Mangalore

ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಮಂಗಳೂರಿನಲ್ಲಿ ಹಲವಾರು ಸುಂದರ ರಮಣೀಯ ಕಡಲ ತೀರಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಲು ಬರುತ್ತಿದ್ದಾರೆ.  ಆದರೆ ಮೋಜು ಮಸ್ತಿ ಮಾಡಿದ ಬಳಿಕ ಕಡಲ ತೀರದ ಸ್ವಚ್ಚತೆಗೂ ಅವರು ಗಮನ ಹರಿಸುವುದು ಅತೀ ಅಗತ್ಯ.  ಕಡಲ ತೀರವನ್ನು ಸ್ಚಚ್ಚಗೊಳಿಸುವುದು ಜಿಲ್ಲಾಡಳಿತದ ಮತ್ತು ಪ್ರವಾಸೋದ್ಯಮ ಇಲಾಖೆಗೆ ಮಾತ್ರ ಸೀಮಿತವಲ್ಲ. ಪ್ರತಿಯೊಬ್ಬ ಪ್ರವಾಸಿಗರೂ ತಮ್ಮ ಹೊಣೆ ಅರಿತು ಕಡಲ ತೀರವನ್ನು ಸ್ಚಚ್ಚಗೊಳಿಸಲು ಸಹಕರಿಸಬೇಕು. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಬಾಟಲ್, ಕಸ ಕಡ್ಡಿಗಳನ್ನು ಹಾಕುವುದರಿಂದ […]

ಕಡಲತೀರದ ಸ್ವಚ್ಚತೆಗೆ ಪ್ರವಾಸಿಗರ ಸಹಕಾರ ಅಗತ್ಯ – ಡಾ.ಚೂಂತಾರು Read More »

ಕರಾವಳಿ

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ

(ನ್ಯೂಸ್ ಕಡಬ) newskadaba.com ಮಂಗಳೂರು 23: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿಯಲ್ಲಿ  ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಅದರಲ್ಲಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ ಈ ಯೋಜನೆಯಡಿಯಲ್ಲಿ ವೆನ್ಲಾಕ್

‘PMABHIM ಯೋಜನೆಯಡಿ ದಕ್ಷಿಣ ಕನ್ನಡಕ್ಕೆ 25.11 ಕೋಟಿ ಅನುದಾನ ಬಿಡುಗಡೆ’-ಸಂಸದ ಚೌಟ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ

(ನ್ಯೂಸ್ ಕಡಬ) newskadaba.com ಉಡುಪಿ/ಮಂಗಳೂರು, ಸೆ21. ದಕ್ಷಿಣ ಕನ್ನಡದ ಮೂಡುಬಿದಿರೆಯ ನೆಲ್ಲಿಕಾರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೆಲ ದಿನಗಳ ಹಿಂದೆ ಕಾಲರಾ ಪ್ರಕರಣ ದೃಢಪಟ್ಟಿತ್ತು. ಆ ಬಳಿಕ ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಡಾ.ಎಚ್.ಆರ್.ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಎಂಪಾಕ್ಸ್ ಅಥವಾ ನಿಪಾಹ್ ಪ್ರಕರಣಗಳು ವರದಿಯಾಗಿಲ್ಲ. ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಡಾ.ತಿಮ್ಮಯ್ಯ, ಹೋಟೆಲ್‌ನಲ್ಲಿ ಊಟ ಮಾಡಿದ ವ್ಯಕ್ತಿಗೆ ಕಾಲರಾ ಕಾಣಿಸಿಕೊಂಡಿದೆ. ಸದ್ಯಕ್ಕೆ, ಭಯಪಡಲು ಯಾವುದೇ ಕಾರಣವಿಲ್ಲ. ನಾವು ಹೋಟೆಲ್ ಮೇಲೆ ಕಣ್ಗಾವಲು ಇರಿಸುತ್ತಿದ್ದೇವೆ ಮತ್ತು ಜಿಲ್ಲೆಯ ಎಲ್ಲಾ ಪ್ರಾಥಮಿಕ

ದಕ್ಷಿಣ ಕನ್ನಡದಲ್ಲಿ ಕಾಲರಾ, ಉಡುಪಿಯಲ್ಲಿ 12 ಪ್ರಕರಣ ದೃಢ Read More »

ಕರಾವಳಿ

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 21. ಆರೋಗ್ಯವಾಗಿರಲು ಪೌಷ್ಟಿಕ ಆಹಾರಗಳು ಅಗತ್ಯವಾಗಿದ್ದು, ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ನಿರ್ಲಕ್ಷ ಸರಿಯಲ್ಲ. ಸಣ್ಣ ಅರೋಗ್ಯ ಸಮಸ್ಯೆಗೂ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜಿ ಹೇಳಿದರು. ಅವರು ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ.ದ.ಕ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,

ಮಹಿಳೆಯರು ಸಣ್ಣ ಆರೋಗ್ಯ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ- ನ್ಯಾಯಾಧೀಶೆ Read More »

ಕರಾವಳಿ

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯುಷ್ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ನಗರ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆ ಅಡಿ ಪೋಷಣ ಮಾಸಾಚರಣೆ ಕಾರ್ಯಕ್ರಮವು ಇಂದು ಬೆಳಿಗ್ಗೆ 10 ಗಂಟೆಗೆ ನಗರದ ರಾಜ್ಯ ಸರ್ಕಾರಿ ನೌಕರರ ಸಂಘ ಸಭಾಭವನದಲ್ಲಿ ನಡೆಯಲಿದೆ. ಲೋಕಸಭಾ ಸದಸ್ಯ ಕ್ಯಾ.ಬ್ರಿಜೇಶ್ ಚೌಟ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು,

