Mangalore

 ಮಂಗಳೂರು: ಕರಾವಳಿಯಾದ್ಯಂತ ಇಂದು ಭಕ್ತಿ ಸಂಭ್ರಮದ ಶಿವರಾತ್ರಿ ಆಚರಣೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.18. ಕರಾವಳಿಯಾದ್ಯಂತ ಮಹಾ ಶಿವರಾತ್ರಿ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಪೂಜಾ ವಿಧಿಗಳು ಆರಂಭಗೊಂಡಿವೆ. ಶಿವ ದೇವಸ್ಥಾನಗಳಲ್ಲಿ ಮುಂಜಾನೆಯಿಂದಲೇ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿಯ ವಿವಿಧ ಶಿವ ದೇವಸ್ಥಾನಗಳಲ್ಲಿ ಭಕ್ತಿ, ಸಂಭ್ರಮದಿಂದ ಶಿವರಾತ್ರಿ ಆಚರಣೆ ನಡೆಯುತ್ತಿದೆ. ಶಿವ ದೇವಸ್ಥಾನ ಸೇರಿದಂತೆ ವಿವಿಧ ದೇವಳಗಳಲ್ಲಿ ಶಿವನಿಗೆ ಅಭಿಷೇಕ, ವಿಶೇಷ ಪೂಜೆ, ಅರ್ಚನೆಗಳು ನಡೆಯುತ್ತಿವೆ.

 ಮಂಗಳೂರು: ಕರಾವಳಿಯಾದ್ಯಂತ ಇಂದು ಭಕ್ತಿ ಸಂಭ್ರಮದ ಶಿವರಾತ್ರಿ ಆಚರಣೆ Read More »

ಕರಾವಳಿ

ಬಂಟ್ವಾಳ: ಲಕ್ಷಾಂತರ ಮೌಲ್ಯದ ಸೊತ್ತು ಕಳವು     ➤ ಇಬ್ಬರು ಆರೋಪಿಗಳು ಅರೆಸ್ಟ್…!!!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.17. ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಪೋಲೀಸರ ತಂಡ ಸೊತ್ತುಗಳ ಸಹಿತ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ತುಂಬೆ ನಿವಾಸಿಗಳಾದ ಮೊಹಮ್ಮದ್ ಆನ್ಸಾಫ್, ನವಾಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ ಒಟ್ಟು 1.90 ಲಕ್ಷ ಮೌಲ್ಯದ ಸೊತ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.  

ಬಂಟ್ವಾಳ: ಲಕ್ಷಾಂತರ ಮೌಲ್ಯದ ಸೊತ್ತು ಕಳವು     ➤ ಇಬ್ಬರು ಆರೋಪಿಗಳು ಅರೆಸ್ಟ್…!!! Read More »

ಕರಾವಳಿ, ಕ್ರೈಮ್ ನ್ಯೂಸ್

ಡಿಜಿಟಲ್ ಮಾರ್ಕೆಟಿಂಗ್ ವಂಚನೆ        ➤18.43 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಡಿಜಿಟಲ್ ಮಾರ್ಕೆಟಿಂಗ್ ಮೂಲಕ ತ್ವರಿತ ಹಣ ಗಳಿಸುವ ಆಮಿಷದ ಬಲೆಗೆ ಬಿದ್ದ ವ್ಯಕ್ತಿ 18.43 ಲಕ್ಷ ರೂ ಹಣ ಕಳೆದುಕೊಂಡಿದ್ದು, ಈ ಬಗ್ಗೆ ಸೆನ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಡಿಜಿಟಲ್‌ ಮಾರ್ಕೆಟಿಂಗ್‌ ಮೂಲಕ ಹಣಗಳಿಸುವ ಬಗ್ಗೆ ಅಪರಿಚಿತ ವ್ಯಕ್ತಿಯ ಸಂದೇಶ ವಾಟ್ಸಾಪ್‌ ಸಂದೇಶವನ್ನು ನಂಬಿದ ಅವರು ಅಪರಿಚಿತ ಕಳುಹಿಸಿದ್ದ ಟೆಲಿಗ್ರಾಂ ಚಾನಲ್‌ಗೆ ಸದಸ್ಯರಾಗಿದ್ದಾರೆ. ಆ ಚಾನೆಲ್‌ ಮೂಲಕ ವೆಬ್‌ಸೈಟ್‌ ಒಂದರಲ್ಲಿ ನೊಂದಣಿ ಮಾಡುವಂತೆ ತಿಳಿಸಿದ್ದು, ನೋಂದಣಿ ಮಾಡಿಸಿಕೊಂಡಿದ್ದಾರೆ.    

ಡಿಜಿಟಲ್ ಮಾರ್ಕೆಟಿಂಗ್ ವಂಚನೆ        ➤18.43 ಲಕ್ಷ ರೂ. ಹಣ ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕ್ರೈಮ್ ನ್ಯೂಸ್

ಯಕ್ಷಗಾನದ ಹೆಸರಾಂತ ಭಾಗವತ ಬಲಿಪ ನಾರಾಯಣ ನಿಧನ !!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಯಕ್ಷಗಾನದ ಹೆಸರಾಂತ ಭಾಗವತ, ಕಂಚಿನ ಕಂಠದ ‘ಬಲಿಪ ಶೈಲಿ’ಯ ಹಾಡುಗಾರಿಕೆಗೆ ಖ್ಯಾತವಾಗಿರುವ ಬಲಿಪ ನಾರಾಯಣ ಭಾಗವತ ಅವರು ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಬಲಿಪ ನಾರಾಯಣ ಭಾಗವತರು ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲ್ಲೂಕಿನ ಮಾರೂರು ನೂಯಿಯಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ ದಂಪತಿಯ ಪುತ್ರರಾದ ಅವರು, ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದಲ್ಲಿ 1938ರ ಮಾರ್ಚ್ 13ರಂದು ಜನಿಸಿದ್ದು, 13ನೇ ವಯಸ್ಸಿಗೆ ಯಕ್ಷಗಾನ

