malpe

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ

(ನ್ಯೂಸ್ ಕಡಬ) newskadaba.com ಫೆ. 25 ಮಲ್ಪೆ: ಮಲ್ಪೆ ಸೈಂಟ್ ಮೇರಿಸ್ ದ್ವೀಪದ ಬಳಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕರಾವಳಿ ಕಾವಲು ಪೊಲೀಸ್ ಹಾಗೂ ಮಂಗಳೂರು ಕೋಸ್ಟ್ ಗಾರ್ಡ್ ವಶಕ್ಕೆ ಪಡೆದುಕೊಂಡಿದ್ದು, ಅದರಲ್ಲಿದ್ದ ಮೂವರು ತಮಿಳುನಾಡು ಮೂಲದ ಮೀನುಗಾರರನ್ನು ಬಂಧಿಸಲಾಗಿದೆ. ಬಂಧಿತರನ್ನು ಭಾರತೀಯ ಮೂಲದ ತಮಿಳುನಾಡು ನಿವಾಸಿಗಳೆನ್ನಲಾದ ಜೇಮ್ಸ್ ಫ್ರಾಂಕ್ಲಿನ್, ರಾಬಿನ್ ಸ್ಟನ್, ಡಿರೋಸ್ ಅಲ್ಫೋನ್ಸ್ ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮಲ್ಪೆ: ಸೈಂಟ್ ಮೇರಿಸ್ ದ್ವೀಪದ ಬಳಿ ವಿದೇಶಿ ಮೀನುಗಾರಿಕೆ ಬೋಟ್ ವಶ Read More »

ಕರಾವಳಿ

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ

(ನ್ಯೂಸ್ ಕಡಬ) newskadaba.com ನ. 09. ಪ್ರವಾಸಿಗರ ಆಕರ್ಷಣೆಯಲ್ಲೊಂದಾದ ಮಲ್ಪೆಯ ಫ್ಲೋಟಿಂಗ್ ಬ್ರಿಡ್ಜ್ ನವೆಂಬರ್ 6ರಿಂದ ಪ್ರವಾಸಿಗರಿಗೆ ತೆರೆಯಲಾಗಿದ್ದು, ಪ್ರವಾಸಿಗರಿಂದ ಉತ್ತಮ ಸ್ಪಂದನೆ ದೊರೆತಿದೆ. ಪ್ರತಿದಿನ 4ರಿಂದ 5 ಸಾವಿರ ಪ್ರವಾಸಿಗರು ಬೀಚ್‌ಗೆ ಬರುತ್ತಿದ್ದು, ವಾರಾಂತ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಸಂಜೆ ಹೊತ್ತಿಗೆ ಮಲ್ಪೆ ಬೀಚ್‌ ಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಸುಮಾರು 130 ಮೀ. ಉದ್ದ, 3 ಮೀ. ಅಗಲವಿರುವ ಈ ಬ್ರಿಡ್ಜ್ ನಲ್ಲಿ ಏಕಕಾಲಕ್ಕೆ 200ಕ್ಕೂ ಮಿಕ್ಕ

ಮಲ್ಪೆ ಬೀಚ್ ನಲ್ಲಿ ಫ್ಲೋಟಿಂಗ್ ಬ್ರಿಡ್ಜ್ ಓಪನ್- ಪ್ರವಾಸಿಗರಿಂದ ಉತ್ತಮ ಸ್ಪಂದನೆ Read More »

ಕರಾವಳಿ, ಕರ್ನಾಟಕ

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..!