ಇಂದು ಪೋಷಣ ಮಾಸಾಚರಣೆ ಕಾರ್ಯಕ್ರಮ Read More »

ಕರಾವಳಿ

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ಭಾರತ ಸರ್ಕಾರದ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯ, ಇವರ ನಿರ್ದೇಶನದಂತೆ ರಾಷ್ಟ್ರೀಯ ಕರಾವಳಿ ಮಿಷನ್ ಅಡಿಯಲ್ಲಿ ಸೆಪ್ಟೆಂಬರ್ 21ರಂದು ”ತಣ್ಣೀರುಬಾವಿ ಬೀಚ್” ನಲ್ಲಿ  ಆಯೋಜಿಸಲಾದ ಬೀಚ್ ಕ್ಲೀನಿಂಗ್ ಚಟುವಟಿಕೆ, ಅಭಿಯಾನವನ್ನು ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಣ್ಣೀರು ಬಾವಿ ಬೀಚ್ ಕ್ಲೀನಿಂಗ್ ಮುಂದೂಡಿಕೆ Read More »

ಕರಾವಳಿ

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 20. ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್‍ಗೆ ಸ್ಥಳಾಂತರಿಸಲಾಗಿದೆ. ಗುರುವಾರದಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್‍ಲಾಕ್‍ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ ವಿಭಾಗದ ಸೇವೆಗಾಗಿ ಹೊಸ ಸರ್ಜಿಕಲ್ ಬ್ಲಾಕ್‍ಗೆ ಭೇಟಿ ನೀಡುವಂತೆ ವೆನ್‍ಲಾಕ್ ಅಧೀಕ್ಷಕರು ಪ್ರಕಟಣೆಯಲ್ಲಿ

ವೆನ್ ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ Read More »

ಕರಾವಳಿ

ಮರವೂರು ಸೇತುವೆ ಪರಿಶೀಲನೆ ನಡೆಸಿದ ತಾಂತ್ರಿಕ ತಜ್ಞರ ಸಮಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಾರಕ್ಕೆ ಅಪಾಯಕಾರಿಯಾಗಿರುವ ಸೇತುವೆಗಳ ಪರಿಶೀಲನೆಗೆ ಬೆಂಗಳೂರಿನಿಂದ ಆಗಮಿಸಿರುವ ತಾಂತ್ರಿಕ ತಜ್ಞರ ಸಮಿತಿಯು ಮರವೂರು ಸೇತುವೆಯ ಪರಿಶೀಲನೆ ನಡೆಸಿದೆ. ಮರವೂರಿನ ಹಳೆ ಸೇತುವೆಯ ಪಿಲ್ಲರ್‌ಗೆ ಹಾನಿಯಾಗಿರುವ ಹಿನ್ನೆಲೆ ಜೂನ್ 14ರಿಂದ ಈ ಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬೃಹತ್‌ ಕ್ರೇನ್‌ ಮೂಲಕ ಸೇತುವೆಯ ಅಡಿಭಾಗಕ್ಕೆ ತೆರಳಿದ ತಾಂತ್ರಿಕ ತಜ್ಞರು ಮರವೂರು ಸೇತುವೆಯನ್ನು ಪರಿಶೀಲಿಸಿ, ಸೇತುವೆಯ ಪಿಲ್ಲರ್‌, ಗರ್ಡರ್‌ನ ಕಾಂಕ್ರೀಟ್‌ ಭಾಗಗಳನ್ನು ಸಂಗ್ರಹಿಸಿದ್ದಾರೆ. ಇದರ ಮೂಲಕ ಸೇತುವೆಯ ದೃಢತೆಯನ್ನು

ಮರವೂರು ಸೇತುವೆ ಪರಿಶೀಲನೆ ನಡೆಸಿದ ತಾಂತ್ರಿಕ ತಜ್ಞರ ಸಮಿತಿ Read More »

ಕರಾವಳಿ

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ

(ನ್ಯೂಸ್ ಕಡಬ) newskadaba.com ಮಂಜೇಶ್ವರ, ಸೆ. 17. ಹೊಸಂಗಡಿಯ ಹೈಲ್ಯಾಂಡ್ಸ್ ಕಾಂಪ್ಲೆಕ್ಸ್ ನಲ್ಲಿರುವ ಸುರಕ್ಷಾ ದಂತ  ಚಿಕಿತ್ಸಾಲಯದಲ್ಲಿ ವಿಶೇಷವಾಗಿ ಓಣಂ ಹಬ್ಬ ಆಚರಿಸಲಾಯಿತು.  ಸಂಸ್ಥೆಯ ಮುಖ್ಯಸ್ಥ ಡಾ. ಮುರಲೀಮೋಹನ ಚೂಂತಾರು ಶುಭಹಾರೈಸಿದರು. ವೈದ್ಯೆ ಡಾ.ರಾಜಶ್ರೀ ಮೋಹನ್, ಪರಿಚಾರಕಿಯರಾದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು. ಸಂಸ್ಥೆಯು 28 ವರ್ಷಗಳಿಂದ ಹೊಸಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಜನಮನ್ನಣೆಗೆ ಪಾತ್ರವಾಗಿದೆ.

ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಓಣಂ ಆಚರಣೆ Read More »

ಕರಾವಳಿ

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ನಗರದ ಜೈಲು‌ ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಮೃತ ದುರ್ದೈವಿಗಳನ್ನು ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಜೆಸಿಬಿ ಮೂಲಕ ಮನೆಯನ್ನು ಕೆಡವುತ್ತಿದ್ದ ವೇಳೆ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಮಂಗಳೂರು: ಮನೆ ಗೋಡೆ ಕುಸಿದು ಇಬ್ಬರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top