Mangalore

ಮಂಗಳೂರು: ಗುಜರಿ ಸೇರಲಿದೆ ‘ಭಗವತಿ ಪ್ರೇಮ್’ ನೌಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ‘ಭಗವತಿ ಫ್ರೇಮ್’ ಎಂಬ ಹೆಸರಿನ ಬೃಹದಾದ ಡ್ರೆಜ್ಜರ್ ನೌಕೆಯೊಂದು ನಗರದ ಹೊರವಲಯದ ಸುರತ್ಕಲ್‌ನ ಗುಡ್ಡೆಕೊಪ್ಲ ಸಮುದ್ರ ಬದಿಯಲ್ಲಿ ನಿಷ್ಕ್ರೀಯಗೊಂಡು ನಿಂತಿದ್ದು, ಸ್ಥಳೀಯ ಮೀನುಗಾರರಿಗೆ ಸಾಕಷ್ಟು ತೊಂದರೆ ಕೊಡುತ್ತಿತ್ತು. ಇದೀಗ ಮೂರು ವರ್ಷಗಳ ನಂತರ ಈ ಬೃಹತ್ ನೌಕೆಗೆ ಮುಕ್ತಿ ನೀಡುವ ಕಾರ್ಯ ಆರಂಭವಾಗಿದೆ. ಈ ನಿಂತಿರುವ ಡ್ರೆಜ್ಜರ್ ನೌಕೆಯು 114 ಮೀಟರ್ ಉದ್ದ, 21 ಮೀಟರ್ ಅಗಲ, 9,492 ಟನ್ ತೂಕವನ್ನು ಹೊಂದಿದೆ. ಕಡಲ ಕಿನಾರೆಯಲ್ಲಿ ಮುಳುಗಿರುವ ಈ ಡ್ರೆಜ್ಜರ್‌‌ನ್ನು ಒಡೆಯುವ […]

ಮಂಗಳೂರು: ಗುಜರಿ ಸೇರಲಿದೆ ‘ಭಗವತಿ ಪ್ರೇಮ್’ ನೌಕೆ Read More »

ಕರಾವಳಿ

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’      

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಮಂಗಳೂರಿನ ಬಂಗ್ರ ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ 6ನೇ ವರ್ಷದ ರಾಮ- ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳಕ್ಕೆ ಚಾಲನೆ ದೊರೆತಿದ್ದು, ಪ್ರಪಂಚದಾದ್ಯಂತ ಜನಪ್ರಿಯತೆ ಗಳಿಸಿರುವ ಈ ಮಂಗಳೂರು ಕಂಬಳ ವಿದೇಶಿಗರ ಕಣ್ಮನ ಸೆಳೆದಿದೆ. ಅಫ್ಘಾನಿಸ್ತಾನ, ಜರ್ಮನಿ ಮತ್ತು ಡೆನ್ಮಾರ್ಕ್‌ನಿಂದ ಮಂಗಳೂರಿಗೆ ಬಂದ ವಿದೇಶಿಗರು ನಿನ್ನೆ ಕಂಬಳ ವೀಕ್ಷಿಸಿದರು. ಡೆನ್ಮಾರ್ಕ್‌ ಮೂಲದ ಹೆನ್ರಿ ಎಂಬುವವರು ಮಾತನಾಡಿ, ಬಿಸ್ನೆಸ್ ಟ್ರಿಪ್ ನಲ್ಲಿದ್ದೆವು. ಕಂಬಳವನ್ನು ಲೈವ್ ಆಗಿ ನೋಡುವುದು ನಮ್ಮ ಆಸೆಯಾಗಿತ್ತು. ಮಂಗಳೂರು ಕಂಬಳ ಹಾಗೂ

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’       Read More »

