mandya

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 12.  ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಉಂಟಾಗಿದ್ದ ಪ್ರಕ್ಷುಬ್ಧ ಪರಿಸ್ಥಿತಿ ಹತೋಟಿಗೆ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದಲ್ಲಿ ಮೂರು ದಿವಸಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಆಯಕಟ್ಟಿನ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 50 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಗಣೇಶನ ಮೆರವಣಿಗೆಯು ದರ್ಗಾದ ಎದುರು ಹೆಚ್ಚು ಹೊತ್ತು ನಿಂತಿದ್ದರಿಂದ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದು […]

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ: 50 ಮಂದಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೈಲು ಹಳಿಗಳ ಮೇಲೆ ಕಲ್ಲು ಇಡುವುದು ದಂಡಾರ್ಹ ಅಪರಾಧ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 06. ಚಲಿಸುವ ರೈಲಿಗೆ ಕಲ್ಲು ಎಸೆಯುವುದು, ರೈಲು ಹಳಿಗಳ ಮೇಲೆ ಕಲ್ಲು ಇಡುವುದು ಅಥವಾ ಮಣ್ಣು ಸುರಿಯುವುದು ದಂಡಾರ್ಹ ಅಪರಾಧವಾಗಿದೆ ಎಂದು ಮಂಡ್ಯ ರೈಲ್ವೇ ರಕ್ಷಣಾ ದಳದ ನಿರೀಕ್ಷಕ ಎಸ್.ಗೋವಿಂದರಾಜು ತಿಳಿಸಿದ್ದಾರೆ. ತಾಲೂಕಿನ ಯಲಿಯೂರು ಗ್ರಾಮದ ಶ್ರೀಆಂಜನೇಯಸ್ವಾಮಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ರೈಲ್ವೆ ಸುರಕ್ಷಾ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈಲ್ವೇ ನಿಯಮಗಳಿಗೆ ವಿರುದ್ಧವಾಗಿ ಕೃತ್ಯಗಳನ್ನೆಸಗುವುದು ರೈಲ್ವೇ ಅಧಿನಿಯಮ-2003ರ ಪ್ರಕಾರ ದಂಡನೀಯ ಅಪರಾಧವಾಗಿರುತ್ತವೆ. ಎಲ್ಲೆಂದರಲ್ಲಿ ರೈಲು ಹಳಿಗಳನ್ನು ಸಹ ದಾಟುವಂತಿಲ್ಲ.

ರೈಲು ಹಳಿಗಳ ಮೇಲೆ ಕಲ್ಲು ಇಡುವುದು ದಂಡಾರ್ಹ ಅಪರಾಧ Read More »

ಕರ್ನಾಟಕ

ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ

(ನ್ಯೂಸ್ ಕಡಬ) newskadaba.com  ಮಂಡ್ಯ, ಸೆ. 5. ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಅಭಿಷೇಕ್​ ಎಂಬಾತನನ್ನು ಬಂಧಿಸಲಾಗಿದೆ. ಸಾವಿರಾರು ಕರುಳಬಳ್ಳಿ ಕೊಂದಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿಐಡಿಗೂ ಚಳ್ಳೆಹಣ್ಣು ತಿನ್ನಿಸಿ ದಂಧೆ ವಿಸ್ತರಿಸಿದ್ದ ಅಭಿಷೇಕ್​ ಪ್ರಮುಖ ಆರೋಪಿಯಾಗಿದ್ದಾನೆ. ಅಭಿಷೇಕ್ ಜೊತೆ ವಿರೇಶ್ ಸೇರಿದಂತೆ 12 ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ಭ್ರೂಣ ಹತ್ಯೆ ಕೇಸ್ ​ನಲ್ಲಿ ವಿರೇಶ್​ ಜೈಲು ಸೇರಿ ಬೇಲ್ ಮೇಲೆ ಹೊರ ಬಂದಿದ್ದ. ಬಂಧಿತರಿಂದ 2 ಸ್ಕ್ಯಾನಿಂಗ್ ಮಷಿನ್,

ಹೆಣ್ಣು ಭ್ರೂಣ ಹತ್ಯೆ ಪ್ರಕರಣ- 12 ಆರೋಪಿಗಳು ಅರೆಸ್ಟ್..!   23 ಲಕ್ಷ ಮೌಲ್ಯದ ವಸ್ತುಗಳು ವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 02.  ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರಿಂದ ನಿರಂತರ ಕಿರುಕುಳ ತಾಳಲಾರದೆ ಬಾಲಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಹನಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ (14) ಎಂದು ಗುರುತಿಸಲಾಗಿದೆ. ಮಂಡ್ಯದ ವಿವೇಕ ವಿದ್ಯಾಸಂಸ್ಥೆಯ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿಗೆ ಪ್ರೀತಿಸುವಂತೆ ನಾಲ್ವರು ಬಾಲಕರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ ಎಂದು ವರದಿ ತಿಳಿದುಬಂದಿದೆ.  

