Mangalore

ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಕಡಬ ತಾಲೂಕಿನ ಕಲ್ಲುಗುಡ್ಡೆ ಉದನೆ ಸಂಪರ್ಕ ರಸ್ತೆಯ ನಿಡ್ಡೋ ಬಳಿಯ ಅರಣ್ಯದಲ್ಲಿ ನಾಲ್ಕು ದಿನಗಳ ಹಿಂದೆ ಕಾಡಾನೆಯೊಂದು ವ್ಯಕ್ತಿಯೋರ್ವರಿಗೆ ಕಾಣಿಸಿದೆ ಎಂದು ವರದಿ ತಿಳಿಸಿದೆ. ರವಿವಾರ ಬೆಳಗ್ಗೆ ಕಾಡಾನೆ ಸಿಕ್ಕಿದ್ದು ಅವರು ನೀಡಿದ ಮಾಹಿತಿ ಆಧಾರಿಸಿ ಅರಣ್ಯ ಇಲಾಖೆಯ ತಂಡವು ಕಾಡಾನೆ ಪತ್ತೆ ಕಾರ್ಯವನ್ನು ಮತ್ತೆ ಚುರುಗೊಳಿಸಿದೆ.

ಕಡಬ: ಮತ್ತೇ ಅರಣ್ಯದಲ್ಲಿ ವ್ಯಕ್ತಿಯೊಬ್ಬರಿಗೆ ಕಾಣ ಸಿಕ್ಕ ಒಂಟಿ ಸಲಗ Read More »

ಕರಾವಳಿ, ಕ್ರೈಮ್ ನ್ಯೂಸ್

SDPI ಪಕ್ಷದ 2ನೇ ಪಟ್ಟಿ ರಿಲೀಸ್ ➤ ಶಾಫಿ ಬೆಳ್ಳಾರೆ ಪುತ್ತೂರು ಅಭ್ಯರ್ಥಿ !

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಮಾ.02. ವಿಧಾನಸಭೆ ಚುನಾವಣೆಗೆ ಎಸ್ ಡಿಪಿಐ ಪಕ್ಷವು ತನ್ನ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನಲ್ಲಿ ಎಸ್ ಡಿಪಿಐ ರಾಷ್ಟ್ರಾಧ್ಯಕ್ಷ ಎಂ.ಕೆ. ಫೈಝಿ 2ನೇ ಪಟ್ಟಿ ಬಿಡುಗಡೆ ಮಾಡಿದ್ದು ಇದರಲ್ಲಿ 9 ಮಂದಿ ಅಭ್ಯರ್ಥಿಗಳ ಹೆಸರಿದೆ. ಇನ್ನು ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶಾಫಿ ಬೆಳ್ಳಾರೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸುವುದು ಇದೀಗ ಖಚಿತಗೊಂಡಿದೆ.

SDPI ಪಕ್ಷದ 2ನೇ ಪಟ್ಟಿ ರಿಲೀಸ್ ➤ ಶಾಫಿ ಬೆಳ್ಳಾರೆ ಪುತ್ತೂರು ಅಭ್ಯರ್ಥಿ ! Read More »

ಕರಾವಳಿ

ಮಂಗಳೂರು: 4 ವರ್ಷದ ಮಗುವಿನೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ತನ್ನ 4 ವರ್ಷದ ಮಗುವಿನೊಂದಿಗೆ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಡಿಯಾಲ್ ಗುತ್ತಿನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ ಮಹಿಳೆ ತನ್ನ 4 ವರ್ಷದ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. ಇಬ್ಬರು ಮಕ್ಕಳ ಜತೆಗೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಇನ್ನೋರ್ವ ಮಗಳು ನೇಣಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.  