ಕರಾವಳಿ

ಮಂಗಳೂರು: ಬೆಂಕಿಗಾಹುತಿಯಾದ ಮನೆ   ➤ ದಿಕ್ಕುತೋಚದಂತಾಗಿದೆ ಬಡ ಕುಟುಂಬ

(ನ್ಯೂಸ್ ಕಡಬ)newskadaba.com ಮಂಗಳೂರು, ಜ. 23. ಕಾವೂರಿನ ಪಳನೀರು ಎಂಬಲ್ಲಿ ಬಡ ಕುಟುಂಬದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಢ ಸಂಭವಿಸಿ ಮನೆ ಹೊತ್ತಿ ಉರಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಂದಿರಾ ಎಂಬವರಿಗೆ ಸೇರಿದ ಮನೆ ಇದಾಗಿದ್ದು, ಮನೆಮಂದಿಯೆಲ್ಲಾ ಕೆಲಸಕ್ಕೆ ಹೋದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಇನ್ನು ಸ್ಥಳೀಯರು, ಅಗ್ನಿಶಾಮಕ ದಳದ ನೆರವಿನಿಂದ ಕಾರ್ಯಾಚರಣೆ ನಡೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ ಎಂದು ತಿಳಿದುಬಂದಿದೆ.  

ಮಂಗಳೂರು: ಬೆಂಕಿಗಾಹುತಿಯಾದ ಮನೆ   ➤ ದಿಕ್ಕುತೋಚದಂತಾಗಿದೆ ಬಡ ಕುಟುಂಬ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ನಶೆಯಲ್ಲಿದ್ದ ವೈದ್ಯರ ಬೆನ್ನು ಹತ್ತಿದ್ದ ಪೊಲೀಸರು ಮತ್ತೆ 9 ಮಂದಿಯನ್ನು‌ ಬಂಧನ ಮಾಡಿದ್ದಾರೆ. ಇಬ್ಬರು ವೈದ್ಯರು ಸೇರಿದಂತೆ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಪೊಲೀಸರ ಅತಿಥಿಗಳಾಗಿದ್ದು, ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ವೈದ್ಯರ ಗಾಂಜಾ ಘಾಟಿನ ನಶೆ ಇನ್ನೂ ಇಳಿಯುವ ಲಕ್ಷಣ ಕಾಣುತ್ತಿಲ್ಲ‌. ಪೊಲೀಸರು ಕೆದಕಿದಷ್ಟು ಹೆಚ್ಚು ಮಂದಿ ಈ ಪ್ರಕರಣದಲ್ಲಿ ಬಲೆಗೆ ಬೀಳುತ್ತಲೇ ಇದ್ದಾರೆ. ವೈದ್ಯರ ಗಾಂಜಾ ಘಾಟಿನ ಹಿಂದೆ‌ ಬಿದ್ದ ಪೊಲೀಸರು ಇದೀಗ ಮತ್ತೆ ಒಂಬತ್ತು ಮಂದಿಯನ್ನು ಬಂಧಿಸಿದ್ದಾರೆ.

ಮಂಗಳೂರು: ಡ್ರಗ್ಸ್ ಪ್ರಕರಣ, ಮತ್ತೇ 9 ಮಂದಿ ಅರೆಸ್ಟ್   ➤ ಬಂಧಿತರ ಸಂಖ್ಯೆ 24ಕ್ಕೆ ಏರಿಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಯಿತು. ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಮಂಗಳೂರು ನಗರ ಪೊಲೀಸ್ ಪರಿವರ್ತನಾ ಸಭೆಯಲ್ಲಿ ಕಮಿಷನರ್ ಎನ್.ಶಶಿಕುಮಾರ್ ಈ ಬಗ್ಗೆ ಮಾಹಿತಿ ನೀಡಿದರು. ಕಮಿಷನರೇಟ್ ವ್ಯಾಪ್ತಿಯ ಎಲ್ಲ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳು ಇದರಲ್ಲಿ ಸೇರಿದ್ದಾರೆ. ಈ ವ್ಯಾಪ್ತಿಯಲ್ಲಿ ಒಟ್ಟು 2305 ಮಂದಿ ರೌಡಿಗಳಿದ್ದಾರೆ. ಅದರಲ್ಲಿ 783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ. ಇನ್ನೂ 1522 ಮಂದಿ

