maharashtra

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಅ.17: ಮಹಾರಾಷ್ಟ್ರದ ಅಹಿಲ್ಯಾನಗರ ಜಿಲ್ಲೆಯ ರಾಹುರಿ ಕ್ಷೇತ್ರದ ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು. ಶಿವಾಜಿ ಅವರಿಗೆ ಮುಂಜಾನೆ ಹೃದಯಾಘಾತ ಸಂಭವಿಸಿತು. ತಕ್ಷಣ ಅವರನ್ನು ಅಹಿಲ್ಯಾನಗರದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅದಾಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ಬೆನ್ನುಹುರಿ ಸಮಸ್ಯೆಯಿಂದ ಬಳಲುತ್ತಿದ್ದ ಶಿವಾಜಿ ಅವರು, ಕಳೆದ ಕೆಲ ಸಮಯಗಳಿಂದ […]

ಮಹಾರಾಷ್ಟ್ರ: ಬಿಜೆಪಿ ಶಾಸಕ ಶಿವಾಜಿ ಕಾರ್ಡಿಲೆ ಹೃದಯಾಘಾತದಿಂದ ನಿಧನ Read More »

ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ

(ನ್ಯೂಸ್‌ ಕಡಬ) newskadaba.com, ಆ.28: ಮುಂಬೈ: ಮಹಾರಾಷ್ಟ್ರದ ವಿರಾರ್‌ನಲ್ಲಿ ಬುಧವಾರ ಮುಂಜಾನೆ  ಅನಧಿಕೃತವಾಗಿ ನಿರ್ಮಿಸಿದ್ದ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗದ ಭಾಗ ಪಕ್ಕದ ಖಾಲಿ ಚಾಲ್ ಮೇಲೆ ಕುಸಿದು ಬಿದ್ದದೆ. ಪರಿಣಾಮ ಕನಿಷ್ಠ 15 ಜನರು ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸೇರಿದ್ದಾರೆ ಮತ್ತು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ 20 ಗಂಟೆಗಳಿಗೂ ಹೆಚ್ಚು ಕಾಲ ಮುಂದುವರೆದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ

ಮಹಾರಾಷ್ಟ್ರದಲ್ಲಿ ಅನಧಿಕೃತ ಕಟ್ಟಡ ಕುಸಿತ; 15 ಮಂದಿ ಸಾವು, ಹಲವರಿಗೆ ಗಾಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು

(ನ್ಯೂಸ್ ಕಡಬ) newskadaba.com ಬೆಳಗಾವಿ, ನ.21. ಬೆಳಗಾವಿಯ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳ ಉದ್ದಕ್ಕೂ ಮರಾಠಿ ಭಾಷಿಗರನ್ನು ಓಲೈಸಲು ಮಹಾರಾಷ್ಟ್ರದ ರಾಜಕೀಯ ನಾಯಕರು ಚುನಾವಣೆಯ ಸಮಯದಲ್ಲಿ ಭಾಷೆ ಮತ್ತು ಗಡಿ ವಿಷಯಗಳನ್ನು ಮತ್ತೆ ಮತ್ತೆ ತರುತ್ತಾರೆ. ಆದರೆ ಮಹಾರಾಷ್ಟ್ರದ ಗಡಿ ಗ್ರಾಮಗಳಲ್ಲಿ ಲಕ್ಷಾಂತರ ಮಂದಿ ಕನ್ನಡ ಮಾತನಾಡುವವರಿದ್ದಾರೆ, ಅವರ ಧ್ವನಿಯನ್ನು ದಶಕಗಳಿಂದ ಹತ್ತಿಕ್ಕಲಾಗಿದೆ. ಇದೀಗ ಮೊದಲ ಬಾರಿಗೆ ಮಹಾರಾಷ್ಟ್ರದ ಚುನಾವಣಾ ಆಯೋಗವು ನೆರೆಯ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಲ್ಲಿ ಇವಿಎಂ ಯಂತ್ರಗಳಲ್ಲಿ ಕನ್ನಡ ಹಾಗೂ ಮರಾಠಿಯಲ್ಲಿ ಅಭ್ಯರ್ಥಿಗಳ ಹೆಸರನ್ನು

ಮಹಾರಾಷ್ಟ್ರ ಚುನಾವಣೆ: ಮೊದಲ ಬಾರಿಗೆ EVM ನಲ್ಲಿ ಕನ್ನಡ ಭಾಷೆಯಲ್ಲಿ ಅಭ್ಯರ್ಥಿಗಳ ಹೆಸರು Read More »

ಬ್ರೇಕಿಂಗ್ ನ್ಯೂಸ್

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15.  ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಲಿದೆ. ಇಂದು ಮಧ್ಯಾಹ್ನ 3:30ಕ್ಕೆ ನಡೆಯಲಿರುವ ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಆಯೋಗವು ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಇದೇ ವೇಳೆ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ಘೋಷಿಸುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್‌ ೨೬ಕ್ಕೆ ಕೊನೆಗೊಳ್ಳಿದ್ದು, ೮೧ ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್‌ ವಿಧಾನ ಸಭೆ 2025ರ

ಇಂದು ಮಹಾರಾಷ್ಟ್ರ, ಜಾರ್ಖಂಡ್‌ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ Read More »