(ನ್ಯೂಸ್ ಕಡಬ) newskadaba.com ಅ. 22. ಅದೃಷ್ಟ ಯಾರಿಗೆ ಯಾವಾಗ ಬರುತ್ತದೆ ಎಂದು ಹೇಳುವುದು ಅಸಾಧ್ಯ ಅದರಲ್ಲೂ ಮೀನುಗಾರರಿಗೆ ಅದೃಷ್ಟ ಅನ್ನೋದು ಬಹಳ ಮುಖ್ಯವಾಗುತ್ತದೆ. ಆಳ ಸಮುದ್ರದಲ್ಲಿ ಮೀನುಗಾರಿಕೆಗೆಂದು ತಿಂಗಳುಗಟ್ಟಲೆ ಹೋಗಿ ಖಾಲಿ ಕೈಯಲ್ಲೂ ವಾಪಾಸ್ ಬರೋದಿದೆ. ಆದರೆ ಮಲ್ಪೆ ಮೀನುಗಾರರು ಭರ್ಜರಿ ತೊರಕೆ ಮೀನೊಂದನ್ನು ಭೇಟೆಯಾಡಿದ್ದಾರೆ. ಸ್ಟಿಂಗ್ ರೇ ಎಂದು ಕರೆಯಲ್ಪಡುವ ಬೃಹತ್ ತೂಕದ ತೊರಕೆ ಮೀನು ಬಲೆಗೆ ಬಿದ್ದು ಮೀನುಗಾರರ ಅದೃಷ್ಟ ಖುಲಾಯಿಸಿದೆ. ಸುಮಾರು 250 ಕೆ.ಜಿ ತೂಗುವ ತೊರಕೆ ಮೀನು ಬಲೆಗೆ ಬಿದ್ದಿದ್ದು,

ಮಲ್ಪೆಯಲ್ಲಿ ಬರೋಬ್ಬರಿ 250 ಕೆಜಿ ತೊರಕೆ ಮೀನು ಬಲೆಗೆ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 11. ಕರಾವಳಿಯ ಪ್ರಮುಖ ತೀರಗಳಾದ ಮಲ್ಪೆ ಹಾಗೂ ಮೂಲ್ಕಿ ಎಂಬ ಹೆಸರಿರುವಂತಹ ಆಳವಿಲ್ಲದ ನೀರಿನಲ್ಲಿ ಚಲಿಸಬಲ್ಲ 2 ಜಲಾಂತರ್ಗಾಮಿ ನಿಗ್ರಹ ಹಡಗುಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಸಂಪೂರ್ಣವಾಗಿ ದೇಶೀಯ ತಂತ್ರಜ್ಞಾನವನ್ನು ಬಳಕೆ ಮಾಡಿಕೊಂಡು ಈ ಹಡಗುಗಳನ್ನು ಭಾರತೀಯ ನೌಕಾಪಡೆ ತಯಾರಿಸಿದೆ. ಈ ಹಡಗುಗಳಲ್ಲಿ ನೀರಿನಾಳದಲ್ಲಿರುವ ವಸ್ತುಗಳನ್ನು ಗುರುತಿಸಬಲ್ಲ ಸೆನ್ಸರ್ ಗಳನ್ನು ಅಳವಡಿಸಲಾಗಿದೆ. ತೀರ ಪ್ರದೇಶದಲ್ಲಿನ ನೆಲಬಾಂಬ್ ಗಳನ್ನು ಪತ್ತೆಹಚ್ಚಲು, ಜಲಾಂತರ್ಗಾಮಿಗಳ ಸಂಚಾರದ ಮೇಲೆ ಕಣ್ಣಿಡಲು ಇವು ಸಹಾಯ ಮಾಡುತ್ತವೆ. ಒಟ್ಟು 16 ಜಲಾಂತರ್ಗಾಮಿ

ಮಲ್ಪೆ, ಮುಲ್ಕಿ ಹೆಸರಿನ ಹಡಗು ಲೋಕಾರ್ಪಣೆ Read More »

ಕರಾವಳಿ, ಕರ್ನಾಟಕ

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 14. ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ಮೃತಪಟ್ಟ ಭೀಕರ ಘಟನೆ ಮಲ್ಪೆಯ ತೊಟ್ಟಂ ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಒಡಿಶಾ ಮೂಲದ  ಬಾಬುಲ್ಲ(38) ಮತ್ತು ಭಾಸ್ಕರ್(40) ಎಂದು ಗುರುತಿಸಲಾಗಿದೆ. ಇವರಿಬ್ಬರು ಮನೆಯೊಂದಕ್ಕೆ ತಂದ ಗ್ರಾನೈಟ್ ನ್ನು ಲಾರಿಯಿಂದ ಖಾಲಿ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಗ್ರಾನೈಟ್ ಮೈಮೇಲೆ ಬಿದ್ದು ಕಾರ್ಮಿಕರಿಬ್ಬರು ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಮಲ್ಪೆ: ರಿಕ್ಷಾದಲ್ಲಿ ಶವ ತಂದು ರಸ್ತೆ ಬದಿ ಎಸೆದ ವ್ಯಾಪಾರಿಗಳು!

