೆ ದಂಡ     Read More »

ಕರಾವಳಿ, ಕರ್ನಾಟಕ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!!

(ನ್ಯೂಸ್ ಕಡಬ) newskadaba.com ಬಂಟ್ವಾಳ: ಆ.07,. ತಲಕಾವೇರಿಯಲ್ಲಿ ಗುಡ್ಡ ಕುಸಿದು ನಾಪತ್ತೆಯಾದ ಐವರು ಅರ್ಚಕರ ಪೈಕಿ ಒಬ್ಬರು ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ನಿವಾಸಿ ಎಂದು ಮಾಹಿತಿ ಲಭ್ಯವಾಗಿದ್ದು, ರಾಮಕೃಷ್ಣ ರೇಣುಕಾ ಭಟ್ ದಂಪತಿಯ ಪುತ್ರ 24 ವರ್ಷದ ರವಿಕಿರಣ್ ನಾಪತ್ತೆಯಾದ ಯುವ ಅರ್ಚಕರು ಎಂದು ತಿಳಿದುಬಂದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಗುರುವಾರ ಬೆಳಿಗ್ಗೆ ತಲಕಾವೇರಿಯಲ್ಲಿ ಗುಡ್ಡ ಜರಿದು ಬಿದ್ದ ಹಿನ್ನೆಲೆಯಲ್ಲಿ ಆರ್ಚಕರ ಮನೆ ಸಂಪೂರ್ಣ ಜಲಸಮಾದಿಯಾಗಿತ್ತು. ಮನೆಯೊಳಗೆ ಇದ್ದ ಎಲ್ಲರೂ

ತಲಕಾವೇರಿ ಗುಡ್ಡ ಕುಸಿತ➤ಬಂಟ್ವಾಳದ ಓರ್ವ ಅರ್ಚಕರು ನಾಪತ್ತೆ..!!! Read More »

ಕರಾವಳಿ

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!!

(ನ್ಯೂಸ್ ಕಡಬ) newskadaba.com ಮಡಿಕೇರಿ: ಜು.29., ಕೊರೋನಾ ಸಂಕಷ್ಟ ಹಿನ್ನಲೆ ಖದೀಮರ ತಂಡವೊಂದು ಬ್ಯಾಂಕ್ ದರೋಡೆಗೆ ಪ್ರಯತ್ನಿಸಿದ ಘಟನೆ ಮಡಿಕೇರಿ ಸಮೀಪದ ಮಕ್ಕಂದೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ನಡೆದಿದೆ. ಬ್ಯಾಂಕ್ ಗೋಡೆಯನ್ನು ಮಾತ್ರ ಒಡೆದಿರುವ ದರೋಡೆಕೋರರು ಸ್ರ್ಟಾಂಗ್ ರೂಮ್‍ಗೆ ಪ್ರವೇಶಿಸಲು ವಿಫಲರಾಗಿದ್ದಾರೆ. ಪೂರ್ವ ಯೋಜಿತವಾಗಿ ಸಂಚು ರೂಪಿಸಿರುವ ಖದೀಮರು, ಮೊದಲು ಬ್ಯಾಂಕಿಗೆ ಕಲ್ಪಿಸುವ ವಿದ್ಯುತ್ ತಂತಿಯನ್ನು ಕತ್ತರಿಸಿ ಸಿಸಿಟಿವಿಯನ್ನು ಕಿತ್ತೆಸೆದು ಬಳಿಕ ಕಬ್ಬಿಣದ ಹಾರೆ ಮತ್ತು ಸಲಾಕೆಗಳಿಂದ ಬ್ಯಾಂಕ್‍ನ ಹಿಂಬದಿಯ ಗೋಡೆಯನ್ನು ಹೊಡೆದು ಸ್ರ್ಟಾಂಗ್ ರೂಮ್‍ಗೆ

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!! Read More »

ಕರ್ನಾಟಕ

ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ.18. ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾವೇರಿ ನದಿಗೆ ಉರುಳಿ ಬಿದ್ದ ಘಟನೆ ಕುಶಾಲನಗರ ಸಮೀಪದ ಬೇತ್ರಿ ಸೇತುವೆ ಬಳಿ ಭಾನುವಾರದಂದು ನಡೆದಿದೆ. ಆಂಧ್ರ ಪ್ರದೇಶ ಮೂಲದ ವಿಷ್ಣು ಎಂಬವರು ತನ್ನ ಸ್ನೇಹಿತರಾದ ರಕ್ಷಿತ, ಶರಣ್ಯ ಮತ್ತು ಚಂದನ್ ಎಂಬವರೊಂದಿಗೆ ಶನಿವಾರದಂದು ಬೆಂಗಳೂರಿನಿಂದ ಕಾರೊಂದನ್ನು ಬಾಡಿಗೆಗೆ ಪಡೆದು ಮಡಿಕೇರಿಗೆ ಆಗಮಿಸಿದ್ದರು. ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಿ ಮಡಿಕೇರಿಯಿಂದ ನಾಗರಹೊಳೆಗೆ ತೆರಳುತ್ತಿದ್ದಾಗ ಮೂರ್ನಾಡು ಬಳಿಯ ಬೇತ್ರಿ ಸೇತುವೆ ಬಳಿ

ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು Read More »

ಕರ್ನಾಟಕ

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…?