ರಾಷ್ಟ್ರೀಯ ನ್ಯೂಸ್

ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ

(ನ್ಯೂಸ್ ಕಡಬ)newskadaba.com, ಅ. 09ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ದಿವಂಗತ ರತನ್ ಟಾಟಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಭಾರತ ರತ್ನ‘ ವನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಮಹಾರಾಷ್ಟ್ರ ಸರ್ಕಾರ ಸಂಪುಟ ಗುರುವಾರ ಅಂಗೀಕರಿಸಿದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆ, ಕಳೆದ ರಾತ್ರಿ ಮುಂಬೈ ಆಸ್ಪತ್ರೆಯಲ್ಲಿ ನಿಧನರಾದ ಉದ್ಯಮ ರಂಗದ ದಿಗ್ಗಜ ರತನ್ ಟಾಟಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿತು. ಸಭೆಯಲ್ಲಿ ಸಂತಾಪ ಸೂಚಕ ನಿರ್ಣಯವನ್ನು ಅಂಗೀಕರಿಸಲಾಯಿತು ಎಂದು ಮುಖ್ಯಮಂತ್ರಿಗಳ ಕಚೇರಿ

ರತನ್ ಟಾಟ ರವರಿಗೆ ಭಾರತ ರತ್ನ ನೀಡಿ: ಮಹಾರಾಷ್ಟ್ರ ಸಂಪುಟ ಕೇಂದ್ರಕ್ಕೆ ಒತ್ತಾಯ Read More »

ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ. 13.  ಬಸ್ಸೊಂದು ಟ್ರಕ್ ಗೆ ಢಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟ ಹಾಗೂ ಹಲವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರದಂದು ವರದಿಯಾಗಿದೆ. ಪ್ರಾಥಮಿಕ ವರದಿಯ ಪ್ರಕಾರ ಮೃತರನ್ನು 7 ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಹಾಗೂ ಓರ್ವ ಪುರುಷ ಎಂದು ಗುರುತಿಸಲಾಗಿದೆ. ಗಾಯಳುಗಳನ್ನು ಸಿನ್ನಾರ್ ಗ್ರಾಮಾಂತರ ಆಸ್ಪತ್ರೆಗೆ ಹಾಗೂ ಸಿನ್ನಾರ್ ನಲ್ಲಿರುವ ಯಶವಂತ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ನಾಸಿನ್- ಶಿರಡಿ ಹೆದ್ದಾರಿಯಲ್ಲಿ ಪಥರೆ ಗ್ರಾಮದ

ಟ್ರಕ್ ಗೆ ಬಸ್ ಢಿಕ್ಕಿ ➤ 10 ಮಂದಿ ಮೃತ್ಯು,ಹಲವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಕ್ಯಾಂಟೀನ್ ನಲ್ಲಿ ಊಟ ಸೇವನೆ ➤ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ             

(ನ್ಯೂಸ್ ಕಡಬ) newskadaba.com ನಾಸಿಕ್, ಡಿ. 31. ವಿಷಾಹಾರ ಸೇವನೆ ಮಾಡಿ 100ಕ್ಕೂ ಅಧಿಕ ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ತಗೊಂಡಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನ ಇಗತ್ ಪುರಿ ತಾಲೂಕಿನ ಧರ್ಮಗಾಂವ್ ನಲ್ಲಿರುವ ಎಸ್ಎಂಬಿಟಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಂಭವಿಸಿದೆ. ವಿದ್ಯಾರ್ಥಿಗಳು ವಾಕರಿಕೆ ಮತ್ತು ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದಲ್ಲಿನ ಕ್ಯಾಂಟೀನ್ ನಲ್ಲಿ ಊಟ ಸೇವನೆ ಮಾಡಿದ್ದಾರೆ. ಊಟದ

ಕ್ಯಾಂಟೀನ್ ನಲ್ಲಿ ಊಟ ಸೇವನೆ ➤ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ              Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!!

(ನ್ಯೂಸ್ ಕಡಬ) newskadaba.com., ಮುಂಬೈ.ಜು.04., ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ನಿಯಂತ್ರಿಸಲು ಸ್ಯಾನಿಟೈಸರ್ ಹಾಗೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದೆ. ಇದೀಗ ವ್ಯಕ್ತಿಯೊಬ್ಬರು 2.89 ಲಕ್ಷ ಬೆಲೆ ಬಾಳುವ ಮಾಸ್ಕ್ ತಯಾರಿಸಿ ಅದನ್ನು ಧರಿಸುವ ಮೂಲಕ ಸುದ್ದಿಯಾಗಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಡೆ ಎಂಬವರು 2.89 ಲಕ್ಷ ಮೌಲ್ಯದ ಮಾಸ್ಕ್ ತಯಾರಿಸಿ, ತಾನೇ ಧರಿಸಿರುವ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಬಗ್ಗೆ ಮಾತನಾಡಿರುವ ಶಂಕರ್, ಈ

ತಯಾರಾಯ್ತು 2.89 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್.!! Read More »

ರಾಷ್ಟ್ರೀಯ ನ್ಯೂಸ್

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ  

(ನ್ಯೂಸ್ ಕಡಬ) newskadaba.com  ಮುಂಬೈ, ಮೇ.26., ಮಾರಕ ಕೊರೋನಾ ವೈರಸ್ ಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದ್ದು, ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ ಬರೊಬ್ಬರಿ 60 ಮಂದಿ ಕೊರೋನಾ ಬಲಿ ಪಡೆಯುವ ಮೂಲಕ ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿನ ಕೊರೋನಾ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯವೊಂದರಲ್ಲಿ ಒಂದೇ ದಿನ ಇಷ್ಟು ಪ್ರಮಾಣದ ಸಾವು ಸಂಭವಿಸಿದೆ. ನಿನ್ನೆ ದೇಶಾದ್ಯಂತ 146 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ  ಸಂಖ್ಯೆ 4,167ಕ್ಕೆ ಏರಿಕೆಯಾಗಿದೆ.

ಕೊರೋನಾ ಅಟ್ಟಹಾಸ ➤ಮಹಾರಾಷ್ಟ್ರದಲ್ಲಿ ಒಂದೇ ದಿನ 60 ಬಲಿ   Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top