Mangalore

ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಗಲಾಟೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.04. ಪೆಟ್ರೋಲ್‌ ಚಾಲಿತ ಆಟೋ ರಿಕ್ಷಾ ಚಾಲಕರು ಹಾಗೂ ಇ-ಆಟೋ ಚಾಲಕರ ನಡುವೆ ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ ನಡೆದ ಘಟನೆ ನಗರದಲ್ಲಿ ನಡೆದಿದೆ. ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳು ಇತ್ತಂಡಗಳ ಪ್ರಮುಖರನ್ನು ಕರೆದು ರಾಜಿ ಸಂಧಾನ ನಡೆಸಿ ಗೊಂದಲ ಬಗೆಹರಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೇ ಇನ್ನೊಂದು ವಾರದೊಳಗೆ ಇ-ಆಟೋಗಳಿಗೆ ವಲಯ ಸಂಖ್ಯೆ ನಮೂದಿಸುವ ಪ್ರಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.  

ಪೆಟ್ರೋಲ್‌ ರಿಕ್ಷಾ ಹಾಗೂ ಇ-ಆಟೋ ಚಾಲಕರ ನಡುವೆ ಗಲಾಟೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಉಳ್ಳಾಲ, ಮಾ.04. ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋಟೆಪುರ ಎಂಬಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಮೇಲೆ ಚೂರಿಯಿಂದ ಇರಿಯಲಾಗಿದೆ.ತಕ್ಷಣ ಅವರನ್ನು ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ ಭಾಗಕ್ಕೆ ಇರಿಯಲಾಗಿದೆ ಎನ್ನಲಾಗಿದೆ. ತಕ್ಷಣ ಮನೆಮಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ.    

ಉಳ್ಳಾಲ: ಯುವಕನಿಗೆ ಚೂರಿಯಿಂದ ಇರಿದು ಕೊಲೆ ಯತ್ನ ➤ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ.! ➤ ತಂದೆ ದೋಷಮುಕ್ತಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.03. ಇಬ್ಬರು ಪುತ್ರಿಯರು ತಮ್ಮ ತಂದೆಯ ಮೇಲೆ ಹೊರಿಸಿದ್ದ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ಒಂದು ಪ್ರಕರಣವು ಮಂಗಳೂರು ಪೊಕ್ಸೊ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದೆ. ಕಾಟಿಪಳ್ಳದ ನಿವಾಸಿ ಅಬ್ದುಲ್ ಹಕೀಂ ಈ ಪ್ರಕರಣದಲ್ಲಿ ದೋಷಮುಕ್ತಗೊಂಡ ವ್ಯಕ್ತಿ ಎಂದು ವರದಿ ತಿಳಿಸಿದೆ. 2021ರ ಜೂನ್‌ನಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.  

ಮಂಗಳೂರು: ಪುತ್ರಿಯರ ಅತ್ಯಾಚಾರ ಆರೋಪ.! ➤ ತಂದೆ ದೋಷಮುಕ್ತಿ Read More »

ಕರಾವಳಿ
crime, arrest, suspected

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ)newskadaba.com ಉಡುಪಿ, ಮಾ,03. ಮಣಿಪಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳವು ಪ್ರಕರಣದಲ್ಲಿ ಪೋಲಿಸರು ಇಬ್ಬರು ಕಾನೂನು ಸಂಘರ್ಷಕ್ಕೆ ಒಳಪಟ್ಟ ಬಾಲಕನನ್ನು ಸೇರಿಸಿ ಒಟ್ಟು ನಾಲ್ವರನ್ನು ಬಂಧಿಸಿದ್ದಾರೆ. ಫೆಬ್ರವರಿ 18 ರಾತ್ರಿ 17:00 ಗಂಟೆಯಿಂದ ಫೆಬ್ರವರಿ 19 ರಂದು ಬೆಳಿಗ್ಗೆ 10:00 ಗಂಟೆಯ ಮಧ್ಯಾವಧಿಯಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ನೆಹರು ನಗರದಲ್ಲಿರುವ ಕೃಷ್ಣ ಕೃಪಾ ಹೆಸರಿನ ಮನೆಗೆ ಯಾರೋ ಕಳ್ಳರು ಒಳ ಪ್ರವೇಶಿಸಿ ಮನೆಯ ಬೆಡ್ ರೂಂ ನಲ್ಲಿದ್ದ ಕಪಾಟಿನ ಒಳಗೆ ಇರಿಸಿದ