ಯಕ್ಷಗಾನದ ಹೆಸರಾಂತ ಭಾಗವತ ಬಲಿಪ ನಾರಾಯಣ ನಿಧನ !! Read More »

ಕರಾವಳಿ

ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಸ್ಟೇಟ್‌ಬ್ಯಾಂಕ್‌ ಸಮೀಪದ ಸರ್ವಿಸ್‌ ಬಸ್‌ ನಿಲ್ದಾಣದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಲಾಗಿದೆ ಎಂದು ಮಂಗಳೂರಿನಲ್ಲಿ ವರದಿಯಾಗಿದೆ. ಲೈಟ್‌ ಕಂಬವೊಂದರ ಬುಡದಲ್ಲಿ ಮಗು ಇರುವುದನ್ನು ಗಮನಿಸಿದ ಚಾಲಕರು ಪೊಲೀಸರಿಗೆ ತಿಳಿಸಿದ್ದಾರೆ. ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವೆನ್ಲಾಕ್‌ನ ಆಸ್ಪತ್ರೆಯ ಮಕ್ಕಳ ಚಿಕಿತ್ಸಾ ವಿಭಾಗದಲ್ಲಿ ಇದೀಗ ಪೊಲೀಸರು ಮಗುವನ್ನು ದಾಖಲಿಸಿದ್ದಾರೆ. ಮಗುವಿನ ಆರೋಗ್ಯದಲ್ಲಿ ಏರುಪೇರು ಇದ್ದು, ಸುಮಾರು ಒಂದು ವಾರದ ಹಿಂದೆ ಮಗು ಜನಿಸಿರಬಹುದು ಎಂದು ವೈದ್ಯರು ತಿಳಿಸಿದ್ದಾರೆ.  

ಮಂಗಳೂರು: ಲೈಟ್ ಕಂಬವೊಂದರ ಬುಡದಲ್ಲಿ ನವಜಾತ ಶಿಶು ಪತ್ತೆ !! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ತಾಯಿಗೆ ಕೊಲೆ ಬೆದರಿಕೆ !     ➤ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಮಗನೋರ್ವ ಹೆತ್ತ ತಾಯಿಗೆ ಅವ್ಯಾಚ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬೋಳಾರ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ಫೆ. 15ರ ಬುಧವಾರ ತಡರಾತ್ರಿ ಸಂಭವಿಸಿದೆ. ಆರೋಪಿ ಪುತ್ರ ರೋಹಿತ್‌ ವಿರುದ್ಧ ಗಾಯಾಳು ಆಗಿರುವ ಶಾಂತಾ ರೈ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  

ಮಂಗಳೂರು: ತಾಯಿಗೆ ಕೊಲೆ ಬೆದರಿಕೆ !     ➤ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕಡಲಬ್ಬರ ಸಾಧ್ಯತೆ      ➤ ಸಮುದ್ರ ತೀರದ ನಿವಾಸಿಗಳಿಗೆ; ಮೀನುಗಾರರಿಗೆ ಎಚ್ಚರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.16. ಕರಾವಳಿಯಲ್ಲಿ ಕಡಲಬ್ಬರ ಹೆಚ್ಚಾಗಲಿದೆ ಎಂದು ಕೇಂದ್ರ ಸಮುದ್ರ ಸ್ಥಿತಿ ಅಧ್ಯಯನ ಸಂಶೋಧನಾ ಕೇಂದ್ರ (ಐನ್ ಸಿಓಐಎಸ್)ಎಚ್ಚರಿಕೆ ನೀಡಿದೆ. ಕರ್ನಾಟಕ, ಕೇರಳ, ಲಕ್ಷದೀಪ, ತಮಿಳುನಾಡು, ಗೋವಾ, ಮಹಾರಾಷ್ಟ್ರ, ಸಮುದ್ರದಲ್ಲಿ ಕಡಲು ಅಬ್ಬರದಿಂದ ಕೂಡಿರುವ ಸಾಧ್ಯತೆ ಇದೆ .ಆದುದರಿಂದ ಮೀನುಗಾರರು ಮತ್ತು ಕಿನಾರೆಯ ಜನರು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.  

ಮಂಗಳೂರು: ಕಡಲಬ್ಬರ ಸಾಧ್ಯತೆ      ➤ ಸಮುದ್ರ ತೀರದ ನಿವಾಸಿಗಳಿಗೆ; ಮೀನುಗಾರರಿಗೆ ಎಚ್ಚರಿಕೆ Read More »

ಕರಾವಳಿ

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.16. ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ (18) ಗಾಯಗೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.    

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.15. ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಪ್ರಸ್ತುತ ಮೇರಮಜಲು ಬಾಡಿಗೆ ಮನೆ ನಿವಾಸಿ ಬಬ್ಲು (36) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊರವಲಯದ ಮೇರಮಜಲು ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಮನೆಯೊಂದರ ಒಂದನೇ ಮಹಡಿಯಲ್ಲಿ ಗಾರೆ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದರು. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಕೂಡಲೇ ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ

ಮಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.14. ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ ಎಂದು ಗುರುತಿಸಾಗಿದ್ದು,  ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top