mandya

ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 31. ಜೋಲಿಗೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಬೇವಿನಹಳ್ಳಿ ಕೊಪ್ಪಲು ಗ್ರಾಮದಿಂದ ವರದಿಯಾಗಿದೆ. ಮೃತ ಬಾಲಕನನ್ನು ಶ್ರೀನಿವಾಸ ಎಂಬವರ ಪುತ್ರ 9 ವರ್ಷದ ಸಮರ್ಥ್ ಎಂದು ಗುರುತಿಸಲಾಗಿದೆ. ಶಾಲೆ ಬಿಟ್ಟು ಮನೆಗೆ ಬಂದಿದ್ದ ಬಾಲಕ, ಸೀರೆಯಿಂದ ಕಟ್ಟಿದ್ದ ಜೋಲಿಯಲ್ಲಿ ಆಟವಾಡುತ್ತಿದ್ದ ವೇಳೆ ಜೋಲಿ ಕತ್ತಿಗೆ ಸಿಲುಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 30. ದೇಶದ ಪ್ರತಿ ಪಂಚಾಯತ್ ನಲ್ಲಿ ಪ್ರೈಮರಿ ಹಾಲಿನ ಡೈರಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಮಂಡ್ಯದ ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿ ಮಾತನಾಡಿದರು. ಮುಂದಿನ ಮೂರು ವರ್ಷದಲ್ಲಿ ಒಟ್ಟು 2 ಲಕ್ಷ ಪ್ರಾಥಮಿಕ ಡೇರಿ ನಿರ್ಮಿಸಲಾಗುವುದು. ಈ ಮೂಲಕ, ದೇಶದದಿಂದ ಹಾಲು ರಫ್ತು ಮಾಡಲಾಗುವುದು. ರಾಜ್ಯದಲ್ಲಿ ಹೈನುಗಾರಿಕೆಗೆ ಬೇಕಾಗುವ ತಾಂತ್ರಿಕ ಸೌಲಭ್ಯ ಹಾಗೂ ಸಹಕಾರಿ ಕ್ಷೇತ್ರಕ್ಕೆ

ದೇಶದ ಪ್ರತಿ ಪಂಚಾಯತ್ ನಲ್ಲಿ ಹಾಲಿನ ಡೈರಿ ಸ್ಥಾಪನೆ ➤ ಗೃಹ ಸಚಿವ ಅಮಿತ್ ಶಾ Read More »

ಕರ್ನಾಟಕ

ಬೋನಿಗೆ ಬಿದ್ದ ಚಿರತೆ

(ನ್ಯೂಸ್ ಕಡಬ) newskadaba.com ಮಂಡ್ಯ , ಡಿ 19 : ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಚಿರತೆಯೊಂದು ಬಿದ್ದ ಘಟನೆ  ಮಂಡ್ಯ ಜಿಲ್ಲೆಯ ಲೋಕಸರ ಗ್ರಾಮದಲ್ಲಿ ವರದಿಯಾಗಿದೆ. ಹಲವು ದಿನಗಳಿಂದ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿತ್ತು. ಇದರಿಂದ ಗ್ರಾಮಸ್ಥರಿಗೆ ಆತಂಕ ಮೂಡಿತ್ತು. ಬೋನಿಗೆ ಬಿದ್ದ ಚಿರತೆಯನ್ನು ನೋಡಲು ಗ್ರಾಮಸ್ಥರು ಜಮಾಯಿಸಿದ್ದರು ಎನ್ನಲಾಗಿದೆ.

ಬೋನಿಗೆ ಬಿದ್ದ ಚಿರತೆ Read More »

ಕರ್ನಾಟಕ

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ.10. ವಿದ್ಯಾರ್ಥಿನಿಯರ ಜೊತೆ ಶಿಕ್ಷಕನೋರ್ವ ಅಸಭ್ಯ ವರ್ತನೆ ನಡೆಸಿದ ಘಟನೆ ಮಂಡ್ಯ ತಾಲೂಕಿನ ಬೇಬಿ ಸರ್ಕಾರಿ ಪೌಢಶಾಲೆಯಲ್ಲಿ ಸಂಭವಿಸಿದೆ.   ಕಾಮುಕ ಶಿಕ್ಷಕನ ದೌರ್ಜನ್ಯದಿಂದ ಬೇಸತ್ತ ವಿದ್ಯಾರ್ಥಿಗಳು ಆತನ ವಿರುದ್ದ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರದ ಮೂಲಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ದಿಢೀರ್ SDMC ಸಭೆ ಆಯೋಜಿಸಿದ ಪೋಷಕರು ಶಿಕ್ಷಕರ ವಿರುದ್ದ ರೊಚ್ಚಿಗೆದ್ದು ಹಲ್ಲೆಗೆ ಯತ್ನಿಸಿದ್ದಲ್ಲದೇ, ಆರೋಪಿ ಶಿಕ್ಷಕನ ಅಮಾನತಿಗೆ ಮನವಿ ಮಾಡಿದ್ದಾರೆ ಎಂದು ವರದಿಯಾಗಿದೆ.    