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 783 ಮಂದಿಯ ರೌಡಿ ಶೀಟ್ ತೆರವು      Read More »

ಕರಾವಳಿ

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ದಾಖಲೆಯಿಲ್ಲದೆ ಅಕ್ರಮವಾಗಿ ಖಾಸಗಿ ಬಸ್ ನಲ್ಲಿ ಹಣ ಸಾಗಿಸುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರು ರಿತಿಕ್ ಎಂಬ ವಿದ್ಯಾರ್ಥಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಈತ ವಿ.ಆರ್.ಎಲ್ ಬಸ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದ ಎನ್ನಲಾಗಿದ್ದು, ಎರಡು ಬ್ಯಾಗುಗಳಲ್ಲಿ ಬರೋಬ್ಬರಿ 1.14 ಕೋಟಿ ರೂಪಾಯಿಗಳನ್ನು ಸಾಗಿಸುತ್ತಿದ್ದ. ತಮಗೆ ದೊರೆತ ಖಚಿತ ಮಾಹಿತಿ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ವಿದ್ಯಾರ್ಥಿ ರಿತಿಕ್, ಹುಬ್ಬಳ್ಳಿಯ ಕೇಶ್ವಾಪುರದ ಮಯೂರಿ ಎಸ್ಟೇಟ್ ನಿವಾಸಿ ಎನ್ನಲಾಗಿದ್ದು, ವಿಚಾರಣೆ ವೇಳೆ

ಮಂಗಳೂರು: ದಾಖಲೆಯಿಲ್ಲದೆ ವಿದ್ಯಾರ್ಥಿಯಿಂದ ಹಣ ಸಾಗಟ !!!     ➤ ಬರೋಬ್ಬರಿ 1.14 ಕೋಟಿ ರೂ. ವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!  

(ನ್ಯೂಸ್ ಕಡಬ)newskadaba.com ಸುರತ್ಕಲ್, ಜ.23. ವಿವಾಹಿತ ಯುವತಿ ಆತ್ಮಹತ್ಯೆ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದಲ್ಲಿ ನಡೆದಿದೆ. ಒಟ್ಟೆಕಾಯರ್ ಮನೆ ನಿವಾಸಿ ಹರೀಶ್ ಎಂಬವರ ಪತ್ನಿ ದಿವ್ಯಾ(26) ಮೃತರು. ದಿವ್ಯಾ ಒಂದೂವರೆ ವರ್ಷದ ಹಿಂದೆ ಹರೀಶ್ ರನ್ನು ಪ್ರೀತಿಸಿ ವಿವಾಹವಾಗಿದ್ದರು. ದಿವ್ಯಾ ಮನೆಯಲ್ಲಿ ಒಬ್ಬರೇ ಇರುವಾಗ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರು ನೀಡಲಾಗಿದೆ. ಈ ಕುರಿತು ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.  

ಸುರತ್ಕಲ್: ವಿವಾಹಿತ ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ!!!   Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಅಪರಿಚಿತ ಯುವಕನೊಬ್ಬನ ಮೃತದೇಹವು ರೈಲ್ವೇ ಹಳಿಗಳ ಮೇಲೆ ಪತ್ತೆಯಾಗಿರುವ ಘಟನೆ ಕುಳಾಯಿಗುಡ್ಡೆ ರೈಲ್ವೆ ಸೇತುವೆ ಬಳಿ ನಡೆದಿದೆ ಎಂದು ವರದಿ ತಿಳಿಸಿದೆ. 30 ವರ್ಷದ ಯುವಕನ ಛಿದ್ರವಾದ ಮೃತದೇಹ ಪತ್ತೆಯಾಗಿದ್ದು, ಈತ ರೈಲಿಗೆ ಸಿಲುಕಿ ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯು ಕಪ್ಪು ನೈಟ್ ಪ್ಯಾಂಟ್, ಹಳದಿ ಬಣ್ಣದ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಜರ್ಕಿನ್ ಧರಿಸಿರುತ್ತಾರೆ. ಇವರ ಬಗ್ಗೆ ಮಾಹಿತಿ ಇದ್ದರೆ ಸುರತ್ಕಲ್ ಪೊಲೀಸರನ್ನು ಸಂಪರ್ಕಿಸಲು ಕೋರಲಾಗಿದೆ.  