ಮಣಿಪಾಲ: ಮನೆಯಿಂದ ಕಳವು ಪ್ರಕರಣ..! ➤ ನಾಲ್ವರು ಆರೋಪಿಗಳ ಬಂಧನ, 4 ಲಕ್ಷ ಮೌಲ್ಯದ ಸೊತ್ತು ವಶ Read More »

ಕರಾವಳಿ, ಕ್ರೈಮ್ ನ್ಯೂಸ್

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. 407 ಟೆಂಪೊ ಹಾಗೂ ಸ್ಕೂಟರ್ ನಡುವಿನ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಕರಾವಳಿ ಬೈಪಸ್ ನಲ್ಲಿ ವರದಿಯಾಗಿದೆ. ಗಣಪತಿ ಪೈ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಗಣಪತಿಯವರು ಕರಾವಳಿ ಬೈಪಸ್ ನಿಂದ ಸಂತೆಕಟ್ಟೆಯತ್ತ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಟೆಂಪೋಗೆ ಡೀಕ್ಕಿಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತಂತೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೆಂಪೊ ಮತ್ತು ಸ್ಕೂಟರ್ ನಡುವೆ ಅಪಘಾತ..! ➤ ಓರ್ವ ಮೃತ್ಯು Read More »

ಕರಾವಳಿ

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.03. ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾ ಎಸ್. ಐ.ರಾಮಕೃಷ್ಣ ಅವರು ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡ ಘಟನೆ ಬ್ರಹ್ಮರಕೋಟ್ಲು ಎಂಬಲ್ಲಿ ನಡೆದಿದೆ. ಕಳ್ಳಿಗೆ ಗ್ರಾಮದ ಜಾರಂದಗುಡ್ಡೆ ನಿವಾಸಿ ಅಶೋಕ ಬಂಧಿತ ಆರೋಪಿ. ಈತನಿಂದ 2217 ರೂ ಮೌಲ್ಯದ 90 ಎಂ.ಎಲ್.ನ ಮೈಸೂರು ಲ್ಯಾನ್ಸರ್ ವಿಸ್ಕಿ ಎಂಬ ಹೆಸರಿನ 10 ಮದ್ಯದ ಸ್ಯಾಚೇಟ್ ಹಾಗೂ 500 ರೂ ನಗದನ್ನು

ಅಕ್ರಮ ಮದ್ಯ ಮಾರಾಟ..! ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕರ್ತವ್ಯ ಲೋಪ..! ➤ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಅಮಾನತು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಪಾಂಡೇಶ್ವರ ಠಾಣೆಯ ಹೆಡ್‌  ಕಾನ್‌ ಸ್ಟೆಬಲ್‌ ಶ್ರೀಲತಾ ಅವರನ್ನು ಪೊಲೀಸ್‌ ಆಯುಕ್ತರು ಅಮಾನತುಗೊಳಿಸಿರುವುದಾಗಿ ವರದಿಯಾಗಿದೆ. ನಗರದ ಕ್ಲಾಕ್‌ ಟವರ್‌ ಬಳಿ ಹೊಯ್ಸಳ ವಾಹನದಲ್ಲಿ ಕರ್ತವ್ಯದಲ್ಲಿದ್ದ ಶ್ರೀಲತಾ ಅಲ್ಲಿಂದ ಖಾಸಗಿ ವಾಹನದಲ್ಲಿ ತೆರಳಿ ಕರ್ತವ್ಯ ಲೋಪವೆಸಗಿದ್ದರು.  