ಮಂಗಳೂರು: 4 ವರ್ಷದ ಮಗುವಿನೊಂದಿಗೆ ನೇಣು ಬಿಗಿದು ತಾಯಿ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.02. ಮೀನು ಸಾಗಾಟದ ಲಾರಿಯೊಂದು ಚಾಲಕನ ನಿರ್ಲಕ್ಷತನದ ಚಾಲನೆಯಿಂದ ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 66ರ ಪಡು ಪಣಂಬೂರು ಕೀರು ಸೇತುವೆ ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕೇರಳ ಕಡೆಗೆ ಹೋಗುತ್ತಿದ್ದ ಮೀನಿನ ಲಾರಿ ಪಡುಪಣಂಬೂರು ಕಿರು ಸೇತುವೆ ಬಳಿ ಚಾಲಕನ ನಿರ್ಲಕ್ಷ ಚಾಲನೆಯಿಂದ ಅದೇ ದಿಕ್ಕಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ

ಮಂಗಳೂರು: ಕಾರಿಗೆ ಮೀನು ಸಾಗಾಟ ಲಾರಿ ಢಿಕ್ಕಿ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಡಬ, ಮಾ.02. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ವೆಂಕಪ್ಪ ಪೂಜಾರಿ ಎಂಬವರ ಪುತ್ರ ಕಿಶೋರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಡಬ ಠಾಣಾ ಹೆಚ್.ಸಿ ರಾಜುನಾಯ್ಕ ಮತ್ತು ಪಿಸಿ ಸಿರಾಜುದ್ದಿನ್ ಅವರು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ  

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.01. ಅಕ್ರಮ ಮರಳು ಸಾಗಾಟ ಮಾಡುತ್ತಿದ್ದ ವಾಹನಗಳ ಮೇಲೆ ಪೊಲೀಸರು ದಾಳಿ ನಡೆಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್ ಹಾಗೂ ಲಾರಿಗಳನ್ನು ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 25ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಎಂಆರ್‌ಪಿಎಲ್ ಮೇಲ್ಸೇತುವೆ ಬಳಿ ಸುಮಾರು 10 ಟನ್ ಮರಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಪಣಂಬೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.    

ಮಂಗಳೂರು: ಅಕ್ರಮ ಮರಳು ಸಾಗಾಟ; ವಾಹನಗಳು ವಶಕ್ಕೆ   Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನೌಕರರ ಮುಷ್ಕರ-ಸ್ತಬ್ದಗೊಂಡ ಸರ್ಕಾರಿ ಸೇವೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಇಂದಿನಿಂದ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರದ ಪರಿಣಾಮ ಬಹುತೇಕ ಎಲ್ಲಾ ಸರ್ಕಾರಿ ಕಚೇರಿಗಳು ಬುಧವಾರ ಸ್ತಭ್ದಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಷ್ಕರದ ಬಿಸಿ ತಟ್ಟಿದ್ದು, ಮುಷ್ಕರದ ಮೊದಲ ದಿನದಂದೇ ಜನಸಾಮಾನ್ಯರಿಗೆ ಸರ್ಕಾರಿ ಸೇವೆ ಬಹುತೇಕ ಅಲಭ್ಯವಾಗಿತ್ತು.

ಮಂಗಳೂರು: ನೌಕರರ ಮುಷ್ಕರ-ಸ್ತಬ್ದಗೊಂಡ ಸರ್ಕಾರಿ ಸೇವೆ Read More »

ಕರಾವಳಿ

ಬಂಟ್ವಾಳ: ಹಣದಾಸೆಗೆ ಅಕ್ರಮವಾಗಿ ಸ್ವಿಮ್ಮಿಂಗ್ ಫೂಲ್‌ ನಿರ್ಮಿಸಿ ಬಾಡಿಗೆ ನೀಡುತ್ತಿರುವ ಇಸ್ರೇಲ್ ಉದ್ಯಮಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾರ್ಚ್‌, 01. ಸ್ವಿಮ್ಮಿಂಗ್ ಫೂಲ್ ಬಹುತೇಕರ ನೆಚ್ಚಿನ ತಾಣವಾಗಿರುತ್ತದೆ. ನೀರಿನಲ್ಲಿ ಆಟ ಆಡುತ್ತಾ ಸಮಯವನ್ನು ಸಂತೋಷದಿಂದ ಕಳೆಯುವುದಕ್ಕೆ ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುತ್ತಾರೆ. ಆದರೆ ಇದನ್ನೇ ಬಂಡವಾಳವಾಗಿಸಿಕೊಂಡ ಇಸ್ರೇಲ್‌ನ ಉದ್ಯಮಿಯೊಬ್ಬ ಬಸ್ತಿಕೋಡಿಯಲ್ಲಿನ ತನ್ನ ಮನೆಯ ಸ್ವಿಮ್ಮಿಂಗ್ ಫೊಲ್ ಅನ್ನು ಜನರ ಮೋಜಿಗಾಗಿ ನೀಡಿ ವಿವಾದಕ್ಕೆ ಒಳಗಾಗಿದ್ದಾನೆ.