(ನ್ಯೂಸ್ ಕಡಬ)newskadaba.com ಮಲ್ಪೆ, ಫೆ.17. ಇಬ್ಬರು ವ್ಯಕ್ತಿಗಳು ಗೂಡ್ಸ್‌ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರ ಶವವನ್ನು ತಂದು ರಸ್ತೆ ಪಕ್ಕ ಎಸೆದು ಹೋದ ಘಟನೆ ಇಲ್ಲಿನ ಕೆಮ್ಮಣ್ಣು ಗ್ರಾಮದಲ್ಲಿ ಹಾಡುಹಗಲೇ ನಡೆದಿದೆ. ಈ ಘಟನೆ ಪಕ್ಕದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮಲ್ಪೆ ಠಾಣೆಯ ಪೊಲೀಸರು ತನಿಖೆ ನಡೆಸುತಿದ್ದಾರೆ. ಮಧ್ಯಾಹ್ನ 1 ಗಂಟೆಯ ಸುಮಾರಿಗೆ ರಸ್ತೆ ಪಕ್ಕ ಬಂದು ನಿಂತ ಗೂಡ್ಸ್‌ ರಿಕ್ಷಾದಿಂದ ಚಾಲಕ ಇಳಿದು ಸ್ವಲ್ಪ ದೂರ ಹೋಗಿ ನಿಲ್ಲುತ್ತಾನೆ.  ಇನ್ನೊಬ್ಬ ಗೂಡ್ಸ್‌ ರಿಕ್ಷಾದ ಹಿಂಭಾಗದಿಂದ ವ್ಯಕ್ತಿಯ ಶವವನ್ನು

ಮಲ್ಪೆ: ರಿಕ್ಷಾದಲ್ಲಿ ಶವ ತಂದು ರಸ್ತೆ ಬದಿ ಎಸೆದ ವ್ಯಾಪಾರಿಗಳು! Read More »

ಕರಾವಳಿ, ಕ್ರೈಮ್ ನ್ಯೂಸ್

ಬೋಟಿನಲ್ಲಿ ಆಯತಪ್ಪಿ ಬಿದ್ದು ತಲೆಗೆ ಏಟು !! ➤ ಮೀನುಗಾರ ಮೃತ್ಯು

(ನ್ಯೂಸ್ ಕಡಬ)newskadaba.com ಭಟ್ಕಳ, ಫೆ.13. ಮೀನುಗಾರಿಕೆಯಲ್ಲಿ ನಿರತ ವೇಳೆ ಆಕಸ್ಮಿಕವಾಗಿ ಆಯತಪ್ಪಿ ಬೋಟಿನ ಬಲೆ ಎಳೆಯುವ ಡ್ರಮ್ ವಿಂಚ್ ಮೇಲೆ ಬಿದ್ದ ಪರಿಣಾಮ ಮೀನುಗಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಭಟ್ಕಳದ ಬೈಲೂರಿನ ಬಾವಿಹಿತ್ಲು ನಿವಾಸಿ ನಾಗರಾಜನ್(27) ಎಂದು ಗುರುತಿಸಲಾಗಿದೆ. ನಾಗರಾಜನ್ ಮಲ್ಪೆ ಬಂದರಿನಲ್ಲಿ ಪ್ರತಾಪ್ ಸುವರ್ಣ ಮಾಲೀಕತ್ವದ ಶ್ರೀಕೃಷ್ಣ ಚಕ್ರ ಲೈಲ್ಯಾಂಡ್ ಮೀನುಗಾರಿಕಾ ಬೋಟ್ ನಲ್ಲಿ ಕಲಾಸಿಯಾಗಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.

