ಅಡಿಕೆಗೆ ಔಷಧಿ ಸಿಂಪಡನೆ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 28. ವಿದ್ಯುತ್ ತಗುಲಿದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಅರಸಿನಮಕ್ಕಿಯ ಎಂಜೀರ ಎಂಬಲ್ಲಿ ನಡೆದಿದೆ.   ಮೃತಪಟ್ಟವರನ್ನು ಉಡೈರೆ ಕೃಷ್ಣಪ್ಪ ಕುಲಾಲ್(49) ಎಂದು ಗುರುತಿಸಲಾಗಿದೆ. ಕೃಷ್ಣಪ್ಪ ರವರು ತೋಟದಲ್ಲಿ ಅಡಿಕೆಗೆ ಔಷಧಿ ಸಿಂಪಡನೆ ಮಾಡುತ್ತಿದ್ದ ವೇಳೆ ದೋಂಟಿ ಹೆಚ್.ಟಿ. ಲೈನ್ ಗೆ ತಾಗಿ ವಿದ್ಯುತ್‌ ತಗುಲಿ ಈ ದುರ್ಘಟನೆ ನಡೆದಿದೆನ್ನಲಾಗಿದೆ.   ಕೂಡಲೇ ಅವರನ್ನು ಸ್ಥಳೀಯರ ಸಹಕಾರದೊಂದಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆಗೆ ಔಷಧಿ ಸಿಂಪಡನೆ ವೇಳೆ ವಿದ್ಯುತ್‌ ತಂತಿ ತಗುಲಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್