ಬಂಟ್ವಾಳ: ಹಣದಾಸೆಗೆ ಅಕ್ರಮವಾಗಿ ಸ್ವಿಮ್ಮಿಂಗ್ ಫೂಲ್‌ ನಿರ್ಮಿಸಿ ಬಾಡಿಗೆ ನೀಡುತ್ತಿರುವ ಇಸ್ರೇಲ್ ಉದ್ಯಮಿ Read More »

ಕರಾವಳಿ, ಕರ್ನಾಟಕ

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.01. ಮುಂಬೈಯಿಂದ ಮಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಕಳೆದುಹೋಗಿದ್ದ ಚಿನ್ನಾಭರಣಗಳಿದ್ದ ಟ್ರಾಲಿ ಬ್ಯಾಗ್‌ ನಗರದ ಕುಲಶೇಖರದಲ್ಲಿ ರೈಲು ಹಳಿ ಪಕ್ಕದಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ರವೀಂದ್ರ ಎಂ.ಶೆಟ್ಟಿ (74) ಮತ್ತು ಅವರ ಪತ್ನಿ ಶಶಿಕಲಾ ಶೆಟ್ಟಿ ಅವರು ಮಂಗಳೂರಿಗೆ ರೈಲಿನಲ್ಲಿ ಬರುತ್ತಿದ್ದಾಗ ಸುರತ್ಕಲ್‌ನಿಂದ ಮಂಗಳೂರು ನಡುವೆ ಅವರ ಟ್ರಾಲಿ ಬ್ಯಾಗ್‌ ಕಳೆದು ಹೋಗಿತ್ತು. ಕಳವಾಗಿರುವ ಬಗ್ಗೆ ಮಂಗಳೂರು ರೈಲ್ವೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎನ್ನಲಾಗಿದೆ.

ರೈಲಿನಲ್ಲಿ ಕಳೆದುಹೋಗಿದ್ದ 8.57 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ ಕೊನೆಗೂ ಪತ್ತೆ Read More »

ಕರಾವಳಿ

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.28. ಮಾರ್ಚ್ 1 ರಿಂದ ಸರ್ಕಾರಿ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ನಡೆಯಲಿದ್ದು, ಈ ಸಂದರ್ಭದಲ್ಲಿ ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಇತರೆ ಎಲ್ಲಾ ಸರ್ಕಾರಿ ಸೇವೆಗಳು ಸ್ಥಗಿತಗೊಳ್ಳಲಿವೆ ಎಂದು ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಆಧ್ಯಕ್ಷ ಅಂಪಾರು ದಿನಕರ ಶೆಟ್ಟಿ ಹೇಳಿದರು.   ಉಡುಪಿ ತಾಲೂಕು ಪಂಚಾಯತ್ ಸಭಾ ಭವನದಲ್ಲಿ ನಡೆದ, ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ನಡೆಯುವ ನೌಕರರ ಅರ್ನಿದಿಷ್ಟಾವಧಿ ಮುಷ್ಕರದ ರೂಪು ರೇಷೆ ಕುರಿತ , ಜಿಲ್ಲೆಯ ಸರಕಾರಿ

ಉಡುಪಿ: ಮಾರ್ಚ್ 1 ರಿಂದ ತುರ್ತು ಸೇವೆ ಹೊರತುಪಡಿಸಿ ಇತರ ಸರ್ಕಾರಿ ಸೇವೆ ಸ್ಥಗಿತ Read More »

ಕರಾವಳಿ
Scroll to Top