ಬೋಟಿನಲ್ಲಿ ಆಯತಪ್ಪಿ ಬಿದ್ದು ತಲೆಗೆ ಏಟು !! ➤ ಮೀನುಗಾರ ಮೃತ್ಯು Read More »

ಕರಾವಳಿ

ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್’ ಫಿಶ್ 

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಲ್ಪೆಯ ಮೀನುಗಾರರ ಬಲೆಗೆ ಅಪರೂಪದ “ಗೋಲ್ಡನ್ ಅಂಜಲ್ ಫಿಶ್ ಬಿದ್ದಿದೆ. ಅಟ್ಲಾಂಟಿಕ್ ಸರೋವರದಲ್ಲಿ ಹೆಚ್ಚಾಗಿ ಕಂಡುಬರುವ ಈ ಅಪರೂಪದ ಮೀನು ತನ್ನ ಬಂಗಾರ ಬಣ್ಣದಿಂದಲೇ ಆಕರ್ಷನೀಯವಾಗಿದೆ. ಮಲ್ಪೆ ಕಡಲ ತೀರದ ಮೀನುಗಾರರು ದೋಣಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದರು. ಇದೇ ವೇಳೆ ಅವರ ಬಲೆಗೆ 16 ಕೆಜಿಯ ಬಂಗಾರ ಬಣ್ಣದ ಮೀನು ಬಿದ್ದಿದೆ. ದಡಕ್ಕೆ ಈ ಮೀನನ್ನು ತಂದ ಬಳಿಕ ಈ ಅಪರೂಪದ ಮೀನು ಖರೀದಿಗಾಗಿ ಭಾರಿ ಪೈಪೋಟಿ ನಡೆದಿತ್ತು.  ಗೋಲ್ಡನ್ ಅಂಜಲ್ ಮೀನು

ಮಲ್ಪೆ ಮೀನುಗಾರರ ಬಲೆಗೆ ಬಿದ್ದ ಅಪರೂಪದ ‘ಗೋಲ್ಡನ್ ಅಂಜಲ್’ ಫಿಶ್  Read More »

ಕರಾವಳಿ

ಮಲ್ಪೆ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು..! ➤ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ)newskadaba.com  ಮಲ್ಪೆ, ಜ.09. ಮಲ್ಪೆಯ ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಸುಶೀಲ್ ರಘುರಾಮ್ ಶೆಟ್ಟಿ(42) ಎಂದು ಗುರುತಿಸಲಾಗಿದೆ. ಇವರು ಮುಂಬಯಿ ನಿವಾಸಿಯಾಗಿದ್ದು, ಮುಂಬಯಿಯಿಂದ  ಊರಿಗೆ ಬಂದ ಇವರು ಮಲ್ಪೆಯ ಲಾಡ್ಜ್ ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಲ್ಪೆ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು..! ➤ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.19, ಅತ್ತೆ ಮಾವನಿಗೆ ನಿರಂತರ ಚಿತ್ರಹಿಂಸೆ ನೀಡಿ ಕೊಲೆ ಮಾಡಲು ಯತ್ನಿನಿಸಿದ ಸೊಸೆಯನ್ನ ಮಲ್ಪೆ ಠಾಣಾ ವ್ಯಾಪ್ತಿಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆಗೊಳಗಾದವರ ಮಕ್ಕಳು ಸೊಸೆ ಅಶ್ವಿನಿ ಪೈ ವಿರುದ್ಧ ಕೇಸ್ ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಮಲ್ಪೆಯ ನಿವಾಸದಲ್ಲಿದ್ದ ಅಶ್ವಿನಿಯನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯ ತೆಂಕ ನಿಡಿಯೂರು ಗ್ರಾಮದ ಕೆಳಾರ್ಕಳ ಬೆಟ್ಟುವಿನಲ್ಲಿ ಮಾವ ವೆಂಕಟೇಶ ಪೈ, ಅತ್ತೆ ವೀಣಾ ಪೈ ಅವರಿಗೆ ಸೊಸೆ ಅಶ್ವಿನಿ ಪೈ ಮನಬಂದಂತೆ ಥಳಿಸಿದ್ದಳು. ಸಟ್ಟುಗ ಬಿಸಿ

ಉಡುಪಿ: ಸಟ್ಟುಗ ಬಿಸಿ ಮಾಡಿ ಬರೆ ಹಾಕಿ ಅತ್ತೆ ಮಾವನಿಗೆ ಚಿತ್ರಹಿಂಸೆ ► ಸೊಸೆಯ ಬಂಧನ Read More »

ಕರಾವಳಿ
Scroll to Top