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಡ್ಯ, ಆ. 29. ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ ನಡೆಸಿ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ, ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಡಿಜಿಪಿ ಅಲೋಕ್ ಕುಮಾರ್ ರನ್ನು ಟ್ಯಾಗ್ ಮಾಡಿ ತನ್ನ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿತ್ತು. ವಿಡಿಯೋ ವೈರಲ್

ಎಕ್ಸ್ ಪ್ರೆಸ್‌ ವೇನಲ್ಲಿ ಹುಚ್ಚಾಟ- ಚಾಲಕರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ

(ನ್ಯೂಸ್ ಕಡಬ)newskadaba.com ಮಂಡ್ಯ, ಜು.24. ಅಂತೂ ಇಂದು ತೀವ್ರ ಕುತೂಹಲ ಕೆರಳಿಸಿದ್ದಂತ ಮನ್ಮುಲ್ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ. ಈ ಮೂಲಕ ಮನ್ಮುಲ್ ಅಧ್ಯಕ್ಷಹಾದಿ ಹಿಡಿಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇಂದು ಮಂಡ್ಯ ಜಿಲ್ಲೆ ಗೆಜ್ಜಲಗೆರೆಯಲ್ಲಿರುವ ಮನ್ಮುಲ್ ಮನ್ಮುಲ್ ನ ಅಧ್ಯಕ್ಷ ಸ್ಥಾನಕ್ಕಾಗಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ವರ್ಕೌಟ್ ಆಗಿದೆ. ಹೀಗಾಗಿ ಮನ್ಮುಲ್ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ ಸೇರಿದೆ. ಮನ್ಮುಲ್ ಅಧ್ಯಕ್ಷರಾಗಿ ಕಾಂಗ್ರೆಸ್ ನ ಬಿ.ಬೋರೇಗೌಡ ಅವರು ಆಯ್ಕೆಯಾಗಿದ್ದಾರೆ.

‘ಮನ್ಮುಲ್ ಅಧ್ಯಕ್ಷ’ರಾಗಿ ಕಾಂಗ್ರೆಸ್ ನ ‘ಬಿ.ಬೋರೇಗೌಡ’ ಆಯ್ಕೆ Read More »

ಕರ್ನಾಟಕ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..!

(ನ್ಯೂಸ್ ಕಡಬ)newskadaba.com ಮಂಡ್ಯ, ಫೆ.02. ಕುಖ್ಯಾತ ಮನೆಗಳ್ಳರ ತಂಡವನ್ನು ಬಂಧಿಸುವಲ್ಲಿ ಮಂಡ್ಯ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೊದಲಿಗೆ ಪೊಲೀಸರು ಆರೋಪಿಗಳನ್ನು ಒಂದು ಪ್ರಕರಣದಲ್ಲಿ ಬಂಧಿಸಿದ್ದರು. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ ಆರೋಪಿಗಳ ತಮ್ಮ ಹಳೆಯ ಪ್ರಕರಣಗಳನ್ನು ಬಾಯಿ ಬಿಟ್ಟಿದ್ದಾರೆ. ವಿಚಾರಣೆ ವೇಳೆ ಬರೋಬ್ಬರಿ 9 ಪ್ರಕರಣಗಳು ಬೆಳಕಿಗೆ ಬಂದಿವೆ. ಮೊದಲಿಗೆ ಒಂಟಿ ಮನೆಗಳನ್ನು ಸರ್ವೇ ಮಾಡುತ್ತಿದ್ದ ಈ ಗ್ಯಾಂಗ್ ಸಂಚು ಹಾಕಿ ಕಳ್ಳತನ ಮಾಡಿತ್ತು. ಮಹಾರಾಷ್ಟ್ರದ ಥಾಣಾ ಮೂಲದ ಗ್ಯಾಂಗ್ ಇದಾಗಿದ್ದು, ಕಳ್ಳತನ ಮಾಡಲು ತಂಡದ

