ಕುಕ್ಕರ್ ಸ್ಫೋಟ ಪ್ರಕರಣ ➤ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 05. ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ಮೇಲೆ ಎನ್ಐಎ ಅಧಿಕಾರಿಗಳ ತಂಡ ದಾಳಿ ಮಾಡಿ, ಪರಿಶೀಲನೆ ನಡೆಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.   ಎನ್ಐಎ ವಶದಲ್ಲಿರುವ ಆರೋಪಿ ಮಾಝ್ ಮುನೀರ್ ಎಂಬಾತ ಇದೇ ಶಿಕ್ಷಣ ಸಂಸ್ಥೆಯಿಂದ ಇಂಜಿನಿಯರಿಂಗ್‌‌ ಪದವಿ‌ಯನ್ನು ಪಡೆದಿದ್ದ, ಹಿನ್ನೆಲೆ, ಬೆಂಗಳೂರಿನಿಂದ ಬಂದಿದ್ದ ಏಳು ಮಂದಿಯ ಎನ್ಐಎ ತಂಡವು ಶಿಕ್ಷಣ ಸಂಸ್ಥೆಯಲ್ಲಿ ತನಿಖೆ ನಡೆಸಿದೆ ಎಂದು ತಿಳಿದು ಬಂದಿದೆ.

ಕುಕ್ಕರ್ ಸ್ಫೋಟ ಪ್ರಕರಣ ➤ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ Read More »

ಕರ್ನಾಟಕ