ಮಂಗಳೂರು: ಕರ್ತವ್ಯ ಲೋಪ..! ➤ ಪೊಲೀಸ್ ಹೆಡ್ ಕಾನ್ ಸ್ಟೆಬಲ್ ಅಮಾನತು Read More »

ಕರಾವಳಿ

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಹಂಪನಕಟ್ಟೆಯಲ್ಲಿನ ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 1 ತಿಂಗಳ ಬಳಿಕ ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಝಿಕ್ಕೋಡ್ ಕೊಯಿಲಾಂಡಿಯ ಶಿಫಾಝ್ (33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದೆ. ಅತ್ತಾವರದ ನಿವಾಸಿ ರಾಘವ(50) ಎಂಬವರನ್ನು ಚೂರಿಯಿಂದ ಇರಿದು ಕೊಲೆಗೈದು ದರೋಡೆ ಮಾಡಿಕೊಂಡು ಮುಸುಕುದಾರಿ ಪರಾರಿಯಾಗಿದ್ದ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದರು.

ಜ್ಯುವೆಲ್ಲರಿಗೆ ನುಗ್ಗಿ ದರೋಡೆ – ಕೊಲೆ ಪ್ರಕರಣ..! ➤ ಒಂದು ತಿಂಗಳ ಬಳಿಕ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಭ್ರಷ್ಟಾಚಾರ ಪ್ರಕರಣ..! ➤ ಗ್ರಾಮ ಕರಣಿಕನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.03. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕರಣಿಕನಿಗೆ ಮಂಗಳೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿರುವ ಘಟನೆ ನಡೆದಿದೆ. ಶಿಕ್ಷೆಗೊಳಗಾದವರನ್ನು ಎಸ್‌. ಮಹೇಶ್‌ ಎಂದು ಗುರುತಿಸಲಾಗಿದೆ. ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು, 2016ರ ಜೂ. 7ರಂದು 45,000 ರೂ.ಗಳನ್ನು ಲಂಚದ ಹಣವಾಗಿ ಸ್ವೀಕರಿಸುವ ಸಂದರ್ಭ ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ಬಂಧಿಸಿದ್ದರು.

ಮಂಗಳೂರು: ಭ್ರಷ್ಟಾಚಾರ ಪ್ರಕರಣ..! ➤ ಗ್ರಾಮ ಕರಣಿಕನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ Read More »

ಕರಾವಳಿ

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ!

(ನ್ಯೂಸ್ ಕಡಬ)newskadaba.com ಪುತ್ತೂರು, ಮಾ.03. ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದ ಹಿಂದು ಮತ್ತು ಮುಸ್ಲಿಂ  ವ್ಯಕ್ತಿಗಳಿಬ್ಬರನ್ನು ಹಿಂದು ಸಂಘಟನೆ ಕಾರ್ಯಕರ್ತರು ವಿಚಾರಿಸಿದ  ಘಟನೆ ಕೃಷ್ಣನಗರದಲ್ಲಿ  ನಡೆದಿದ್ದು ಮಾಹಿತಿ ತಿಳಿದು ಪೊಲೀಸರು ಆಗಮಿಸಿ ಅಹಿತಕರ ಘಟನೆಗಳಾಗದಂತೆ  ನೋಡಿಕೊಂಡಿದ್ದಾರೆ. ಕೆರೆಮೂಲೆ ನಿವಾಸಿ ಮುಸ್ಲಿಂ ಮತ್ತು ಕೆಮ್ಮಾಯಿಯ ಹಿಂದು ಓರ್ವರು ಸೇರಿಕೊಂಡು ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದರು ಎನ್ನಲಾಗಿದೆ.

ಪುತ್ತೂರು: ಹೋರಿಯನ್ನು ನಡೆಸಿಕೊಂಡು ಹೋಗುತ್ತಿದ್ದ ಭಿನ್ನ ಸಮುದಾಯದ ವ್ಯಕ್ತಿಗಳು ➤ ಈರ್ವರು ಪೊಲೀಸ್ ವಶಕ್ಕೆ! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top