ಒಂದು ಕೇಸ್​ನಲ್ಲಿ ಅರೆಸ್ಟ್​  ➤ ಬಾಯಿ ಬಿಟ್ಟಿದ್ದು 9 ಮನೆಗಳ್ಳತನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೀಲ್‌ ಪರೀಕ್ಷೆ ಮಾಡದಿರುವುದೇ ಅನಿಲ ಅವಘಡಗಳಿಗೆ ಮೂಲ ಕಾರಣ     ➤ ಸಿಲಿಂಡರ್‌ ಪಡೆಯುವ ಮುನ್ನ ಸೀಲ್‌ ಪರೀಕ್ಷಿಸಿ

(ನ್ಯೂಸ್ ಕಡಬ)newskadaba.com ಮಂಡ್ಯ, ಜ.23. ಅಡುಗೆ ಅನಿಲದ ಸಿಲಿಂಡರ್‌ ಪಡೆಯುವ ಮುನ್ನ ಗ್ರಾಹಕರು ಪ್ರಾಥಮಿಕವಾಗಿ ಸೀಲ್‌ ಪರೀಕ್ಷೆ ಮಾಡದಿರುವುದೇ ಅನಿಲ ಅವಘಡಗಳಿಗೆ ಮೂಲ ಕಾರಣ ಎಂದು ಅನಿಲ ಸರಬರಾಜು ಕಂಪನಿ, ಏಜೆನ್ಸಿ ಸಿಬ್ಬಂದಿ ಹೇಳುತ್ತಾರೆ. ಆದರೆ, ಗ್ರಾಹಕರಲ್ಲಿ ಅರಿವಿನ ಕೊರತೆಯಿಂದಾಗಿ ಸಿಲಿಂಡರ್‌ಗಳನ್ನು ನೇರವಾಗಿ ಪಡೆಯುವ ಪ್ರಕ್ರಿಯೆ ಮುಂದುವರಿದಿದೆ. ಅದೃಷ್ಟವಶಾತ್‌ ಜಿಲ್ಲೆಯಲ್ಲಿ ಈಚೆಗೆ ಗಂಭೀರವಾದ ಯಾವುದೇ ಅಡುಗೆ ಅನಿಲ ದುರಂತಗಳು ನಡೆದಿಲ್ಲ. ಆದರೆ, ಸಣ್ಣಪುಟ್ಟ ಅನಿಲ ಸೋರಿಕೆ ಪ್ರಕರಣಗಳು ನಡೆಯುತ್ತಿದ್ದು, ಅದಕ್ಕೆ ಗ್ರಾಹಕರ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪವಿದೆ.

ಸೀಲ್‌ ಪರೀಕ್ಷೆ ಮಾಡದಿರುವುದೇ ಅನಿಲ ಅವಘಡಗಳಿಗೆ ಮೂಲ ಕಾರಣ     ➤ ಸಿಲಿಂಡರ್‌ ಪಡೆಯುವ ಮುನ್ನ ಸೀಲ್‌ ಪರೀಕ್ಷಿಸಿ Read More »

ಕರ್ನಾಟಕ

ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!!

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.08. ರಂಗಸ್ಥಳದಲ್ಲೇ ಕುಸಿದುಬಿದ್ದು ಕಲಾವಿದಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಮೃತರನ್ನು ನಂಜಯ್ಯ(46) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು. ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು

ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 02. ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ಮೇಗಳಾಪುರ ಗ್ರಾಮದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು ರಮ್ಯ(24) ಎಂದು ಗುರುತಿಸಲಾಗಿದೆ. ರಮ್ಯಾ ರವರು ಐದು ವರ್ಷಗಳ ಹಿಂದೆ ಮೇಗಳಾಪುರದ ಕುಮಾರ್ ಎಂಬವರೊಂದಿಗೆ ವಿವಾಹವಾಗಿದ್ದು, ಮದುವೆ ಸಂದರ್ಭ ಒಂದು ಲಕ್ಷ ರೂ. ನಗದು ಮತ್ತು 150 ಗ್ರಾಂ ಚಿನ್ನಾಭರಣ ವರದಕ್ಷಿಣೆ ಆಗಿ ಕುಮಾರ್ ಪಡೆದಿದ್ದು, ಹೆಚ್ಚಿನ ವರದಕ್ಷಿಣೆ ತರುವಂತೆ ರಮ್ಯಾಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಇದೀಗ

ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಮೃತದೇಹ ಪತ್ತೆ  ➤ ಆತ್ಮಹತ್ಯೆಯಲ್ಲ, ಕೊಲೆಯೆಂದು ಪೋಷಕರಿಂದ ಆರೋಪ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top