ಸುರತ್ಕಲ್ : ರೈಲ್ವೇ ಹಳಿ  ಮೇಲೆ ಯುವಕನೋರ್ವನ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                  

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ವರದಿಯಾಗಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ ಎನ್ನಲಾಗಿದೆ. ಬಾಲಕಿ ಗಿಡವೊಂದರಿಂದ ಹಣ್ಣು ಕೀಳುತ್ತಿದ್ದಾಗ ಅಲ್ಲಿಯೇ ಸಮೀಪ ಗಾರೆ ಕೆಲಸ ಮಾಡುತ್ತಿದ್ದ ನವಾಜ್‌ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಬಾಲಕಿ ಬೊಬ್ಬೆ ಹಾಕಿದ್ದಳು. ಇದನ್ನು ಕೇಳಿ ಅಲ್ಲಿದ್ದವರು ಬಂದು ನವಾಜ್ ಗೆ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿ ತಿಳಿಸಿದೆ.

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ    ➤ ಆರೋಪಿ ಅರೆಸ್ಟ್                   Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಪರೂಪದ ಐತಿಹಾಸಿಕ ಕಲ್ಲಿನ ರಚನೆ ಪತ್ತೆ !!

(ನ್ಯೂಸ್ ಕಡಬ)newskadaba.com  ಉಡುಪಿ, ಜ.21. ಉಡುಪಿ ನಗರದ ಬನ್ನಂಜೆಯಲ್ಲಿ ಉಬ್ಬು ಚಿತ್ರವಿರುವ ಅಪರೂಪದ ಐತಿಹಾಸಿಕ ಶಾಸನ ಪತ್ತೆಯಾಗಿದೆ. ಈ ಶಾಸನ ವಿಜಯನಗರದ ಕಾಲದ್ದು ಎಂದು ಹೇಳಲಾಗುತ್ತಿದೆ. ಬನ್ನಂಜೆಯ ಮೂಡನಿಡಂಬೂರು ಗ್ರಾಮದಲ್ಲಿರುವ ಶನೇಶ್ವರ ದೇವಸ್ಥಾನದ ಹಿಂಬದಿಯಲ್ಲಿ ಈ ಅಪರೂಪದ ಶಾಸನ ಪತ್ತೆಯಾಗಿದೆ. ಸ್ಥಳೀಯರು ಹೇಳುವ ಪ್ರಕಾರ ಬಾಯಿಮಾತಿನಲ್ಲಿ ಇದನ್ನು  ‘ನಿರ್ಪುಗಲ್ಲು’ ಎಂದೇ ಕರೆಯಲಾಗುತ್ತಿತ್ತಂತೆ. ಸುಮಾರು ಒಂದುವರೆ ಅಡಿ ಅಗಲ ನಾಲ್ಕು ಫೀಟು ಎತ್ತರ ಇರುವ ಈ ಶಾಸನದ ಬಲಭಾಗದಲ್ಲಿ ಚಂದ್ರ, ಎಡ ಭಾಗದಲ್ಲಿ ಸೂರ್ಯ. ಮಧ್ಯಭಾಗದಲ್ಲಿ ಪೀಠ ಇರುವ

ಉಡುಪಿ: ಅಪರೂಪದ ಐತಿಹಾಸಿಕ ಕಲ್ಲಿನ ರಚನೆ ಪತ್ತೆ !! Read More »

ಕರಾವಳಿ
Scroll to Top