(ನ್ಯೂಸ್ ಕಡಬ) newskadaba.com ಮಡಿಕೇರಿ, ನ.23. ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸೊಂದರ ಹಿಂಬದಿಯ ನಾಲ್ಕೂ ಚಕ್ರಗಳು ಒಟ್ಟಿಗೆ ಕಳಚಿದ ಘಟನೆ ಮಡಿಕೇರಿಯ ಕುಶಾಲನಗರದಲ್ಲಿ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮಡಿಕೇರಿಯ ಸೋಮವಾರ ಪೇಟೆ ತಾಲೂಕಿನ ಕುಶಾಲನಗರ ಸಮೀಪದ ಕೊಪ್ಪಳ ಎಂಬಲ್ಲಿ ತಲುಪಿದಾಗ ಹಿಂಬದಿಯ ಚಕ್ರಗಳು ಒಟ್ಟಾಗಿ ಚಾಸಿಸ್ ನಿಂದ ವಿಭಜನೆಗೊಂಡು ಹೊರಕ್ಕುರುಳಿದೆ. ಬಸ್ಸಿನಲ್ಲಿ ಉಂಟಾದ ಈ ಅವಘಡವನ್ನು ಕಂಡು ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿ ಬಿದ್ದಿದ್ದಾರೆ. ಚಾಲಕನ ಸಮಯ ಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ‌. ಅದೃಷ್ಟವಶಾತ್

ಚಲಿಸುತ್ತಿದ್ದಾಗಲೇ ಕಳಚಿದ ಕೆಎಸ್ಸಾರ್ಟಿಸಿ ಬಸ್ಸಿನ ನಾಲ್ಕು ಚಕ್ರಗಳು ► ಮುಂದೇನಾಯಿತೆಂಬ ಕುತೂಹಲವೇ…? Read More »

ಕರ್ನಾಟಕ

ಸಿದ್ದರಾಮಯ್ಯರದ್ದು ವಚನ ಭ್ರಷ್ಟ ಸರಕಾರ: ಹೆಚ್. ವಿಶ್ವನಾಥ್ ಲೇವಡಿ

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು.28. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗಣಿಧಣಿಗಳನ್ನು ಜೈಲಿಗಟ್ಟುತ್ತೇನೆ ಎಂದು ಹೇಳಿ 330 ಕಿ.ಮೀ. ಪಾದಯಾತ್ರೆ ನಡೆಸಿ, ರಾಜ್ಯದ ಬೊಕ್ಕಸ ತುಂಬುತ್ತೇನೆ ಎಂದು ಭರವಸೆ ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ವಚನ ಭ್ರಷ್ಟ ಸರಕಾರ ಎಂದು ಮಾಜಿ ಸಂಸದ, ಜೆಡಿಎಸ್ ಮುಖಂಡ ಹೆಚ್. ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಅವರು ಶುಕ್ರವಾರದಂದು ಮಡಿಕೇರಿಯಲ್ಲಿ ನಡೆದ ಜೆಡಿಎಸ್ ಪಕ್ಷಕ್ಕೆ ಮುಖಂಡರ ಸೇರ್ಪಡೆ ಹಾಗೂ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ತಮ್ಮ ಭಾಷಣದುದ್ದಕ್ಕೂ ಸಿದ್ದರಾಮಯ್ಯ

ಸಿದ್ದರಾಮಯ್ಯರದ್ದು ವಚನ ಭ್ರಷ್ಟ ಸರಕಾರ: ಹೆಚ್. ವಿಶ್ವನಾಥ್ ಲೇವಡಿ Read More »

ಕರ್ನಾಟಕ

ಬಸ್ಸಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ಮಹಿಳೆ ► ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

    (ನ್ಯೂಸ್ ಕಡಬ) newskadaba.com ಮಡಿಕೇರಿ, ಜು.16. ಬೈಕ್ ಸವಾರನೋರ್ವ ಹಿಂದುಗಡೆಯಿಂದ ಬರುತ್ತಿದ್ದ ಬಸ್ಸನ್ನು ನೋಡದೆ ಹಠಾತ್ತನೆ ಬಲಗಡೆಗೆ ತಿರುಗಿಸಿದ ಪರಿಣಾಮ ಹಿಂಬದಿ ಸವಾರೆ ಮಹಿಳೆಯೋರ್ವರು ಬಸ್ಸಿನಡಿಗೆ ಬಿದ್ದರೂ ಬಸ್ ಚಾಲಕನ ಸಮಯಪ್ರಜ್ಞೆಯಿಂದಾಗಿ ಅಪಾಯದಿಂದ ಪಾರಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಗುಡ್ಡೆಹೊಸೂರು ಬಳಿ ಬೈಕ್ ಸವಾರ ತಿರುಗಿಸಿದ್ದರಿಂದಾಗಿ ಬೈಕ್ ಸವಾರ ರಸ್ತೆಗೆ ಬಿದ್ದಿದ್ದು, ಮಹಿಳೆ ಚಕ್ರದ ಮಧ್ಯ ಬಿದ್ದಿದ್ದಾರೆ‌. ಬಸ್ ಚಾಲಕನ ಸಮಯಪ್ರಜ್ಞೆಯಿಂದ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ‌.

ಬಸ್ಸಿನ ಅಡಿಗೆ ಬಿದ್ದರೂ ಪವಾಡ ಸದೃಶ ಪಾರಾದ ಮಹಿಳೆ ► ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕರಾವಳಿ
Scroll to Top