ಕಾಮುಕ ಶಿಕ್ಷಕ ಅಮಾನತಿಗೆ ಪೋಷಕರ ಒತ್ತಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂತರಾಜ್ಯ ಬೈಕ್ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 08. ಅಂತರಾಜ್ಯ ಬೈಕ್ ಕಳ್ಳನೋರ್ವನನ್ನು ಮದ್ದೂರು ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಆ ಬಂಧಿತ ಆರೋಪಿಯನ್ನು ರಾಜೇಶ್ ಎಂದು ಗುರುತಿಸಲಾಗಿದೆ. ಈತ ಜೂಜು ಹಾಗೂ ಹುಡುಗಿಯರ ಶೋಕಿಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ತಪಾಸಣೆ ನಡೆಸಿದಾಗ ನಂಬರ್ ಪ್ಲೇಟ್ ಇಲ್ಲದ ಬೈಕ್ ನಲ್ಲಿ ತೆರಳುತ್ತಿದ್ದ ಈತನನ್ನು ಪೊಲೀಸರು ತಡೆದು ವಿವರ ಕೇಳಿದಾಗ ಯಾವುದೇ ಡಾಕ್ಯುಮಂಟ್ ತೋರಿಸದೆ ಅನುಮಾನಸ್ಪದವಾಗಿ ವರ್ತಿಸಿದ್ದಾನೆ. ನಂತರ ಈತ ಕಳ್ಳತನ ನಡೆಸಿರುವುದು

ಅಂತರಾಜ್ಯ ಬೈಕ್ ಕಳ್ಳನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ನ.11. ಅತಿವೇಗದಿಂದ ಬಂದ ಬೈಕೊಂದು ಬ್ರಿಡ್ಜ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮಂಡ್ಯದ ಮಳವಳ್ಳಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 209ರ ಚಿಲ್ಲಾಪುರ ಗೇಟ್ ಬಳಿ ಶುಕ್ರವಾರ ತಡರಾತ್ರಿ  ನಡೆದಿದೆ. ಹಲಗೂರಿನ ಪ್ರತಾಪ್(23) ಬಾಣಸಮುದ್ರದ ಶಶಿ(24) ಮೃತ ದುರ್ದೈವಿಗಳು. ಘಟನೆಯಿಂದ ಪ್ರತಾಪ್ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಶಶಿ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಅತಿವೇಗವೇ ಈ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಡಿಕ್ಕಿ ► ಯುವಕರಿಬ್ಬರು ಮೃತ್ಯು Read More »

ಕರಾವಳಿ

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!!

(ನ್ಯೂಸ್ ಕಡಬ) newskadaba.com ಮಂಡ್ಯ, ಅ.31. ನಂದಿನಿ ಹಾಲಿನ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿರುವ ಸೇತುವೆಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಘಟನೆ ನಾಗಮಂಗಲ ತಾಲೂಕಿನ ಕಾಚೇನಹಳ್ಳಿ ಬಳಿ ಮಂಗಳವಾರ ಮುಂಜಾನೆ ನಡೆದಿದೆ. ವಾಹನ ಉರುಳಿ ಬಿದ್ದ ಪರಿಣಾಮ ನಂದಿನಿ ಹಾಲಿನ ನೂರಾರು ಪ್ಯಾಕೆಟ್ ಹಳ್ಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು, ಕೆಲವೊಂದು ಹಾಲಿನ ಪ್ಯಾಕೆಟ್ ಒಡೆದು ಹೋಗಿ ಹಾಲು ಮಣ್ಣು ಪಾಲಾಗಿದೆ. ಚೆನ್ನಾಗಿರುವ ಹಾಲಿನ ಪ್ಯಾಕೆಟ್ ಗಳನ್ನು ಬೇರೊಂದು ವಾಹನದಲ್ಲಿ ಬೆಳ್ಳೂರಿಗೆ ಸಾಗಿಸಲಾಗಿದೆ. ಘಟನೆಯಲ್ಲಿ ಲಾರಿ ಚಾಲಕನಿಗೆ ಒಂದಷ್ಟು ಸಣ್ಣಪುಟ್ಟ ಗಾಯಗಳಾಗಿದ್ದು,

ನಂದಿನಿ ಹಾಲಿನ ವಾಹನ ಡಿಕ್ಕಿ► ನೂರಾರು ಹಾಲಿನ ಪ್ಯಾಕೆಟ್ ಮಣ್ಣುಪಾಲು…!!! Read More »

ಕರಾವಳಿ

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ಮಂಡ್ಯ, ಅ.18. ಜಿಲ್ಲೆಯ ಪಾಂಡವಪುರದ ವಿಶ್ವೇಶ್ವರಯ್ಯ ನಾಲೆಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ತೇಲಿ ಬಂದಿರೋ ಘಟನೆ ಬೆಳಕಿಗೆ ಬಂದಿದೆ. ಈ ಅಪರಿಚಿತ ವ್ಯಕ್ತಿಗೆ ಸುಮಾರು 42 ವರ್ಷ ಪ್ರಾಯವಾಗಿರಬಹುದು ಎಂದು ಅಂದಾಜಿಸಲಾಗಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಕೊಲೆ ಮಾಡಿ ನಾಲೆಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ನಾಲೆಯಲ್ಲಿ ವ್ಯಕ್ತಿಯ ಮೃತದೇಹ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.  

ಕೈಕಾಲು ಕಟ್ಟಿದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ನೀರಿನಲ್ಲಿ ಪತ್ತೆ ► ಕೊಲೆ ಶಂಕೆ Read More »

ಕರಾವಳಿ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ

(ನ್ಯೂಸ್ ಕಡಬ) newskadaba.com ಮಂಡ್ಯ,ಸೆ.26. ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತರೋರ್ವರನ್ನು ಹಿಂಬಾಲಿಸಿದ ಕಳ್ಳರು  15 ಸಾವಿರ ರೂ. ಹಣವನ್ನು ದೋಚಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ಮಂಗಳವಾರ 11.30ರ ಸುಮಾರಿಗೆ ನಡೆದಿದೆ. ರೈತ ನಿಂಗೇಗೌಡ ಎಂಬುವವರು ವಿಜಯ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ನಿಂಗೇಗೌಡರನ್ನು ಹಿಂಬಾಲಿಸಿದ ಕಳ್ಳರು ಶರ್ಟ್ ಮೇಲೆ ಉಪಾಯವಾಗಿ ಶಾಯಿ ಚೆಲ್ಲಿದ್ದಾರೆ. ನಂತರ ಬಟ್ಟೆಯನ್ನು ಕ್ಲೀನ್ ಮಾಡುವ ನೆಪದಲ್ಲಿ ಬಂದು ನಿಂಗೇಗೌಡರ ಶರ್ಟ್ ನಲ್ಲಿದ್ದ ಹಣವನ್ನು ದೋಚಿ

ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದ ರೈತನ ಜೇಬಿಗೆ ಕನ್ನ ಹಾಕಿದ ಕಳ್ಳರು ► ಬಟ್ಟೆ ಮೇಲೆ ಶಾಯಿ ಎರಚಿ ಕೃತ್ಯ Read More »

ಕರ್ನಾಟಕ

ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ.19, ಓಡಾಡುವ ಜಾಗಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ  ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ನಿಟ್ಟೂರು ಹೊಸದೊಡ್ಡಿ ಗ್ರಾಮದಲ್ಲಿ ನಡೆದಿದೆ. ನಾಗರಾಜು(55) ಮೃತ ದುರ್ದೈವಿ. ನಾಗರಾಜು ಪತ್ನಿ ಗೌರಮ್ಮ(44), ಮಗ ನಾರಾಯಣಸ್ವಾಮಿ(27) ಗಂಭೀರವಾಗಿ ಗಾಯಗೊಂಡವರು. ಚಲುವರಾಜು ಮತ್ತು ನಾಗರಾಜು ಮನೆ ಅಕ್ಕಪಕ್ಕದಲ್ಲಿದ್ದು, ಮನೆಯ ಸಮೀಪ ಓಡಾಡುವ ಜಾಗದ ವಿಚಾರವಾಗಿ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಆದರೆ ಕಳೆದ ರಾತ್ರಿ ನಡೆದ ಗಲಾಟೆ ವಿಕೋಪಕ್ಕೆ ತಿರುಗಿತ್ತು. ಚಲುವರಾಜು ಪಕ್ಕದ ಮನೆಯ

ಜಾಗಕ್ಕೆ ಸಂಬಂಧಿಸಿ ಗಲಾಟೆ ►ಓರ್ವ ಮೃತ್ಯು, ಇಬ್ಬರಿಗೆ ಗಾಯ Read More »

ಕರ್ನಾಟಕ
Scroll to Top